Homeಕರ್ನಾಟಕಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

- Advertisement -
- Advertisement -

ಮಾದಕವಸ್ತು ಮಾರಾಟಗಾರರ ಗುಂಪಿನೊಂದಿಗೆ ಶಾಮೀಲಾಗಿರುವ ಆರೋಪದ ಮೇಲೆ ಇನ್‌ಸ್ಪೆಕ್ಟರ್‌ ಸೇರಿದಂತೆ ಬೆಂಗಳೂರಿನ ಹನ್ನೊಂದು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಚಾಮರಾಜಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಟಿ ಮಂಜಣ್ಣ, ಹೆಡ್ ಕಾನ್‌ಸ್ಟೆಬಲ್‌ಗಳಾದ ರಮೇಶ್ ಮತ್ತು ಶಿವರಾಜ್, ಕಾನ್‌ಸ್ಟೆಬಲ್‌ಗಳಾದ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ ಮತ್ತು ಆನಂದ್, ಜೆಜೆ ನಗರ ಪೊಲೀಸ್ ಸಿಬ್ಬಂದಿಯಾದ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ ಕುಮಾರ್, ಹೆಡ್ ಕಾನ್‌ಸ್ಟೆಬಲ್ ಆನಂದ್, ಕಾನ್‌ಸ್ಟೆಬಲ್ ಬಸವನಗೌಡ ಮತ್ತು ಕಾನ್‌ಸ್ಟೆಬಲ್ ಮಹೇಶ್ ಕುಮಾರ್ ಅಮಾನತುಗೊಂಡವರು.

ಆಗಸ್ಟ್ 22ರಂದು ಆರ್.ಆರ್ ನಗರ ಪೊಲೀಸರು ಸಲ್ಮಾನ್, ನಯಾಝುಲ್ಲಗ್ ಖಾನ್, ನಯಾಝ್ ಖಾನ್ ಮತ್ತು ತಾಹೆರ್ ಪಟೇಲ್ ಸೇರಿದಂತೆ ಆರು ಮಂದಿ ಮಾದಕವಸ್ತು ಮಾರಾಟಗಾರರನ್ನು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು ಪ್ರಿಸ್ಕ್ರಿಪ್ಷನ್ ಮೂಲಕ ನೀಡಲಾಗುವ ಟೈಡಾಲ್ ಮಾತ್ರೆಗಳನ್ನು ವಿದ್ಯಾರ್ಥಿಗಳು ಮತ್ತು ಯುವ ವೃತ್ತಿಪರರಿಗೆ ಮಾದಕ ದ್ರವ್ಯವಾಗಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಸುಮಾರು 1,000 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

“ನಮಗೆ ಆಶ್ಚರ್ಯವಾಗುವಂತೆ, ಸಲ್ಮಾನ್ ಮಾದಕ ವಸ್ತು ಮಾರಾಟಕ್ಕೆ ಪೊಲೀಸರ ಬೆಂಬಲವಿದೆ ಎಂದು ಹೇಳಿಕೊಂಡಿದ್ದ. ಆರಂಭದಲ್ಲಿ ಆತ ನಮ್ಮನ್ನು ದಾರಿ ತಪ್ಪಿಸಲು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾನೆಂದು ನಾವು ಭಾವಿಸಿದ್ದೆವು. ಆದಾಗ್ಯೂ, ಸಲ್ಮಾನ್ ಮತ್ತು ಆತನ ಸಹಚರರ ಮೊಬೈಲ್ ಫೋನ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ಚಾಮರಾಜಪೇಟೆ ಮತ್ತು ಜೆಜೆ ನಗರದ ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆಂದು ತಿಳಿದುಬಂದಿದೆ. ಪೊಲೀಸರಿಗೆ ಕಾರ್ಯನಿರ್ವಹಿಸಲು ಅವರ ಅಧಿಕಾರ ವ್ಯಾಪ್ತಿ ಇರುವಂತೆ, ಸಲ್ಮಾನ್ ಮತ್ತು ಅವನ ಗ್ಯಾಂಗ್ ಚಾಮರಾಜಪೇಟೆ ಮತ್ತು ಜೆಜೆ ನಗರ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದರು. ಆರೋಪಿ ಪೊಲೀಸರಿಗೆ ಮಾದಕವಸ್ತು ಮಾರಾಟಗಾರರ ಚಲನವಲನಗಳು, ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ಸ್ಥಳಗಳು ಇತ್ಯಾದಿ ತಿಳಿದಿತ್ತು” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್. ಗಿರೀಶ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬಂಧಿತ ಮಾದಕವಸ್ತು ವ್ಯಾಪಾರಿಗಳು ಸುಗಮವಾಗಿ ತಮ್ಮ ಕೆಲಸ ಮಾಡಲು ಪ್ರತಿ ತಿಂಗಳು 2 ಲಕ್ಷ ರೂ.ಗಳವರೆಗೆ ಹಣವನ್ನು ಪೊಲೀಸರಿಗೆ ಪಾವತಿಸುತ್ತಿದ್ದರು. ಕೆಲ ಪೊಲೀಸ್ ಸಿಬ್ಬಂದಿ ವ್ಯಾಪಾರಿಗಳೊಂದಿಗೆ ಪಾರ್ಟಿಗಳಲ್ಲಿ ಭಾಗವಹಿಸಿದ್ದಾರೆಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಕೆಂಗೇರಿ ಗೇಟ್‌ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಭರತ್ ರೆಡ್ಡಿ ಅವರು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಎಸ್. ಗಿರೀಶ್ ಅವರಿಗೆ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ನಂತರ ತನಿಖೆಯನ್ನು ವಿಜಯನಗರ ಎಸಿಪಿ ಚಂದನ್ ಅವರಿಗೆ ಹಸ್ತಾಂತರಿಸಲಾಗಿದೆ. ವಿಚಾರಣೆಯಲ್ಲಿ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು ಮಾದಕವಸ್ತು ಕಳ್ಳಸಾಗಣೆದಾರರನ್ನು ರಕ್ಷಿಸುವಲ್ಲಿ ಭಾಗಿಯಾಗಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಇನ್‌ಸ್ಪೆಕ್ಟರ್‌ ಮಂಜಣ್ಣ ಅವರನ್ನು ಅಮಾನತುಗೊಳಿಸಿದರೆ, ಇತರ ಸಿಬ್ಬಂದಿಯನ್ನು ಡಿಸಿಪಿ ಗಿರೀಶ್ ಅಮಾನತುಗೊಳಿಸಿದ್ದಾರೆ.

ಮಾದಕ ವಸ್ತುಗಳ ಜಾಲಗಳನ್ನು ಹತ್ತಿಕ್ಕುವ ಬಗ್ಗೆ ಧ್ವನಿ ಎತ್ತುತ್ತಿದ್ದ ನಗರ ಪೊಲೀಸರಿಗೆ ಈ ಪ್ರಕರಣ ಮುಜುಗರ ತಂದಿದೆ. ನಿಷೇಧಿತ ಮಾತ್ರೆಗಳು ಎನ್‌ಡಿಪಿಎಸ್‌ ಕಾಯ್ದೆಯಡಿಯಲ್ಲಿ ಬರದ ಕಾರಣ, ಅಂತಹ ಪ್ರಕರಣಗಳ ವಿಚಾರಣೆ ಇನ್ನೂ ಕಷ್ಟಕರವಾಗಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಹಾಗಾಗಿ, ವೈದ್ಯಕೀಯ ವ್ಯವಸ್ಥೆಗಳ ದುರ್ಬಳಕೆಗೆ ಸಂಬಂಧಪಟ್ಟ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 278ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕರ್ನಾಟಕ ಸರ್ಕಾರ ರಾಜ್ಯವನ್ನು ಮಾದಕವಸ್ತು ಮುಕ್ತಗೊಳಿಸಲು ಪ್ರತಿಜ್ಞೆ ಮಾಡುತ್ತಿರುವ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೇ ಮಾದಕವಸ್ತು ಜಾಲದ ಜೊತೆ ಶಾಮೀಲಾಗಿ ಅಮಾನತುಗೊಂಡಿರುವುದು ವಿಪರ್ಯಾಸ.

ಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...