Homeಕರ್ನಾಟಕಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

- Advertisement -
- Advertisement -

ಮಾದಕವಸ್ತು ಮಾರಾಟಗಾರರ ಗುಂಪಿನೊಂದಿಗೆ ಶಾಮೀಲಾಗಿರುವ ಆರೋಪದ ಮೇಲೆ ಇನ್‌ಸ್ಪೆಕ್ಟರ್‌ ಸೇರಿದಂತೆ ಬೆಂಗಳೂರಿನ ಹನ್ನೊಂದು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಚಾಮರಾಜಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಟಿ ಮಂಜಣ್ಣ, ಹೆಡ್ ಕಾನ್‌ಸ್ಟೆಬಲ್‌ಗಳಾದ ರಮೇಶ್ ಮತ್ತು ಶಿವರಾಜ್, ಕಾನ್‌ಸ್ಟೆಬಲ್‌ಗಳಾದ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ ಮತ್ತು ಆನಂದ್, ಜೆಜೆ ನಗರ ಪೊಲೀಸ್ ಸಿಬ್ಬಂದಿಯಾದ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ ಕುಮಾರ್, ಹೆಡ್ ಕಾನ್‌ಸ್ಟೆಬಲ್ ಆನಂದ್, ಕಾನ್‌ಸ್ಟೆಬಲ್ ಬಸವನಗೌಡ ಮತ್ತು ಕಾನ್‌ಸ್ಟೆಬಲ್ ಮಹೇಶ್ ಕುಮಾರ್ ಅಮಾನತುಗೊಂಡವರು.

ಆಗಸ್ಟ್ 22ರಂದು ಆರ್.ಆರ್ ನಗರ ಪೊಲೀಸರು ಸಲ್ಮಾನ್, ನಯಾಝುಲ್ಲಗ್ ಖಾನ್, ನಯಾಝ್ ಖಾನ್ ಮತ್ತು ತಾಹೆರ್ ಪಟೇಲ್ ಸೇರಿದಂತೆ ಆರು ಮಂದಿ ಮಾದಕವಸ್ತು ಮಾರಾಟಗಾರರನ್ನು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು ಪ್ರಿಸ್ಕ್ರಿಪ್ಷನ್ ಮೂಲಕ ನೀಡಲಾಗುವ ಟೈಡಾಲ್ ಮಾತ್ರೆಗಳನ್ನು ವಿದ್ಯಾರ್ಥಿಗಳು ಮತ್ತು ಯುವ ವೃತ್ತಿಪರರಿಗೆ ಮಾದಕ ದ್ರವ್ಯವಾಗಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಸುಮಾರು 1,000 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

“ನಮಗೆ ಆಶ್ಚರ್ಯವಾಗುವಂತೆ, ಸಲ್ಮಾನ್ ಮಾದಕ ವಸ್ತು ಮಾರಾಟಕ್ಕೆ ಪೊಲೀಸರ ಬೆಂಬಲವಿದೆ ಎಂದು ಹೇಳಿಕೊಂಡಿದ್ದ. ಆರಂಭದಲ್ಲಿ ಆತ ನಮ್ಮನ್ನು ದಾರಿ ತಪ್ಪಿಸಲು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾನೆಂದು ನಾವು ಭಾವಿಸಿದ್ದೆವು. ಆದಾಗ್ಯೂ, ಸಲ್ಮಾನ್ ಮತ್ತು ಆತನ ಸಹಚರರ ಮೊಬೈಲ್ ಫೋನ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ಚಾಮರಾಜಪೇಟೆ ಮತ್ತು ಜೆಜೆ ನಗರದ ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆಂದು ತಿಳಿದುಬಂದಿದೆ. ಪೊಲೀಸರಿಗೆ ಕಾರ್ಯನಿರ್ವಹಿಸಲು ಅವರ ಅಧಿಕಾರ ವ್ಯಾಪ್ತಿ ಇರುವಂತೆ, ಸಲ್ಮಾನ್ ಮತ್ತು ಅವನ ಗ್ಯಾಂಗ್ ಚಾಮರಾಜಪೇಟೆ ಮತ್ತು ಜೆಜೆ ನಗರ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದರು. ಆರೋಪಿ ಪೊಲೀಸರಿಗೆ ಮಾದಕವಸ್ತು ಮಾರಾಟಗಾರರ ಚಲನವಲನಗಳು, ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ಸ್ಥಳಗಳು ಇತ್ಯಾದಿ ತಿಳಿದಿತ್ತು” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್. ಗಿರೀಶ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬಂಧಿತ ಮಾದಕವಸ್ತು ವ್ಯಾಪಾರಿಗಳು ಸುಗಮವಾಗಿ ತಮ್ಮ ಕೆಲಸ ಮಾಡಲು ಪ್ರತಿ ತಿಂಗಳು 2 ಲಕ್ಷ ರೂ.ಗಳವರೆಗೆ ಹಣವನ್ನು ಪೊಲೀಸರಿಗೆ ಪಾವತಿಸುತ್ತಿದ್ದರು. ಕೆಲ ಪೊಲೀಸ್ ಸಿಬ್ಬಂದಿ ವ್ಯಾಪಾರಿಗಳೊಂದಿಗೆ ಪಾರ್ಟಿಗಳಲ್ಲಿ ಭಾಗವಹಿಸಿದ್ದಾರೆಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಕೆಂಗೇರಿ ಗೇಟ್‌ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಭರತ್ ರೆಡ್ಡಿ ಅವರು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಎಸ್. ಗಿರೀಶ್ ಅವರಿಗೆ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ನಂತರ ತನಿಖೆಯನ್ನು ವಿಜಯನಗರ ಎಸಿಪಿ ಚಂದನ್ ಅವರಿಗೆ ಹಸ್ತಾಂತರಿಸಲಾಗಿದೆ. ವಿಚಾರಣೆಯಲ್ಲಿ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು ಮಾದಕವಸ್ತು ಕಳ್ಳಸಾಗಣೆದಾರರನ್ನು ರಕ್ಷಿಸುವಲ್ಲಿ ಭಾಗಿಯಾಗಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಇನ್‌ಸ್ಪೆಕ್ಟರ್‌ ಮಂಜಣ್ಣ ಅವರನ್ನು ಅಮಾನತುಗೊಳಿಸಿದರೆ, ಇತರ ಸಿಬ್ಬಂದಿಯನ್ನು ಡಿಸಿಪಿ ಗಿರೀಶ್ ಅಮಾನತುಗೊಳಿಸಿದ್ದಾರೆ.

ಮಾದಕ ವಸ್ತುಗಳ ಜಾಲಗಳನ್ನು ಹತ್ತಿಕ್ಕುವ ಬಗ್ಗೆ ಧ್ವನಿ ಎತ್ತುತ್ತಿದ್ದ ನಗರ ಪೊಲೀಸರಿಗೆ ಈ ಪ್ರಕರಣ ಮುಜುಗರ ತಂದಿದೆ. ನಿಷೇಧಿತ ಮಾತ್ರೆಗಳು ಎನ್‌ಡಿಪಿಎಸ್‌ ಕಾಯ್ದೆಯಡಿಯಲ್ಲಿ ಬರದ ಕಾರಣ, ಅಂತಹ ಪ್ರಕರಣಗಳ ವಿಚಾರಣೆ ಇನ್ನೂ ಕಷ್ಟಕರವಾಗಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಹಾಗಾಗಿ, ವೈದ್ಯಕೀಯ ವ್ಯವಸ್ಥೆಗಳ ದುರ್ಬಳಕೆಗೆ ಸಂಬಂಧಪಟ್ಟ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 278ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕರ್ನಾಟಕ ಸರ್ಕಾರ ರಾಜ್ಯವನ್ನು ಮಾದಕವಸ್ತು ಮುಕ್ತಗೊಳಿಸಲು ಪ್ರತಿಜ್ಞೆ ಮಾಡುತ್ತಿರುವ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೇ ಮಾದಕವಸ್ತು ಜಾಲದ ಜೊತೆ ಶಾಮೀಲಾಗಿ ಅಮಾನತುಗೊಂಡಿರುವುದು ವಿಪರ್ಯಾಸ.

ಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...