Homeಮುಖಪುಟಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ...

ಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ ವ್ಯಕ್ತಿ

- Advertisement -
- Advertisement -

ಭಯೋತ್ಪಾದನೆ ಆರೋಪದ ಮೇಲೆ ಗುಜರಾತ್ ಪೊಲೀಸರು 11 ವರ್ಷಗಳ ಹಿಂದೆ ಬಂಧಿಸಿದ್ದ ಶ್ರೀನಗರದ ವ್ಯಕ್ತಿಯನ್ನು ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲವಾದ ಹಿನ್ನೆಲೆ ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಕಂಪ್ಯೂಟರ್ ವೃತ್ತಿಪರರಾಗಿರುವ ಬಶೀರ್ ಅಹ್ಮದ್ ಬಾಬಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ವಡೋದರಾ ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸಲು ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ ಸಂಘಟನೆಗಾಗಿ 2002 ರ ಗಲಭೆಯ ಬಗ್ಗೆ ಕೋಪಗೊಂಡಿರುವ ಮುಸ್ಲಿಂ ಯುವಕರನ್ನು ಸಂಘಟಿಸಲು ಬಶೀರ್ ಅಹ್ಮದ್ ಬಾಬಾ ಗುಜರಾತ್‌ಗೆ ಬಂದಿದ್ದಾರೆ ಎಂದು ಗುಜರಾತ್ ಎಟಿಎಸ್ ಮಾರ್ಚ್ 13, 2010 ರಂದು 43 ವರ್ಷದ ಅಹ್ಮದ್ ಅವರನ್ನು ಬಂಧಿಸಿದ್ದರು.

ಅಹ್ಮದ್ ಅವರು,  ಹಿಜ್ಬುಲ್ ಮುಜಾಹಿದ್ದೀನ್‌ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಬಿಲಾಲ್ ಅಹ್ಮದ್ ಶೇರಾ ಅವರೊಂದಿಗೆ ದೂರವಾಣಿ ಮತ್ತು ಇಮೇಲ್ ಮೂಲಕ ಸಂಪರ್ಕದಲ್ಲಿದ್ದಾರೆ ಎಂದು ಗುಜರಾತ್ ಎಟಿಎಸ್ ಆರೋಪಿಸಿತ್ತು. ಆದರೆ ಈಗ ಆರೋಪ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: ಹೋರಾಟಗಾರ ಅಖಿಲ್ ಗೊಗೋಯ್‌ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಟ್ಟ ಎನ್‌ಐಎ ನ್ಯಾಯಾಲಯ

ಕ್ಯಾನ್ಸರ್ ನಂತರದ ಆರೈಕೆಗಾಗಿ ಮಾಡಲಾಗಿದ್ದ ನಾಲ್ಕು ದಿನಗಳ ಶಿಬಿರದಲ್ಲಿ ಪಾಲ್ಗೊಳ್ಳಲು ಅಹ್ಮದ್ ಗುಜರಾತ್‌ಗೆ ಬಂದಿದ್ದರು. ಕಿಮಾಯ ಫೌಂಡೇಶನ್ ಮೂಲಕ ಕಾಶ್ಮೀರದ ಕಣಿವೆಯ ಜನರಿಗೆ ಸೇವೆಗಳನ್ನು ಒದಗಿಸಲು, ಈ ಕ್ಯಾಂಪ್‌ನ ಭಾಗವಾಗಿದ್ದರು ಎಂಬ ವಾದವನ್ನು ನ್ಯಾಯಾಲಯವು ಜೂನ್ 19 ರಂದು ಎತ್ತಿಹಿಡಿದಿದೆ.

ಜೂನ್ 23 ರಂದು 11 ವರ್ಷಗಳ ಬಳಿಕ ಬಶೀರ್ ಅಹ್ಮದ್ ಬಾಬಾ ಶ್ರೀನಗರದ ರೈನಾವರಿಯಲ್ಲಿರುವ ತಮ್ಮ ಮನೆಗೆ ತಲುಪಿದ್ದಾರೆ. ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

87 ಪುಟಗಳ ತೀರ್ಪಿನಲ್ಲಿ, ಆನಂದ್ ಜಿಲ್ಲಾ ನ್ಯಾಯಾಲಯದ 4 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್.ಎ.ನಕುಮ್, “ಗುಜರಾತ್‌ನಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸುವುದಕ್ಕಾಗಿ ಬಂದಿದ್ದರು ಎಂಬುದು ಸಾಬೀತಾಗಿಲ್ಲ, ಭಯೋತ್ಪಾದಕ ಘಟಕವನ್ನು ಸ್ಥಾಪಿಸಿದರು ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ. ಆರೋಪಿ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸ್ಪಷ್ಟವಾಗಿ ವಿಫಲವಾಗಿದೆ. ಜೊತೆಗೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು ಎಂಬುದನ್ನು ಸಾಬೀತುಪಡಿಸಲು ಕೂಡ ಪ್ರಾಸಿಕ್ಯೂಷನ್ ಸಂಪೂರ್ಣ ವಿಫಲವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಶೀರ್ ಅಹಮದ್ ಬಾಬಾರವರಿಗೆ ಒಳ್ಳೆಯದಾಗಲಿ. ಅಮಾಯಕರನ್ನು ವರ್ಷಾನುಗಟ್ಟಲೆ ಜೈಲಿನಲ್ಲಿ ಕೊಳೆಸುವಂತಹ ಯು.ಎ.ಪಿ.ಎ. ಅಂತಹ ಅಮಾನುಷ ಕಾನೂನುಗಳನ್ನು ರದ್ದುಪಡಿಸಬೇಕು. ಒಬ್ಬ ವ್ಯಕ್ತಿಯ ಜೀವನದಲ್ಲಿ ೧೧ ವರ್ಷಗಳು ಅಮೂಲ್ಯವಾದ ಅವದಿ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...