Homeಮುಖಪುಟಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ...

ಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ ವ್ಯಕ್ತಿ

- Advertisement -
- Advertisement -

ಭಯೋತ್ಪಾದನೆ ಆರೋಪದ ಮೇಲೆ ಗುಜರಾತ್ ಪೊಲೀಸರು 11 ವರ್ಷಗಳ ಹಿಂದೆ ಬಂಧಿಸಿದ್ದ ಶ್ರೀನಗರದ ವ್ಯಕ್ತಿಯನ್ನು ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲವಾದ ಹಿನ್ನೆಲೆ ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಕಂಪ್ಯೂಟರ್ ವೃತ್ತಿಪರರಾಗಿರುವ ಬಶೀರ್ ಅಹ್ಮದ್ ಬಾಬಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ವಡೋದರಾ ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸಲು ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ ಸಂಘಟನೆಗಾಗಿ 2002 ರ ಗಲಭೆಯ ಬಗ್ಗೆ ಕೋಪಗೊಂಡಿರುವ ಮುಸ್ಲಿಂ ಯುವಕರನ್ನು ಸಂಘಟಿಸಲು ಬಶೀರ್ ಅಹ್ಮದ್ ಬಾಬಾ ಗುಜರಾತ್‌ಗೆ ಬಂದಿದ್ದಾರೆ ಎಂದು ಗುಜರಾತ್ ಎಟಿಎಸ್ ಮಾರ್ಚ್ 13, 2010 ರಂದು 43 ವರ್ಷದ ಅಹ್ಮದ್ ಅವರನ್ನು ಬಂಧಿಸಿದ್ದರು.

ಅಹ್ಮದ್ ಅವರು,  ಹಿಜ್ಬುಲ್ ಮುಜಾಹಿದ್ದೀನ್‌ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಬಿಲಾಲ್ ಅಹ್ಮದ್ ಶೇರಾ ಅವರೊಂದಿಗೆ ದೂರವಾಣಿ ಮತ್ತು ಇಮೇಲ್ ಮೂಲಕ ಸಂಪರ್ಕದಲ್ಲಿದ್ದಾರೆ ಎಂದು ಗುಜರಾತ್ ಎಟಿಎಸ್ ಆರೋಪಿಸಿತ್ತು. ಆದರೆ ಈಗ ಆರೋಪ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: ಹೋರಾಟಗಾರ ಅಖಿಲ್ ಗೊಗೋಯ್‌ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಟ್ಟ ಎನ್‌ಐಎ ನ್ಯಾಯಾಲಯ

ಕ್ಯಾನ್ಸರ್ ನಂತರದ ಆರೈಕೆಗಾಗಿ ಮಾಡಲಾಗಿದ್ದ ನಾಲ್ಕು ದಿನಗಳ ಶಿಬಿರದಲ್ಲಿ ಪಾಲ್ಗೊಳ್ಳಲು ಅಹ್ಮದ್ ಗುಜರಾತ್‌ಗೆ ಬಂದಿದ್ದರು. ಕಿಮಾಯ ಫೌಂಡೇಶನ್ ಮೂಲಕ ಕಾಶ್ಮೀರದ ಕಣಿವೆಯ ಜನರಿಗೆ ಸೇವೆಗಳನ್ನು ಒದಗಿಸಲು, ಈ ಕ್ಯಾಂಪ್‌ನ ಭಾಗವಾಗಿದ್ದರು ಎಂಬ ವಾದವನ್ನು ನ್ಯಾಯಾಲಯವು ಜೂನ್ 19 ರಂದು ಎತ್ತಿಹಿಡಿದಿದೆ.

ಜೂನ್ 23 ರಂದು 11 ವರ್ಷಗಳ ಬಳಿಕ ಬಶೀರ್ ಅಹ್ಮದ್ ಬಾಬಾ ಶ್ರೀನಗರದ ರೈನಾವರಿಯಲ್ಲಿರುವ ತಮ್ಮ ಮನೆಗೆ ತಲುಪಿದ್ದಾರೆ. ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

87 ಪುಟಗಳ ತೀರ್ಪಿನಲ್ಲಿ, ಆನಂದ್ ಜಿಲ್ಲಾ ನ್ಯಾಯಾಲಯದ 4 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್.ಎ.ನಕುಮ್, “ಗುಜರಾತ್‌ನಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸುವುದಕ್ಕಾಗಿ ಬಂದಿದ್ದರು ಎಂಬುದು ಸಾಬೀತಾಗಿಲ್ಲ, ಭಯೋತ್ಪಾದಕ ಘಟಕವನ್ನು ಸ್ಥಾಪಿಸಿದರು ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ. ಆರೋಪಿ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸ್ಪಷ್ಟವಾಗಿ ವಿಫಲವಾಗಿದೆ. ಜೊತೆಗೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು ಎಂಬುದನ್ನು ಸಾಬೀತುಪಡಿಸಲು ಕೂಡ ಪ್ರಾಸಿಕ್ಯೂಷನ್ ಸಂಪೂರ್ಣ ವಿಫಲವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಶೀರ್ ಅಹಮದ್ ಬಾಬಾರವರಿಗೆ ಒಳ್ಳೆಯದಾಗಲಿ. ಅಮಾಯಕರನ್ನು ವರ್ಷಾನುಗಟ್ಟಲೆ ಜೈಲಿನಲ್ಲಿ ಕೊಳೆಸುವಂತಹ ಯು.ಎ.ಪಿ.ಎ. ಅಂತಹ ಅಮಾನುಷ ಕಾನೂನುಗಳನ್ನು ರದ್ದುಪಡಿಸಬೇಕು. ಒಬ್ಬ ವ್ಯಕ್ತಿಯ ಜೀವನದಲ್ಲಿ ೧೧ ವರ್ಷಗಳು ಅಮೂಲ್ಯವಾದ ಅವದಿ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....