Homeಮುಖಪುಟಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ...

ಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ ವ್ಯಕ್ತಿ

- Advertisement -
- Advertisement -

ಭಯೋತ್ಪಾದನೆ ಆರೋಪದ ಮೇಲೆ ಗುಜರಾತ್ ಪೊಲೀಸರು 11 ವರ್ಷಗಳ ಹಿಂದೆ ಬಂಧಿಸಿದ್ದ ಶ್ರೀನಗರದ ವ್ಯಕ್ತಿಯನ್ನು ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲವಾದ ಹಿನ್ನೆಲೆ ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಕಂಪ್ಯೂಟರ್ ವೃತ್ತಿಪರರಾಗಿರುವ ಬಶೀರ್ ಅಹ್ಮದ್ ಬಾಬಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ವಡೋದರಾ ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸಲು ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ ಸಂಘಟನೆಗಾಗಿ 2002 ರ ಗಲಭೆಯ ಬಗ್ಗೆ ಕೋಪಗೊಂಡಿರುವ ಮುಸ್ಲಿಂ ಯುವಕರನ್ನು ಸಂಘಟಿಸಲು ಬಶೀರ್ ಅಹ್ಮದ್ ಬಾಬಾ ಗುಜರಾತ್‌ಗೆ ಬಂದಿದ್ದಾರೆ ಎಂದು ಗುಜರಾತ್ ಎಟಿಎಸ್ ಮಾರ್ಚ್ 13, 2010 ರಂದು 43 ವರ್ಷದ ಅಹ್ಮದ್ ಅವರನ್ನು ಬಂಧಿಸಿದ್ದರು.

ಅಹ್ಮದ್ ಅವರು,  ಹಿಜ್ಬುಲ್ ಮುಜಾಹಿದ್ದೀನ್‌ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಬಿಲಾಲ್ ಅಹ್ಮದ್ ಶೇರಾ ಅವರೊಂದಿಗೆ ದೂರವಾಣಿ ಮತ್ತು ಇಮೇಲ್ ಮೂಲಕ ಸಂಪರ್ಕದಲ್ಲಿದ್ದಾರೆ ಎಂದು ಗುಜರಾತ್ ಎಟಿಎಸ್ ಆರೋಪಿಸಿತ್ತು. ಆದರೆ ಈಗ ಆರೋಪ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: ಹೋರಾಟಗಾರ ಅಖಿಲ್ ಗೊಗೋಯ್‌ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಟ್ಟ ಎನ್‌ಐಎ ನ್ಯಾಯಾಲಯ

ಕ್ಯಾನ್ಸರ್ ನಂತರದ ಆರೈಕೆಗಾಗಿ ಮಾಡಲಾಗಿದ್ದ ನಾಲ್ಕು ದಿನಗಳ ಶಿಬಿರದಲ್ಲಿ ಪಾಲ್ಗೊಳ್ಳಲು ಅಹ್ಮದ್ ಗುಜರಾತ್‌ಗೆ ಬಂದಿದ್ದರು. ಕಿಮಾಯ ಫೌಂಡೇಶನ್ ಮೂಲಕ ಕಾಶ್ಮೀರದ ಕಣಿವೆಯ ಜನರಿಗೆ ಸೇವೆಗಳನ್ನು ಒದಗಿಸಲು, ಈ ಕ್ಯಾಂಪ್‌ನ ಭಾಗವಾಗಿದ್ದರು ಎಂಬ ವಾದವನ್ನು ನ್ಯಾಯಾಲಯವು ಜೂನ್ 19 ರಂದು ಎತ್ತಿಹಿಡಿದಿದೆ.

ಜೂನ್ 23 ರಂದು 11 ವರ್ಷಗಳ ಬಳಿಕ ಬಶೀರ್ ಅಹ್ಮದ್ ಬಾಬಾ ಶ್ರೀನಗರದ ರೈನಾವರಿಯಲ್ಲಿರುವ ತಮ್ಮ ಮನೆಗೆ ತಲುಪಿದ್ದಾರೆ. ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

87 ಪುಟಗಳ ತೀರ್ಪಿನಲ್ಲಿ, ಆನಂದ್ ಜಿಲ್ಲಾ ನ್ಯಾಯಾಲಯದ 4 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್.ಎ.ನಕುಮ್, “ಗುಜರಾತ್‌ನಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸುವುದಕ್ಕಾಗಿ ಬಂದಿದ್ದರು ಎಂಬುದು ಸಾಬೀತಾಗಿಲ್ಲ, ಭಯೋತ್ಪಾದಕ ಘಟಕವನ್ನು ಸ್ಥಾಪಿಸಿದರು ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ. ಆರೋಪಿ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸ್ಪಷ್ಟವಾಗಿ ವಿಫಲವಾಗಿದೆ. ಜೊತೆಗೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು ಎಂಬುದನ್ನು ಸಾಬೀತುಪಡಿಸಲು ಕೂಡ ಪ್ರಾಸಿಕ್ಯೂಷನ್ ಸಂಪೂರ್ಣ ವಿಫಲವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಶೀರ್ ಅಹಮದ್ ಬಾಬಾರವರಿಗೆ ಒಳ್ಳೆಯದಾಗಲಿ. ಅಮಾಯಕರನ್ನು ವರ್ಷಾನುಗಟ್ಟಲೆ ಜೈಲಿನಲ್ಲಿ ಕೊಳೆಸುವಂತಹ ಯು.ಎ.ಪಿ.ಎ. ಅಂತಹ ಅಮಾನುಷ ಕಾನೂನುಗಳನ್ನು ರದ್ದುಪಡಿಸಬೇಕು. ಒಬ್ಬ ವ್ಯಕ್ತಿಯ ಜೀವನದಲ್ಲಿ ೧೧ ವರ್ಷಗಳು ಅಮೂಲ್ಯವಾದ ಅವದಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...