Homeಮುಖಪುಟಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ...

ಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ ವ್ಯಕ್ತಿ

- Advertisement -
- Advertisement -

ಭಯೋತ್ಪಾದನೆ ಆರೋಪದ ಮೇಲೆ ಗುಜರಾತ್ ಪೊಲೀಸರು 11 ವರ್ಷಗಳ ಹಿಂದೆ ಬಂಧಿಸಿದ್ದ ಶ್ರೀನಗರದ ವ್ಯಕ್ತಿಯನ್ನು ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲವಾದ ಹಿನ್ನೆಲೆ ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಕಂಪ್ಯೂಟರ್ ವೃತ್ತಿಪರರಾಗಿರುವ ಬಶೀರ್ ಅಹ್ಮದ್ ಬಾಬಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ವಡೋದರಾ ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸಲು ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ ಸಂಘಟನೆಗಾಗಿ 2002 ರ ಗಲಭೆಯ ಬಗ್ಗೆ ಕೋಪಗೊಂಡಿರುವ ಮುಸ್ಲಿಂ ಯುವಕರನ್ನು ಸಂಘಟಿಸಲು ಬಶೀರ್ ಅಹ್ಮದ್ ಬಾಬಾ ಗುಜರಾತ್‌ಗೆ ಬಂದಿದ್ದಾರೆ ಎಂದು ಗುಜರಾತ್ ಎಟಿಎಸ್ ಮಾರ್ಚ್ 13, 2010 ರಂದು 43 ವರ್ಷದ ಅಹ್ಮದ್ ಅವರನ್ನು ಬಂಧಿಸಿದ್ದರು.

ಅಹ್ಮದ್ ಅವರು,  ಹಿಜ್ಬುಲ್ ಮುಜಾಹಿದ್ದೀನ್‌ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಬಿಲಾಲ್ ಅಹ್ಮದ್ ಶೇರಾ ಅವರೊಂದಿಗೆ ದೂರವಾಣಿ ಮತ್ತು ಇಮೇಲ್ ಮೂಲಕ ಸಂಪರ್ಕದಲ್ಲಿದ್ದಾರೆ ಎಂದು ಗುಜರಾತ್ ಎಟಿಎಸ್ ಆರೋಪಿಸಿತ್ತು. ಆದರೆ ಈಗ ಆರೋಪ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: ಹೋರಾಟಗಾರ ಅಖಿಲ್ ಗೊಗೋಯ್‌ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಟ್ಟ ಎನ್‌ಐಎ ನ್ಯಾಯಾಲಯ

ಕ್ಯಾನ್ಸರ್ ನಂತರದ ಆರೈಕೆಗಾಗಿ ಮಾಡಲಾಗಿದ್ದ ನಾಲ್ಕು ದಿನಗಳ ಶಿಬಿರದಲ್ಲಿ ಪಾಲ್ಗೊಳ್ಳಲು ಅಹ್ಮದ್ ಗುಜರಾತ್‌ಗೆ ಬಂದಿದ್ದರು. ಕಿಮಾಯ ಫೌಂಡೇಶನ್ ಮೂಲಕ ಕಾಶ್ಮೀರದ ಕಣಿವೆಯ ಜನರಿಗೆ ಸೇವೆಗಳನ್ನು ಒದಗಿಸಲು, ಈ ಕ್ಯಾಂಪ್‌ನ ಭಾಗವಾಗಿದ್ದರು ಎಂಬ ವಾದವನ್ನು ನ್ಯಾಯಾಲಯವು ಜೂನ್ 19 ರಂದು ಎತ್ತಿಹಿಡಿದಿದೆ.

ಜೂನ್ 23 ರಂದು 11 ವರ್ಷಗಳ ಬಳಿಕ ಬಶೀರ್ ಅಹ್ಮದ್ ಬಾಬಾ ಶ್ರೀನಗರದ ರೈನಾವರಿಯಲ್ಲಿರುವ ತಮ್ಮ ಮನೆಗೆ ತಲುಪಿದ್ದಾರೆ. ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

87 ಪುಟಗಳ ತೀರ್ಪಿನಲ್ಲಿ, ಆನಂದ್ ಜಿಲ್ಲಾ ನ್ಯಾಯಾಲಯದ 4 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್.ಎ.ನಕುಮ್, “ಗುಜರಾತ್‌ನಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸುವುದಕ್ಕಾಗಿ ಬಂದಿದ್ದರು ಎಂಬುದು ಸಾಬೀತಾಗಿಲ್ಲ, ಭಯೋತ್ಪಾದಕ ಘಟಕವನ್ನು ಸ್ಥಾಪಿಸಿದರು ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ. ಆರೋಪಿ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸ್ಪಷ್ಟವಾಗಿ ವಿಫಲವಾಗಿದೆ. ಜೊತೆಗೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು ಎಂಬುದನ್ನು ಸಾಬೀತುಪಡಿಸಲು ಕೂಡ ಪ್ರಾಸಿಕ್ಯೂಷನ್ ಸಂಪೂರ್ಣ ವಿಫಲವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಶೀರ್ ಅಹಮದ್ ಬಾಬಾರವರಿಗೆ ಒಳ್ಳೆಯದಾಗಲಿ. ಅಮಾಯಕರನ್ನು ವರ್ಷಾನುಗಟ್ಟಲೆ ಜೈಲಿನಲ್ಲಿ ಕೊಳೆಸುವಂತಹ ಯು.ಎ.ಪಿ.ಎ. ಅಂತಹ ಅಮಾನುಷ ಕಾನೂನುಗಳನ್ನು ರದ್ದುಪಡಿಸಬೇಕು. ಒಬ್ಬ ವ್ಯಕ್ತಿಯ ಜೀವನದಲ್ಲಿ ೧೧ ವರ್ಷಗಳು ಅಮೂಲ್ಯವಾದ ಅವದಿ.

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...