Homeದಲಿತ್ ಫೈಲ್ಸ್5 ವರ್ಷಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯದ 11,000 ವಿದ್ಯಾರ್ಥಿಗಳು ಕೇಂದ್ರೀಯ ವಿವಿಗಳನ್ನು ತೊರೆದಿದ್ದಾರೆ: ಸರ್ಕಾರ

5 ವರ್ಷಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯದ 11,000 ವಿದ್ಯಾರ್ಥಿಗಳು ಕೇಂದ್ರೀಯ ವಿವಿಗಳನ್ನು ತೊರೆದಿದ್ದಾರೆ: ಸರ್ಕಾರ

- Advertisement -
- Advertisement -

ಇತರೆ ಹಿಂದುಳಿದ ವರ್ಗ (ಒಬಿಸಿ), ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ)ಕ್ಕೆ ಸೇರಿದ 11,000ಕ್ಕೂ ಹೆಚ್ಚು ವಿದ್ಯಾರ್ಥಿಗಳು 2018 ರಿಂದ 2023ರ ಅವಧಿಯಲ್ಲಿ ಭಾರತದ 45 ಕೇಂದ್ರೀಯ ವಿಶ್ವವಿದ್ಯಾಲಯಗಳಿಂದ (ಸಿಯು) ಹೊರಗುಳಿದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ರಾಜ್ಯಸಭೆಯಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಸರ್ಕಾರ, “ಕಳೆದ ಐದು ವರ್ಷಗಳಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿಗೆ ಸೇರಿದ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಐಐಟಿಯಿಂದ ಹೊರಗುಳಿದರೆ, ಅದೇ ಅವಧಿಯಲ್ಲಿ ಈ ವರ್ಗಗಳಿಗೆ ಸೇರಿದ ಒಟ್ಟು 366 ವಿದ್ಯಾರ್ಥಿಗಳು ಐಐಎಂಗಳಿಂದ ಹೊರಗುಳಿದಿದ್ದಾರೆ” ಎಂದು ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ.ಸುಭಾಸ್ ಸರ್ಕಾರ್ ಲಿಖಿತ ಉತ್ತರ ನೀಡಿದ್ದಾರೆ.

ಮಾಹಿತಿ ನೀಡಿದ ಸಚಿವರು, “6,901 ಒಬಿಸಿ ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾನಿಲಯಗಳನ್ನು ತೊರೆದಿದ್ದಾರೆ, 3,596 ಎಸ್‌ಸಿ ವಿದ್ಯಾರ್ಥಿಗಳು ವ್ಯಾಸಂಗ ಬಿಟ್ಟಿದ್ದಾರೆ, 3949 ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಅದೇ ರೀತಿ ಐಐಟಿಗಳಲ್ಲಿ 2,544 ಒಬಿಸಿ ವಿದ್ಯಾರ್ಥಿಗಳು ಹೊರಗುಳಿದರೆ, 1,362 ಎಸ್‌ಸಿ ಮತ್ತು 538 ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ಗಳನ್ನು ಮುಂದುವರಿಸಿಲ್ಲ. ಐಐಎಂಗಳಲ್ಲಿ, 133 ಒಬಿಸಿ ವಿದ್ಯಾರ್ಥಿಗಳು, 143 ಎಸ್‌ಸಿ ಮತ್ತು 90 ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ಗಳಿಂದ ಹೊರಗುಳಿದಿದ್ದಾರೆ” ಎಂದಿದ್ದಾರೆ.

2018 ರಿಂದ 2023ರ ಅವಧಿಯಲ್ಲಿ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ)ಗಳಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ಎಷ್ಟು ವಿದ್ಯಾರ್ಥಿಗಳು ಡ್ರಾಪ್ಔಟ್ ಆಗಿದ್ದಾರೆಂದು ತಮಿಳುನಾಡಿನ ಸಂಸದ ತಿರುಚಿ ಶಿವ ಅವರು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. “ಉನ್ನತ ಶಿಕ್ಷಣ ವಲಯದಲ್ಲಿ ವಿದ್ಯಾರ್ಥಿಗಳಿಗೆ ಬಹು ಆಯ್ಕೆಗಳಿವೆ” ಎಂದು ಸಚಿವ ಸರ್ಕಾರ್ ಸಮರ್ಥಿಸಿಕೊಂಡಿದ್ದಾರೆ.

ಈ ವಿದ್ಯಾರ್ಥಿಗಳು ಸದರಿ ಸಂಸ್ಥೆಗಳಲ್ಲಿಯೇ ಒಂದು ಕೋರ್ಸ್/ಪ್ರೋಗ್ರಾಂನಿಂದ ಇನ್ನೊಂದಕ್ಕೆ ವಲಸೆ ಹೋಗುತ್ತಾರೆ. ಮುಖ್ಯವಾಗಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಇತರ ವಿಭಾಗಗಳು/ಸಂಸ್ಥೆಗಳಲ್ಲಿ ಅಥವಾ ಯಾವುದೇ ವೈಯಕ್ತಿಕ ನೆಲೆಯಲ್ಲಿ ಸೀಟುಗಳನ್ನು ಪಡೆದುಕೊಳ್ಳುವುದರಿಂದಾಗಿ ವಲಸೆ/ ಹಿಂಪಡೆಯುವಿಕೆ ನಡೆಯುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಶೋಚನೀಯ ಆರ್ಥಿಕ ಹಿನ್ನೆಲೆ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಶುಲ್ಕ ಕಡಿತ, ಹೆಚ್ಚಿನ ಸಂಸ್ಥೆಗಳ ಸ್ಥಾಪನೆ, ವಿದ್ಯಾರ್ಥಿವೇತನ, ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನಕ್ಕೆ ಅವಕಾಶದಂತಹ ವಿವಿಧ ಕ್ರಮಗಳನ್ನು ಕೈಗೊಂಡಿರುವುದಾಗಿ ಸರ್ಕಾರ ಹೇಳಿಕೊಳ್ಳುತ್ತದೆ.

ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ, ‘ಐಐಟಿಗಳಲ್ಲಿ ಬೋಧನಾ ಶುಲ್ಕ ಮನ್ನಾ’, ಕೇಂದ್ರ ವಲಯದ ಯೋಜನೆಯಡಿ ರಾಷ್ಟ್ರೀಯ ವಿದ್ಯಾರ್ಥಿವೇತನದ ಅನುದಾನ, ಸಂಸ್ಥೆಗಳಲ್ಲಿ ವಿದ್ಯಾರ್ಥಿವೇತನ ಇತ್ಯಾದಿ ಯೋಜನೆಗಳೂ ಇವೆ ಎಂದು ಸರ್ಕಾರ ಹೇಳಿಕೊಂಡು ಬಂದಿದೆ.

ಕಳೆದ ಐದು ವರ್ಷಗಳಲ್ಲಿ ಐಐಟಿ, ಕೇಂದ್ರೀಯ ವಿವಿಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಜಾತಿ ತಾರತಮ್ಯ ಮತ್ತು ಪರಕೀಯತೆಯನ್ನು ಅನುಭವಿಸಿದ್ದಾರೆಯೇ ಎಂದು ತಮಿಳುನಾಡು ಸಂಸದ ವೈಕೊ ಅವರು ಕೇಳಿದ ಇನ್ನೊಂದು ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. “ಕಳೆದ ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಮೇಲೆ ಯಾವುದೇ ಜಾತಿ ತಾರತಮ್ಯ ವರದಿಯಾಗಿಲ್ಲ” ಎಂದಿದ್ದಾರೆ ಡಾ.ಸರ್ಕಾರ್‌.

ಐಐಟಿಯಲ್ಲಿ 2018ರಲ್ಲಿ 2 ಎಸ್‌ಸಿ ವಿದ್ಯಾರ್ಥಿಗಳು, 2019ರಲ್ಲಿ 1 ಎಸ್‌ಸಿ ವಿದ್ಯಾರ್ಥಿ, 2022ರಲ್ಲಿ 1 ಎಸ್‌ಸಿ ವಿದ್ಯಾರ್ಥಿ ಮತ್ತು 1 ಎಸ್‌ಟಿ ವಿದ್ಯಾರ್ಥಿ ಮತ್ತು 2023 ರಲ್ಲಿ 2 ಎಸ್‌ಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿವೆ ಎಂದು ಸಚಿವರು ಹೇಳಿದ್ದಾರೆ.

ಕೇಂದ್ರೀಯ ವಿವಿಗಳ ಪ್ರಕರಣದಲ್ಲಿ, 2017 ರಲ್ಲಿ 4 ಎಸ್‌ಸಿ ವಿದ್ಯಾರ್ಥಿಗಳು, 2018 ರಲ್ಲಿ 2 ಎಸ್‌ಸಿ ವಿದ್ಯಾರ್ಥಿಗಳು ಮತ್ತು 2021 ರಲ್ಲಿ 1 ಎಸ್‌ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...