Homeದಲಿತ್ ಫೈಲ್ಸ್5 ವರ್ಷಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯದ 11,000 ವಿದ್ಯಾರ್ಥಿಗಳು ಕೇಂದ್ರೀಯ ವಿವಿಗಳನ್ನು ತೊರೆದಿದ್ದಾರೆ: ಸರ್ಕಾರ

5 ವರ್ಷಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯದ 11,000 ವಿದ್ಯಾರ್ಥಿಗಳು ಕೇಂದ್ರೀಯ ವಿವಿಗಳನ್ನು ತೊರೆದಿದ್ದಾರೆ: ಸರ್ಕಾರ

- Advertisement -
- Advertisement -

ಇತರೆ ಹಿಂದುಳಿದ ವರ್ಗ (ಒಬಿಸಿ), ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ)ಕ್ಕೆ ಸೇರಿದ 11,000ಕ್ಕೂ ಹೆಚ್ಚು ವಿದ್ಯಾರ್ಥಿಗಳು 2018 ರಿಂದ 2023ರ ಅವಧಿಯಲ್ಲಿ ಭಾರತದ 45 ಕೇಂದ್ರೀಯ ವಿಶ್ವವಿದ್ಯಾಲಯಗಳಿಂದ (ಸಿಯು) ಹೊರಗುಳಿದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ರಾಜ್ಯಸಭೆಯಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಸರ್ಕಾರ, “ಕಳೆದ ಐದು ವರ್ಷಗಳಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿಗೆ ಸೇರಿದ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಐಐಟಿಯಿಂದ ಹೊರಗುಳಿದರೆ, ಅದೇ ಅವಧಿಯಲ್ಲಿ ಈ ವರ್ಗಗಳಿಗೆ ಸೇರಿದ ಒಟ್ಟು 366 ವಿದ್ಯಾರ್ಥಿಗಳು ಐಐಎಂಗಳಿಂದ ಹೊರಗುಳಿದಿದ್ದಾರೆ” ಎಂದು ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ.ಸುಭಾಸ್ ಸರ್ಕಾರ್ ಲಿಖಿತ ಉತ್ತರ ನೀಡಿದ್ದಾರೆ.

ಮಾಹಿತಿ ನೀಡಿದ ಸಚಿವರು, “6,901 ಒಬಿಸಿ ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾನಿಲಯಗಳನ್ನು ತೊರೆದಿದ್ದಾರೆ, 3,596 ಎಸ್‌ಸಿ ವಿದ್ಯಾರ್ಥಿಗಳು ವ್ಯಾಸಂಗ ಬಿಟ್ಟಿದ್ದಾರೆ, 3949 ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಅದೇ ರೀತಿ ಐಐಟಿಗಳಲ್ಲಿ 2,544 ಒಬಿಸಿ ವಿದ್ಯಾರ್ಥಿಗಳು ಹೊರಗುಳಿದರೆ, 1,362 ಎಸ್‌ಸಿ ಮತ್ತು 538 ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ಗಳನ್ನು ಮುಂದುವರಿಸಿಲ್ಲ. ಐಐಎಂಗಳಲ್ಲಿ, 133 ಒಬಿಸಿ ವಿದ್ಯಾರ್ಥಿಗಳು, 143 ಎಸ್‌ಸಿ ಮತ್ತು 90 ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ಗಳಿಂದ ಹೊರಗುಳಿದಿದ್ದಾರೆ” ಎಂದಿದ್ದಾರೆ.

2018 ರಿಂದ 2023ರ ಅವಧಿಯಲ್ಲಿ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ)ಗಳಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ಎಷ್ಟು ವಿದ್ಯಾರ್ಥಿಗಳು ಡ್ರಾಪ್ಔಟ್ ಆಗಿದ್ದಾರೆಂದು ತಮಿಳುನಾಡಿನ ಸಂಸದ ತಿರುಚಿ ಶಿವ ಅವರು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. “ಉನ್ನತ ಶಿಕ್ಷಣ ವಲಯದಲ್ಲಿ ವಿದ್ಯಾರ್ಥಿಗಳಿಗೆ ಬಹು ಆಯ್ಕೆಗಳಿವೆ” ಎಂದು ಸಚಿವ ಸರ್ಕಾರ್ ಸಮರ್ಥಿಸಿಕೊಂಡಿದ್ದಾರೆ.

ಈ ವಿದ್ಯಾರ್ಥಿಗಳು ಸದರಿ ಸಂಸ್ಥೆಗಳಲ್ಲಿಯೇ ಒಂದು ಕೋರ್ಸ್/ಪ್ರೋಗ್ರಾಂನಿಂದ ಇನ್ನೊಂದಕ್ಕೆ ವಲಸೆ ಹೋಗುತ್ತಾರೆ. ಮುಖ್ಯವಾಗಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಇತರ ವಿಭಾಗಗಳು/ಸಂಸ್ಥೆಗಳಲ್ಲಿ ಅಥವಾ ಯಾವುದೇ ವೈಯಕ್ತಿಕ ನೆಲೆಯಲ್ಲಿ ಸೀಟುಗಳನ್ನು ಪಡೆದುಕೊಳ್ಳುವುದರಿಂದಾಗಿ ವಲಸೆ/ ಹಿಂಪಡೆಯುವಿಕೆ ನಡೆಯುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಶೋಚನೀಯ ಆರ್ಥಿಕ ಹಿನ್ನೆಲೆ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಶುಲ್ಕ ಕಡಿತ, ಹೆಚ್ಚಿನ ಸಂಸ್ಥೆಗಳ ಸ್ಥಾಪನೆ, ವಿದ್ಯಾರ್ಥಿವೇತನ, ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನಕ್ಕೆ ಅವಕಾಶದಂತಹ ವಿವಿಧ ಕ್ರಮಗಳನ್ನು ಕೈಗೊಂಡಿರುವುದಾಗಿ ಸರ್ಕಾರ ಹೇಳಿಕೊಳ್ಳುತ್ತದೆ.

ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ, ‘ಐಐಟಿಗಳಲ್ಲಿ ಬೋಧನಾ ಶುಲ್ಕ ಮನ್ನಾ’, ಕೇಂದ್ರ ವಲಯದ ಯೋಜನೆಯಡಿ ರಾಷ್ಟ್ರೀಯ ವಿದ್ಯಾರ್ಥಿವೇತನದ ಅನುದಾನ, ಸಂಸ್ಥೆಗಳಲ್ಲಿ ವಿದ್ಯಾರ್ಥಿವೇತನ ಇತ್ಯಾದಿ ಯೋಜನೆಗಳೂ ಇವೆ ಎಂದು ಸರ್ಕಾರ ಹೇಳಿಕೊಂಡು ಬಂದಿದೆ.

ಕಳೆದ ಐದು ವರ್ಷಗಳಲ್ಲಿ ಐಐಟಿ, ಕೇಂದ್ರೀಯ ವಿವಿಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಜಾತಿ ತಾರತಮ್ಯ ಮತ್ತು ಪರಕೀಯತೆಯನ್ನು ಅನುಭವಿಸಿದ್ದಾರೆಯೇ ಎಂದು ತಮಿಳುನಾಡು ಸಂಸದ ವೈಕೊ ಅವರು ಕೇಳಿದ ಇನ್ನೊಂದು ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. “ಕಳೆದ ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಮೇಲೆ ಯಾವುದೇ ಜಾತಿ ತಾರತಮ್ಯ ವರದಿಯಾಗಿಲ್ಲ” ಎಂದಿದ್ದಾರೆ ಡಾ.ಸರ್ಕಾರ್‌.

ಐಐಟಿಯಲ್ಲಿ 2018ರಲ್ಲಿ 2 ಎಸ್‌ಸಿ ವಿದ್ಯಾರ್ಥಿಗಳು, 2019ರಲ್ಲಿ 1 ಎಸ್‌ಸಿ ವಿದ್ಯಾರ್ಥಿ, 2022ರಲ್ಲಿ 1 ಎಸ್‌ಸಿ ವಿದ್ಯಾರ್ಥಿ ಮತ್ತು 1 ಎಸ್‌ಟಿ ವಿದ್ಯಾರ್ಥಿ ಮತ್ತು 2023 ರಲ್ಲಿ 2 ಎಸ್‌ಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿವೆ ಎಂದು ಸಚಿವರು ಹೇಳಿದ್ದಾರೆ.

ಕೇಂದ್ರೀಯ ವಿವಿಗಳ ಪ್ರಕರಣದಲ್ಲಿ, 2017 ರಲ್ಲಿ 4 ಎಸ್‌ಸಿ ವಿದ್ಯಾರ್ಥಿಗಳು, 2018 ರಲ್ಲಿ 2 ಎಸ್‌ಸಿ ವಿದ್ಯಾರ್ಥಿಗಳು ಮತ್ತು 2021 ರಲ್ಲಿ 1 ಎಸ್‌ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...