Homeದಲಿತ್ ಫೈಲ್ಸ್5 ವರ್ಷಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯದ 11,000 ವಿದ್ಯಾರ್ಥಿಗಳು ಕೇಂದ್ರೀಯ ವಿವಿಗಳನ್ನು ತೊರೆದಿದ್ದಾರೆ: ಸರ್ಕಾರ

5 ವರ್ಷಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯದ 11,000 ವಿದ್ಯಾರ್ಥಿಗಳು ಕೇಂದ್ರೀಯ ವಿವಿಗಳನ್ನು ತೊರೆದಿದ್ದಾರೆ: ಸರ್ಕಾರ

- Advertisement -
- Advertisement -

ಇತರೆ ಹಿಂದುಳಿದ ವರ್ಗ (ಒಬಿಸಿ), ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ)ಕ್ಕೆ ಸೇರಿದ 11,000ಕ್ಕೂ ಹೆಚ್ಚು ವಿದ್ಯಾರ್ಥಿಗಳು 2018 ರಿಂದ 2023ರ ಅವಧಿಯಲ್ಲಿ ಭಾರತದ 45 ಕೇಂದ್ರೀಯ ವಿಶ್ವವಿದ್ಯಾಲಯಗಳಿಂದ (ಸಿಯು) ಹೊರಗುಳಿದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ರಾಜ್ಯಸಭೆಯಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಸರ್ಕಾರ, “ಕಳೆದ ಐದು ವರ್ಷಗಳಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿಗೆ ಸೇರಿದ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಐಐಟಿಯಿಂದ ಹೊರಗುಳಿದರೆ, ಅದೇ ಅವಧಿಯಲ್ಲಿ ಈ ವರ್ಗಗಳಿಗೆ ಸೇರಿದ ಒಟ್ಟು 366 ವಿದ್ಯಾರ್ಥಿಗಳು ಐಐಎಂಗಳಿಂದ ಹೊರಗುಳಿದಿದ್ದಾರೆ” ಎಂದು ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ.ಸುಭಾಸ್ ಸರ್ಕಾರ್ ಲಿಖಿತ ಉತ್ತರ ನೀಡಿದ್ದಾರೆ.

ಮಾಹಿತಿ ನೀಡಿದ ಸಚಿವರು, “6,901 ಒಬಿಸಿ ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾನಿಲಯಗಳನ್ನು ತೊರೆದಿದ್ದಾರೆ, 3,596 ಎಸ್‌ಸಿ ವಿದ್ಯಾರ್ಥಿಗಳು ವ್ಯಾಸಂಗ ಬಿಟ್ಟಿದ್ದಾರೆ, 3949 ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಅದೇ ರೀತಿ ಐಐಟಿಗಳಲ್ಲಿ 2,544 ಒಬಿಸಿ ವಿದ್ಯಾರ್ಥಿಗಳು ಹೊರಗುಳಿದರೆ, 1,362 ಎಸ್‌ಸಿ ಮತ್ತು 538 ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ಗಳನ್ನು ಮುಂದುವರಿಸಿಲ್ಲ. ಐಐಎಂಗಳಲ್ಲಿ, 133 ಒಬಿಸಿ ವಿದ್ಯಾರ್ಥಿಗಳು, 143 ಎಸ್‌ಸಿ ಮತ್ತು 90 ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ಗಳಿಂದ ಹೊರಗುಳಿದಿದ್ದಾರೆ” ಎಂದಿದ್ದಾರೆ.

2018 ರಿಂದ 2023ರ ಅವಧಿಯಲ್ಲಿ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ)ಗಳಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ಎಷ್ಟು ವಿದ್ಯಾರ್ಥಿಗಳು ಡ್ರಾಪ್ಔಟ್ ಆಗಿದ್ದಾರೆಂದು ತಮಿಳುನಾಡಿನ ಸಂಸದ ತಿರುಚಿ ಶಿವ ಅವರು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. “ಉನ್ನತ ಶಿಕ್ಷಣ ವಲಯದಲ್ಲಿ ವಿದ್ಯಾರ್ಥಿಗಳಿಗೆ ಬಹು ಆಯ್ಕೆಗಳಿವೆ” ಎಂದು ಸಚಿವ ಸರ್ಕಾರ್ ಸಮರ್ಥಿಸಿಕೊಂಡಿದ್ದಾರೆ.

ಈ ವಿದ್ಯಾರ್ಥಿಗಳು ಸದರಿ ಸಂಸ್ಥೆಗಳಲ್ಲಿಯೇ ಒಂದು ಕೋರ್ಸ್/ಪ್ರೋಗ್ರಾಂನಿಂದ ಇನ್ನೊಂದಕ್ಕೆ ವಲಸೆ ಹೋಗುತ್ತಾರೆ. ಮುಖ್ಯವಾಗಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಇತರ ವಿಭಾಗಗಳು/ಸಂಸ್ಥೆಗಳಲ್ಲಿ ಅಥವಾ ಯಾವುದೇ ವೈಯಕ್ತಿಕ ನೆಲೆಯಲ್ಲಿ ಸೀಟುಗಳನ್ನು ಪಡೆದುಕೊಳ್ಳುವುದರಿಂದಾಗಿ ವಲಸೆ/ ಹಿಂಪಡೆಯುವಿಕೆ ನಡೆಯುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಶೋಚನೀಯ ಆರ್ಥಿಕ ಹಿನ್ನೆಲೆ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಶುಲ್ಕ ಕಡಿತ, ಹೆಚ್ಚಿನ ಸಂಸ್ಥೆಗಳ ಸ್ಥಾಪನೆ, ವಿದ್ಯಾರ್ಥಿವೇತನ, ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನಕ್ಕೆ ಅವಕಾಶದಂತಹ ವಿವಿಧ ಕ್ರಮಗಳನ್ನು ಕೈಗೊಂಡಿರುವುದಾಗಿ ಸರ್ಕಾರ ಹೇಳಿಕೊಳ್ಳುತ್ತದೆ.

ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ, ‘ಐಐಟಿಗಳಲ್ಲಿ ಬೋಧನಾ ಶುಲ್ಕ ಮನ್ನಾ’, ಕೇಂದ್ರ ವಲಯದ ಯೋಜನೆಯಡಿ ರಾಷ್ಟ್ರೀಯ ವಿದ್ಯಾರ್ಥಿವೇತನದ ಅನುದಾನ, ಸಂಸ್ಥೆಗಳಲ್ಲಿ ವಿದ್ಯಾರ್ಥಿವೇತನ ಇತ್ಯಾದಿ ಯೋಜನೆಗಳೂ ಇವೆ ಎಂದು ಸರ್ಕಾರ ಹೇಳಿಕೊಂಡು ಬಂದಿದೆ.

ಕಳೆದ ಐದು ವರ್ಷಗಳಲ್ಲಿ ಐಐಟಿ, ಕೇಂದ್ರೀಯ ವಿವಿಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಜಾತಿ ತಾರತಮ್ಯ ಮತ್ತು ಪರಕೀಯತೆಯನ್ನು ಅನುಭವಿಸಿದ್ದಾರೆಯೇ ಎಂದು ತಮಿಳುನಾಡು ಸಂಸದ ವೈಕೊ ಅವರು ಕೇಳಿದ ಇನ್ನೊಂದು ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. “ಕಳೆದ ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಮೇಲೆ ಯಾವುದೇ ಜಾತಿ ತಾರತಮ್ಯ ವರದಿಯಾಗಿಲ್ಲ” ಎಂದಿದ್ದಾರೆ ಡಾ.ಸರ್ಕಾರ್‌.

ಐಐಟಿಯಲ್ಲಿ 2018ರಲ್ಲಿ 2 ಎಸ್‌ಸಿ ವಿದ್ಯಾರ್ಥಿಗಳು, 2019ರಲ್ಲಿ 1 ಎಸ್‌ಸಿ ವಿದ್ಯಾರ್ಥಿ, 2022ರಲ್ಲಿ 1 ಎಸ್‌ಸಿ ವಿದ್ಯಾರ್ಥಿ ಮತ್ತು 1 ಎಸ್‌ಟಿ ವಿದ್ಯಾರ್ಥಿ ಮತ್ತು 2023 ರಲ್ಲಿ 2 ಎಸ್‌ಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿವೆ ಎಂದು ಸಚಿವರು ಹೇಳಿದ್ದಾರೆ.

ಕೇಂದ್ರೀಯ ವಿವಿಗಳ ಪ್ರಕರಣದಲ್ಲಿ, 2017 ರಲ್ಲಿ 4 ಎಸ್‌ಸಿ ವಿದ್ಯಾರ್ಥಿಗಳು, 2018 ರಲ್ಲಿ 2 ಎಸ್‌ಸಿ ವಿದ್ಯಾರ್ಥಿಗಳು ಮತ್ತು 2021 ರಲ್ಲಿ 1 ಎಸ್‌ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...