Homeರಾಜಕೀಯಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

ಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

- Advertisement -
- Advertisement -

ಮಹಾರಾಷ್ಟ್ರದ ಹತ್ತು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಹೊರ ಬಿದ್ದಿದೆ. ಅಡ್ಡ ಮತದಾನದ ಪರಿಣಾಮವಾಗಿ ವಿರೋಧ ಪಕ್ಷವಾದ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿದ್ದು ಆಡಳಿತರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಅಘಾತಕ್ಕೀಡು ಮಾಡಿದೆ. ಉಳಿದಂತೆ ಮೈತ್ರಿ ಸರ್ಕಾರದ ಪಕ್ಷಗಳಾದ ಎನ್‌ಸಿಪಿ ಮತ್ತು ಶಿವಸೇನೆ ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆಯಲು ಯಶಸ್ವಿಯಾಗಿದೆ.

ಬಿಜೆಪಿಯ ಐದನೇ ಅಭ್ಯರ್ಥಿ ಪ್ರಸಾದ್ ಲಾಡ್ 28 ಮತಗಳನ್ನು ಪಡೆದು ಚುನಾವಣೆಯಲ್ಲಿ ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಕಳೆದ ವಾರ ಕೂಡಾ ರಾಜ್ಯದ ವಿಪಕ್ಷ ನಾಯಕ, ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಮೂರು ರಾಜ್ಯಸಭಾ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆಯ ಕನಿಷ್ಠ 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ನಂಬಲಾಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಎಲ್ಲಾ ಶಿವಸೇನೆ ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ. ಇದರ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಏಕನಾಥ್ ಶಿಂಧೆ ಸೇರಿದಂತೆ 13 ಇತರ ಪಕ್ಷದ ಶಾಸಕರೊಂದಿಗೆ ಗುಜರಾತ್‌ಗೆ ಪ್ರಯಾಣಿಸಿದ್ದಾರೆ. ಇದು ಮಹಾರಾಷ್ಟ್ರ ಸರ್ಕಾರದಲ್ಲಿ ಅಪರೇಷನ್ ಕಮಲ ನಡೆಯಲಿದೆ ಎಂಬ ಆತಂಕವನ್ನು ಸೃಷ್ಟಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ಸಂಕಷ್ಟ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಂಸದ ಸಂಜಯ್ ರಾವತ್

“ಬಿಜೆಪಿ 134 ಪ್ರಾಶಸ್ತ್ಯದ ಮತಗಳನ್ನು ಪಡೆದುಕೊಂಡಿದೆ. ಪಕ್ಷವು ಇತರ ಏಳು ಶಾಸಕರ ಬೆಂಬಲವನ್ನು ಹೊರತುಪಡಿಸಿ 106 ಶಾಸಕರನ್ನು ಹೊಂದಿದೆ. ಬಿಜೆಪಿಯ ಗೆಲುವಿನ ಸಂಪೂರ್ಣ ಶ್ರೇಯಸ್ಸು ಫಡ್ನವೀಸ್ ಅವರಿಗೆ ಸಲ್ಲುತ್ತದೆ. ನನಗೆ ಪವಾಡಗಳಲ್ಲಿ ನಂಬಿಕೆ ಇಲ್ಲ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಹೇಳಿದ್ದಾರೆ.

“ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಅಸಮಾಧಾನವು ಮುನ್ನೆಲೆಗೆ ಬಂದು ಮತಗಳಾಗಿ ಪರಿವರ್ತನೆಗೊಂಡಿದೆ” ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಲು ಬಂದ ಅವರು ಜಲಗಾಂವ್‌ನ ಬಿಜೆಪಿ ಶಾಸಕ ಗಿರೀಶ್ ಮಹಾಜನ್ ಅವರನ್ನು ತಬ್ಬಿಕೊಂಡರು. ಮೂವರು ಶಾಸಕರನ್ನು ಹೊಂದಿರುವ ಹಿತೇಂದ್ರ ಠಾಕೂರ್ ಅವರ ‘ಬಹುಜನ ವಿಕಾಸ್ ಅಘಾಡಿ’ಯೊಂದಿಗೆ ಯಶಸ್ವಿ ಮಾತುಕತೆ ನಡೆಸುವಲ್ಲಿ ಮಹಾಜನ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಬಿಜೆಪಿಗೆ ಮತ ಹಾಕಿದ ಶಾಸಕರ ಬಗ್ಗೆ ನನಗೆ ಮಾತ್ರ ಸತ್ಯ ಗೊತ್ತಿದೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಅವರು ಆಡಳಿತರೂಢ ಸರ್ಕಾರದ 21 ಮತಗಳನ್ನು ತಮ್ಮ ಪರವಾಗಿ ಒಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

“ನಮಗೆ ಸಹಾಯ ಮಾಡಿದ ಮತ್ತು ನಮ್ಮ ಐದನೇ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿದ ಎಲ್ಲಾ ಪಕ್ಷಗಳ ಎಲ್ಲಾ ಶಾಸಕರು ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ರಾಜ್ಯಸಭಾ ಚುನಾವಣೆಯಲ್ಲಿ ನಾವು 123 ಮತಗಳನ್ನು ಪಡೆದುಕೊಂಡಿದ್ದೇವೆ. ಈ ಚುನಾವಣೆಯಲ್ಲಿ ನಾವು 134 ಮತಗಳನ್ನು ಪಡೆದುಕೊಂಡಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಮೊದಲಿನಿಂದಲೂ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಸಾಕಷ್ಟು ಜಗಳವಿದೆ ಎಂದು ಹೇಳುತ್ತಲೇ ಬಂದಿದ್ದೇನೆ. ಮೂರು ಪಕ್ಷಗಳ ನಡುವೆ ಹೊಂದಾಣಿಕೆ ಇಲ್ಲ. ನಮ್ಮಲ್ಲಿ ಐದನೇ ಅಭ್ಯರ್ಥಿಗೆ ಮತ ಇರಲಿಲ್ಲ, ಆದರೂ ನಮ್ಮ ಐದನೇ ಅಭ್ಯರ್ಥಿಗೆ ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳಿಗಿಂತ ಹೆಚ್ಚು ಮತಗಳು ಬಂದಿವೆ ಎಂದು ಅವರು ಹೇಳಿದ್ದಾರೆ.

“ನಮ್ಮ ನಾಯಕ ನರೇಂದ್ರ ಮೋದಿಯವರು ಭಾರತವನ್ನು ಪರಿವರ್ತಿಸುತ್ತಿದ್ದಾರೆ. ಇಂದು ಮಹಾರಾಷ್ಟ್ರ ಅವರ ಬೆಂಬಲಕ್ಕೆ ನಿಂತಿದೆ. ಮಹಾರಾಷ್ಟ್ರದಲ್ಲಿ ಬದಲಾವಣೆಯನ್ನು ಕಾಣಬಹುದಾಗಿದೆ. ಈ ಸರ್ಕಾರದ ವಿರುದ್ಧದ ಅತೃಪ್ತಿ ಮುನ್ನೆಲೆಗೆ ಬಂದಿದೆ, ನಾವು ಬಿಜೆಪಿ ಗೆಲ್ಲುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

ಬಿಜೆಪಿಯ ಎಲ್ಲಾ ನಾಲ್ಕು ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಸುತ್ತಿನಲ್ಲಿಯೇ ಗೆದ್ದಿದ್ದರು. ಪ್ರವೀಣ್ ದಾರೆಕರ್ 29, ಪ್ರೊಫೆಸರ್ ರಾಮ್ ಶಿಂಧೆ 30, ಶ್ರೀಕಾಂತ್ ಭಾರತೀಯ 30 ಮತ್ತು ಉಮಾ ಖಾಪ್ರೆ 27 ಪಡೆದ್ದಾರೆ. ಒಂದು ಮತ ತಿದ್ದಿ ಬರೆದ ಕಾರಣ ಅಸಿಂಧು ಎಂದು ಘೋಷಿಸಲಾಗಿದೆ.

“ನಮ್ಮ ಪಕ್ಷದ ನಾಯಕರು ಕಡಿಮೆ ಮಾತನಾಡುತ್ತಾರೆ ಮತ್ತು ತಂತ್ರಗಾರಿಕೆಯಲ್ಲಿ ಹೆಚ್ಚು ಸಮಯವನ್ನು ಕಳೆಯುತ್ತಾರೆ. ಫಲಿತಾಂಶಗಳು ಅದನ್ನು ಹೇಳುತ್ತವೆ” ಎಂದು ಫಡ್ನವಿಸ್‌ಗೆ ನಿಕಟವಾಗಿರುವ ಮಹಾಜನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...