Homeರಾಜಕೀಯಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

ಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

- Advertisement -
- Advertisement -

ಮಹಾರಾಷ್ಟ್ರದ ಹತ್ತು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಹೊರ ಬಿದ್ದಿದೆ. ಅಡ್ಡ ಮತದಾನದ ಪರಿಣಾಮವಾಗಿ ವಿರೋಧ ಪಕ್ಷವಾದ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿದ್ದು ಆಡಳಿತರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಅಘಾತಕ್ಕೀಡು ಮಾಡಿದೆ. ಉಳಿದಂತೆ ಮೈತ್ರಿ ಸರ್ಕಾರದ ಪಕ್ಷಗಳಾದ ಎನ್‌ಸಿಪಿ ಮತ್ತು ಶಿವಸೇನೆ ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆಯಲು ಯಶಸ್ವಿಯಾಗಿದೆ.

ಬಿಜೆಪಿಯ ಐದನೇ ಅಭ್ಯರ್ಥಿ ಪ್ರಸಾದ್ ಲಾಡ್ 28 ಮತಗಳನ್ನು ಪಡೆದು ಚುನಾವಣೆಯಲ್ಲಿ ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಕಳೆದ ವಾರ ಕೂಡಾ ರಾಜ್ಯದ ವಿಪಕ್ಷ ನಾಯಕ, ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಮೂರು ರಾಜ್ಯಸಭಾ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆಯ ಕನಿಷ್ಠ 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ನಂಬಲಾಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಎಲ್ಲಾ ಶಿವಸೇನೆ ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ. ಇದರ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಏಕನಾಥ್ ಶಿಂಧೆ ಸೇರಿದಂತೆ 13 ಇತರ ಪಕ್ಷದ ಶಾಸಕರೊಂದಿಗೆ ಗುಜರಾತ್‌ಗೆ ಪ್ರಯಾಣಿಸಿದ್ದಾರೆ. ಇದು ಮಹಾರಾಷ್ಟ್ರ ಸರ್ಕಾರದಲ್ಲಿ ಅಪರೇಷನ್ ಕಮಲ ನಡೆಯಲಿದೆ ಎಂಬ ಆತಂಕವನ್ನು ಸೃಷ್ಟಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ಸಂಕಷ್ಟ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಂಸದ ಸಂಜಯ್ ರಾವತ್

“ಬಿಜೆಪಿ 134 ಪ್ರಾಶಸ್ತ್ಯದ ಮತಗಳನ್ನು ಪಡೆದುಕೊಂಡಿದೆ. ಪಕ್ಷವು ಇತರ ಏಳು ಶಾಸಕರ ಬೆಂಬಲವನ್ನು ಹೊರತುಪಡಿಸಿ 106 ಶಾಸಕರನ್ನು ಹೊಂದಿದೆ. ಬಿಜೆಪಿಯ ಗೆಲುವಿನ ಸಂಪೂರ್ಣ ಶ್ರೇಯಸ್ಸು ಫಡ್ನವೀಸ್ ಅವರಿಗೆ ಸಲ್ಲುತ್ತದೆ. ನನಗೆ ಪವಾಡಗಳಲ್ಲಿ ನಂಬಿಕೆ ಇಲ್ಲ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಹೇಳಿದ್ದಾರೆ.

“ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಅಸಮಾಧಾನವು ಮುನ್ನೆಲೆಗೆ ಬಂದು ಮತಗಳಾಗಿ ಪರಿವರ್ತನೆಗೊಂಡಿದೆ” ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಲು ಬಂದ ಅವರು ಜಲಗಾಂವ್‌ನ ಬಿಜೆಪಿ ಶಾಸಕ ಗಿರೀಶ್ ಮಹಾಜನ್ ಅವರನ್ನು ತಬ್ಬಿಕೊಂಡರು. ಮೂವರು ಶಾಸಕರನ್ನು ಹೊಂದಿರುವ ಹಿತೇಂದ್ರ ಠಾಕೂರ್ ಅವರ ‘ಬಹುಜನ ವಿಕಾಸ್ ಅಘಾಡಿ’ಯೊಂದಿಗೆ ಯಶಸ್ವಿ ಮಾತುಕತೆ ನಡೆಸುವಲ್ಲಿ ಮಹಾಜನ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಬಿಜೆಪಿಗೆ ಮತ ಹಾಕಿದ ಶಾಸಕರ ಬಗ್ಗೆ ನನಗೆ ಮಾತ್ರ ಸತ್ಯ ಗೊತ್ತಿದೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಅವರು ಆಡಳಿತರೂಢ ಸರ್ಕಾರದ 21 ಮತಗಳನ್ನು ತಮ್ಮ ಪರವಾಗಿ ಒಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

“ನಮಗೆ ಸಹಾಯ ಮಾಡಿದ ಮತ್ತು ನಮ್ಮ ಐದನೇ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿದ ಎಲ್ಲಾ ಪಕ್ಷಗಳ ಎಲ್ಲಾ ಶಾಸಕರು ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ರಾಜ್ಯಸಭಾ ಚುನಾವಣೆಯಲ್ಲಿ ನಾವು 123 ಮತಗಳನ್ನು ಪಡೆದುಕೊಂಡಿದ್ದೇವೆ. ಈ ಚುನಾವಣೆಯಲ್ಲಿ ನಾವು 134 ಮತಗಳನ್ನು ಪಡೆದುಕೊಂಡಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಮೊದಲಿನಿಂದಲೂ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಸಾಕಷ್ಟು ಜಗಳವಿದೆ ಎಂದು ಹೇಳುತ್ತಲೇ ಬಂದಿದ್ದೇನೆ. ಮೂರು ಪಕ್ಷಗಳ ನಡುವೆ ಹೊಂದಾಣಿಕೆ ಇಲ್ಲ. ನಮ್ಮಲ್ಲಿ ಐದನೇ ಅಭ್ಯರ್ಥಿಗೆ ಮತ ಇರಲಿಲ್ಲ, ಆದರೂ ನಮ್ಮ ಐದನೇ ಅಭ್ಯರ್ಥಿಗೆ ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳಿಗಿಂತ ಹೆಚ್ಚು ಮತಗಳು ಬಂದಿವೆ ಎಂದು ಅವರು ಹೇಳಿದ್ದಾರೆ.

“ನಮ್ಮ ನಾಯಕ ನರೇಂದ್ರ ಮೋದಿಯವರು ಭಾರತವನ್ನು ಪರಿವರ್ತಿಸುತ್ತಿದ್ದಾರೆ. ಇಂದು ಮಹಾರಾಷ್ಟ್ರ ಅವರ ಬೆಂಬಲಕ್ಕೆ ನಿಂತಿದೆ. ಮಹಾರಾಷ್ಟ್ರದಲ್ಲಿ ಬದಲಾವಣೆಯನ್ನು ಕಾಣಬಹುದಾಗಿದೆ. ಈ ಸರ್ಕಾರದ ವಿರುದ್ಧದ ಅತೃಪ್ತಿ ಮುನ್ನೆಲೆಗೆ ಬಂದಿದೆ, ನಾವು ಬಿಜೆಪಿ ಗೆಲ್ಲುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

ಬಿಜೆಪಿಯ ಎಲ್ಲಾ ನಾಲ್ಕು ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಸುತ್ತಿನಲ್ಲಿಯೇ ಗೆದ್ದಿದ್ದರು. ಪ್ರವೀಣ್ ದಾರೆಕರ್ 29, ಪ್ರೊಫೆಸರ್ ರಾಮ್ ಶಿಂಧೆ 30, ಶ್ರೀಕಾಂತ್ ಭಾರತೀಯ 30 ಮತ್ತು ಉಮಾ ಖಾಪ್ರೆ 27 ಪಡೆದ್ದಾರೆ. ಒಂದು ಮತ ತಿದ್ದಿ ಬರೆದ ಕಾರಣ ಅಸಿಂಧು ಎಂದು ಘೋಷಿಸಲಾಗಿದೆ.

“ನಮ್ಮ ಪಕ್ಷದ ನಾಯಕರು ಕಡಿಮೆ ಮಾತನಾಡುತ್ತಾರೆ ಮತ್ತು ತಂತ್ರಗಾರಿಕೆಯಲ್ಲಿ ಹೆಚ್ಚು ಸಮಯವನ್ನು ಕಳೆಯುತ್ತಾರೆ. ಫಲಿತಾಂಶಗಳು ಅದನ್ನು ಹೇಳುತ್ತವೆ” ಎಂದು ಫಡ್ನವಿಸ್‌ಗೆ ನಿಕಟವಾಗಿರುವ ಮಹಾಜನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...