Homeರಾಜಕೀಯಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

ಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

- Advertisement -
- Advertisement -

ಮಹಾರಾಷ್ಟ್ರದ ಹತ್ತು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಹೊರ ಬಿದ್ದಿದೆ. ಅಡ್ಡ ಮತದಾನದ ಪರಿಣಾಮವಾಗಿ ವಿರೋಧ ಪಕ್ಷವಾದ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿದ್ದು ಆಡಳಿತರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಅಘಾತಕ್ಕೀಡು ಮಾಡಿದೆ. ಉಳಿದಂತೆ ಮೈತ್ರಿ ಸರ್ಕಾರದ ಪಕ್ಷಗಳಾದ ಎನ್‌ಸಿಪಿ ಮತ್ತು ಶಿವಸೇನೆ ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆಯಲು ಯಶಸ್ವಿಯಾಗಿದೆ.

ಬಿಜೆಪಿಯ ಐದನೇ ಅಭ್ಯರ್ಥಿ ಪ್ರಸಾದ್ ಲಾಡ್ 28 ಮತಗಳನ್ನು ಪಡೆದು ಚುನಾವಣೆಯಲ್ಲಿ ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಕಳೆದ ವಾರ ಕೂಡಾ ರಾಜ್ಯದ ವಿಪಕ್ಷ ನಾಯಕ, ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಮೂರು ರಾಜ್ಯಸಭಾ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆಯ ಕನಿಷ್ಠ 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ನಂಬಲಾಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಎಲ್ಲಾ ಶಿವಸೇನೆ ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ. ಇದರ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಏಕನಾಥ್ ಶಿಂಧೆ ಸೇರಿದಂತೆ 13 ಇತರ ಪಕ್ಷದ ಶಾಸಕರೊಂದಿಗೆ ಗುಜರಾತ್‌ಗೆ ಪ್ರಯಾಣಿಸಿದ್ದಾರೆ. ಇದು ಮಹಾರಾಷ್ಟ್ರ ಸರ್ಕಾರದಲ್ಲಿ ಅಪರೇಷನ್ ಕಮಲ ನಡೆಯಲಿದೆ ಎಂಬ ಆತಂಕವನ್ನು ಸೃಷ್ಟಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ಸಂಕಷ್ಟ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಂಸದ ಸಂಜಯ್ ರಾವತ್

“ಬಿಜೆಪಿ 134 ಪ್ರಾಶಸ್ತ್ಯದ ಮತಗಳನ್ನು ಪಡೆದುಕೊಂಡಿದೆ. ಪಕ್ಷವು ಇತರ ಏಳು ಶಾಸಕರ ಬೆಂಬಲವನ್ನು ಹೊರತುಪಡಿಸಿ 106 ಶಾಸಕರನ್ನು ಹೊಂದಿದೆ. ಬಿಜೆಪಿಯ ಗೆಲುವಿನ ಸಂಪೂರ್ಣ ಶ್ರೇಯಸ್ಸು ಫಡ್ನವೀಸ್ ಅವರಿಗೆ ಸಲ್ಲುತ್ತದೆ. ನನಗೆ ಪವಾಡಗಳಲ್ಲಿ ನಂಬಿಕೆ ಇಲ್ಲ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಹೇಳಿದ್ದಾರೆ.

“ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಅಸಮಾಧಾನವು ಮುನ್ನೆಲೆಗೆ ಬಂದು ಮತಗಳಾಗಿ ಪರಿವರ್ತನೆಗೊಂಡಿದೆ” ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಲು ಬಂದ ಅವರು ಜಲಗಾಂವ್‌ನ ಬಿಜೆಪಿ ಶಾಸಕ ಗಿರೀಶ್ ಮಹಾಜನ್ ಅವರನ್ನು ತಬ್ಬಿಕೊಂಡರು. ಮೂವರು ಶಾಸಕರನ್ನು ಹೊಂದಿರುವ ಹಿತೇಂದ್ರ ಠಾಕೂರ್ ಅವರ ‘ಬಹುಜನ ವಿಕಾಸ್ ಅಘಾಡಿ’ಯೊಂದಿಗೆ ಯಶಸ್ವಿ ಮಾತುಕತೆ ನಡೆಸುವಲ್ಲಿ ಮಹಾಜನ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಬಿಜೆಪಿಗೆ ಮತ ಹಾಕಿದ ಶಾಸಕರ ಬಗ್ಗೆ ನನಗೆ ಮಾತ್ರ ಸತ್ಯ ಗೊತ್ತಿದೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಅವರು ಆಡಳಿತರೂಢ ಸರ್ಕಾರದ 21 ಮತಗಳನ್ನು ತಮ್ಮ ಪರವಾಗಿ ಒಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

“ನಮಗೆ ಸಹಾಯ ಮಾಡಿದ ಮತ್ತು ನಮ್ಮ ಐದನೇ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿದ ಎಲ್ಲಾ ಪಕ್ಷಗಳ ಎಲ್ಲಾ ಶಾಸಕರು ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ರಾಜ್ಯಸಭಾ ಚುನಾವಣೆಯಲ್ಲಿ ನಾವು 123 ಮತಗಳನ್ನು ಪಡೆದುಕೊಂಡಿದ್ದೇವೆ. ಈ ಚುನಾವಣೆಯಲ್ಲಿ ನಾವು 134 ಮತಗಳನ್ನು ಪಡೆದುಕೊಂಡಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಮೊದಲಿನಿಂದಲೂ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಸಾಕಷ್ಟು ಜಗಳವಿದೆ ಎಂದು ಹೇಳುತ್ತಲೇ ಬಂದಿದ್ದೇನೆ. ಮೂರು ಪಕ್ಷಗಳ ನಡುವೆ ಹೊಂದಾಣಿಕೆ ಇಲ್ಲ. ನಮ್ಮಲ್ಲಿ ಐದನೇ ಅಭ್ಯರ್ಥಿಗೆ ಮತ ಇರಲಿಲ್ಲ, ಆದರೂ ನಮ್ಮ ಐದನೇ ಅಭ್ಯರ್ಥಿಗೆ ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳಿಗಿಂತ ಹೆಚ್ಚು ಮತಗಳು ಬಂದಿವೆ ಎಂದು ಅವರು ಹೇಳಿದ್ದಾರೆ.

“ನಮ್ಮ ನಾಯಕ ನರೇಂದ್ರ ಮೋದಿಯವರು ಭಾರತವನ್ನು ಪರಿವರ್ತಿಸುತ್ತಿದ್ದಾರೆ. ಇಂದು ಮಹಾರಾಷ್ಟ್ರ ಅವರ ಬೆಂಬಲಕ್ಕೆ ನಿಂತಿದೆ. ಮಹಾರಾಷ್ಟ್ರದಲ್ಲಿ ಬದಲಾವಣೆಯನ್ನು ಕಾಣಬಹುದಾಗಿದೆ. ಈ ಸರ್ಕಾರದ ವಿರುದ್ಧದ ಅತೃಪ್ತಿ ಮುನ್ನೆಲೆಗೆ ಬಂದಿದೆ, ನಾವು ಬಿಜೆಪಿ ಗೆಲ್ಲುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

ಬಿಜೆಪಿಯ ಎಲ್ಲಾ ನಾಲ್ಕು ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಸುತ್ತಿನಲ್ಲಿಯೇ ಗೆದ್ದಿದ್ದರು. ಪ್ರವೀಣ್ ದಾರೆಕರ್ 29, ಪ್ರೊಫೆಸರ್ ರಾಮ್ ಶಿಂಧೆ 30, ಶ್ರೀಕಾಂತ್ ಭಾರತೀಯ 30 ಮತ್ತು ಉಮಾ ಖಾಪ್ರೆ 27 ಪಡೆದ್ದಾರೆ. ಒಂದು ಮತ ತಿದ್ದಿ ಬರೆದ ಕಾರಣ ಅಸಿಂಧು ಎಂದು ಘೋಷಿಸಲಾಗಿದೆ.

“ನಮ್ಮ ಪಕ್ಷದ ನಾಯಕರು ಕಡಿಮೆ ಮಾತನಾಡುತ್ತಾರೆ ಮತ್ತು ತಂತ್ರಗಾರಿಕೆಯಲ್ಲಿ ಹೆಚ್ಚು ಸಮಯವನ್ನು ಕಳೆಯುತ್ತಾರೆ. ಫಲಿತಾಂಶಗಳು ಅದನ್ನು ಹೇಳುತ್ತವೆ” ಎಂದು ಫಡ್ನವಿಸ್‌ಗೆ ನಿಕಟವಾಗಿರುವ ಮಹಾಜನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....