Homeರಾಜಕೀಯಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

ಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

- Advertisement -
- Advertisement -

ಮಹಾರಾಷ್ಟ್ರದ ಹತ್ತು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಹೊರ ಬಿದ್ದಿದೆ. ಅಡ್ಡ ಮತದಾನದ ಪರಿಣಾಮವಾಗಿ ವಿರೋಧ ಪಕ್ಷವಾದ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿದ್ದು ಆಡಳಿತರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಅಘಾತಕ್ಕೀಡು ಮಾಡಿದೆ. ಉಳಿದಂತೆ ಮೈತ್ರಿ ಸರ್ಕಾರದ ಪಕ್ಷಗಳಾದ ಎನ್‌ಸಿಪಿ ಮತ್ತು ಶಿವಸೇನೆ ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆಯಲು ಯಶಸ್ವಿಯಾಗಿದೆ.

ಬಿಜೆಪಿಯ ಐದನೇ ಅಭ್ಯರ್ಥಿ ಪ್ರಸಾದ್ ಲಾಡ್ 28 ಮತಗಳನ್ನು ಪಡೆದು ಚುನಾವಣೆಯಲ್ಲಿ ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಕಳೆದ ವಾರ ಕೂಡಾ ರಾಜ್ಯದ ವಿಪಕ್ಷ ನಾಯಕ, ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಮೂರು ರಾಜ್ಯಸಭಾ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆಯ ಕನಿಷ್ಠ 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ನಂಬಲಾಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಎಲ್ಲಾ ಶಿವಸೇನೆ ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ. ಇದರ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಏಕನಾಥ್ ಶಿಂಧೆ ಸೇರಿದಂತೆ 13 ಇತರ ಪಕ್ಷದ ಶಾಸಕರೊಂದಿಗೆ ಗುಜರಾತ್‌ಗೆ ಪ್ರಯಾಣಿಸಿದ್ದಾರೆ. ಇದು ಮಹಾರಾಷ್ಟ್ರ ಸರ್ಕಾರದಲ್ಲಿ ಅಪರೇಷನ್ ಕಮಲ ನಡೆಯಲಿದೆ ಎಂಬ ಆತಂಕವನ್ನು ಸೃಷ್ಟಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ಸಂಕಷ್ಟ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಂಸದ ಸಂಜಯ್ ರಾವತ್

“ಬಿಜೆಪಿ 134 ಪ್ರಾಶಸ್ತ್ಯದ ಮತಗಳನ್ನು ಪಡೆದುಕೊಂಡಿದೆ. ಪಕ್ಷವು ಇತರ ಏಳು ಶಾಸಕರ ಬೆಂಬಲವನ್ನು ಹೊರತುಪಡಿಸಿ 106 ಶಾಸಕರನ್ನು ಹೊಂದಿದೆ. ಬಿಜೆಪಿಯ ಗೆಲುವಿನ ಸಂಪೂರ್ಣ ಶ್ರೇಯಸ್ಸು ಫಡ್ನವೀಸ್ ಅವರಿಗೆ ಸಲ್ಲುತ್ತದೆ. ನನಗೆ ಪವಾಡಗಳಲ್ಲಿ ನಂಬಿಕೆ ಇಲ್ಲ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಹೇಳಿದ್ದಾರೆ.

“ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಅಸಮಾಧಾನವು ಮುನ್ನೆಲೆಗೆ ಬಂದು ಮತಗಳಾಗಿ ಪರಿವರ್ತನೆಗೊಂಡಿದೆ” ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಲು ಬಂದ ಅವರು ಜಲಗಾಂವ್‌ನ ಬಿಜೆಪಿ ಶಾಸಕ ಗಿರೀಶ್ ಮಹಾಜನ್ ಅವರನ್ನು ತಬ್ಬಿಕೊಂಡರು. ಮೂವರು ಶಾಸಕರನ್ನು ಹೊಂದಿರುವ ಹಿತೇಂದ್ರ ಠಾಕೂರ್ ಅವರ ‘ಬಹುಜನ ವಿಕಾಸ್ ಅಘಾಡಿ’ಯೊಂದಿಗೆ ಯಶಸ್ವಿ ಮಾತುಕತೆ ನಡೆಸುವಲ್ಲಿ ಮಹಾಜನ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಬಿಜೆಪಿಗೆ ಮತ ಹಾಕಿದ ಶಾಸಕರ ಬಗ್ಗೆ ನನಗೆ ಮಾತ್ರ ಸತ್ಯ ಗೊತ್ತಿದೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಅವರು ಆಡಳಿತರೂಢ ಸರ್ಕಾರದ 21 ಮತಗಳನ್ನು ತಮ್ಮ ಪರವಾಗಿ ಒಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

“ನಮಗೆ ಸಹಾಯ ಮಾಡಿದ ಮತ್ತು ನಮ್ಮ ಐದನೇ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿದ ಎಲ್ಲಾ ಪಕ್ಷಗಳ ಎಲ್ಲಾ ಶಾಸಕರು ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ರಾಜ್ಯಸಭಾ ಚುನಾವಣೆಯಲ್ಲಿ ನಾವು 123 ಮತಗಳನ್ನು ಪಡೆದುಕೊಂಡಿದ್ದೇವೆ. ಈ ಚುನಾವಣೆಯಲ್ಲಿ ನಾವು 134 ಮತಗಳನ್ನು ಪಡೆದುಕೊಂಡಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಮೊದಲಿನಿಂದಲೂ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಸಾಕಷ್ಟು ಜಗಳವಿದೆ ಎಂದು ಹೇಳುತ್ತಲೇ ಬಂದಿದ್ದೇನೆ. ಮೂರು ಪಕ್ಷಗಳ ನಡುವೆ ಹೊಂದಾಣಿಕೆ ಇಲ್ಲ. ನಮ್ಮಲ್ಲಿ ಐದನೇ ಅಭ್ಯರ್ಥಿಗೆ ಮತ ಇರಲಿಲ್ಲ, ಆದರೂ ನಮ್ಮ ಐದನೇ ಅಭ್ಯರ್ಥಿಗೆ ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳಿಗಿಂತ ಹೆಚ್ಚು ಮತಗಳು ಬಂದಿವೆ ಎಂದು ಅವರು ಹೇಳಿದ್ದಾರೆ.

“ನಮ್ಮ ನಾಯಕ ನರೇಂದ್ರ ಮೋದಿಯವರು ಭಾರತವನ್ನು ಪರಿವರ್ತಿಸುತ್ತಿದ್ದಾರೆ. ಇಂದು ಮಹಾರಾಷ್ಟ್ರ ಅವರ ಬೆಂಬಲಕ್ಕೆ ನಿಂತಿದೆ. ಮಹಾರಾಷ್ಟ್ರದಲ್ಲಿ ಬದಲಾವಣೆಯನ್ನು ಕಾಣಬಹುದಾಗಿದೆ. ಈ ಸರ್ಕಾರದ ವಿರುದ್ಧದ ಅತೃಪ್ತಿ ಮುನ್ನೆಲೆಗೆ ಬಂದಿದೆ, ನಾವು ಬಿಜೆಪಿ ಗೆಲ್ಲುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

ಬಿಜೆಪಿಯ ಎಲ್ಲಾ ನಾಲ್ಕು ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಸುತ್ತಿನಲ್ಲಿಯೇ ಗೆದ್ದಿದ್ದರು. ಪ್ರವೀಣ್ ದಾರೆಕರ್ 29, ಪ್ರೊಫೆಸರ್ ರಾಮ್ ಶಿಂಧೆ 30, ಶ್ರೀಕಾಂತ್ ಭಾರತೀಯ 30 ಮತ್ತು ಉಮಾ ಖಾಪ್ರೆ 27 ಪಡೆದ್ದಾರೆ. ಒಂದು ಮತ ತಿದ್ದಿ ಬರೆದ ಕಾರಣ ಅಸಿಂಧು ಎಂದು ಘೋಷಿಸಲಾಗಿದೆ.

“ನಮ್ಮ ಪಕ್ಷದ ನಾಯಕರು ಕಡಿಮೆ ಮಾತನಾಡುತ್ತಾರೆ ಮತ್ತು ತಂತ್ರಗಾರಿಕೆಯಲ್ಲಿ ಹೆಚ್ಚು ಸಮಯವನ್ನು ಕಳೆಯುತ್ತಾರೆ. ಫಲಿತಾಂಶಗಳು ಅದನ್ನು ಹೇಳುತ್ತವೆ” ಎಂದು ಫಡ್ನವಿಸ್‌ಗೆ ನಿಕಟವಾಗಿರುವ ಮಹಾಜನ್ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...