Homeರಾಜಕೀಯ‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಎದ್ದಿರುವ ಬಂಡಾಯಕ್ಕೆ ಗುರುವಾರ ಬೆಳಿಗ್ಗೆ ಹೊಸ ತಿರುವು ಸಿಕ್ಕಿದೆ. ಸಚಿವ ಏಕನಾಥ್‌ ಶಿಂಧೆ ನೇತೃತ್ವದ ಬಂಡಾಯ ಪಾಳಯಕ್ಕೆ ಹೊಸದಾಗಿ ಸೇರ್ಪಡೆಯಾದ ಶಿವಸೇನೆ ಶಾಸಕ ದೀಪಕ್ ಕೇಸರ್ಕರ್ ಅವರು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ತಮ್ಮ ಪಾಳಯ ಬಯಸುತ್ತಿಲ್ಲ ಎಂದು ಇಂದು ಬೆಳಿಗ್ಗೆ ಹೇಳಿದ್ದಾರೆ. ರಾಜೀನಾಮೆಗೆ ಬದಲಾಗಿದೆ, ಶಿವಸೇನೆಯೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿ, ಹೊಸ ಸರ್ಕಾರವನ್ನು ರಚಿಸಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೇಸರ್ಕರ್ ಅವರು ಶಿಂಧೆ ಪಾಳಯವನ್ನು ಸೇರಲು ಇಂದು ಮುಂಜಾನೆ ಬಿಜೆಪಿ ಆಡಳಿತದ ಅಸ್ಸಾಂನ ಗುವಾಹಟಿಗೆ ತೆರಳಿದರು. ಕಳೆದ ಎರಡು ದಿನಗಳ ಹಿಂದಿನವರೆಗೂ ಅವರು ಉದ್ಧವ್‌ ಠಾಕ್ರೆಯೊಂದಿಗೆ ಕಾಣಿಸಿಕೊಂಡಿದ್ದರು.
₹100 ₹200 ₹500 ₹1000 Others

ದೂರವಾಣಿ ಮೂಲಕ ಎನ್‌ಡಿಟಿವಿಯೊಂದಿಗೆ ಮಾತನಾಡಿದ ಅವರು, ತಮ್ಮೊಂದಿಗೆ ವಿಮಾನದಲ್ಲಿ ಮೂವರು ಶಿವಸೇನೆ ಶಾಸಕರು ಮತ್ತು ಕನಿಷ್ಠ ಒಬ್ಬ ಪಕ್ಷೇತರ ಶಾಸಕ ಇದ್ದರು ಎಂದು ಹೇಳಿದ್ದಾರೆ. ಸೈದ್ಧಾಂತಿಕ ಸಾಮ್ಯತೆಗಳಿಂದಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಲು ಮತ್ತು ಕಾಂಗ್ರೆಸ್-ಎನ್‌ಸಿಪಿಯ ಮೈತ್ರಿಯನ್ನು ಬಿಡಲು ಹಲವಾರು ಶಾಸಕರು ಉದ್ಧವ್‌ ಠಾಕ್ರೆಗೆ ಹೇಳಿದ್ದಾರೆ ಎಂದು ಕೇಸರ್ಕರ್ ಈ ಹಿಂದೆಯೂ ಹೇಳಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಯಾವುದೇ ವಿಳಂಬಕ್ಕೆ ಸಮಯವಿಲ್ಲ ಎಂದು ಕೇಸರ್ಕರ್‌‌ ಪ್ರತಿಪಾದಿಸಿದ್ದು, “ಜನರು ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೆಂದು ಬಯಸುತ್ತಾರೆ. ಎಲ್ಲಾ ಪ್ರಮುಖ ಸಚಿವಾಲಯಗಳು ಎನ್‌ಸಿಪಿ ಅಥವಾ ಕಾಂಗ್ರೆಸ್‌ನೊಂದಿಗೆ ಇವೆ. ನಮ್ಮಲ್ಲಿ ಕೇವಲ ಕೈಗಾರಿಕೆಗಳು ಮತ್ತು ನಗರಾಭಿವೃದ್ಧಿ ಸಚಿವಾಲಯ ಇದೆ. ಗ್ರಾಮೀಣ ಮಹಾರಾಷ್ಟ್ರಕ್ಕೆ ಸಂಬಂಧಿಸಿದ ಇಲಾಖೆಗಳು ಎನ್‌ಸಿಪಿ ಅಥವಾ ಕಾಂಗ್ರೆಸ್ ಕೈಯಲ್ಲಿ ಇದೆ” ಎಂದು ಅವರು ಹೇಳಿದ್ದಾರೆ.

“ನಮಗೆ ಮುಖ್ಯಮಂತ್ರಿ ಮೇಲೆ ಕೋಪವಿಲ್ಲ. ಮೈತ್ರಿ ಸರ್ಕಾರದಲ್ಲಿ ಇರುವ ಇತರರ ಮೇಲೆ ನಮಗೆ ಕೋಪವಿದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಿದ್ಧಾಂತದ ಭಾಗವಾಗಿ ಹಿಂದುತ್ವವನ್ನು ಪ್ರತಿಪಾದಿಸುವ ಶಿವಸೇನೆ ಮತ್ತು ಬಿಜೆಪಿ ಎರಡೂ 2019 ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಿದ್ದವು. ಆದರೆ ನಾಯಕತ್ವದ ಸ್ಥಾನಗಳ ಬಗ್ಗೆ ಭಿನ್ನಾಭಿಪ್ರಾಯಗಳು ಉಂಟಾದ ನಂತರ ಸರ್ಕಾರ ರಚಿಸಲು ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಕೇಸರ್ಕರ್ ಅವರು ಶಿವಸೇನೆ-ಬಿಜೆಪಿ ಮೈತ್ರಿ 25 ವರ್ಷಗಳಿಂದ ಅಸ್ತಿತ್ವದಲ್ಲಿದೆ ಎಂದು ಒತ್ತಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಇಲ್ಲಿಯವರೆಗೆ ಪ್ರತಿಪಾದಿಸುತ್ತಲೆ ಬಂದಿದೆ. ಆದರೆ ಶಿವಸೇನೆಯ ಬಂಡಾಯ ಶಾಸಕರು ಗುಜರಾತಿನಿಂದ ಅಸ್ಸಾಂನ ಗುವಾಹಟಿಗೆ ತೆರಳಿದಾಗ, ಅಲ್ಲಿನ ಹೋಟೆಲ್‌ನಲ್ಲಿ ಅವರಿಗಿಂತ ಮುಂಚೆಯೆ ಅಸ್ಸಾಂ ಮುಖ್ಯಮಂತ್ರಿ ಕಾಣಿಸಿಕೊಂಡಿದ್ದರು. ಅದೇ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಶಿವಸೇನೆಯ ಬಹುತೇಕ ಶಾಸಕರು ಈಗ ಏಕನಾಥ್ ಶಿಂಧೆ ಅವರೊಂದಿಗಿದ್ದಾರೆ ಎಂದು ಕೇಸರ್ಕರ್ ಹೇಳಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನಡುವೆ ಪಕ್ಷದ ನಾಯಕ ಯಾರೆಂದು ಪರಿಗಣಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಕೇಸರ್ಕರ್‌, “ನಾವು ಮುಖ್ಯಮಂತ್ರಿಯೊಂದಿಗೆ ಹಲವಾರು ಬಾರಿ ಮಾತನಾಡಿದ್ದೇವೆ. ಈಗ ಅವರು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳುತ್ತಿದ್ದಾರೆ. ಆದರೆ ನಮಗೆ ಅವರ ರಾಜೀನಾಮೆ ಬೇಡ. ನಮಗೆ ನಮಗೆ ಬೇಕಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಆಡಳಿತ. ಇದರಿಂದ ಮಹಾರಾಷ್ಟ್ರ ಪ್ರಗತಿಯಾಗಬೇಕು” ಎಂದು ತಿಳಿಸಿದ್ದಾರೆ.

ಶಿಂಧೆ ಪಾಳಯವು ಈಗ ಸ್ಪಷ್ಟವಾಗಿ ಪಕ್ಷದ 55 ಶಾಸಕರಲ್ಲಿ 40 ಮಂದಿಯನ್ನು ಹೊಂದಿದೆ, ಅಂದರೆ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅಗತ್ಯವಿರುವ ಮೂರನೇ ಎರಡರಷ್ಟು ಶಾಸಕ ಬಲವನ್ನು ಹೊಂದಿರುವುದರಿಂದ ಅದು ನಿಜವಾದ ಶಿವಸೇನೆ ಎಂದು ಹೇಳ ಬಹುದಾಗಿದೆ.

ವೈಯಕ್ತಿಕ ಮಹತ್ವಾಕಾಂಕ್ಷೆಗಳ ಬಗ್ಗೆ ಮಾತನಾಡಿದ ಕೇಸರ್ಕರ್‌‌, ತನಗೆ ಬಿಜೆಪಿಯಿಂದ ಆಫರ್ ಮಾಡಲಾಗಿದೆ ಎಂದು ಹೇಳಿದ್ದಾರೆ. “ಆದರೂ, ನಾನು ಠಾಕ್ರೆ ಕುಟುಂಬವನ್ನು ಗೌರವಿಸುವ ಕಾರಣ ನಾನು ಶಿವಸೇನೆಯೊಂದಿಗೆ ಉಳಿದಿದ್ದೇನೆ. ಹಿಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ-ಶಿವಸೇನ ಆಡಳಿತದಲ್ಲಿ ರಾಜ್ಯದ ಸಚಿವನಾಗಿ ಅತ್ಯುತ್ತಮ ಖಾತೆಯನ್ನು ಹೊಂದಿದ್ದೆ. ಆದರೆ ಈ ಬಾರಿ ನನಗೆ ಮಂತ್ರಿ ಪದವಿ ನೀಡದ್ದಕ್ಕೆ ನಾನು ಅಸಮಾಧಾನಗೊಂಡಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

ಈ ಮಧ್ಯೆ, ಉದ್ಧವ್ ಠಾಕ್ರೆ ಅವರ ಆಪ್ತ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಪಕ್ಷವು ಇನ್ನೂ ಪ್ರಬಲವಾಗಿದೆ. ಬಂಡಾಯ ಶಾಸಕರು ಪಕ್ಷದ ದಿವಂಗತ ಸ್ಥಾಪಕ ಬಾಳ್ ಠಾಕ್ರೆ ಅವರ ನಿಜವಾದ ‘ಭಕ್ತರು’ ಅಲ್ಲ ಎಂದು ಹೇಳಿದ್ದು, “ಬಂಡಾಯ ಶಾಸಕರು ಬೇಕಾದರೆ ಬಿಜೆಪಿ ಜೊತೆಗೆ ಹೋಗಿ ಸರ್ಕಾರ ಕಟ್ಟಲಿ, ನಾವು ಶಿವಸೇನೆಯನ್ನು ಹೊಸದಾಗಿ ಮತ್ತೇ ಕಟ್ಟುತ್ತೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...