Homeರಾಜಕೀಯ‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಎದ್ದಿರುವ ಬಂಡಾಯಕ್ಕೆ ಗುರುವಾರ ಬೆಳಿಗ್ಗೆ ಹೊಸ ತಿರುವು ಸಿಕ್ಕಿದೆ. ಸಚಿವ ಏಕನಾಥ್‌ ಶಿಂಧೆ ನೇತೃತ್ವದ ಬಂಡಾಯ ಪಾಳಯಕ್ಕೆ ಹೊಸದಾಗಿ ಸೇರ್ಪಡೆಯಾದ ಶಿವಸೇನೆ ಶಾಸಕ ದೀಪಕ್ ಕೇಸರ್ಕರ್ ಅವರು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ತಮ್ಮ ಪಾಳಯ ಬಯಸುತ್ತಿಲ್ಲ ಎಂದು ಇಂದು ಬೆಳಿಗ್ಗೆ ಹೇಳಿದ್ದಾರೆ. ರಾಜೀನಾಮೆಗೆ ಬದಲಾಗಿದೆ, ಶಿವಸೇನೆಯೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿ, ಹೊಸ ಸರ್ಕಾರವನ್ನು ರಚಿಸಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೇಸರ್ಕರ್ ಅವರು ಶಿಂಧೆ ಪಾಳಯವನ್ನು ಸೇರಲು ಇಂದು ಮುಂಜಾನೆ ಬಿಜೆಪಿ ಆಡಳಿತದ ಅಸ್ಸಾಂನ ಗುವಾಹಟಿಗೆ ತೆರಳಿದರು. ಕಳೆದ ಎರಡು ದಿನಗಳ ಹಿಂದಿನವರೆಗೂ ಅವರು ಉದ್ಧವ್‌ ಠಾಕ್ರೆಯೊಂದಿಗೆ ಕಾಣಿಸಿಕೊಂಡಿದ್ದರು.
₹100 ₹200 ₹500 ₹1000 Others

ದೂರವಾಣಿ ಮೂಲಕ ಎನ್‌ಡಿಟಿವಿಯೊಂದಿಗೆ ಮಾತನಾಡಿದ ಅವರು, ತಮ್ಮೊಂದಿಗೆ ವಿಮಾನದಲ್ಲಿ ಮೂವರು ಶಿವಸೇನೆ ಶಾಸಕರು ಮತ್ತು ಕನಿಷ್ಠ ಒಬ್ಬ ಪಕ್ಷೇತರ ಶಾಸಕ ಇದ್ದರು ಎಂದು ಹೇಳಿದ್ದಾರೆ. ಸೈದ್ಧಾಂತಿಕ ಸಾಮ್ಯತೆಗಳಿಂದಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಲು ಮತ್ತು ಕಾಂಗ್ರೆಸ್-ಎನ್‌ಸಿಪಿಯ ಮೈತ್ರಿಯನ್ನು ಬಿಡಲು ಹಲವಾರು ಶಾಸಕರು ಉದ್ಧವ್‌ ಠಾಕ್ರೆಗೆ ಹೇಳಿದ್ದಾರೆ ಎಂದು ಕೇಸರ್ಕರ್ ಈ ಹಿಂದೆಯೂ ಹೇಳಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಯಾವುದೇ ವಿಳಂಬಕ್ಕೆ ಸಮಯವಿಲ್ಲ ಎಂದು ಕೇಸರ್ಕರ್‌‌ ಪ್ರತಿಪಾದಿಸಿದ್ದು, “ಜನರು ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೆಂದು ಬಯಸುತ್ತಾರೆ. ಎಲ್ಲಾ ಪ್ರಮುಖ ಸಚಿವಾಲಯಗಳು ಎನ್‌ಸಿಪಿ ಅಥವಾ ಕಾಂಗ್ರೆಸ್‌ನೊಂದಿಗೆ ಇವೆ. ನಮ್ಮಲ್ಲಿ ಕೇವಲ ಕೈಗಾರಿಕೆಗಳು ಮತ್ತು ನಗರಾಭಿವೃದ್ಧಿ ಸಚಿವಾಲಯ ಇದೆ. ಗ್ರಾಮೀಣ ಮಹಾರಾಷ್ಟ್ರಕ್ಕೆ ಸಂಬಂಧಿಸಿದ ಇಲಾಖೆಗಳು ಎನ್‌ಸಿಪಿ ಅಥವಾ ಕಾಂಗ್ರೆಸ್ ಕೈಯಲ್ಲಿ ಇದೆ” ಎಂದು ಅವರು ಹೇಳಿದ್ದಾರೆ.

“ನಮಗೆ ಮುಖ್ಯಮಂತ್ರಿ ಮೇಲೆ ಕೋಪವಿಲ್ಲ. ಮೈತ್ರಿ ಸರ್ಕಾರದಲ್ಲಿ ಇರುವ ಇತರರ ಮೇಲೆ ನಮಗೆ ಕೋಪವಿದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಿದ್ಧಾಂತದ ಭಾಗವಾಗಿ ಹಿಂದುತ್ವವನ್ನು ಪ್ರತಿಪಾದಿಸುವ ಶಿವಸೇನೆ ಮತ್ತು ಬಿಜೆಪಿ ಎರಡೂ 2019 ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಿದ್ದವು. ಆದರೆ ನಾಯಕತ್ವದ ಸ್ಥಾನಗಳ ಬಗ್ಗೆ ಭಿನ್ನಾಭಿಪ್ರಾಯಗಳು ಉಂಟಾದ ನಂತರ ಸರ್ಕಾರ ರಚಿಸಲು ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಕೇಸರ್ಕರ್ ಅವರು ಶಿವಸೇನೆ-ಬಿಜೆಪಿ ಮೈತ್ರಿ 25 ವರ್ಷಗಳಿಂದ ಅಸ್ತಿತ್ವದಲ್ಲಿದೆ ಎಂದು ಒತ್ತಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಇಲ್ಲಿಯವರೆಗೆ ಪ್ರತಿಪಾದಿಸುತ್ತಲೆ ಬಂದಿದೆ. ಆದರೆ ಶಿವಸೇನೆಯ ಬಂಡಾಯ ಶಾಸಕರು ಗುಜರಾತಿನಿಂದ ಅಸ್ಸಾಂನ ಗುವಾಹಟಿಗೆ ತೆರಳಿದಾಗ, ಅಲ್ಲಿನ ಹೋಟೆಲ್‌ನಲ್ಲಿ ಅವರಿಗಿಂತ ಮುಂಚೆಯೆ ಅಸ್ಸಾಂ ಮುಖ್ಯಮಂತ್ರಿ ಕಾಣಿಸಿಕೊಂಡಿದ್ದರು. ಅದೇ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಶಿವಸೇನೆಯ ಬಹುತೇಕ ಶಾಸಕರು ಈಗ ಏಕನಾಥ್ ಶಿಂಧೆ ಅವರೊಂದಿಗಿದ್ದಾರೆ ಎಂದು ಕೇಸರ್ಕರ್ ಹೇಳಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನಡುವೆ ಪಕ್ಷದ ನಾಯಕ ಯಾರೆಂದು ಪರಿಗಣಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಕೇಸರ್ಕರ್‌, “ನಾವು ಮುಖ್ಯಮಂತ್ರಿಯೊಂದಿಗೆ ಹಲವಾರು ಬಾರಿ ಮಾತನಾಡಿದ್ದೇವೆ. ಈಗ ಅವರು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳುತ್ತಿದ್ದಾರೆ. ಆದರೆ ನಮಗೆ ಅವರ ರಾಜೀನಾಮೆ ಬೇಡ. ನಮಗೆ ನಮಗೆ ಬೇಕಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಆಡಳಿತ. ಇದರಿಂದ ಮಹಾರಾಷ್ಟ್ರ ಪ್ರಗತಿಯಾಗಬೇಕು” ಎಂದು ತಿಳಿಸಿದ್ದಾರೆ.

ಶಿಂಧೆ ಪಾಳಯವು ಈಗ ಸ್ಪಷ್ಟವಾಗಿ ಪಕ್ಷದ 55 ಶಾಸಕರಲ್ಲಿ 40 ಮಂದಿಯನ್ನು ಹೊಂದಿದೆ, ಅಂದರೆ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅಗತ್ಯವಿರುವ ಮೂರನೇ ಎರಡರಷ್ಟು ಶಾಸಕ ಬಲವನ್ನು ಹೊಂದಿರುವುದರಿಂದ ಅದು ನಿಜವಾದ ಶಿವಸೇನೆ ಎಂದು ಹೇಳ ಬಹುದಾಗಿದೆ.

ವೈಯಕ್ತಿಕ ಮಹತ್ವಾಕಾಂಕ್ಷೆಗಳ ಬಗ್ಗೆ ಮಾತನಾಡಿದ ಕೇಸರ್ಕರ್‌‌, ತನಗೆ ಬಿಜೆಪಿಯಿಂದ ಆಫರ್ ಮಾಡಲಾಗಿದೆ ಎಂದು ಹೇಳಿದ್ದಾರೆ. “ಆದರೂ, ನಾನು ಠಾಕ್ರೆ ಕುಟುಂಬವನ್ನು ಗೌರವಿಸುವ ಕಾರಣ ನಾನು ಶಿವಸೇನೆಯೊಂದಿಗೆ ಉಳಿದಿದ್ದೇನೆ. ಹಿಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ-ಶಿವಸೇನ ಆಡಳಿತದಲ್ಲಿ ರಾಜ್ಯದ ಸಚಿವನಾಗಿ ಅತ್ಯುತ್ತಮ ಖಾತೆಯನ್ನು ಹೊಂದಿದ್ದೆ. ಆದರೆ ಈ ಬಾರಿ ನನಗೆ ಮಂತ್ರಿ ಪದವಿ ನೀಡದ್ದಕ್ಕೆ ನಾನು ಅಸಮಾಧಾನಗೊಂಡಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

ಈ ಮಧ್ಯೆ, ಉದ್ಧವ್ ಠಾಕ್ರೆ ಅವರ ಆಪ್ತ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಪಕ್ಷವು ಇನ್ನೂ ಪ್ರಬಲವಾಗಿದೆ. ಬಂಡಾಯ ಶಾಸಕರು ಪಕ್ಷದ ದಿವಂಗತ ಸ್ಥಾಪಕ ಬಾಳ್ ಠಾಕ್ರೆ ಅವರ ನಿಜವಾದ ‘ಭಕ್ತರು’ ಅಲ್ಲ ಎಂದು ಹೇಳಿದ್ದು, “ಬಂಡಾಯ ಶಾಸಕರು ಬೇಕಾದರೆ ಬಿಜೆಪಿ ಜೊತೆಗೆ ಹೋಗಿ ಸರ್ಕಾರ ಕಟ್ಟಲಿ, ನಾವು ಶಿವಸೇನೆಯನ್ನು ಹೊಸದಾಗಿ ಮತ್ತೇ ಕಟ್ಟುತ್ತೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...