Homeರಾಜಕೀಯ‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಎದ್ದಿರುವ ಬಂಡಾಯಕ್ಕೆ ಗುರುವಾರ ಬೆಳಿಗ್ಗೆ ಹೊಸ ತಿರುವು ಸಿಕ್ಕಿದೆ. ಸಚಿವ ಏಕನಾಥ್‌ ಶಿಂಧೆ ನೇತೃತ್ವದ ಬಂಡಾಯ ಪಾಳಯಕ್ಕೆ ಹೊಸದಾಗಿ ಸೇರ್ಪಡೆಯಾದ ಶಿವಸೇನೆ ಶಾಸಕ ದೀಪಕ್ ಕೇಸರ್ಕರ್ ಅವರು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ತಮ್ಮ ಪಾಳಯ ಬಯಸುತ್ತಿಲ್ಲ ಎಂದು ಇಂದು ಬೆಳಿಗ್ಗೆ ಹೇಳಿದ್ದಾರೆ. ರಾಜೀನಾಮೆಗೆ ಬದಲಾಗಿದೆ, ಶಿವಸೇನೆಯೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿ, ಹೊಸ ಸರ್ಕಾರವನ್ನು ರಚಿಸಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೇಸರ್ಕರ್ ಅವರು ಶಿಂಧೆ ಪಾಳಯವನ್ನು ಸೇರಲು ಇಂದು ಮುಂಜಾನೆ ಬಿಜೆಪಿ ಆಡಳಿತದ ಅಸ್ಸಾಂನ ಗುವಾಹಟಿಗೆ ತೆರಳಿದರು. ಕಳೆದ ಎರಡು ದಿನಗಳ ಹಿಂದಿನವರೆಗೂ ಅವರು ಉದ್ಧವ್‌ ಠಾಕ್ರೆಯೊಂದಿಗೆ ಕಾಣಿಸಿಕೊಂಡಿದ್ದರು.
₹100 ₹200 ₹500 ₹1000 Others

ದೂರವಾಣಿ ಮೂಲಕ ಎನ್‌ಡಿಟಿವಿಯೊಂದಿಗೆ ಮಾತನಾಡಿದ ಅವರು, ತಮ್ಮೊಂದಿಗೆ ವಿಮಾನದಲ್ಲಿ ಮೂವರು ಶಿವಸೇನೆ ಶಾಸಕರು ಮತ್ತು ಕನಿಷ್ಠ ಒಬ್ಬ ಪಕ್ಷೇತರ ಶಾಸಕ ಇದ್ದರು ಎಂದು ಹೇಳಿದ್ದಾರೆ. ಸೈದ್ಧಾಂತಿಕ ಸಾಮ್ಯತೆಗಳಿಂದಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಲು ಮತ್ತು ಕಾಂಗ್ರೆಸ್-ಎನ್‌ಸಿಪಿಯ ಮೈತ್ರಿಯನ್ನು ಬಿಡಲು ಹಲವಾರು ಶಾಸಕರು ಉದ್ಧವ್‌ ಠಾಕ್ರೆಗೆ ಹೇಳಿದ್ದಾರೆ ಎಂದು ಕೇಸರ್ಕರ್ ಈ ಹಿಂದೆಯೂ ಹೇಳಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಯಾವುದೇ ವಿಳಂಬಕ್ಕೆ ಸಮಯವಿಲ್ಲ ಎಂದು ಕೇಸರ್ಕರ್‌‌ ಪ್ರತಿಪಾದಿಸಿದ್ದು, “ಜನರು ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೆಂದು ಬಯಸುತ್ತಾರೆ. ಎಲ್ಲಾ ಪ್ರಮುಖ ಸಚಿವಾಲಯಗಳು ಎನ್‌ಸಿಪಿ ಅಥವಾ ಕಾಂಗ್ರೆಸ್‌ನೊಂದಿಗೆ ಇವೆ. ನಮ್ಮಲ್ಲಿ ಕೇವಲ ಕೈಗಾರಿಕೆಗಳು ಮತ್ತು ನಗರಾಭಿವೃದ್ಧಿ ಸಚಿವಾಲಯ ಇದೆ. ಗ್ರಾಮೀಣ ಮಹಾರಾಷ್ಟ್ರಕ್ಕೆ ಸಂಬಂಧಿಸಿದ ಇಲಾಖೆಗಳು ಎನ್‌ಸಿಪಿ ಅಥವಾ ಕಾಂಗ್ರೆಸ್ ಕೈಯಲ್ಲಿ ಇದೆ” ಎಂದು ಅವರು ಹೇಳಿದ್ದಾರೆ.

“ನಮಗೆ ಮುಖ್ಯಮಂತ್ರಿ ಮೇಲೆ ಕೋಪವಿಲ್ಲ. ಮೈತ್ರಿ ಸರ್ಕಾರದಲ್ಲಿ ಇರುವ ಇತರರ ಮೇಲೆ ನಮಗೆ ಕೋಪವಿದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಿದ್ಧಾಂತದ ಭಾಗವಾಗಿ ಹಿಂದುತ್ವವನ್ನು ಪ್ರತಿಪಾದಿಸುವ ಶಿವಸೇನೆ ಮತ್ತು ಬಿಜೆಪಿ ಎರಡೂ 2019 ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಿದ್ದವು. ಆದರೆ ನಾಯಕತ್ವದ ಸ್ಥಾನಗಳ ಬಗ್ಗೆ ಭಿನ್ನಾಭಿಪ್ರಾಯಗಳು ಉಂಟಾದ ನಂತರ ಸರ್ಕಾರ ರಚಿಸಲು ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಕೇಸರ್ಕರ್ ಅವರು ಶಿವಸೇನೆ-ಬಿಜೆಪಿ ಮೈತ್ರಿ 25 ವರ್ಷಗಳಿಂದ ಅಸ್ತಿತ್ವದಲ್ಲಿದೆ ಎಂದು ಒತ್ತಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಇಲ್ಲಿಯವರೆಗೆ ಪ್ರತಿಪಾದಿಸುತ್ತಲೆ ಬಂದಿದೆ. ಆದರೆ ಶಿವಸೇನೆಯ ಬಂಡಾಯ ಶಾಸಕರು ಗುಜರಾತಿನಿಂದ ಅಸ್ಸಾಂನ ಗುವಾಹಟಿಗೆ ತೆರಳಿದಾಗ, ಅಲ್ಲಿನ ಹೋಟೆಲ್‌ನಲ್ಲಿ ಅವರಿಗಿಂತ ಮುಂಚೆಯೆ ಅಸ್ಸಾಂ ಮುಖ್ಯಮಂತ್ರಿ ಕಾಣಿಸಿಕೊಂಡಿದ್ದರು. ಅದೇ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಶಿವಸೇನೆಯ ಬಹುತೇಕ ಶಾಸಕರು ಈಗ ಏಕನಾಥ್ ಶಿಂಧೆ ಅವರೊಂದಿಗಿದ್ದಾರೆ ಎಂದು ಕೇಸರ್ಕರ್ ಹೇಳಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನಡುವೆ ಪಕ್ಷದ ನಾಯಕ ಯಾರೆಂದು ಪರಿಗಣಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಕೇಸರ್ಕರ್‌, “ನಾವು ಮುಖ್ಯಮಂತ್ರಿಯೊಂದಿಗೆ ಹಲವಾರು ಬಾರಿ ಮಾತನಾಡಿದ್ದೇವೆ. ಈಗ ಅವರು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳುತ್ತಿದ್ದಾರೆ. ಆದರೆ ನಮಗೆ ಅವರ ರಾಜೀನಾಮೆ ಬೇಡ. ನಮಗೆ ನಮಗೆ ಬೇಕಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಆಡಳಿತ. ಇದರಿಂದ ಮಹಾರಾಷ್ಟ್ರ ಪ್ರಗತಿಯಾಗಬೇಕು” ಎಂದು ತಿಳಿಸಿದ್ದಾರೆ.

ಶಿಂಧೆ ಪಾಳಯವು ಈಗ ಸ್ಪಷ್ಟವಾಗಿ ಪಕ್ಷದ 55 ಶಾಸಕರಲ್ಲಿ 40 ಮಂದಿಯನ್ನು ಹೊಂದಿದೆ, ಅಂದರೆ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅಗತ್ಯವಿರುವ ಮೂರನೇ ಎರಡರಷ್ಟು ಶಾಸಕ ಬಲವನ್ನು ಹೊಂದಿರುವುದರಿಂದ ಅದು ನಿಜವಾದ ಶಿವಸೇನೆ ಎಂದು ಹೇಳ ಬಹುದಾಗಿದೆ.

ವೈಯಕ್ತಿಕ ಮಹತ್ವಾಕಾಂಕ್ಷೆಗಳ ಬಗ್ಗೆ ಮಾತನಾಡಿದ ಕೇಸರ್ಕರ್‌‌, ತನಗೆ ಬಿಜೆಪಿಯಿಂದ ಆಫರ್ ಮಾಡಲಾಗಿದೆ ಎಂದು ಹೇಳಿದ್ದಾರೆ. “ಆದರೂ, ನಾನು ಠಾಕ್ರೆ ಕುಟುಂಬವನ್ನು ಗೌರವಿಸುವ ಕಾರಣ ನಾನು ಶಿವಸೇನೆಯೊಂದಿಗೆ ಉಳಿದಿದ್ದೇನೆ. ಹಿಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ-ಶಿವಸೇನ ಆಡಳಿತದಲ್ಲಿ ರಾಜ್ಯದ ಸಚಿವನಾಗಿ ಅತ್ಯುತ್ತಮ ಖಾತೆಯನ್ನು ಹೊಂದಿದ್ದೆ. ಆದರೆ ಈ ಬಾರಿ ನನಗೆ ಮಂತ್ರಿ ಪದವಿ ನೀಡದ್ದಕ್ಕೆ ನಾನು ಅಸಮಾಧಾನಗೊಂಡಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

ಈ ಮಧ್ಯೆ, ಉದ್ಧವ್ ಠಾಕ್ರೆ ಅವರ ಆಪ್ತ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಪಕ್ಷವು ಇನ್ನೂ ಪ್ರಬಲವಾಗಿದೆ. ಬಂಡಾಯ ಶಾಸಕರು ಪಕ್ಷದ ದಿವಂಗತ ಸ್ಥಾಪಕ ಬಾಳ್ ಠಾಕ್ರೆ ಅವರ ನಿಜವಾದ ‘ಭಕ್ತರು’ ಅಲ್ಲ ಎಂದು ಹೇಳಿದ್ದು, “ಬಂಡಾಯ ಶಾಸಕರು ಬೇಕಾದರೆ ಬಿಜೆಪಿ ಜೊತೆಗೆ ಹೋಗಿ ಸರ್ಕಾರ ಕಟ್ಟಲಿ, ನಾವು ಶಿವಸೇನೆಯನ್ನು ಹೊಸದಾಗಿ ಮತ್ತೇ ಕಟ್ಟುತ್ತೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....