Homeರಾಜಕೀಯ‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಎದ್ದಿರುವ ಬಂಡಾಯಕ್ಕೆ ಗುರುವಾರ ಬೆಳಿಗ್ಗೆ ಹೊಸ ತಿರುವು ಸಿಕ್ಕಿದೆ. ಸಚಿವ ಏಕನಾಥ್‌ ಶಿಂಧೆ ನೇತೃತ್ವದ ಬಂಡಾಯ ಪಾಳಯಕ್ಕೆ ಹೊಸದಾಗಿ ಸೇರ್ಪಡೆಯಾದ ಶಿವಸೇನೆ ಶಾಸಕ ದೀಪಕ್ ಕೇಸರ್ಕರ್ ಅವರು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ತಮ್ಮ ಪಾಳಯ ಬಯಸುತ್ತಿಲ್ಲ ಎಂದು ಇಂದು ಬೆಳಿಗ್ಗೆ ಹೇಳಿದ್ದಾರೆ. ರಾಜೀನಾಮೆಗೆ ಬದಲಾಗಿದೆ, ಶಿವಸೇನೆಯೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿ, ಹೊಸ ಸರ್ಕಾರವನ್ನು ರಚಿಸಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೇಸರ್ಕರ್ ಅವರು ಶಿಂಧೆ ಪಾಳಯವನ್ನು ಸೇರಲು ಇಂದು ಮುಂಜಾನೆ ಬಿಜೆಪಿ ಆಡಳಿತದ ಅಸ್ಸಾಂನ ಗುವಾಹಟಿಗೆ ತೆರಳಿದರು. ಕಳೆದ ಎರಡು ದಿನಗಳ ಹಿಂದಿನವರೆಗೂ ಅವರು ಉದ್ಧವ್‌ ಠಾಕ್ರೆಯೊಂದಿಗೆ ಕಾಣಿಸಿಕೊಂಡಿದ್ದರು.
₹100 ₹200 ₹500 ₹1000 Others

ದೂರವಾಣಿ ಮೂಲಕ ಎನ್‌ಡಿಟಿವಿಯೊಂದಿಗೆ ಮಾತನಾಡಿದ ಅವರು, ತಮ್ಮೊಂದಿಗೆ ವಿಮಾನದಲ್ಲಿ ಮೂವರು ಶಿವಸೇನೆ ಶಾಸಕರು ಮತ್ತು ಕನಿಷ್ಠ ಒಬ್ಬ ಪಕ್ಷೇತರ ಶಾಸಕ ಇದ್ದರು ಎಂದು ಹೇಳಿದ್ದಾರೆ. ಸೈದ್ಧಾಂತಿಕ ಸಾಮ್ಯತೆಗಳಿಂದಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಲು ಮತ್ತು ಕಾಂಗ್ರೆಸ್-ಎನ್‌ಸಿಪಿಯ ಮೈತ್ರಿಯನ್ನು ಬಿಡಲು ಹಲವಾರು ಶಾಸಕರು ಉದ್ಧವ್‌ ಠಾಕ್ರೆಗೆ ಹೇಳಿದ್ದಾರೆ ಎಂದು ಕೇಸರ್ಕರ್ ಈ ಹಿಂದೆಯೂ ಹೇಳಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಯಾವುದೇ ವಿಳಂಬಕ್ಕೆ ಸಮಯವಿಲ್ಲ ಎಂದು ಕೇಸರ್ಕರ್‌‌ ಪ್ರತಿಪಾದಿಸಿದ್ದು, “ಜನರು ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೆಂದು ಬಯಸುತ್ತಾರೆ. ಎಲ್ಲಾ ಪ್ರಮುಖ ಸಚಿವಾಲಯಗಳು ಎನ್‌ಸಿಪಿ ಅಥವಾ ಕಾಂಗ್ರೆಸ್‌ನೊಂದಿಗೆ ಇವೆ. ನಮ್ಮಲ್ಲಿ ಕೇವಲ ಕೈಗಾರಿಕೆಗಳು ಮತ್ತು ನಗರಾಭಿವೃದ್ಧಿ ಸಚಿವಾಲಯ ಇದೆ. ಗ್ರಾಮೀಣ ಮಹಾರಾಷ್ಟ್ರಕ್ಕೆ ಸಂಬಂಧಿಸಿದ ಇಲಾಖೆಗಳು ಎನ್‌ಸಿಪಿ ಅಥವಾ ಕಾಂಗ್ರೆಸ್ ಕೈಯಲ್ಲಿ ಇದೆ” ಎಂದು ಅವರು ಹೇಳಿದ್ದಾರೆ.

“ನಮಗೆ ಮುಖ್ಯಮಂತ್ರಿ ಮೇಲೆ ಕೋಪವಿಲ್ಲ. ಮೈತ್ರಿ ಸರ್ಕಾರದಲ್ಲಿ ಇರುವ ಇತರರ ಮೇಲೆ ನಮಗೆ ಕೋಪವಿದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಿದ್ಧಾಂತದ ಭಾಗವಾಗಿ ಹಿಂದುತ್ವವನ್ನು ಪ್ರತಿಪಾದಿಸುವ ಶಿವಸೇನೆ ಮತ್ತು ಬಿಜೆಪಿ ಎರಡೂ 2019 ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಿದ್ದವು. ಆದರೆ ನಾಯಕತ್ವದ ಸ್ಥಾನಗಳ ಬಗ್ಗೆ ಭಿನ್ನಾಭಿಪ್ರಾಯಗಳು ಉಂಟಾದ ನಂತರ ಸರ್ಕಾರ ರಚಿಸಲು ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಕೇಸರ್ಕರ್ ಅವರು ಶಿವಸೇನೆ-ಬಿಜೆಪಿ ಮೈತ್ರಿ 25 ವರ್ಷಗಳಿಂದ ಅಸ್ತಿತ್ವದಲ್ಲಿದೆ ಎಂದು ಒತ್ತಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಇಲ್ಲಿಯವರೆಗೆ ಪ್ರತಿಪಾದಿಸುತ್ತಲೆ ಬಂದಿದೆ. ಆದರೆ ಶಿವಸೇನೆಯ ಬಂಡಾಯ ಶಾಸಕರು ಗುಜರಾತಿನಿಂದ ಅಸ್ಸಾಂನ ಗುವಾಹಟಿಗೆ ತೆರಳಿದಾಗ, ಅಲ್ಲಿನ ಹೋಟೆಲ್‌ನಲ್ಲಿ ಅವರಿಗಿಂತ ಮುಂಚೆಯೆ ಅಸ್ಸಾಂ ಮುಖ್ಯಮಂತ್ರಿ ಕಾಣಿಸಿಕೊಂಡಿದ್ದರು. ಅದೇ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಶಿವಸೇನೆಯ ಬಹುತೇಕ ಶಾಸಕರು ಈಗ ಏಕನಾಥ್ ಶಿಂಧೆ ಅವರೊಂದಿಗಿದ್ದಾರೆ ಎಂದು ಕೇಸರ್ಕರ್ ಹೇಳಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನಡುವೆ ಪಕ್ಷದ ನಾಯಕ ಯಾರೆಂದು ಪರಿಗಣಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಕೇಸರ್ಕರ್‌, “ನಾವು ಮುಖ್ಯಮಂತ್ರಿಯೊಂದಿಗೆ ಹಲವಾರು ಬಾರಿ ಮಾತನಾಡಿದ್ದೇವೆ. ಈಗ ಅವರು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳುತ್ತಿದ್ದಾರೆ. ಆದರೆ ನಮಗೆ ಅವರ ರಾಜೀನಾಮೆ ಬೇಡ. ನಮಗೆ ನಮಗೆ ಬೇಕಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಆಡಳಿತ. ಇದರಿಂದ ಮಹಾರಾಷ್ಟ್ರ ಪ್ರಗತಿಯಾಗಬೇಕು” ಎಂದು ತಿಳಿಸಿದ್ದಾರೆ.

ಶಿಂಧೆ ಪಾಳಯವು ಈಗ ಸ್ಪಷ್ಟವಾಗಿ ಪಕ್ಷದ 55 ಶಾಸಕರಲ್ಲಿ 40 ಮಂದಿಯನ್ನು ಹೊಂದಿದೆ, ಅಂದರೆ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅಗತ್ಯವಿರುವ ಮೂರನೇ ಎರಡರಷ್ಟು ಶಾಸಕ ಬಲವನ್ನು ಹೊಂದಿರುವುದರಿಂದ ಅದು ನಿಜವಾದ ಶಿವಸೇನೆ ಎಂದು ಹೇಳ ಬಹುದಾಗಿದೆ.

ವೈಯಕ್ತಿಕ ಮಹತ್ವಾಕಾಂಕ್ಷೆಗಳ ಬಗ್ಗೆ ಮಾತನಾಡಿದ ಕೇಸರ್ಕರ್‌‌, ತನಗೆ ಬಿಜೆಪಿಯಿಂದ ಆಫರ್ ಮಾಡಲಾಗಿದೆ ಎಂದು ಹೇಳಿದ್ದಾರೆ. “ಆದರೂ, ನಾನು ಠಾಕ್ರೆ ಕುಟುಂಬವನ್ನು ಗೌರವಿಸುವ ಕಾರಣ ನಾನು ಶಿವಸೇನೆಯೊಂದಿಗೆ ಉಳಿದಿದ್ದೇನೆ. ಹಿಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ-ಶಿವಸೇನ ಆಡಳಿತದಲ್ಲಿ ರಾಜ್ಯದ ಸಚಿವನಾಗಿ ಅತ್ಯುತ್ತಮ ಖಾತೆಯನ್ನು ಹೊಂದಿದ್ದೆ. ಆದರೆ ಈ ಬಾರಿ ನನಗೆ ಮಂತ್ರಿ ಪದವಿ ನೀಡದ್ದಕ್ಕೆ ನಾನು ಅಸಮಾಧಾನಗೊಂಡಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

ಈ ಮಧ್ಯೆ, ಉದ್ಧವ್ ಠಾಕ್ರೆ ಅವರ ಆಪ್ತ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಪಕ್ಷವು ಇನ್ನೂ ಪ್ರಬಲವಾಗಿದೆ. ಬಂಡಾಯ ಶಾಸಕರು ಪಕ್ಷದ ದಿವಂಗತ ಸ್ಥಾಪಕ ಬಾಳ್ ಠಾಕ್ರೆ ಅವರ ನಿಜವಾದ ‘ಭಕ್ತರು’ ಅಲ್ಲ ಎಂದು ಹೇಳಿದ್ದು, “ಬಂಡಾಯ ಶಾಸಕರು ಬೇಕಾದರೆ ಬಿಜೆಪಿ ಜೊತೆಗೆ ಹೋಗಿ ಸರ್ಕಾರ ಕಟ್ಟಲಿ, ನಾವು ಶಿವಸೇನೆಯನ್ನು ಹೊಸದಾಗಿ ಮತ್ತೇ ಕಟ್ಟುತ್ತೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...