Homeರಾಜಕೀಯಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

- Advertisement -
- Advertisement -

ಏಕನಾಥ್ ಶಿಂಧೆ ಬಣದ 37 ಶಿವಸೇನೆ ಶಾಸಕರು ಗುರುವಾರ ತಡರಾತ್ರಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಪತ್ರವೊಂದನ್ನು ಕಳುಹಿಸುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉತ್ತುಂಗಕ್ಕೇರಿದೆ. ಪತ್ರದಲ್ಲಿ ಶಿಂಧೆ ಅವರು ತಾನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕ ಎಂದು ಸ್ವತಃ ಘೋಷಿಸಿದ್ದು, ಭರತ್‌ಶೆಟ್ ಗೊಗವಾಲೆ ಅವರನ್ನು ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.

“ಏಕನಾಥರಾವ್ ಸಂಭಾಜಿ ಶಿಂಧೆ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ಶಿವಸೇನೆ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರಾಗಿ ಭರತ್‌ಶೆಟ್ ಗೊಗವಾಲೆ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ಅಡಿಯಲ್ಲಿರುವ ಸದಸ್ಯರು ನೇಮಕ ಮಾಡಿದ್ದಾರೆ. ನೇಮಕಾತಿಯ ಮರುದೃಢೀಕರಣಕ್ಕೆ ಸಂಬಂಧಿಸಿದಂತೆ ಜೂನ್ 23 2022 ರ ದಿನಾಂಕದ ನಿರ್ಣಯದ ಪ್ರತಿಯನ್ನು ನಾನು ಇಲ್ಲಿ ಲಗತ್ತಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಂಧೆ ಅವರ ಬಂಡಾಯದ ನಂತರ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ಅವರನ್ನು ಉದ್ಧವ್‌ ನೇತೃತ್ವದ ಶಿವಸೇನೆ ಬಣ ನೇಮಕ ಮಾಡಿತ್ತು. ಅಜಯ್ ಚೌಧರಿ ಅವರು ಉಪ ಸ್ಪೀಕರ್‌ ಅವರನ್ನು ಭೇಟಿಯಾಗಿ ಪಕ್ಷದ ಶಿಸ್ತು ಉಲ್ಲಂಘಿಸಿ ಬಂಡಾಯ ಬಣಕ್ಕೆ ಸೇರಿರುವ 12 ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಈ ಮಧ್ಯೆ, ಬಂಡಾಯ ಶಾಸಕರು ‘24 ಗಂಟೆಗಳ ಒಳಗೆ’ ಹಿಂದಿರುಗಿದರೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದಿಂದ ಹೊರಬರುವ ಬಗ್ಗೆ ಚರ್ಚಿಸುವುದಾಗಿ ಶಿವಸೇನೆ ನಾಯಕ ಸಂಜಯ್ ರಾವತ್‌ ಘೋಷಿಸಿದ್ದರು. ಆದರೂ ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡೂ ಮೈತ್ರಿ ಪಕ್ಷಗಳು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ತಮ್ಮ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಈ ಸರ್ಕಾರಕ್ಕೆ ಬಹುಮತ ಇದೆಯೆ ಅಥವಾ ಇಲ್ಲವೆ ಎಂಬುವುದನ್ನು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಿ ಪರೀಕ್ಷಿಸಲಾಗುವುದು” ಎಂದು ಹೇಳಿದ್ದಾರೆ.

ಎನ್‌ಸಿಪಿ ಶಾಸಕರನ್ನು ಭೇಟಿ ಮಾಡಿದ ಶರದ್‌ ಪವಾರ್‌ ಅವರು, ಶಿವಸೇನೆ ಶಾಸಕರು ಹಿಂತಿರುಗುತ್ತಾರೆ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಎಂವಿಎ ಬಹುಮತವನ್ನು ಸಾಬೀತುಪಡಿಸುತ್ತದೆ ಎಂದು ಭರವಸೆ ನೀಡಿದ ಅವರು, “ಬಂಡಾಯಕ್ಕೆ ಬಿಜೆಪಿಯೇ ಕಾರಣ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

“ಶಾಸಕರು ಹಿಂದಿರುಗಿದಾಗ ಅವರು ಹೇಗೆ ಅಲ್ಲಿಗೆ ಹೋದರು ಎಂಬ ವಾಸ್ತವವನ್ನು ವಿವರಿಸುತ್ತಾರೆ. ಅವರು ಇಲ್ಲಿಗೆ ಬಂದು ಶಿವಸೇನೆಯೊಂದಿಗಿದ್ದೇವೆ ಎಂದು ಸ್ಪಷ್ಟಪಡಿಸಿ ಮೈತ್ರಿ ಸರ್ಕಾರವು ಬಹುಮತ ಸಾಬೀತುಪಡಿಸಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...