Homeರಾಜಕೀಯಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

- Advertisement -
- Advertisement -

ಏಕನಾಥ್ ಶಿಂಧೆ ಬಣದ 37 ಶಿವಸೇನೆ ಶಾಸಕರು ಗುರುವಾರ ತಡರಾತ್ರಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಪತ್ರವೊಂದನ್ನು ಕಳುಹಿಸುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉತ್ತುಂಗಕ್ಕೇರಿದೆ. ಪತ್ರದಲ್ಲಿ ಶಿಂಧೆ ಅವರು ತಾನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕ ಎಂದು ಸ್ವತಃ ಘೋಷಿಸಿದ್ದು, ಭರತ್‌ಶೆಟ್ ಗೊಗವಾಲೆ ಅವರನ್ನು ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.

“ಏಕನಾಥರಾವ್ ಸಂಭಾಜಿ ಶಿಂಧೆ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ಶಿವಸೇನೆ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರಾಗಿ ಭರತ್‌ಶೆಟ್ ಗೊಗವಾಲೆ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ಅಡಿಯಲ್ಲಿರುವ ಸದಸ್ಯರು ನೇಮಕ ಮಾಡಿದ್ದಾರೆ. ನೇಮಕಾತಿಯ ಮರುದೃಢೀಕರಣಕ್ಕೆ ಸಂಬಂಧಿಸಿದಂತೆ ಜೂನ್ 23 2022 ರ ದಿನಾಂಕದ ನಿರ್ಣಯದ ಪ್ರತಿಯನ್ನು ನಾನು ಇಲ್ಲಿ ಲಗತ್ತಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಂಧೆ ಅವರ ಬಂಡಾಯದ ನಂತರ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ಅವರನ್ನು ಉದ್ಧವ್‌ ನೇತೃತ್ವದ ಶಿವಸೇನೆ ಬಣ ನೇಮಕ ಮಾಡಿತ್ತು. ಅಜಯ್ ಚೌಧರಿ ಅವರು ಉಪ ಸ್ಪೀಕರ್‌ ಅವರನ್ನು ಭೇಟಿಯಾಗಿ ಪಕ್ಷದ ಶಿಸ್ತು ಉಲ್ಲಂಘಿಸಿ ಬಂಡಾಯ ಬಣಕ್ಕೆ ಸೇರಿರುವ 12 ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಈ ಮಧ್ಯೆ, ಬಂಡಾಯ ಶಾಸಕರು ‘24 ಗಂಟೆಗಳ ಒಳಗೆ’ ಹಿಂದಿರುಗಿದರೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದಿಂದ ಹೊರಬರುವ ಬಗ್ಗೆ ಚರ್ಚಿಸುವುದಾಗಿ ಶಿವಸೇನೆ ನಾಯಕ ಸಂಜಯ್ ರಾವತ್‌ ಘೋಷಿಸಿದ್ದರು. ಆದರೂ ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡೂ ಮೈತ್ರಿ ಪಕ್ಷಗಳು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ತಮ್ಮ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಈ ಸರ್ಕಾರಕ್ಕೆ ಬಹುಮತ ಇದೆಯೆ ಅಥವಾ ಇಲ್ಲವೆ ಎಂಬುವುದನ್ನು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಿ ಪರೀಕ್ಷಿಸಲಾಗುವುದು” ಎಂದು ಹೇಳಿದ್ದಾರೆ.

ಎನ್‌ಸಿಪಿ ಶಾಸಕರನ್ನು ಭೇಟಿ ಮಾಡಿದ ಶರದ್‌ ಪವಾರ್‌ ಅವರು, ಶಿವಸೇನೆ ಶಾಸಕರು ಹಿಂತಿರುಗುತ್ತಾರೆ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಎಂವಿಎ ಬಹುಮತವನ್ನು ಸಾಬೀತುಪಡಿಸುತ್ತದೆ ಎಂದು ಭರವಸೆ ನೀಡಿದ ಅವರು, “ಬಂಡಾಯಕ್ಕೆ ಬಿಜೆಪಿಯೇ ಕಾರಣ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

“ಶಾಸಕರು ಹಿಂದಿರುಗಿದಾಗ ಅವರು ಹೇಗೆ ಅಲ್ಲಿಗೆ ಹೋದರು ಎಂಬ ವಾಸ್ತವವನ್ನು ವಿವರಿಸುತ್ತಾರೆ. ಅವರು ಇಲ್ಲಿಗೆ ಬಂದು ಶಿವಸೇನೆಯೊಂದಿಗಿದ್ದೇವೆ ಎಂದು ಸ್ಪಷ್ಟಪಡಿಸಿ ಮೈತ್ರಿ ಸರ್ಕಾರವು ಬಹುಮತ ಸಾಬೀತುಪಡಿಸಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...