Homeಕರ್ನಾಟಕಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ...

ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ನಡೆಸಿದ ಪಠ್ಯ ಮರುಪರಿಷ್ಕರಣಾ ವಿಚಾರವಾಗಿ ಜುಲೈ 5ರೊಳಗೆ ಸರ್ಕಾರ ಸರಿಯಾದ ನಿರ್ಧಾರಕ್ಕೆ ಬಾರದೆ ಹೋದರೆ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಸುದ್ದಿಪೋರ್ಟಾಲ್ ಈದಿನ.ಕಾಂ ಜೊತೆಗೆ ಮಾತನಾಡಿದ ಅವರು, “ಈಗಾಗಲೇ ರಾಜ್ಯಾದ್ಯಂತ ಹಲವು ಪ್ರತಿಭಟನೆ ನಡೆದಿದೆ. ಅನೇಕ ಸಾಹಿತಿಗಳು, ವಿಮರ್ಶಕರು ಪಠ್ಯಪರಿಷ್ಕರಣೆ ಬಗ್ಗೆ ಕಿಡಿಕಾರಿದ್ದಾರೆ. ಅನೇಕರು ತಮ್ಮ ಪಠ್ಯವನ್ನು ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇಷ್ಟಾದರೂ ಸರ್ಕಾರ ತನ್ನ ನಿಲುವು ಮುಂದುವರಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನ ಚರಿತ್ರೆ ಬಗ್ಗೆ ತಪ್ಪಾಗಿರುವುದನ್ನು ಸರಿ ಮಾಡುವುದಾಗಿ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸುಮಾರು 30 ಸ್ವಾಮೀಜಿಗಳ ಸಮ್ಮುಖದಲ್ಲಿ ಹೇಳಿದ್ದಾರೆ. ಶಿಕ್ಷಣ ಮಂತ್ರಿಗಳು ಧನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಇದರ ನಡುವೆ ಇನ್ನೊಬ್ಬ ಸಚಿವ ಈ ರೀತಿ ಹೇಳಿಕೆ ನೀಡಲು ಹೇಗೆ ಸಾಧ್ಯ? ಜನರಲ್ಲಿ ಗೊಂದಲ ಉಂಟು ಮಾಡಲು ದ್ವಂದ್ವ ಹೇಳಿಕೆ ನೀಡಲಾಗುತ್ತಿದೆ” ಎಂದು ಗುರುವಾರ ಕಂದಾಯ ಸಚಿವ ಆರ್ ಅಶೋಕ್ ಅವರು ನೀಡಿದ ಹೇಳಿಕೆಯನ್ನು ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ.

“ಸರ್ಕಾರದ ಸಚಿವರೊಬ್ಬರು ಈ ರೀತಿ ಮಾತನಾಡಿದರೆ ಪಠ್ಯ ಬದಲಾಯಿಸುವುದಾದರೂ ಹೇಗೆ? ಆದ್ದರಿಂದ ಇನ್ನೊಮ್ಮೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ಇಂದು ಮಠಾಧೀಶರುಗಳು ಬೀದರ್‌ನಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದೇವೆ. ಇದೇ ಜುಲೈ 5ರೊಳಗೆ ಸರ್ಕಾರ ಪಠ್ಯದ ವಿಷಯವಾಗಿ ಸರಿಯಾದ ನಿರ್ಧಾರಕ್ಕೆ ಬಾರದೆ ಹೋದರೆ ಬೃಹತ್‌ ಪ್ರತಿಭಟನೆ ನಡೆಸುವುದಾಗಿ ನಿರ್ಧರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ ಮಾತನಾಡಿ,“ಪಠ್ಯ ಪುಸ್ತಕ ಪರಿಷ್ಕರಣೆ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಾಗಿದ್ದರಿಂದ ಬದಲಾವಣೆ ಮಾಡಲು ಹಿಂಜರಿಯುತ್ತಿದ್ದಾರೆ. ಬದಲಾವಣೆ ಮಾಡದಿದ್ದರೆ ಎಲ್ಲಿ ಗಲಾಟೆ ನಡೆಯುತ್ತದೆಯೋ ಎಂಬ ಆತಂಕದಲ್ಲಿ ಮುಖ್ಯಮಂತ್ರಿಗಳು ಪರಿಶೀಲನೆ ಮಾಡಿ ವರದಿ ಮಾಡುವುದಾಗಿ ತಿಳಿಸುತ್ತಾರೆ. ಮುಖ್ಯಮಂತ್ರಿಗಳು ಒಂದು ರೀತಿಯಲ್ಲಿ ಮಾತನಾಡಿದರೆ, ಕಂದಾಯ ಸಚಿವರು ಇನ್ನೊಂದು ರೀತಿ ಮಾತನಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಪಠ್ಯದಲ್ಲಿ ತಪ್ಪಾಗಿ ಮಾಹಿತಿ ನೀಡಿದ್ದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಸ್ವಲ್ಪ ಸಮಯಾವಕಾಶ ಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲಿಯವರೆಗೂ ಯಾವುದೇ ಪತ್ರಿಕಾ ಹೇಳಿಕೆ ನೀಡದಂತೆ ಕೋರಿದ್ದಾರೆ. ಮಾತಿನಂತೆ ನಡೆದುಕೊಳ್ಳದಿದ್ದರೆ ಮುಂದಿನ ಹೋರಾಟ ರೂಪಿಸಿಲಾಗುವುದು” ಎಂದು ಸ್ವಾಮೀಜಿ ಈದಿನ.ಕಾಂ ಜೊತೆಗೆ ಹೇಳಿದ್ದಾರೆ.

ಇದುವರೆಗೆ ಪಠ್ಯ ಮರುಪರಿಷ್ಕರಣೆಯಲ್ಲಿ ಆಗಿರುವ ಸಾಲು ಸಾಲು ತಪ್ಪುಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಲೇ ಇವೆ. ವಿದ್ವಾಂಸರು, ಶಿಕ್ಷಣ ತಜ್ಞರು ಅವನ್ನು ಎತ್ತಿ ತೋರಿಸುತ್ತಿರುವುದಲ್ಲದೇ, ನಿಯಮಾವಳಿಗಳನ್ನು ಪಾಲಿಸದೇ ಇರುವುದನ್ನೂ ಗುರುತಿಸಿದ್ದಾರೆ. ಪರಿಷ್ಕರಣಾ ಸಮಿತಿ ಸದಸ್ಯರ ಅಭಿಪ್ರಾಯಗಳನ್ನೂ ಗಾಳಿಗೆ ತೂರಿ ಏಕಪಕ್ಷೀಯವಾಗಿ ಪಠ್ಯಪುಸ್ತಕಗಳನ್ನು ತಿದ್ದುಪಡಿ ಮಾಡಿದ್ದಾರೆಂಬ ಎಂದು ಈಗಾಗಲೆ ಸುದ್ದಿಯಾಗಿದೆ.

ಇದನ್ನೂ ಓದಿ: ನಾರಾಯಣಗುರುಗಳ ಪಠ್ಯ ಕೈಬಿಟ್ಟಿದ್ದಕ್ಕೆ ಆಕ್ರೋಶ: ಹೆದ್ದಾರಿ ಬಂದ್ ನಡೆಸಲು ಬಿಲ್ಲವ ಸಮಾಜದ ತಯಾರಿ

ಬುಧವಾರದಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸಹಿತ ಇಲಾಖೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದರು. ಮರುದಿನ ಪತ್ರಿಕಾಗೋಷ್ಠಿ ನಡೆಸಿದ್ದ ಕಂದಾಯ ಸಚಿವ ಆರ್. ಅಶೋಕ್, “ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ” ಎಂದು ಹೇಳಿದ್ದರು.

ಇತ್ತ ಮುಖ್ಯಮಂತ್ರಿ ತಜ್ಞರೊಂದಿಗೆ ಮಾತುಕತೆ ನಡೆಸಿ ಸರಿಪಡಿಸುವುದಾಗಿ, ತಾವು ಈ ವಿಚಾರದಲ್ಲಿ ಮುಕ್ತ ಮನಸ್ಸು ಹೊಂದಿರುವುದಾಗಿ ಭರವಸೆ ನೀಡಿದೆ. ಅದರೆ ಶಿಕ್ಷಣ ಇಲಾಖೆಗೆ ಸಂಬಂಧವೇ ಪಡದ ಸರ್ಕಾರದ ಇನ್ನೊಬ್ಬ ಸಚಿವರು ಬದಲಾವಣೆ ಮಾಡುವ ಮಾತೇ ಇಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಠ್ಯ ಪುಸ್ತಕ ಪರಿಷ್ಕರಣೆಯ ವಿಷಯದಲ್ಲಿ ಸರ್ಕಾರದ ಹಠಮಾರಿ ಧೋರಣೆ ನೇರವಾಗಿ ನಮ್ಮ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ. ಇದರ ವಿರುದ್ಧದ ಧ್ವನಿ ಸಂಘಟಿತವಾಗಿರಬೇಕು, ಒಕ್ಕೊರಲಿನಿಂದ ಕೂಡಿರಬೇಕು. ನಾರಾಯಣ ಗುರುಗಳ ಪಾಠ ತೆಗೆದರು ಎಂದು ಪೂಜಾರರು, ಬಸವಣ್ಣನ ಪಾಠ ತೆಗೆದರೆಂದು ವೀರಶೈವರು, ಕುವೆಂಪುಗೆ ಅವಮಾನ ಮಾಡಿದರೆಂದು ವಕ್ಕಲಿಗರು ಪ್ರತ್ಯೇಕ ಪ್ರತ್ಯೇಕವಾಗಿ ಪ್ರತಿಭಟಿಸುವುದು ಹಳಿ ತಪ್ಪಿ ಆಂದೋಲನ ವಿಘಟನೆಯಾಗುತ್ತದೆ. ಇದು ಆತಂಕಕಾರಿ! ಆದ್ದರಿಂದ, ಜಾತಿ ಮತಗಳನ್ನು ಮೀರಿ, ಎಲ್ಲರೂ ಸೇರಿ, ಒಟ್ಟಾಗಿ, ಪರಿಷ್ಕರಣೆ ಹಿಂತೆಗೆಯಲು ಸರ್ಕಾರ ಮೇಲೆ ಒತ್ತಡ ತರಲು ಪ್ರತಿಭಟನೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...