Homeಕರ್ನಾಟಕಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ...

ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ನಡೆಸಿದ ಪಠ್ಯ ಮರುಪರಿಷ್ಕರಣಾ ವಿಚಾರವಾಗಿ ಜುಲೈ 5ರೊಳಗೆ ಸರ್ಕಾರ ಸರಿಯಾದ ನಿರ್ಧಾರಕ್ಕೆ ಬಾರದೆ ಹೋದರೆ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಸುದ್ದಿಪೋರ್ಟಾಲ್ ಈದಿನ.ಕಾಂ ಜೊತೆಗೆ ಮಾತನಾಡಿದ ಅವರು, “ಈಗಾಗಲೇ ರಾಜ್ಯಾದ್ಯಂತ ಹಲವು ಪ್ರತಿಭಟನೆ ನಡೆದಿದೆ. ಅನೇಕ ಸಾಹಿತಿಗಳು, ವಿಮರ್ಶಕರು ಪಠ್ಯಪರಿಷ್ಕರಣೆ ಬಗ್ಗೆ ಕಿಡಿಕಾರಿದ್ದಾರೆ. ಅನೇಕರು ತಮ್ಮ ಪಠ್ಯವನ್ನು ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇಷ್ಟಾದರೂ ಸರ್ಕಾರ ತನ್ನ ನಿಲುವು ಮುಂದುವರಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನ ಚರಿತ್ರೆ ಬಗ್ಗೆ ತಪ್ಪಾಗಿರುವುದನ್ನು ಸರಿ ಮಾಡುವುದಾಗಿ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸುಮಾರು 30 ಸ್ವಾಮೀಜಿಗಳ ಸಮ್ಮುಖದಲ್ಲಿ ಹೇಳಿದ್ದಾರೆ. ಶಿಕ್ಷಣ ಮಂತ್ರಿಗಳು ಧನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಇದರ ನಡುವೆ ಇನ್ನೊಬ್ಬ ಸಚಿವ ಈ ರೀತಿ ಹೇಳಿಕೆ ನೀಡಲು ಹೇಗೆ ಸಾಧ್ಯ? ಜನರಲ್ಲಿ ಗೊಂದಲ ಉಂಟು ಮಾಡಲು ದ್ವಂದ್ವ ಹೇಳಿಕೆ ನೀಡಲಾಗುತ್ತಿದೆ” ಎಂದು ಗುರುವಾರ ಕಂದಾಯ ಸಚಿವ ಆರ್ ಅಶೋಕ್ ಅವರು ನೀಡಿದ ಹೇಳಿಕೆಯನ್ನು ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ.

“ಸರ್ಕಾರದ ಸಚಿವರೊಬ್ಬರು ಈ ರೀತಿ ಮಾತನಾಡಿದರೆ ಪಠ್ಯ ಬದಲಾಯಿಸುವುದಾದರೂ ಹೇಗೆ? ಆದ್ದರಿಂದ ಇನ್ನೊಮ್ಮೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ಇಂದು ಮಠಾಧೀಶರುಗಳು ಬೀದರ್‌ನಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದೇವೆ. ಇದೇ ಜುಲೈ 5ರೊಳಗೆ ಸರ್ಕಾರ ಪಠ್ಯದ ವಿಷಯವಾಗಿ ಸರಿಯಾದ ನಿರ್ಧಾರಕ್ಕೆ ಬಾರದೆ ಹೋದರೆ ಬೃಹತ್‌ ಪ್ರತಿಭಟನೆ ನಡೆಸುವುದಾಗಿ ನಿರ್ಧರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ ಮಾತನಾಡಿ,“ಪಠ್ಯ ಪುಸ್ತಕ ಪರಿಷ್ಕರಣೆ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಾಗಿದ್ದರಿಂದ ಬದಲಾವಣೆ ಮಾಡಲು ಹಿಂಜರಿಯುತ್ತಿದ್ದಾರೆ. ಬದಲಾವಣೆ ಮಾಡದಿದ್ದರೆ ಎಲ್ಲಿ ಗಲಾಟೆ ನಡೆಯುತ್ತದೆಯೋ ಎಂಬ ಆತಂಕದಲ್ಲಿ ಮುಖ್ಯಮಂತ್ರಿಗಳು ಪರಿಶೀಲನೆ ಮಾಡಿ ವರದಿ ಮಾಡುವುದಾಗಿ ತಿಳಿಸುತ್ತಾರೆ. ಮುಖ್ಯಮಂತ್ರಿಗಳು ಒಂದು ರೀತಿಯಲ್ಲಿ ಮಾತನಾಡಿದರೆ, ಕಂದಾಯ ಸಚಿವರು ಇನ್ನೊಂದು ರೀತಿ ಮಾತನಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಪಠ್ಯದಲ್ಲಿ ತಪ್ಪಾಗಿ ಮಾಹಿತಿ ನೀಡಿದ್ದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಸ್ವಲ್ಪ ಸಮಯಾವಕಾಶ ಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲಿಯವರೆಗೂ ಯಾವುದೇ ಪತ್ರಿಕಾ ಹೇಳಿಕೆ ನೀಡದಂತೆ ಕೋರಿದ್ದಾರೆ. ಮಾತಿನಂತೆ ನಡೆದುಕೊಳ್ಳದಿದ್ದರೆ ಮುಂದಿನ ಹೋರಾಟ ರೂಪಿಸಿಲಾಗುವುದು” ಎಂದು ಸ್ವಾಮೀಜಿ ಈದಿನ.ಕಾಂ ಜೊತೆಗೆ ಹೇಳಿದ್ದಾರೆ.

ಇದುವರೆಗೆ ಪಠ್ಯ ಮರುಪರಿಷ್ಕರಣೆಯಲ್ಲಿ ಆಗಿರುವ ಸಾಲು ಸಾಲು ತಪ್ಪುಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಲೇ ಇವೆ. ವಿದ್ವಾಂಸರು, ಶಿಕ್ಷಣ ತಜ್ಞರು ಅವನ್ನು ಎತ್ತಿ ತೋರಿಸುತ್ತಿರುವುದಲ್ಲದೇ, ನಿಯಮಾವಳಿಗಳನ್ನು ಪಾಲಿಸದೇ ಇರುವುದನ್ನೂ ಗುರುತಿಸಿದ್ದಾರೆ. ಪರಿಷ್ಕರಣಾ ಸಮಿತಿ ಸದಸ್ಯರ ಅಭಿಪ್ರಾಯಗಳನ್ನೂ ಗಾಳಿಗೆ ತೂರಿ ಏಕಪಕ್ಷೀಯವಾಗಿ ಪಠ್ಯಪುಸ್ತಕಗಳನ್ನು ತಿದ್ದುಪಡಿ ಮಾಡಿದ್ದಾರೆಂಬ ಎಂದು ಈಗಾಗಲೆ ಸುದ್ದಿಯಾಗಿದೆ.

ಇದನ್ನೂ ಓದಿ: ನಾರಾಯಣಗುರುಗಳ ಪಠ್ಯ ಕೈಬಿಟ್ಟಿದ್ದಕ್ಕೆ ಆಕ್ರೋಶ: ಹೆದ್ದಾರಿ ಬಂದ್ ನಡೆಸಲು ಬಿಲ್ಲವ ಸಮಾಜದ ತಯಾರಿ

ಬುಧವಾರದಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸಹಿತ ಇಲಾಖೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದರು. ಮರುದಿನ ಪತ್ರಿಕಾಗೋಷ್ಠಿ ನಡೆಸಿದ್ದ ಕಂದಾಯ ಸಚಿವ ಆರ್. ಅಶೋಕ್, “ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ” ಎಂದು ಹೇಳಿದ್ದರು.

ಇತ್ತ ಮುಖ್ಯಮಂತ್ರಿ ತಜ್ಞರೊಂದಿಗೆ ಮಾತುಕತೆ ನಡೆಸಿ ಸರಿಪಡಿಸುವುದಾಗಿ, ತಾವು ಈ ವಿಚಾರದಲ್ಲಿ ಮುಕ್ತ ಮನಸ್ಸು ಹೊಂದಿರುವುದಾಗಿ ಭರವಸೆ ನೀಡಿದೆ. ಅದರೆ ಶಿಕ್ಷಣ ಇಲಾಖೆಗೆ ಸಂಬಂಧವೇ ಪಡದ ಸರ್ಕಾರದ ಇನ್ನೊಬ್ಬ ಸಚಿವರು ಬದಲಾವಣೆ ಮಾಡುವ ಮಾತೇ ಇಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಠ್ಯ ಪುಸ್ತಕ ಪರಿಷ್ಕರಣೆಯ ವಿಷಯದಲ್ಲಿ ಸರ್ಕಾರದ ಹಠಮಾರಿ ಧೋರಣೆ ನೇರವಾಗಿ ನಮ್ಮ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ. ಇದರ ವಿರುದ್ಧದ ಧ್ವನಿ ಸಂಘಟಿತವಾಗಿರಬೇಕು, ಒಕ್ಕೊರಲಿನಿಂದ ಕೂಡಿರಬೇಕು. ನಾರಾಯಣ ಗುರುಗಳ ಪಾಠ ತೆಗೆದರು ಎಂದು ಪೂಜಾರರು, ಬಸವಣ್ಣನ ಪಾಠ ತೆಗೆದರೆಂದು ವೀರಶೈವರು, ಕುವೆಂಪುಗೆ ಅವಮಾನ ಮಾಡಿದರೆಂದು ವಕ್ಕಲಿಗರು ಪ್ರತ್ಯೇಕ ಪ್ರತ್ಯೇಕವಾಗಿ ಪ್ರತಿಭಟಿಸುವುದು ಹಳಿ ತಪ್ಪಿ ಆಂದೋಲನ ವಿಘಟನೆಯಾಗುತ್ತದೆ. ಇದು ಆತಂಕಕಾರಿ! ಆದ್ದರಿಂದ, ಜಾತಿ ಮತಗಳನ್ನು ಮೀರಿ, ಎಲ್ಲರೂ ಸೇರಿ, ಒಟ್ಟಾಗಿ, ಪರಿಷ್ಕರಣೆ ಹಿಂತೆಗೆಯಲು ಸರ್ಕಾರ ಮೇಲೆ ಒತ್ತಡ ತರಲು ಪ್ರತಿಭಟನೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...