Homeಕರ್ನಾಟಕಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ...

ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ನಡೆಸಿದ ಪಠ್ಯ ಮರುಪರಿಷ್ಕರಣಾ ವಿಚಾರವಾಗಿ ಜುಲೈ 5ರೊಳಗೆ ಸರ್ಕಾರ ಸರಿಯಾದ ನಿರ್ಧಾರಕ್ಕೆ ಬಾರದೆ ಹೋದರೆ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಸುದ್ದಿಪೋರ್ಟಾಲ್ ಈದಿನ.ಕಾಂ ಜೊತೆಗೆ ಮಾತನಾಡಿದ ಅವರು, “ಈಗಾಗಲೇ ರಾಜ್ಯಾದ್ಯಂತ ಹಲವು ಪ್ರತಿಭಟನೆ ನಡೆದಿದೆ. ಅನೇಕ ಸಾಹಿತಿಗಳು, ವಿಮರ್ಶಕರು ಪಠ್ಯಪರಿಷ್ಕರಣೆ ಬಗ್ಗೆ ಕಿಡಿಕಾರಿದ್ದಾರೆ. ಅನೇಕರು ತಮ್ಮ ಪಠ್ಯವನ್ನು ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇಷ್ಟಾದರೂ ಸರ್ಕಾರ ತನ್ನ ನಿಲುವು ಮುಂದುವರಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನ ಚರಿತ್ರೆ ಬಗ್ಗೆ ತಪ್ಪಾಗಿರುವುದನ್ನು ಸರಿ ಮಾಡುವುದಾಗಿ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸುಮಾರು 30 ಸ್ವಾಮೀಜಿಗಳ ಸಮ್ಮುಖದಲ್ಲಿ ಹೇಳಿದ್ದಾರೆ. ಶಿಕ್ಷಣ ಮಂತ್ರಿಗಳು ಧನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಇದರ ನಡುವೆ ಇನ್ನೊಬ್ಬ ಸಚಿವ ಈ ರೀತಿ ಹೇಳಿಕೆ ನೀಡಲು ಹೇಗೆ ಸಾಧ್ಯ? ಜನರಲ್ಲಿ ಗೊಂದಲ ಉಂಟು ಮಾಡಲು ದ್ವಂದ್ವ ಹೇಳಿಕೆ ನೀಡಲಾಗುತ್ತಿದೆ” ಎಂದು ಗುರುವಾರ ಕಂದಾಯ ಸಚಿವ ಆರ್ ಅಶೋಕ್ ಅವರು ನೀಡಿದ ಹೇಳಿಕೆಯನ್ನು ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ.

“ಸರ್ಕಾರದ ಸಚಿವರೊಬ್ಬರು ಈ ರೀತಿ ಮಾತನಾಡಿದರೆ ಪಠ್ಯ ಬದಲಾಯಿಸುವುದಾದರೂ ಹೇಗೆ? ಆದ್ದರಿಂದ ಇನ್ನೊಮ್ಮೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ಇಂದು ಮಠಾಧೀಶರುಗಳು ಬೀದರ್‌ನಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದೇವೆ. ಇದೇ ಜುಲೈ 5ರೊಳಗೆ ಸರ್ಕಾರ ಪಠ್ಯದ ವಿಷಯವಾಗಿ ಸರಿಯಾದ ನಿರ್ಧಾರಕ್ಕೆ ಬಾರದೆ ಹೋದರೆ ಬೃಹತ್‌ ಪ್ರತಿಭಟನೆ ನಡೆಸುವುದಾಗಿ ನಿರ್ಧರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಪಠ್ಯಪರಿಷ್ಕರಣೆ ಸಮಿತಿಯ ವಿವಾದಾತ್ಮಕ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ‘ಸನ್ಮಾನ ಕಾರ್ಯಕ್ರಮ’ ರದ್ದು

ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ ಮಾತನಾಡಿ,“ಪಠ್ಯ ಪುಸ್ತಕ ಪರಿಷ್ಕರಣೆ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಾಗಿದ್ದರಿಂದ ಬದಲಾವಣೆ ಮಾಡಲು ಹಿಂಜರಿಯುತ್ತಿದ್ದಾರೆ. ಬದಲಾವಣೆ ಮಾಡದಿದ್ದರೆ ಎಲ್ಲಿ ಗಲಾಟೆ ನಡೆಯುತ್ತದೆಯೋ ಎಂಬ ಆತಂಕದಲ್ಲಿ ಮುಖ್ಯಮಂತ್ರಿಗಳು ಪರಿಶೀಲನೆ ಮಾಡಿ ವರದಿ ಮಾಡುವುದಾಗಿ ತಿಳಿಸುತ್ತಾರೆ. ಮುಖ್ಯಮಂತ್ರಿಗಳು ಒಂದು ರೀತಿಯಲ್ಲಿ ಮಾತನಾಡಿದರೆ, ಕಂದಾಯ ಸಚಿವರು ಇನ್ನೊಂದು ರೀತಿ ಮಾತನಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಪಠ್ಯದಲ್ಲಿ ತಪ್ಪಾಗಿ ಮಾಹಿತಿ ನೀಡಿದ್ದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಸ್ವಲ್ಪ ಸಮಯಾವಕಾಶ ಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲಿಯವರೆಗೂ ಯಾವುದೇ ಪತ್ರಿಕಾ ಹೇಳಿಕೆ ನೀಡದಂತೆ ಕೋರಿದ್ದಾರೆ. ಮಾತಿನಂತೆ ನಡೆದುಕೊಳ್ಳದಿದ್ದರೆ ಮುಂದಿನ ಹೋರಾಟ ರೂಪಿಸಿಲಾಗುವುದು” ಎಂದು ಸ್ವಾಮೀಜಿ ಈದಿನ.ಕಾಂ ಜೊತೆಗೆ ಹೇಳಿದ್ದಾರೆ.

ಇದುವರೆಗೆ ಪಠ್ಯ ಮರುಪರಿಷ್ಕರಣೆಯಲ್ಲಿ ಆಗಿರುವ ಸಾಲು ಸಾಲು ತಪ್ಪುಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಲೇ ಇವೆ. ವಿದ್ವಾಂಸರು, ಶಿಕ್ಷಣ ತಜ್ಞರು ಅವನ್ನು ಎತ್ತಿ ತೋರಿಸುತ್ತಿರುವುದಲ್ಲದೇ, ನಿಯಮಾವಳಿಗಳನ್ನು ಪಾಲಿಸದೇ ಇರುವುದನ್ನೂ ಗುರುತಿಸಿದ್ದಾರೆ. ಪರಿಷ್ಕರಣಾ ಸಮಿತಿ ಸದಸ್ಯರ ಅಭಿಪ್ರಾಯಗಳನ್ನೂ ಗಾಳಿಗೆ ತೂರಿ ಏಕಪಕ್ಷೀಯವಾಗಿ ಪಠ್ಯಪುಸ್ತಕಗಳನ್ನು ತಿದ್ದುಪಡಿ ಮಾಡಿದ್ದಾರೆಂಬ ಎಂದು ಈಗಾಗಲೆ ಸುದ್ದಿಯಾಗಿದೆ.

ಇದನ್ನೂ ಓದಿ: ನಾರಾಯಣಗುರುಗಳ ಪಠ್ಯ ಕೈಬಿಟ್ಟಿದ್ದಕ್ಕೆ ಆಕ್ರೋಶ: ಹೆದ್ದಾರಿ ಬಂದ್ ನಡೆಸಲು ಬಿಲ್ಲವ ಸಮಾಜದ ತಯಾರಿ

ಬುಧವಾರದಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸಹಿತ ಇಲಾಖೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದರು. ಮರುದಿನ ಪತ್ರಿಕಾಗೋಷ್ಠಿ ನಡೆಸಿದ್ದ ಕಂದಾಯ ಸಚಿವ ಆರ್. ಅಶೋಕ್, “ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ” ಎಂದು ಹೇಳಿದ್ದರು.

ಇತ್ತ ಮುಖ್ಯಮಂತ್ರಿ ತಜ್ಞರೊಂದಿಗೆ ಮಾತುಕತೆ ನಡೆಸಿ ಸರಿಪಡಿಸುವುದಾಗಿ, ತಾವು ಈ ವಿಚಾರದಲ್ಲಿ ಮುಕ್ತ ಮನಸ್ಸು ಹೊಂದಿರುವುದಾಗಿ ಭರವಸೆ ನೀಡಿದೆ. ಅದರೆ ಶಿಕ್ಷಣ ಇಲಾಖೆಗೆ ಸಂಬಂಧವೇ ಪಡದ ಸರ್ಕಾರದ ಇನ್ನೊಬ್ಬ ಸಚಿವರು ಬದಲಾವಣೆ ಮಾಡುವ ಮಾತೇ ಇಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಠ್ಯ ಪುಸ್ತಕ ಪರಿಷ್ಕರಣೆಯ ವಿಷಯದಲ್ಲಿ ಸರ್ಕಾರದ ಹಠಮಾರಿ ಧೋರಣೆ ನೇರವಾಗಿ ನಮ್ಮ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ. ಇದರ ವಿರುದ್ಧದ ಧ್ವನಿ ಸಂಘಟಿತವಾಗಿರಬೇಕು, ಒಕ್ಕೊರಲಿನಿಂದ ಕೂಡಿರಬೇಕು. ನಾರಾಯಣ ಗುರುಗಳ ಪಾಠ ತೆಗೆದರು ಎಂದು ಪೂಜಾರರು, ಬಸವಣ್ಣನ ಪಾಠ ತೆಗೆದರೆಂದು ವೀರಶೈವರು, ಕುವೆಂಪುಗೆ ಅವಮಾನ ಮಾಡಿದರೆಂದು ವಕ್ಕಲಿಗರು ಪ್ರತ್ಯೇಕ ಪ್ರತ್ಯೇಕವಾಗಿ ಪ್ರತಿಭಟಿಸುವುದು ಹಳಿ ತಪ್ಪಿ ಆಂದೋಲನ ವಿಘಟನೆಯಾಗುತ್ತದೆ. ಇದು ಆತಂಕಕಾರಿ! ಆದ್ದರಿಂದ, ಜಾತಿ ಮತಗಳನ್ನು ಮೀರಿ, ಎಲ್ಲರೂ ಸೇರಿ, ಒಟ್ಟಾಗಿ, ಪರಿಷ್ಕರಣೆ ಹಿಂತೆಗೆಯಲು ಸರ್ಕಾರ ಮೇಲೆ ಒತ್ತಡ ತರಲು ಪ್ರತಿಭಟನೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...