Homeಅಂತರಾಷ್ಟ್ರೀಯ‘ಆಡಳಿತದ ಆಕ್ರಮಣಕಾರಿ ದುರುಪಯೋಗ’: ತೀಸ್ತಾ ಬಂಧನ ವಿರೋಧಿಸಿದ ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್...

‘ಆಡಳಿತದ ಆಕ್ರಮಣಕಾರಿ ದುರುಪಯೋಗ’: ತೀಸ್ತಾ ಬಂಧನ ವಿರೋಧಿಸಿದ ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್ ಗ್ರೂಪ್

ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು ಎಂದು ಅದು ಹೇಳಿದೆ

- Advertisement -
- Advertisement -

ದೇಶದ ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಬಂಧನ ಮತ್ತು ಸೆರೆವಾಸವನ್ನು ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್ ಗ್ರೂಪ್ (WGHR) ಖಂಡಿಸಿದ್ದು, ತನ್ನ ಸದಸ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅದು ಒತ್ತಾಯಿಸಿದೆ.

2002ರ ಗುಜರಾತ್ ಗಲಭೆಯಲ್ಲಿ ಹತರಾದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಗುಜರಾತ್ ಪೊಲೀಸರು ತೀಸ್ತಾ ಅವರನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ತೀಸ್ತಾ ಜೊತೆಗೆ ಎಫ್‌ಐಆರ್‌‌ನಲ್ಲಿ ಹೆಸರಿಸಲಾದ ಗುಜರಾತ್‌ನ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌ಬಿ ಶ್ರೀಕುಮಾರ್ ಮತ್ತು ಅಮಾನತುಗೊಂಡ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಿಡುಗಡೆ ಮಾಡುವಂತೆ ಸಂಘಟನೆಯು ಆಗ್ರಹಿಸಿದೆ.

ಇದನ್ನೂ ಓದಿ: ತೀಸ್ತಾ ಬಂಧನ: ಜಾಗರೂಕತೆಯಿಂದ ಪ್ರತಿಕ್ರಿಯಿಸಿದ ಕಾಂಗ್ರೆಸ್; ಬಂಧನವನ್ನು ಪ್ರಶ್ನಿಸಿ, ಬಿಡುಗಡೆಗೆ ಆಗ್ರಹಿಸಿದ ಎಡಪಕ್ಷಗಳು

ತೀಸ್ತಾ ಅವರು 2002ರ ಗುಜರಾತ್ ಗಲಭೆಗಳ ಸಂತ್ರಸ್ತರ ಪರವಾಗಿ ವಾದಿಸಲು ರಚಿಸಲಾದ ಸಂಸ್ಥೆಯಾದ ಸಿಟಿಜನ್ಸ್ ಫಾರ್ ಜಸ್ಟಿಸ್ ಅಂಡ್ ಪೀಸ್ (CJP) ನ ಕಾರ್ಯದರ್ಶಿಯಾಗಿದ್ದಾರೆ.

‘ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು’

‘ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು’ ಎಂದು ಸಂಸ್ಥೆ ತನ್ನ ಹೇಳಿಕೆಯಲ್ಲಿ ಹೇಳಿದ್ದು, ಕಾನೂನುಬದ್ಧ ಮಾನವ ಹಕ್ಕುಗಳ ಕೆಲಸವನ್ನು ನಡೆಸುವ ರಕ್ಷಕರು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ವಿರುದ್ಧ ಪ್ರತೀಕಾರವು ಸಾಂವಿಧಾನಿಕ ಪ್ರಜಾಪ್ರಭುತ್ವಕ್ಕೆ ಸಂಪೂರ್ಣವಾಗಿ ‘ಸ್ವೀಕಾರಾರ್ಹವಲ್ಲ ಮತ್ತು ಹೊಂದಾಣಿಕೆಯಾಗುವುದಿಲ್ಲ’ ಎಂದು ಅದು ಹೇಳಿದೆ.

ತೀಸ್ತಾ ಅವರು ಭಾರತದಲ್ಲಿ ಕೋಮುಗಲಭೆಯ ಸಂತ್ರಸ್ತರ ನ್ಯಾಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ ಎಂದು ಹೇಳಿರುವ WGHR, “ಅವರು ಅತ್ಯಂತ ದುರ್ಬಲರ ಹಕ್ಕುಗಳ ಧೈರ್ಯಶಾಲಿ ಚಾಂಪಿಯನ್‌ ಎಂದು ಪ್ರಸಿದ್ಧರಾಗಿದ್ದಾರೆ ಮತ್ತು ಗೌರವಿಸಲ್ಪಡುತ್ತಿದ್ದಾರೆ’’ ಎಂದು ಹೇಳಿದೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ 

“ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಸೇರಿದಂತೆ ದಾಳಿಯ ಸಂತ್ರಸ್ತ್ರರ ಜೊತೆ ನಿಂತಿದ್ದಕ್ಕಾಗಿ ಮತ್ತು ಅಧಿಕಾರದ ಸ್ಥಾನದಲ್ಲಿರುವವರು ಸೇರಿದಂತೆ ಎಲ್ಲರಿಂದಲೂ ಉತ್ತರದಾಯಿತ್ವವನ್ನು ಕೋರಿದ್ದಕ್ಕಾಗಿ ತೀಸ್ತಾ ಅವರ ಬಂಧನ ನಡೆದಿದ್ದು ಪ್ರತೀಕಾರಕ್ಕೆ ಸಮಾನವಾಗಿದೆ ಎಂದು WGHR ದೃಢವಾಗಿ ನಂಬುತ್ತದೆ” ಎಂದು ಸಂಸ್ಥೆ ಹೇಳಿದೆ.

“ಭಾರತೀಯ ಸಂವಿಧಾನದ ಅಡಿಯಲ್ಲಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಗಂಭೀರ ಉಲ್ಲಂಘನೆ ನಡೆದಿದ್ದು, ಆಡಳಿತ ಯಂತ್ರದಿಂದ ಅಧಿಕಾರ ಮತ್ತು ಕಾನೂನಿನ ಆಕ್ರಮಣಕಾರಿ ದುರುಪಯೋಗವನ್ನು ಪ್ರತಿಬಿಂಬಿಸುತ್ತಿರುವ ಕಾರಣ ತೀಸ್ತಾ ಅವರ ಬಂಧನದಿಂದ ನಾವು ತೀವ್ರವಾಗಿ ಕಳವಳಗೊಂಡಿದ್ದೇವೆ” ಹೇಳಿಕೆ ತಿಳಿಸಿದೆ.

ಅವರ ಬಂಧನಕ್ಕೆ ಕಾರಣವಾಗುವ ಘಟನೆಗಳ ತಿರುವು ದೇಶೀಯವಾಗಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಮಾನವ ಹಕ್ಕುಗಳ ರಕ್ಷಕರಿಗೆ (HRDs) ಭಾರತ ಸರ್ಕಾರದ ಬದ್ಧತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಂಸ್ಥೆ ಹೇಳಿದೆ.

ಇದನ್ನೂ ಓದಿ: ತೀಸ್ತಾ – ಧರ್ಮಗ್ಲಾನಿಯಾದಾಗ ದಿಢೀರನೇ ಎತ್ತಿದ ಅವತಾರ ಅಲ್ಲ

WGHR ಅನ್ನು ಜನವರಿ 2009 ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾಗರಿಕ ಸಮಾಜ ಸಂಸ್ಥೆಗಳು ಮತ್ತು ಸ್ವತಂತ್ರ ತಜ್ಞರ ಗುಂಪು ಸ್ಥಾಪಿಸಿತ್ತು. WGHR ದೇಶದಲ್ಲಿನ ಎಲ್ಲಾ ನಾಗರಿಕ, ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಮಾನವ ಹಕ್ಕುಗಳ ಸಾಕ್ಷಾತ್ಕಾರಕ್ಕೆ ಮತ್ತು ಅದರ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಬಾಧ್ಯತೆಗಳಿಗೆ ಭಾರತ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಕೆಲಸ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಮ್ಯೂನಿಸ್ಟ್ ರಿಗೆ, ಅವರ ಒಡೆತನದ ಪತ್ರಿಕೆಗಳಿಗೆ ದೇಶದಲ್ಲಿನ ಬುದ್ದಿ ಜೀವಿಗಳ ಹೇಳಿಕೆಗಳು ಕಾಣೋದಿಲ್ಲಾ ,ಆದರೆ ಪರದೇಶಿಗಳ ಕಪಿಗಳ ವಾಖ್ಯೆಗಳು ಇವರಿಗೆ ದೈವ ವಾಣಿಯಂತೆ ಕೇಳುತ್ತೇ ,ನಿಮ್ಮ ಮೆದುಳಿಗೆ ಸ್ವಂತಿಕೆ ,ಸ್ವದೇಶಿ ಬುದ್ದಿ ಸಹ ಇಲ್ಲವೇ ,ಕಮ್ಯೂನಿಸ್ಟ್ ರಿಗೆ ಬ್ರಿಟಿಶ್ ರ ಗುಲಾಮಗಿರಿ ಇನ್ನೂ ಬಿಟ್ಟಲ್ಲಾ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....