Homeಅಂತರಾಷ್ಟ್ರೀಯ‘ಆಡಳಿತದ ಆಕ್ರಮಣಕಾರಿ ದುರುಪಯೋಗ’: ತೀಸ್ತಾ ಬಂಧನ ವಿರೋಧಿಸಿದ ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್...

‘ಆಡಳಿತದ ಆಕ್ರಮಣಕಾರಿ ದುರುಪಯೋಗ’: ತೀಸ್ತಾ ಬಂಧನ ವಿರೋಧಿಸಿದ ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್ ಗ್ರೂಪ್

ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು ಎಂದು ಅದು ಹೇಳಿದೆ

- Advertisement -
- Advertisement -

ದೇಶದ ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಬಂಧನ ಮತ್ತು ಸೆರೆವಾಸವನ್ನು ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್ ಗ್ರೂಪ್ (WGHR) ಖಂಡಿಸಿದ್ದು, ತನ್ನ ಸದಸ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅದು ಒತ್ತಾಯಿಸಿದೆ.

2002ರ ಗುಜರಾತ್ ಗಲಭೆಯಲ್ಲಿ ಹತರಾದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಗುಜರಾತ್ ಪೊಲೀಸರು ತೀಸ್ತಾ ಅವರನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ತೀಸ್ತಾ ಜೊತೆಗೆ ಎಫ್‌ಐಆರ್‌‌ನಲ್ಲಿ ಹೆಸರಿಸಲಾದ ಗುಜರಾತ್‌ನ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌ಬಿ ಶ್ರೀಕುಮಾರ್ ಮತ್ತು ಅಮಾನತುಗೊಂಡ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಿಡುಗಡೆ ಮಾಡುವಂತೆ ಸಂಘಟನೆಯು ಆಗ್ರಹಿಸಿದೆ.

ಇದನ್ನೂ ಓದಿ: ತೀಸ್ತಾ ಬಂಧನ: ಜಾಗರೂಕತೆಯಿಂದ ಪ್ರತಿಕ್ರಿಯಿಸಿದ ಕಾಂಗ್ರೆಸ್; ಬಂಧನವನ್ನು ಪ್ರಶ್ನಿಸಿ, ಬಿಡುಗಡೆಗೆ ಆಗ್ರಹಿಸಿದ ಎಡಪಕ್ಷಗಳು

ತೀಸ್ತಾ ಅವರು 2002ರ ಗುಜರಾತ್ ಗಲಭೆಗಳ ಸಂತ್ರಸ್ತರ ಪರವಾಗಿ ವಾದಿಸಲು ರಚಿಸಲಾದ ಸಂಸ್ಥೆಯಾದ ಸಿಟಿಜನ್ಸ್ ಫಾರ್ ಜಸ್ಟಿಸ್ ಅಂಡ್ ಪೀಸ್ (CJP) ನ ಕಾರ್ಯದರ್ಶಿಯಾಗಿದ್ದಾರೆ.

‘ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು’

‘ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸುವುದು ನಿಲ್ಲಬೇಕು’ ಎಂದು ಸಂಸ್ಥೆ ತನ್ನ ಹೇಳಿಕೆಯಲ್ಲಿ ಹೇಳಿದ್ದು, ಕಾನೂನುಬದ್ಧ ಮಾನವ ಹಕ್ಕುಗಳ ಕೆಲಸವನ್ನು ನಡೆಸುವ ರಕ್ಷಕರು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ವಿರುದ್ಧ ಪ್ರತೀಕಾರವು ಸಾಂವಿಧಾನಿಕ ಪ್ರಜಾಪ್ರಭುತ್ವಕ್ಕೆ ಸಂಪೂರ್ಣವಾಗಿ ‘ಸ್ವೀಕಾರಾರ್ಹವಲ್ಲ ಮತ್ತು ಹೊಂದಾಣಿಕೆಯಾಗುವುದಿಲ್ಲ’ ಎಂದು ಅದು ಹೇಳಿದೆ.

ತೀಸ್ತಾ ಅವರು ಭಾರತದಲ್ಲಿ ಕೋಮುಗಲಭೆಯ ಸಂತ್ರಸ್ತರ ನ್ಯಾಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ ಎಂದು ಹೇಳಿರುವ WGHR, “ಅವರು ಅತ್ಯಂತ ದುರ್ಬಲರ ಹಕ್ಕುಗಳ ಧೈರ್ಯಶಾಲಿ ಚಾಂಪಿಯನ್‌ ಎಂದು ಪ್ರಸಿದ್ಧರಾಗಿದ್ದಾರೆ ಮತ್ತು ಗೌರವಿಸಲ್ಪಡುತ್ತಿದ್ದಾರೆ’’ ಎಂದು ಹೇಳಿದೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ 

“ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಸೇರಿದಂತೆ ದಾಳಿಯ ಸಂತ್ರಸ್ತ್ರರ ಜೊತೆ ನಿಂತಿದ್ದಕ್ಕಾಗಿ ಮತ್ತು ಅಧಿಕಾರದ ಸ್ಥಾನದಲ್ಲಿರುವವರು ಸೇರಿದಂತೆ ಎಲ್ಲರಿಂದಲೂ ಉತ್ತರದಾಯಿತ್ವವನ್ನು ಕೋರಿದ್ದಕ್ಕಾಗಿ ತೀಸ್ತಾ ಅವರ ಬಂಧನ ನಡೆದಿದ್ದು ಪ್ರತೀಕಾರಕ್ಕೆ ಸಮಾನವಾಗಿದೆ ಎಂದು WGHR ದೃಢವಾಗಿ ನಂಬುತ್ತದೆ” ಎಂದು ಸಂಸ್ಥೆ ಹೇಳಿದೆ.

“ಭಾರತೀಯ ಸಂವಿಧಾನದ ಅಡಿಯಲ್ಲಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಗಂಭೀರ ಉಲ್ಲಂಘನೆ ನಡೆದಿದ್ದು, ಆಡಳಿತ ಯಂತ್ರದಿಂದ ಅಧಿಕಾರ ಮತ್ತು ಕಾನೂನಿನ ಆಕ್ರಮಣಕಾರಿ ದುರುಪಯೋಗವನ್ನು ಪ್ರತಿಬಿಂಬಿಸುತ್ತಿರುವ ಕಾರಣ ತೀಸ್ತಾ ಅವರ ಬಂಧನದಿಂದ ನಾವು ತೀವ್ರವಾಗಿ ಕಳವಳಗೊಂಡಿದ್ದೇವೆ” ಹೇಳಿಕೆ ತಿಳಿಸಿದೆ.

ಅವರ ಬಂಧನಕ್ಕೆ ಕಾರಣವಾಗುವ ಘಟನೆಗಳ ತಿರುವು ದೇಶೀಯವಾಗಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಮಾನವ ಹಕ್ಕುಗಳ ರಕ್ಷಕರಿಗೆ (HRDs) ಭಾರತ ಸರ್ಕಾರದ ಬದ್ಧತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಂಸ್ಥೆ ಹೇಳಿದೆ.

ಇದನ್ನೂ ಓದಿ: ತೀಸ್ತಾ – ಧರ್ಮಗ್ಲಾನಿಯಾದಾಗ ದಿಢೀರನೇ ಎತ್ತಿದ ಅವತಾರ ಅಲ್ಲ

WGHR ಅನ್ನು ಜನವರಿ 2009 ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾಗರಿಕ ಸಮಾಜ ಸಂಸ್ಥೆಗಳು ಮತ್ತು ಸ್ವತಂತ್ರ ತಜ್ಞರ ಗುಂಪು ಸ್ಥಾಪಿಸಿತ್ತು. WGHR ದೇಶದಲ್ಲಿನ ಎಲ್ಲಾ ನಾಗರಿಕ, ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಮಾನವ ಹಕ್ಕುಗಳ ಸಾಕ್ಷಾತ್ಕಾರಕ್ಕೆ ಮತ್ತು ಅದರ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಬಾಧ್ಯತೆಗಳಿಗೆ ಭಾರತ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಕೆಲಸ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಮ್ಯೂನಿಸ್ಟ್ ರಿಗೆ, ಅವರ ಒಡೆತನದ ಪತ್ರಿಕೆಗಳಿಗೆ ದೇಶದಲ್ಲಿನ ಬುದ್ದಿ ಜೀವಿಗಳ ಹೇಳಿಕೆಗಳು ಕಾಣೋದಿಲ್ಲಾ ,ಆದರೆ ಪರದೇಶಿಗಳ ಕಪಿಗಳ ವಾಖ್ಯೆಗಳು ಇವರಿಗೆ ದೈವ ವಾಣಿಯಂತೆ ಕೇಳುತ್ತೇ ,ನಿಮ್ಮ ಮೆದುಳಿಗೆ ಸ್ವಂತಿಕೆ ,ಸ್ವದೇಶಿ ಬುದ್ದಿ ಸಹ ಇಲ್ಲವೇ ,ಕಮ್ಯೂನಿಸ್ಟ್ ರಿಗೆ ಬ್ರಿಟಿಶ್ ರ ಗುಲಾಮಗಿರಿ ಇನ್ನೂ ಬಿಟ್ಟಲ್ಲಾ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...