Homeಕರ್ನಾಟಕದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿದ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ: ಕುಮಾರಸ್ವಾಮಿ ಪ್ರತಿಜ್ಞೆ

ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿದ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ: ಕುಮಾರಸ್ವಾಮಿ ಪ್ರತಿಜ್ಞೆ

- Advertisement -
- Advertisement -

ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ. ದೇವೇಗೌಡರ ಬಗ್ಗೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, “ಅತ್ಯಂತ ಅನಾಗರಿಕ, ವಿಕೃತವಾಗಿ ಮಾತನಾಡಿರುವ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ” ಎಂದು ಶುಕ್ರವಾರ ಪ್ರತಿಜ್ಞೆ ಮಾಡಿದ್ದಾರೆ.

ಬೆಂಗಳೂರಿನ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ‘‘ಜನತಾ ಮಿತ್ರ” ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆಯೇ ಆಕ್ರೋಶ ಹೊರ ಹಾಕಿದ ಕುಮಾರಸ್ವಾಮಿ, “ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ ಅನುಭವಿಸಲಿದ್ದಾರೆ” ಎಂದು ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“2004ರಲ್ಲಿ ರಾಜಣ್ಣ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯ ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಯಿತು. ಇಲ್ಲದಿದ್ದರೆ ಅವರನ್ನು ಯಾರು ಕೇಳುತ್ತಿದ್ದರು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ: ರಾಜಣ್ಣ ಕ್ಷಮೆ ಕೇಳಬೇಕು ಎಂದ ಡಿಕೆ ಶಿವಕುಮಾರ್‌
“ದೇವೇಗೌಡರು ಅಂದು ತಮ್ಮ ಅನಾರೋಗ್ಯವನ್ನೂ ಲೆಕ್ಕಿಸದೆ ತೆರಳಿ ಪ್ರಚಾರ ಮಾಡಿದ್ದರು. ಇಬ್ಬರು ದೇವೇಗೌಡರ ಹೆಗಲಿಗೆ ಹೆಗಲು ಕೊಡುತ್ತಾರೆ. ನಿಜ, ರಾಜಣ್ಣನವರಿಗೆ ಅರಿವಿದ್ದಂತೆ ಇಲ್ಲ. ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ. ದೇವರ ಮೆರವಣಿಗೆಗೂ ಭುಜ ಕೊಡುತ್ತೇವೆ. ಭುಜ ಕೊಟ್ಟೇ ಮೆರವಣಿಗೆ ಮಾಡೋದಲ್ಲವೇ? ದೇವೇಗೌಡರು ಕೂಡ ಹಾಗೆಯೇ, ನಮ್ಮ ಪಾಲಿಗೆ ಅವರು ದೈವವೇ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ರಾಜಣ್ಣನ ಮಾತಿನ ದುರಹಂಕಾರ ಕೇಳಿದ್ದೇನೆ. ಆತ ಬ್ರಹ್ಮನಲ್ಲ, ಆತನೂ ಒಬ್ಬ ಹುಲು ಮಾನವ. ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ ಎಂಬ ನಂಬಿಕೆ ನನ್ನದು. ಹಲವಾರು ಒತ್ತಡಗಳಿಂದ ತುಮಕೂರಿನಲ್ಲಿ ದೇವೇಗೌಡರನ್ನು ಚುನಾವಣೆಗೆ ನಿಲ್ಲಿಸಿ ಸೋಲಿಸಿದರು. ಅವರನ್ನು ಸೋಲಿಸಲು ಕುತಂತ್ರ ನಡೆಸಿದ್ದು ಇದೇ ರಾಜಣ್ಣ” ಎಂದು ಅವರು ಹೇಳಿದ್ದಾರೆ.

“ಇನ್ನೆರಡು ಮೂರು ತಿಂಗಳು ನೋಡಲಿ. ದೇವೇಗೌಡರೇ ಸ್ವತಂತ್ರವಾಗಿ ಓಡಾಡುತ್ತಾರೆ. ರಾಜಣ್ಣ ಕ್ಷಮೆ ಕೇಳಬೇಕು ಅಂತಾ ಹೇಳುವುದಿಲ್ಲ. ದೇವೇಗೌಡರ ಮಗ ನಾನು ಇನ್ನೂ ಬದುಕಿದ್ದೇನೆ. ಮಧುಗಿರಿಗೆ ಬಂದು ತೋರಿಸುತ್ತೇನೆ. ನಾನು ಉತ್ತರ ಕೊಡುವುದಲ್ಲ, ಅಲ್ಲಿನ ಜನರಿಂದಲೇ ಉತ್ತರ ಕೊಡಿಸುತ್ತೇನೆ” ಎಂದು ಕುಮಾರಸ್ವಾಮಿ ಅವರು ಪ್ರತಿಜ್ಞೆಗೈದಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಹೇಳಿದ್ದೇನು?

ಮಧುಗಿರಿ ತಾಲ್ಲೂಕಿನ ಕಾವಣದಾಲ ಗ್ರಾಮದಲ್ಲಿ ಮಾತನಾಡುತ್ತಿದ್ದ ಅವರು, “ಇದು ನನ್ನ‌ ಕೊನೇ ಚುನಾವಣೆ. ಶೋಕಿಗೆ, ಮುಖಸ್ತುತಿಗೆ ರಾಜಕಾರಣ ಮಾಡೋದು ಬೇಡ. ನಾನು ಶಾಸಕನಾದರೆ ನೀವೆಲ್ಲರೂ ಆದಂತೆ. ನೀವು ಹೋರಾಟ ಮಾಡಿ, ನಾನು ಶಾಸಕನಾದರೆ ನಾಮಕಾವಸ್ಥೆಗೆ ಇರ್ತೀನಿ. ಏನಾದರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ಬರುತ್ತೆ” ಎಂದು ಹೇಳಿದ್ದರು.

“ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಓಟ್ ಕೇಳ್ತೀನಿ. ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲಲ್ಲಾ… ನನಗೆ ಆಗಲೇ 72 ವರ್ಷ, 77 ಆದ್ರೆ ಕೈಕಾಲು ಅಲಾಡ್ತಿರುತ್ತೆ. ನಮ್ಮ ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ. ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ.. ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು” ಎಂದು ರಾಜಣ್ಣ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...