Homeಕರ್ನಾಟಕದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿದ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ: ಕುಮಾರಸ್ವಾಮಿ ಪ್ರತಿಜ್ಞೆ

ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿದ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ: ಕುಮಾರಸ್ವಾಮಿ ಪ್ರತಿಜ್ಞೆ

- Advertisement -
- Advertisement -

ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ. ದೇವೇಗೌಡರ ಬಗ್ಗೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, “ಅತ್ಯಂತ ಅನಾಗರಿಕ, ವಿಕೃತವಾಗಿ ಮಾತನಾಡಿರುವ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ” ಎಂದು ಶುಕ್ರವಾರ ಪ್ರತಿಜ್ಞೆ ಮಾಡಿದ್ದಾರೆ.

ಬೆಂಗಳೂರಿನ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ‘‘ಜನತಾ ಮಿತ್ರ” ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆಯೇ ಆಕ್ರೋಶ ಹೊರ ಹಾಕಿದ ಕುಮಾರಸ್ವಾಮಿ, “ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ ಅನುಭವಿಸಲಿದ್ದಾರೆ” ಎಂದು ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“2004ರಲ್ಲಿ ರಾಜಣ್ಣ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯ ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಯಿತು. ಇಲ್ಲದಿದ್ದರೆ ಅವರನ್ನು ಯಾರು ಕೇಳುತ್ತಿದ್ದರು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ: ರಾಜಣ್ಣ ಕ್ಷಮೆ ಕೇಳಬೇಕು ಎಂದ ಡಿಕೆ ಶಿವಕುಮಾರ್‌
“ದೇವೇಗೌಡರು ಅಂದು ತಮ್ಮ ಅನಾರೋಗ್ಯವನ್ನೂ ಲೆಕ್ಕಿಸದೆ ತೆರಳಿ ಪ್ರಚಾರ ಮಾಡಿದ್ದರು. ಇಬ್ಬರು ದೇವೇಗೌಡರ ಹೆಗಲಿಗೆ ಹೆಗಲು ಕೊಡುತ್ತಾರೆ. ನಿಜ, ರಾಜಣ್ಣನವರಿಗೆ ಅರಿವಿದ್ದಂತೆ ಇಲ್ಲ. ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ. ದೇವರ ಮೆರವಣಿಗೆಗೂ ಭುಜ ಕೊಡುತ್ತೇವೆ. ಭುಜ ಕೊಟ್ಟೇ ಮೆರವಣಿಗೆ ಮಾಡೋದಲ್ಲವೇ? ದೇವೇಗೌಡರು ಕೂಡ ಹಾಗೆಯೇ, ನಮ್ಮ ಪಾಲಿಗೆ ಅವರು ದೈವವೇ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ರಾಜಣ್ಣನ ಮಾತಿನ ದುರಹಂಕಾರ ಕೇಳಿದ್ದೇನೆ. ಆತ ಬ್ರಹ್ಮನಲ್ಲ, ಆತನೂ ಒಬ್ಬ ಹುಲು ಮಾನವ. ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ ಎಂಬ ನಂಬಿಕೆ ನನ್ನದು. ಹಲವಾರು ಒತ್ತಡಗಳಿಂದ ತುಮಕೂರಿನಲ್ಲಿ ದೇವೇಗೌಡರನ್ನು ಚುನಾವಣೆಗೆ ನಿಲ್ಲಿಸಿ ಸೋಲಿಸಿದರು. ಅವರನ್ನು ಸೋಲಿಸಲು ಕುತಂತ್ರ ನಡೆಸಿದ್ದು ಇದೇ ರಾಜಣ್ಣ” ಎಂದು ಅವರು ಹೇಳಿದ್ದಾರೆ.

“ಇನ್ನೆರಡು ಮೂರು ತಿಂಗಳು ನೋಡಲಿ. ದೇವೇಗೌಡರೇ ಸ್ವತಂತ್ರವಾಗಿ ಓಡಾಡುತ್ತಾರೆ. ರಾಜಣ್ಣ ಕ್ಷಮೆ ಕೇಳಬೇಕು ಅಂತಾ ಹೇಳುವುದಿಲ್ಲ. ದೇವೇಗೌಡರ ಮಗ ನಾನು ಇನ್ನೂ ಬದುಕಿದ್ದೇನೆ. ಮಧುಗಿರಿಗೆ ಬಂದು ತೋರಿಸುತ್ತೇನೆ. ನಾನು ಉತ್ತರ ಕೊಡುವುದಲ್ಲ, ಅಲ್ಲಿನ ಜನರಿಂದಲೇ ಉತ್ತರ ಕೊಡಿಸುತ್ತೇನೆ” ಎಂದು ಕುಮಾರಸ್ವಾಮಿ ಅವರು ಪ್ರತಿಜ್ಞೆಗೈದಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಹೇಳಿದ್ದೇನು?

ಮಧುಗಿರಿ ತಾಲ್ಲೂಕಿನ ಕಾವಣದಾಲ ಗ್ರಾಮದಲ್ಲಿ ಮಾತನಾಡುತ್ತಿದ್ದ ಅವರು, “ಇದು ನನ್ನ‌ ಕೊನೇ ಚುನಾವಣೆ. ಶೋಕಿಗೆ, ಮುಖಸ್ತುತಿಗೆ ರಾಜಕಾರಣ ಮಾಡೋದು ಬೇಡ. ನಾನು ಶಾಸಕನಾದರೆ ನೀವೆಲ್ಲರೂ ಆದಂತೆ. ನೀವು ಹೋರಾಟ ಮಾಡಿ, ನಾನು ಶಾಸಕನಾದರೆ ನಾಮಕಾವಸ್ಥೆಗೆ ಇರ್ತೀನಿ. ಏನಾದರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ಬರುತ್ತೆ” ಎಂದು ಹೇಳಿದ್ದರು.

“ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಓಟ್ ಕೇಳ್ತೀನಿ. ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲಲ್ಲಾ… ನನಗೆ ಆಗಲೇ 72 ವರ್ಷ, 77 ಆದ್ರೆ ಕೈಕಾಲು ಅಲಾಡ್ತಿರುತ್ತೆ. ನಮ್ಮ ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ. ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ.. ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು” ಎಂದು ರಾಜಣ್ಣ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...