Homeಮುಖಪುಟ11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ ಇಂದು ನಡೆದ 11 ನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. 18 ತಿಂಗಳುಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಇಂದಿನ ಸಭೆಯಲ್ಲಿ ಸಚಿವರು ಒತ್ತಾಯಿಸಿದ್ದು, ರೈತರು ಅದನ್ನು ನಿರಾಕರಿಸಿ ಮೂರು ಕಾಯ್ದೆಗಳ ಸಂಪೂರ್ಣ ರದ್ದತಿ ಮತ್ತು ಎಂಎಸ್‌ಪಿಗಾಗಿ ಹೊಸ ಕಾಯ್ದೆಗಾಗಿ ಆಗ್ರಹಿಸಿದ್ದಾರೆ.

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ. ಅವರು ಬಂದ ನಂತರ ಸರ್ಕಾರದ ಕಾಯ್ದೆ ತಡೆಹಿಡಿಯುವ ಪ್ರಸ್ತಾವನೆಯನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು ಮತ್ತು ಸಭೆ ಮುಗಿಸಲು ತರಾತುರಿ ಮಾಡಿದರು. ಇದನ್ನು ನಾವು ಒಪ್ಪಲಿಲ್ಲ. ಹಾಗಾಗಿ ನಮ್ಮ ಆಂದೋಲನವು ಶಾಂತಿಯುತವಾಗಿ ಮುಂದುವರಿಯುತ್ತದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಎಸ್.ಎಸ್. ಪಂಧರ್‌ರವರ ಹೇಳಿಕೆ ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.

“ಸಭೆಯಲ್ಲಿ ಕೃಷಿ ಕಾನೂನುಗಳ ಅನುಷ್ಠಾನವನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸುವುದಾಗಿ ಸಚಿವರು ತಿಳಿಸಿದರು. ಅಲ್ಲದೇ ಈ ಪ್ರಸ್ತಾಪವನ್ನು ರೈತ ಸಂಘಗಳು ಒಪ್ಪಿಕೊಳ್ಳಲು ಸಿದ್ಧವಾದರೆ ಮಾತ್ರ ಮುಂದಿನ ಸುತ್ತಿನ ಸಭೆ ನಡೆಯಬಹುದು ಎಂದು ಹೇಳಿದರು. ನಾವು ಅದನ್ನು ಒಪ್ಪಿಕೊಂಡಿಲ್ಲ, ಹೋರಾಟ ತೀವ್ರಗೊಳಿಸುತ್ತೇವೆ ಮತ್ತು ನಿಗಧಿಯಂತೆ ಜನವರಿ 26 ರಂದು ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ” ಎಂದು ಭಾರತೀಯ ಕಿಸಾನ್ ಯೂನಿಯನ್‌ನ ವಕ್ತಾರ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳ ಪ್ರತಿಕ್ರಿಯೆ ಗೌರವಯುತವಾಗಿರಲಿಲ್ಲ. ಹಾಗಾಗಿ ರೈತ ಮುಖಂಡರು ಟ್ರಾಕ್ಟರ್ ರ್ಯಾಲಿ ನಡೆಸುವ ಮತ್ತು ಹೋರಾಟವನ್ನು ತೀವ್ರಗೊಳಿಸುವುದಾಗಿ ಸಭೆಯಲ್ಲಿ ಪುನರುಚ್ಚರಿಸಿದ್ದಾರೆ.

ರೈತ ಒಕ್ಕೂಟಗಳ ಕಡೆಯಿಂದ ‘ರೈತರ ಕಲ್ಯಾಣದ ಕಾಳಜಿ ಇಲ್ಲದೆ ಕಾರಣ’ ಮಾತುಕತೆ ಅನಿರ್ದಿಷ್ಟವಾಗಿತ್ತು. ನಾನು ಅದರ ಬಗ್ಗೆ ದುಃಖಿತನಾಗಿದ್ದೇನೆ. ಸರ್ಕಾರವು ಪರ್ಯಾಯಗಳನ್ನು ಹೇಳಿದರೂ, ಕಾನೂನುಗಳನ್ನು ರದ್ದುಪಡಿಸಬೇಕೆಂದು ರೈತ ಸಂಘಗಳು ಬಯಸುತ್ತವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯ ನಂತರ ತಿಳಿಸಿದ್ದಾರೆ.

ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ನಲ್ಲಿಯೇ ರೈತರ ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ ಮತ್ತು ಅದು ಕಿಸಾನ್‌ಘಾಟ್‌ವರೆಗೂ ಮುಂದುವರೆಯಲಿದೆ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಮುಖ್ಯಸ್ಥ ದರ್ಶನ್ ಪಾಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಗಣರಾಜ್ಯೋತ್ಸವ ನಡೆಯುವ ಸಮಯದಲ್ಲಿಯೇ ರೈತರ ಟ್ರಾಕ್ಟರ್ ಪೆರೇಡ್ ಸಹ ನಡೆಯಲಿದೆ. ಇಂದಿನ 11 ನೇ ಸುತ್ತಿನ ಮಾತುಕತೆಯ ನಂತರ ದೆಹಲಿ ಪೊಲೀಸ್ ಮುಖ್ಯಸ್ಥರೊಂದಿಗೆ ಟ್ರಾಕ್ಟರ್ ರ್ಯಾಲಿ ವಿಚಾರವಾಗಿ ರೈತ ಮುಖಂಡರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದಿದ್ದಾರೆ.

ನಮ್ಮ ಪೆರೇಡ್ ಕೂಡ ಗಣರಾಜ್ಯೋತ್ಸವದ ಪೆರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.


ಇದನ್ನೂ ಓದಿ: ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...