Homeಮುಖಪುಟ11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ ಇಂದು ನಡೆದ 11 ನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. 18 ತಿಂಗಳುಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಇಂದಿನ ಸಭೆಯಲ್ಲಿ ಸಚಿವರು ಒತ್ತಾಯಿಸಿದ್ದು, ರೈತರು ಅದನ್ನು ನಿರಾಕರಿಸಿ ಮೂರು ಕಾಯ್ದೆಗಳ ಸಂಪೂರ್ಣ ರದ್ದತಿ ಮತ್ತು ಎಂಎಸ್‌ಪಿಗಾಗಿ ಹೊಸ ಕಾಯ್ದೆಗಾಗಿ ಆಗ್ರಹಿಸಿದ್ದಾರೆ.

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ. ಅವರು ಬಂದ ನಂತರ ಸರ್ಕಾರದ ಕಾಯ್ದೆ ತಡೆಹಿಡಿಯುವ ಪ್ರಸ್ತಾವನೆಯನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು ಮತ್ತು ಸಭೆ ಮುಗಿಸಲು ತರಾತುರಿ ಮಾಡಿದರು. ಇದನ್ನು ನಾವು ಒಪ್ಪಲಿಲ್ಲ. ಹಾಗಾಗಿ ನಮ್ಮ ಆಂದೋಲನವು ಶಾಂತಿಯುತವಾಗಿ ಮುಂದುವರಿಯುತ್ತದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಎಸ್.ಎಸ್. ಪಂಧರ್‌ರವರ ಹೇಳಿಕೆ ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.

“ಸಭೆಯಲ್ಲಿ ಕೃಷಿ ಕಾನೂನುಗಳ ಅನುಷ್ಠಾನವನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸುವುದಾಗಿ ಸಚಿವರು ತಿಳಿಸಿದರು. ಅಲ್ಲದೇ ಈ ಪ್ರಸ್ತಾಪವನ್ನು ರೈತ ಸಂಘಗಳು ಒಪ್ಪಿಕೊಳ್ಳಲು ಸಿದ್ಧವಾದರೆ ಮಾತ್ರ ಮುಂದಿನ ಸುತ್ತಿನ ಸಭೆ ನಡೆಯಬಹುದು ಎಂದು ಹೇಳಿದರು. ನಾವು ಅದನ್ನು ಒಪ್ಪಿಕೊಂಡಿಲ್ಲ, ಹೋರಾಟ ತೀವ್ರಗೊಳಿಸುತ್ತೇವೆ ಮತ್ತು ನಿಗಧಿಯಂತೆ ಜನವರಿ 26 ರಂದು ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ” ಎಂದು ಭಾರತೀಯ ಕಿಸಾನ್ ಯೂನಿಯನ್‌ನ ವಕ್ತಾರ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳ ಪ್ರತಿಕ್ರಿಯೆ ಗೌರವಯುತವಾಗಿರಲಿಲ್ಲ. ಹಾಗಾಗಿ ರೈತ ಮುಖಂಡರು ಟ್ರಾಕ್ಟರ್ ರ್ಯಾಲಿ ನಡೆಸುವ ಮತ್ತು ಹೋರಾಟವನ್ನು ತೀವ್ರಗೊಳಿಸುವುದಾಗಿ ಸಭೆಯಲ್ಲಿ ಪುನರುಚ್ಚರಿಸಿದ್ದಾರೆ.

ರೈತ ಒಕ್ಕೂಟಗಳ ಕಡೆಯಿಂದ ‘ರೈತರ ಕಲ್ಯಾಣದ ಕಾಳಜಿ ಇಲ್ಲದೆ ಕಾರಣ’ ಮಾತುಕತೆ ಅನಿರ್ದಿಷ್ಟವಾಗಿತ್ತು. ನಾನು ಅದರ ಬಗ್ಗೆ ದುಃಖಿತನಾಗಿದ್ದೇನೆ. ಸರ್ಕಾರವು ಪರ್ಯಾಯಗಳನ್ನು ಹೇಳಿದರೂ, ಕಾನೂನುಗಳನ್ನು ರದ್ದುಪಡಿಸಬೇಕೆಂದು ರೈತ ಸಂಘಗಳು ಬಯಸುತ್ತವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯ ನಂತರ ತಿಳಿಸಿದ್ದಾರೆ.

ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ನಲ್ಲಿಯೇ ರೈತರ ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ ಮತ್ತು ಅದು ಕಿಸಾನ್‌ಘಾಟ್‌ವರೆಗೂ ಮುಂದುವರೆಯಲಿದೆ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಮುಖ್ಯಸ್ಥ ದರ್ಶನ್ ಪಾಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಗಣರಾಜ್ಯೋತ್ಸವ ನಡೆಯುವ ಸಮಯದಲ್ಲಿಯೇ ರೈತರ ಟ್ರಾಕ್ಟರ್ ಪೆರೇಡ್ ಸಹ ನಡೆಯಲಿದೆ. ಇಂದಿನ 11 ನೇ ಸುತ್ತಿನ ಮಾತುಕತೆಯ ನಂತರ ದೆಹಲಿ ಪೊಲೀಸ್ ಮುಖ್ಯಸ್ಥರೊಂದಿಗೆ ಟ್ರಾಕ್ಟರ್ ರ್ಯಾಲಿ ವಿಚಾರವಾಗಿ ರೈತ ಮುಖಂಡರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದಿದ್ದಾರೆ.

ನಮ್ಮ ಪೆರೇಡ್ ಕೂಡ ಗಣರಾಜ್ಯೋತ್ಸವದ ಪೆರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.


ಇದನ್ನೂ ಓದಿ: ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...