Homeಮುಖಪುಟ11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ ಇಂದು ನಡೆದ 11 ನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. 18 ತಿಂಗಳುಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಇಂದಿನ ಸಭೆಯಲ್ಲಿ ಸಚಿವರು ಒತ್ತಾಯಿಸಿದ್ದು, ರೈತರು ಅದನ್ನು ನಿರಾಕರಿಸಿ ಮೂರು ಕಾಯ್ದೆಗಳ ಸಂಪೂರ್ಣ ರದ್ದತಿ ಮತ್ತು ಎಂಎಸ್‌ಪಿಗಾಗಿ ಹೊಸ ಕಾಯ್ದೆಗಾಗಿ ಆಗ್ರಹಿಸಿದ್ದಾರೆ.

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ. ಅವರು ಬಂದ ನಂತರ ಸರ್ಕಾರದ ಕಾಯ್ದೆ ತಡೆಹಿಡಿಯುವ ಪ್ರಸ್ತಾವನೆಯನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು ಮತ್ತು ಸಭೆ ಮುಗಿಸಲು ತರಾತುರಿ ಮಾಡಿದರು. ಇದನ್ನು ನಾವು ಒಪ್ಪಲಿಲ್ಲ. ಹಾಗಾಗಿ ನಮ್ಮ ಆಂದೋಲನವು ಶಾಂತಿಯುತವಾಗಿ ಮುಂದುವರಿಯುತ್ತದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಎಸ್.ಎಸ್. ಪಂಧರ್‌ರವರ ಹೇಳಿಕೆ ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.

“ಸಭೆಯಲ್ಲಿ ಕೃಷಿ ಕಾನೂನುಗಳ ಅನುಷ್ಠಾನವನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸುವುದಾಗಿ ಸಚಿವರು ತಿಳಿಸಿದರು. ಅಲ್ಲದೇ ಈ ಪ್ರಸ್ತಾಪವನ್ನು ರೈತ ಸಂಘಗಳು ಒಪ್ಪಿಕೊಳ್ಳಲು ಸಿದ್ಧವಾದರೆ ಮಾತ್ರ ಮುಂದಿನ ಸುತ್ತಿನ ಸಭೆ ನಡೆಯಬಹುದು ಎಂದು ಹೇಳಿದರು. ನಾವು ಅದನ್ನು ಒಪ್ಪಿಕೊಂಡಿಲ್ಲ, ಹೋರಾಟ ತೀವ್ರಗೊಳಿಸುತ್ತೇವೆ ಮತ್ತು ನಿಗಧಿಯಂತೆ ಜನವರಿ 26 ರಂದು ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ” ಎಂದು ಭಾರತೀಯ ಕಿಸಾನ್ ಯೂನಿಯನ್‌ನ ವಕ್ತಾರ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳ ಪ್ರತಿಕ್ರಿಯೆ ಗೌರವಯುತವಾಗಿರಲಿಲ್ಲ. ಹಾಗಾಗಿ ರೈತ ಮುಖಂಡರು ಟ್ರಾಕ್ಟರ್ ರ್ಯಾಲಿ ನಡೆಸುವ ಮತ್ತು ಹೋರಾಟವನ್ನು ತೀವ್ರಗೊಳಿಸುವುದಾಗಿ ಸಭೆಯಲ್ಲಿ ಪುನರುಚ್ಚರಿಸಿದ್ದಾರೆ.

ರೈತ ಒಕ್ಕೂಟಗಳ ಕಡೆಯಿಂದ ‘ರೈತರ ಕಲ್ಯಾಣದ ಕಾಳಜಿ ಇಲ್ಲದೆ ಕಾರಣ’ ಮಾತುಕತೆ ಅನಿರ್ದಿಷ್ಟವಾಗಿತ್ತು. ನಾನು ಅದರ ಬಗ್ಗೆ ದುಃಖಿತನಾಗಿದ್ದೇನೆ. ಸರ್ಕಾರವು ಪರ್ಯಾಯಗಳನ್ನು ಹೇಳಿದರೂ, ಕಾನೂನುಗಳನ್ನು ರದ್ದುಪಡಿಸಬೇಕೆಂದು ರೈತ ಸಂಘಗಳು ಬಯಸುತ್ತವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯ ನಂತರ ತಿಳಿಸಿದ್ದಾರೆ.

ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ನಲ್ಲಿಯೇ ರೈತರ ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ ಮತ್ತು ಅದು ಕಿಸಾನ್‌ಘಾಟ್‌ವರೆಗೂ ಮುಂದುವರೆಯಲಿದೆ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಮುಖ್ಯಸ್ಥ ದರ್ಶನ್ ಪಾಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಗಣರಾಜ್ಯೋತ್ಸವ ನಡೆಯುವ ಸಮಯದಲ್ಲಿಯೇ ರೈತರ ಟ್ರಾಕ್ಟರ್ ಪೆರೇಡ್ ಸಹ ನಡೆಯಲಿದೆ. ಇಂದಿನ 11 ನೇ ಸುತ್ತಿನ ಮಾತುಕತೆಯ ನಂತರ ದೆಹಲಿ ಪೊಲೀಸ್ ಮುಖ್ಯಸ್ಥರೊಂದಿಗೆ ಟ್ರಾಕ್ಟರ್ ರ್ಯಾಲಿ ವಿಚಾರವಾಗಿ ರೈತ ಮುಖಂಡರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದಿದ್ದಾರೆ.

ನಮ್ಮ ಪೆರೇಡ್ ಕೂಡ ಗಣರಾಜ್ಯೋತ್ಸವದ ಪೆರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.


ಇದನ್ನೂ ಓದಿ: ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...