Homeಕರ್ನಾಟಕಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

- Advertisement -
- Advertisement -

ಏಪ್ರಿಲ್‌ 1 ರಿಂದ ಔಷಧಗಳ ಬೆಲೆಯನ್ನು ಶೇ.12.12ರಷ್ಟು ಹೆಚ್ಚಿಸಲು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಅನುಮೋದನೆ ನೀಡಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್‌ ವಿರೋಧ ವ್ಯಕ್ತಪಡಿಸಿ ಟ್ವೀಟ್‌ ಮಾಡಿವೆ.

ಯಾವ ಯಾವ ಔಷಧಗಳ ಬೆಲೆ ಏರಿಕೆಯಾಗಲಿದೆ?

ಪ್ಯಾರಸಿಟಮಲ್ ಸೇರಿದಂತೆ 800ಕ್ಕೂ ಹೆಚ್ಚು ಅತ್ಯಗತ್ಯ ಔಷಧಗಳ ಬೆಲೆ ಏರಿಕೆಯಾಗಲಿದೆ. ಪ್ರಮುಖವಾಗಿ ಅಲರ್ಜಿ, ಸೋಂಕು, ಜ್ವರ, ಚರ್ಮ ರೋಗ, ಹೃದ್ರೋಗ, ರಕ್ತಹೀನತೆ, ಅಧಿಕ ರಕ್ತದೊತ್ತಡವನ್ನು ಗುಣಪಡಿಸಲು ಬಳಸುವ ಔಷಧಿಗಳ ಬೆಲೆಗಳು ಹೆಚ್ಚಾಗಲಿದೆ. ಬೆಲೆ ಏರಿಕೆಯಾಗುವ ಔಷಧಗಳ ಪಟ್ಟಿಯಲ್ಲಿ ಅಜಿಥ್ರೊಮೈಸಿನ್, ಸಿಪ್ರೊಫ್ಲೋಕ್ಸಾಸಿನ್ ಹೈಡ್ರೋಕ್ಲೋರೈಡ್, ಮೆಟ್ರೋನಿಡಜೋಲ್, ಪ್ಯಾರೆಸಿಟಮಾಲ್, ಫೆನೋಬಾರ್ಬಿಟೋನ್ ಮತ್ತು ಫೆನಿಟೋಯಿನ್ ಸೋಡಿಯಂನಂತಹ ಔಷಧಗಳ ಬೆಲೆ ಹೆಚ್ಚಳವಾಗಲಿ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದ್ದು, ”ಅಗತ್ಯ ಜೀವರಕ್ಷಕ ಔಷಧಗಳ ಬೆಲೆ 12% ಏರಿಕೆಯಾಗುತ್ತಿದೆ. ಕೋವಿಡ್ ಸಾಂಕ್ರಾಮಿಕದ ಸಂಕಷ್ಟ ಎದುರಿಸಿದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಬೆಲೆ ಏರಿಕೆಯ ಕೊಡುಗೆ ಇದು. ಜನಸಾಮಾನ್ಯರ ಸುಲಿಗೆಯ ಬಗ್ಗೆ ಬಿಜೆಪಿ ನಾಯಕರು ಏಕೆ ಮಾತಾಡುತ್ತಿಲ್ಲ? ಮತ ಕೇಳಲು ಹೋದಾಗ ಜನರಲ್ಲಿ ಬೆಲೆ ಏರಿಕೆಯ ಸಾಧನೆಯನ್ನು ಹೇಳಿಕೊಳ್ಳುವಿರಾ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ದೇಶದ ಜನರು ಈಗಾಗಲೇ ಹೈರಾಣಾಗಿದ್ದು, ಔಷಧ ಬೆಲೆ ಹೆಚ್ಚಿಸಿ ಮತ್ತಷ್ಟು ಆಘಾತ ನೀಡುತ್ತಿದೆ. ಈ ಮೂಲಕ ವಿಕೃತ ಜನದ್ರೋಹಿ ಮನಸ್ಥಿತಿಯನ್ನು ಕೇಂದ್ರ ಸರ್ಕಾರ ತೋರುತ್ತಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

ಈ ಬಗ್ಗೆ ಗುರುವಾರ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ”ಆಕಾಶದೆತ್ತರಕ್ಕೆ ಏರಿರುವ ಅಗತ್ಯ ವಸ್ತುಗಳ ಬೆಲೆಯ ಮಧ್ಯೆ ಜನತೆಗೆ ಮತ್ತೊಂದು ಆಘಾತ ಕೊಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಸಾಮಾನ್ಯ ಬಳಕೆಯ ಔಷಧಿಗಳ ಬೆಲೆಯನ್ನು 12%ಕ್ಕೂ ಅಧಿಕವಾಗಿ ಹೆಚ್ಚಿಸಲು ಔಷಧ ಕಂಪನಿಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೈರಾಣಾಗಿರುವ ಜನತೆಯ ಮೇಲೆ ಮತ್ತೊಂದು ಹೊರೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

”ನೋವು ನಿವಾರಕ, ಆ್ಯಂಟಿ ಬಯಾಟಿಕ್, ಉರಿಯೂತ ನಿವಾರಕ ಔಷಧಿ ಸೇರಿದಂತೆ ಜನಸಾಮಾನ್ಯರು ಹೆಚ್ಚು ಬಳಸುವ 800ಕ್ಕೂ ಹೆಚ್ಚು ಔಷಧಿಗಳ ಬೆಲೆ ಏಪ್ರಿಲ್ ತಿಂಗಳಿಂದ ಏರಿಕೆಯಾಗಲಿದೆ. ಕಳೆದ ವರ್ಷವೂ‌ 10% ಕ್ಕಿಂತ ಹೆಚ್ಚು ಏರಿಸಲಾಗಿತ್ತು. ಮೊಟ್ಟಮೊದಲ ಬಾರಿ ಈ ಪ್ರಮಾಣದಲ್ಲಿ ಸಾಮಾನ್ಯ ಔಷಧಿಗಳ ಬೆಲೆ ಏರಿಕೆ ಮಾಡಲಾಗುತ್ತಿದೆ” ಎಂದು ಹೇಳಿದೆ.

”ಯಾರೂ ಕೂಡ ಬದುಕಲು ಬಿಡಬಾರದು ಎಂಬ ದುಷ್ಟ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಂಗಿದೆ. ಬಳಕೆಯ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಜನತೆಯ ಜೇಬು ಖಾಲಿಯಾಗಿ, ಬಡವರು ಇನ್ನಷ್ಟು ಬಡವರಾಗಿ, ಹಸಿವಿಗೆ ದೂಡಲ್ಪಡುತ್ತಿದ್ದಾರೆ. ಇಷ್ಟು ವಿಕೃತ ಜನದ್ರೋಹಿ ಮನಸ್ಥಿತಿ ದೇಶದ ಇತಿಹಾಸದಲ್ಲೇ ಯಾವ ಸರ್ಕಾರಕ್ಕೂ ಇರಲಿಲ್ಲ!” ಎಂದು ಕಿಡಿಕಾರಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...