Homeಕರ್ನಾಟಕಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

- Advertisement -
- Advertisement -

ಏಪ್ರಿಲ್‌ 1 ರಿಂದ ಔಷಧಗಳ ಬೆಲೆಯನ್ನು ಶೇ.12.12ರಷ್ಟು ಹೆಚ್ಚಿಸಲು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಅನುಮೋದನೆ ನೀಡಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್‌ ವಿರೋಧ ವ್ಯಕ್ತಪಡಿಸಿ ಟ್ವೀಟ್‌ ಮಾಡಿವೆ.

ಯಾವ ಯಾವ ಔಷಧಗಳ ಬೆಲೆ ಏರಿಕೆಯಾಗಲಿದೆ?

ಪ್ಯಾರಸಿಟಮಲ್ ಸೇರಿದಂತೆ 800ಕ್ಕೂ ಹೆಚ್ಚು ಅತ್ಯಗತ್ಯ ಔಷಧಗಳ ಬೆಲೆ ಏರಿಕೆಯಾಗಲಿದೆ. ಪ್ರಮುಖವಾಗಿ ಅಲರ್ಜಿ, ಸೋಂಕು, ಜ್ವರ, ಚರ್ಮ ರೋಗ, ಹೃದ್ರೋಗ, ರಕ್ತಹೀನತೆ, ಅಧಿಕ ರಕ್ತದೊತ್ತಡವನ್ನು ಗುಣಪಡಿಸಲು ಬಳಸುವ ಔಷಧಿಗಳ ಬೆಲೆಗಳು ಹೆಚ್ಚಾಗಲಿದೆ. ಬೆಲೆ ಏರಿಕೆಯಾಗುವ ಔಷಧಗಳ ಪಟ್ಟಿಯಲ್ಲಿ ಅಜಿಥ್ರೊಮೈಸಿನ್, ಸಿಪ್ರೊಫ್ಲೋಕ್ಸಾಸಿನ್ ಹೈಡ್ರೋಕ್ಲೋರೈಡ್, ಮೆಟ್ರೋನಿಡಜೋಲ್, ಪ್ಯಾರೆಸಿಟಮಾಲ್, ಫೆನೋಬಾರ್ಬಿಟೋನ್ ಮತ್ತು ಫೆನಿಟೋಯಿನ್ ಸೋಡಿಯಂನಂತಹ ಔಷಧಗಳ ಬೆಲೆ ಹೆಚ್ಚಳವಾಗಲಿ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದ್ದು, ”ಅಗತ್ಯ ಜೀವರಕ್ಷಕ ಔಷಧಗಳ ಬೆಲೆ 12% ಏರಿಕೆಯಾಗುತ್ತಿದೆ. ಕೋವಿಡ್ ಸಾಂಕ್ರಾಮಿಕದ ಸಂಕಷ್ಟ ಎದುರಿಸಿದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಬೆಲೆ ಏರಿಕೆಯ ಕೊಡುಗೆ ಇದು. ಜನಸಾಮಾನ್ಯರ ಸುಲಿಗೆಯ ಬಗ್ಗೆ ಬಿಜೆಪಿ ನಾಯಕರು ಏಕೆ ಮಾತಾಡುತ್ತಿಲ್ಲ? ಮತ ಕೇಳಲು ಹೋದಾಗ ಜನರಲ್ಲಿ ಬೆಲೆ ಏರಿಕೆಯ ಸಾಧನೆಯನ್ನು ಹೇಳಿಕೊಳ್ಳುವಿರಾ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ದೇಶದ ಜನರು ಈಗಾಗಲೇ ಹೈರಾಣಾಗಿದ್ದು, ಔಷಧ ಬೆಲೆ ಹೆಚ್ಚಿಸಿ ಮತ್ತಷ್ಟು ಆಘಾತ ನೀಡುತ್ತಿದೆ. ಈ ಮೂಲಕ ವಿಕೃತ ಜನದ್ರೋಹಿ ಮನಸ್ಥಿತಿಯನ್ನು ಕೇಂದ್ರ ಸರ್ಕಾರ ತೋರುತ್ತಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

ಈ ಬಗ್ಗೆ ಗುರುವಾರ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ”ಆಕಾಶದೆತ್ತರಕ್ಕೆ ಏರಿರುವ ಅಗತ್ಯ ವಸ್ತುಗಳ ಬೆಲೆಯ ಮಧ್ಯೆ ಜನತೆಗೆ ಮತ್ತೊಂದು ಆಘಾತ ಕೊಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಸಾಮಾನ್ಯ ಬಳಕೆಯ ಔಷಧಿಗಳ ಬೆಲೆಯನ್ನು 12%ಕ್ಕೂ ಅಧಿಕವಾಗಿ ಹೆಚ್ಚಿಸಲು ಔಷಧ ಕಂಪನಿಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೈರಾಣಾಗಿರುವ ಜನತೆಯ ಮೇಲೆ ಮತ್ತೊಂದು ಹೊರೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

”ನೋವು ನಿವಾರಕ, ಆ್ಯಂಟಿ ಬಯಾಟಿಕ್, ಉರಿಯೂತ ನಿವಾರಕ ಔಷಧಿ ಸೇರಿದಂತೆ ಜನಸಾಮಾನ್ಯರು ಹೆಚ್ಚು ಬಳಸುವ 800ಕ್ಕೂ ಹೆಚ್ಚು ಔಷಧಿಗಳ ಬೆಲೆ ಏಪ್ರಿಲ್ ತಿಂಗಳಿಂದ ಏರಿಕೆಯಾಗಲಿದೆ. ಕಳೆದ ವರ್ಷವೂ‌ 10% ಕ್ಕಿಂತ ಹೆಚ್ಚು ಏರಿಸಲಾಗಿತ್ತು. ಮೊಟ್ಟಮೊದಲ ಬಾರಿ ಈ ಪ್ರಮಾಣದಲ್ಲಿ ಸಾಮಾನ್ಯ ಔಷಧಿಗಳ ಬೆಲೆ ಏರಿಕೆ ಮಾಡಲಾಗುತ್ತಿದೆ” ಎಂದು ಹೇಳಿದೆ.

”ಯಾರೂ ಕೂಡ ಬದುಕಲು ಬಿಡಬಾರದು ಎಂಬ ದುಷ್ಟ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಂಗಿದೆ. ಬಳಕೆಯ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಜನತೆಯ ಜೇಬು ಖಾಲಿಯಾಗಿ, ಬಡವರು ಇನ್ನಷ್ಟು ಬಡವರಾಗಿ, ಹಸಿವಿಗೆ ದೂಡಲ್ಪಡುತ್ತಿದ್ದಾರೆ. ಇಷ್ಟು ವಿಕೃತ ಜನದ್ರೋಹಿ ಮನಸ್ಥಿತಿ ದೇಶದ ಇತಿಹಾಸದಲ್ಲೇ ಯಾವ ಸರ್ಕಾರಕ್ಕೂ ಇರಲಿಲ್ಲ!” ಎಂದು ಕಿಡಿಕಾರಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...