Homeಕರ್ನಾಟಕಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

- Advertisement -
- Advertisement -

ಏಪ್ರಿಲ್‌ 1 ರಿಂದ ಔಷಧಗಳ ಬೆಲೆಯನ್ನು ಶೇ.12.12ರಷ್ಟು ಹೆಚ್ಚಿಸಲು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಅನುಮೋದನೆ ನೀಡಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್‌ ವಿರೋಧ ವ್ಯಕ್ತಪಡಿಸಿ ಟ್ವೀಟ್‌ ಮಾಡಿವೆ.

ಯಾವ ಯಾವ ಔಷಧಗಳ ಬೆಲೆ ಏರಿಕೆಯಾಗಲಿದೆ?

ಪ್ಯಾರಸಿಟಮಲ್ ಸೇರಿದಂತೆ 800ಕ್ಕೂ ಹೆಚ್ಚು ಅತ್ಯಗತ್ಯ ಔಷಧಗಳ ಬೆಲೆ ಏರಿಕೆಯಾಗಲಿದೆ. ಪ್ರಮುಖವಾಗಿ ಅಲರ್ಜಿ, ಸೋಂಕು, ಜ್ವರ, ಚರ್ಮ ರೋಗ, ಹೃದ್ರೋಗ, ರಕ್ತಹೀನತೆ, ಅಧಿಕ ರಕ್ತದೊತ್ತಡವನ್ನು ಗುಣಪಡಿಸಲು ಬಳಸುವ ಔಷಧಿಗಳ ಬೆಲೆಗಳು ಹೆಚ್ಚಾಗಲಿದೆ. ಬೆಲೆ ಏರಿಕೆಯಾಗುವ ಔಷಧಗಳ ಪಟ್ಟಿಯಲ್ಲಿ ಅಜಿಥ್ರೊಮೈಸಿನ್, ಸಿಪ್ರೊಫ್ಲೋಕ್ಸಾಸಿನ್ ಹೈಡ್ರೋಕ್ಲೋರೈಡ್, ಮೆಟ್ರೋನಿಡಜೋಲ್, ಪ್ಯಾರೆಸಿಟಮಾಲ್, ಫೆನೋಬಾರ್ಬಿಟೋನ್ ಮತ್ತು ಫೆನಿಟೋಯಿನ್ ಸೋಡಿಯಂನಂತಹ ಔಷಧಗಳ ಬೆಲೆ ಹೆಚ್ಚಳವಾಗಲಿ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದ್ದು, ”ಅಗತ್ಯ ಜೀವರಕ್ಷಕ ಔಷಧಗಳ ಬೆಲೆ 12% ಏರಿಕೆಯಾಗುತ್ತಿದೆ. ಕೋವಿಡ್ ಸಾಂಕ್ರಾಮಿಕದ ಸಂಕಷ್ಟ ಎದುರಿಸಿದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಬೆಲೆ ಏರಿಕೆಯ ಕೊಡುಗೆ ಇದು. ಜನಸಾಮಾನ್ಯರ ಸುಲಿಗೆಯ ಬಗ್ಗೆ ಬಿಜೆಪಿ ನಾಯಕರು ಏಕೆ ಮಾತಾಡುತ್ತಿಲ್ಲ? ಮತ ಕೇಳಲು ಹೋದಾಗ ಜನರಲ್ಲಿ ಬೆಲೆ ಏರಿಕೆಯ ಸಾಧನೆಯನ್ನು ಹೇಳಿಕೊಳ್ಳುವಿರಾ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ದೇಶದ ಜನರು ಈಗಾಗಲೇ ಹೈರಾಣಾಗಿದ್ದು, ಔಷಧ ಬೆಲೆ ಹೆಚ್ಚಿಸಿ ಮತ್ತಷ್ಟು ಆಘಾತ ನೀಡುತ್ತಿದೆ. ಈ ಮೂಲಕ ವಿಕೃತ ಜನದ್ರೋಹಿ ಮನಸ್ಥಿತಿಯನ್ನು ಕೇಂದ್ರ ಸರ್ಕಾರ ತೋರುತ್ತಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

ಈ ಬಗ್ಗೆ ಗುರುವಾರ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ”ಆಕಾಶದೆತ್ತರಕ್ಕೆ ಏರಿರುವ ಅಗತ್ಯ ವಸ್ತುಗಳ ಬೆಲೆಯ ಮಧ್ಯೆ ಜನತೆಗೆ ಮತ್ತೊಂದು ಆಘಾತ ಕೊಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಸಾಮಾನ್ಯ ಬಳಕೆಯ ಔಷಧಿಗಳ ಬೆಲೆಯನ್ನು 12%ಕ್ಕೂ ಅಧಿಕವಾಗಿ ಹೆಚ್ಚಿಸಲು ಔಷಧ ಕಂಪನಿಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೈರಾಣಾಗಿರುವ ಜನತೆಯ ಮೇಲೆ ಮತ್ತೊಂದು ಹೊರೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

”ನೋವು ನಿವಾರಕ, ಆ್ಯಂಟಿ ಬಯಾಟಿಕ್, ಉರಿಯೂತ ನಿವಾರಕ ಔಷಧಿ ಸೇರಿದಂತೆ ಜನಸಾಮಾನ್ಯರು ಹೆಚ್ಚು ಬಳಸುವ 800ಕ್ಕೂ ಹೆಚ್ಚು ಔಷಧಿಗಳ ಬೆಲೆ ಏಪ್ರಿಲ್ ತಿಂಗಳಿಂದ ಏರಿಕೆಯಾಗಲಿದೆ. ಕಳೆದ ವರ್ಷವೂ‌ 10% ಕ್ಕಿಂತ ಹೆಚ್ಚು ಏರಿಸಲಾಗಿತ್ತು. ಮೊಟ್ಟಮೊದಲ ಬಾರಿ ಈ ಪ್ರಮಾಣದಲ್ಲಿ ಸಾಮಾನ್ಯ ಔಷಧಿಗಳ ಬೆಲೆ ಏರಿಕೆ ಮಾಡಲಾಗುತ್ತಿದೆ” ಎಂದು ಹೇಳಿದೆ.

”ಯಾರೂ ಕೂಡ ಬದುಕಲು ಬಿಡಬಾರದು ಎಂಬ ದುಷ್ಟ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಂಗಿದೆ. ಬಳಕೆಯ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಜನತೆಯ ಜೇಬು ಖಾಲಿಯಾಗಿ, ಬಡವರು ಇನ್ನಷ್ಟು ಬಡವರಾಗಿ, ಹಸಿವಿಗೆ ದೂಡಲ್ಪಡುತ್ತಿದ್ದಾರೆ. ಇಷ್ಟು ವಿಕೃತ ಜನದ್ರೋಹಿ ಮನಸ್ಥಿತಿ ದೇಶದ ಇತಿಹಾಸದಲ್ಲೇ ಯಾವ ಸರ್ಕಾರಕ್ಕೂ ಇರಲಿಲ್ಲ!” ಎಂದು ಕಿಡಿಕಾರಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...