Homeಎಕಾನಮಿಕೊರೊನಾ ಲಾಕ್‌ಡೌನ್‌ ಕಾರಣಕ್ಕೆ 12.2 ಕೋಟಿ ಉದ್ಯೋಗ ನಷ್ಟ, 4.9 ಕೋಟಿ ಜನ ಬಡತನದಲ್ಲಿ...

ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ 12.2 ಕೋಟಿ ಉದ್ಯೋಗ ನಷ್ಟ, 4.9 ಕೋಟಿ ಜನ ಬಡತನದಲ್ಲಿ…

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಆರ್ಥಿಕ ವಿನಾಶದ ನೇರ ಪರಿಣಾಮವಾಗಿ ವಿಶ್ವದಾದ್ಯಂತ ಕನಿಷ್ಠ 4.9 ಕೋಟಿ ಜನರು ತೀವ್ರ ಬಡತನದಲ್ಲಿ ಮುಳುಗುವ ನಿರೀಕ್ಷೆಯಿದೆ. ಕೇವಲ ಭಾರತವೊಂದರಲ್ಲಿಯೇ 12.2 ಕೋಟಿ ಉದ್ಯೋಗ ನಷ್ಟವಾಗಿದೆ ಎಂದು ಸಿಎಂಐಇ, ವಿಶ್ವಬ್ಯಾಂಕ್‌ ಸೇರಿದಂತೆ ಹಲವು ಚಿಂತಕರು ಅಭಿಪ್ರಾಯಪಟ್ಟಿದ್ದಾರೆ.

ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಅಂದಾಜಿನ ಪ್ರಕಾರ ‌ಏಪ್ರಿಲ್‌ ತಿಂಗಳಿನಲ್ಲಿ 12.2 ಕೋಟಿ ಭಾರತೀಯರನ್ನು ಕೆಲಸದಿಂದ ಹೊರಹಾಕಲಾಯಿತು. ಅಲ್ಲದೆ ಲಾಕ್‌ಡೌನ್‌ನಿಂದ ದೈನಂದಿನ ಕೂಲಿ ಕಾರ್ಮಿಕರು ಮತ್ತು ಸಣ್ಣ ಉದ್ಯಮಗಳಲ್ಲಿ ಕೆಲಸ ಮಾಡುವವರು ಹೆಚ್ಚು ಹಾನಿಗೊಳಗಾಗಿದ್ದಾರೆ. ಇವರಲ್ಲಿ ವ್ಯಾಪಾರಿಗಳು, ರಸ್ತೆಬದಿಯ ಮಾರಾಟಗಾರರು, ನಿರ್ಮಾಣ ಉದ್ಯಮದಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ರಿಕ್ಷಾಗಳನ್ನು ತಳ್ಳುವ ಮೂಲಕ ಜೀವನ ಸಾಗಿಸುವ ಅನೇಕರು ಸೇರಿದ್ದಾರೆ.

ಸರ್ಕಾರವು ರೈತರಿಗೆ ಅಗ್ಗದ ಸಾಲ, ಬಡವರಿಗೆ ನೇರವಾಗಿ ಹಣ ವರ್ಗಾವಣೆ ಮತ್ತು ಆಹಾರ ಭದ್ರತಾ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಭರವಸೆ ನೀಡಿದೆ. ಜನರ ಕೈಲಿ ಹಣ ಚಲಾವಣೆಯಾಗದೇ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಿಲ್ಲ. ಅದು ಮಾತ್ರವೇ ಬೇಡಿಕೆ, ಉದ್ಯೋಗ ಮತ್ತು ಉತ್ಪಾದನೆಯನ್ನು ಹೆಚ್ಚಿಸಬಹುದೆಂದು ಚಿಂತಕರು ಅಭಿಪ್ರಾಯಪಟ್ಟಿದ್ದಾರೆ.

ಏಷ್ಯಾದ ಕೊರೊನಾ ಹಾಟ್‌ಸ್ಪಾಟ್‌ ಆಗಿ ಬದಲಾಗಿರುವ ಭಾರತವೂ ಒಂದೂವರೆ ಲಕ್ಷ ಪ್ರಕರಣಗಳನ್ನು ದಾಖಲಿಸಿದೆ. ಇಲ್ಲಿನ ಆರ್ಥಿಕ ಪುನಶ್ಚೇತನಕ್ಕಾಗಿ ಪ್ರಧಾನಿ ಮೋದಿಯವರು ಜಿಡಿಯಪಿ 10% ಪ್ಯಾಕೇಜ್‌ ಘೋಷಿಸಿದರೂ ಸಹ ಅದರಲ್ಲಿ ಕೇವಲ ಒಂದು ಭಾಗ ಮಾತ್ರ ನೇರ ಆರ್ಥಿಕ ಪ್ರಚೋದನೆಯಾಗಿದ್ದು ಇದರಿಂದ ದೊಡ್ಡ ಮಟ್ಟದ ನಿರೀಕ್ಷೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....