Homeಮುಖಪುಟ12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

- Advertisement -
- Advertisement -

ರಾಜಕೀಯ ವಿವಾದಕ್ಕೆ ಸಿಲುಕಿರುವ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಯ ಬಹುಕೋಟಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳು ಹೊರಬೀಳುತ್ತಲೇ ಇವೆ. “ಪೊಲೀಸ್ ಅಧಿಕಾರಿಗಳು ಮತ್ತು ಪ್ರಭಾವಿ ರಾಜಕಾರಣಿಗಳಿಂದ ಡ್ರಗ್ ಪ್ರಕರಣದಲ್ಲಿ ಭ್ರಷ್ಟಾಚಾರದ ವಿರುದ್ಧದ ದೂರನ್ನು”  ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮತ್ತು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಎಆರ್ ಅಶೋಕ್ ಕುಮಾರ್ ಅಡಿಗ ಆರೋಪಿಸಿದ್ದಾರೆ.

ದೂರಿನ ಸಂಪೂರ್ಣ ವಿವರವನ್ನು ಪ್ರಧಾನಿ ಕಚೇರಿ, ಕೇಂದ್ರ ಗೃಹ ಸಚಿವರು ಮತ್ತು ಕೇಂದ್ರ ಗೃಹ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಏಪ್ರಿಲ್ 22, 2021ರಂದು ಅವರು ನೀಡಿರುವ ದೂರಿನ ಪ್ರತಿಯನ್ನು ಸಂದೀಪ್ ಪಾಟೀಲ್ ಮತ್ತು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್, ಸೆಂಟ್ರಲ್ ಕ್ರೈಂ ಬ್ರಾಂಚ್, ಬಿಎಸ್ ಅಂಗಡಿ ಅವರಿಗೆ ಕಳುಹಿಸಲಾಗಿದೆ ಎಂದು ಹೇಳಿಕೊಳ್ಳುವ ವಾಟ್ಸಾಪ್ ಚಾಟ್‌ಗಳ ಚಿತ್ರಗಳನ್ನು ಅಶೋಕ್‌ ಹಂಚಿಕೊಂಡಿದ್ದಾರೆ. ಹಗರಣದ ಬಗ್ಗೆ ಅವರು ಏಪ್ರಿಲ್‌ನಲ್ಲಿಯೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಶ್ರೀಕಿಯಿಂದ ನಗದೀಕರಿಸಲಾದ ಸುಮಾರು 12,900 ಬಿಟ್‌ಕಾಯಿನ್‌ಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಅಶೋಕ್ ಹೇಳಿದ್ದಾರೆ. “ಡಿಸೆಂಬರ್ 2020 ರಲ್ಲಿ ಡ್ರಗ್ ಪ್ರಕರಣದಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಜನವರಿ 2021 ರಲ್ಲಿ, ಕೆಲವು ಉನ್ನತ ಮಟ್ಟದ CCB ಅಧಿಕಾರಿಗಳು ಶ್ರೀಕಿಯಿಂದ 9,600 ಬಿಟ್‌ಕಾಯಿನ್‌ಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ನನಗೆ ಬಂದಿತು. ಈ ಮಾಹಿತಿಯನ್ನು ನಾನು ಜನವರಿ 3 ರಂದು ಐಪಿಎಸ್ ಅಧಿಕಾರಿಯೊಂದಿಗೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದೇನೆ. ಆದರೆ ಏನೂ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಏಪ್ರಿಲ್ 20 ರಂದು ಕಮಲ್ ಪಂತ್ ಅವರಿಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದೇನೆ. ಈ ಹಗರಣವನ್ನು ವಿವರಿಸಲು ನಾನು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂದೂ ಕೂಡ ತಿಳಿಸಿದ್ದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.” ತನ್ನ ದೂರಿನಲ್ಲಿ, “ಶ್ರೀಕಿ ಬಿಟ್‌ಕಾಯಿನ್‌ನ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದು, ಸಾವಿರಾರು ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ತನ್ನ ವ್ಯಾಲೆಟ್‌ಗೆ ವರ್ಗಾಯಿಸಿದ್ದಾನೆ ಎಂದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಈತನ ವಿರುದ್ಧ ನೆದರ್ ಲ್ಯಾಂಡ್ ನ ಮ್‌ಸ್ಟರ್‌ಡ್ಯಾಮ್‌ನಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಆಮ್‌ಸ್ಟರ್‌ಡ್ಯಾಮ್‌ನ ರಾಷ್ಟ್ರೀಯ ಪೊಲೀಸ್ ಕಾರ್ಪ್ಸ್ ತನಿಖೆ ನಡೆಸುತ್ತಿದೆ. ಶ್ರೀಕಿ ವರ್ಗಾಯಿಸಿದ ಬಿಟ್‌ಕಾಯಿನ್‌ಗಳನ್ನು ಟ್ರ್ಯಾಕ್ ಮಾಡುತ್ತಿದೆ. ನಾನು ಈ ಎಲ್ಲಾ ದಾಖಲೆಗಳ ಪ್ರತಿಯನ್ನು ಸಂಗ್ರಹಿಸಿದ್ದೇನೆ ಮತ್ತು ಎಫ್‌ಬಿಐ ಅನ್ನು ಸಂಪರ್ಕಿಸಿದ್ದೇನೆ. ಬೆಂಗಳೂರಿನ ಇಂಟರ್‌ಪೋಲ್‌ಗೆ ದಾಖಲೆಗಳನ್ನು ನೀಡುವಂತೆ ಎಫ್‌ಬಿಐ ಮನವಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಇಂಟರ್‌ಪೋಲ್‌ನ ಸಂಪರ್ಕ ಅಧಿಕಾರಿ ಉಮೇಶ್ ಕುಮಾರ್, ಎಡಿಜಿಪಿ, ಸಿಐಡಿ ಸೇರಿದಂತೆ ಭಾರತೀಯ ಏಜೆನ್ಸಿಗಳ ಮೇಲೆ ನಂಬಿಕೆಯಿಲ್ಲದ ಕಾರಣ, ನಾನು ಫ್ರಾನ್ಸ್‌ನಲ್ಲಿರುವ ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದ್ದಾರೆ.

ಫೈಲ್ ಸುಮಾರು 1,017 ಸ್ಕ್ರೀನ್‌ಶಾಟ್‌ಗಳನ್ನು ಒಳಗೊಂಡಿದೆ. ಪ್ರತಿ ಬಾರಿ ಬಿಟ್‌ಕಾಯಿನ್ ಅನ್ನು ನಗದೀಕರಿಸಿದಾಗ ಎಫ್‌ಬಿಐ ಸಂದೇಶವನ್ನು ಸ್ವೀಕರಿಸಿದೆ. ಶ್ರೀಕಿ ಪೊಲೀಸರ ವಶದಲ್ಲಿದ್ದಾಗಲೇ 12,900 ಬಿಟ್‌ಕಾಯಿನ್‌ಗಳನ್ನು ನಗದೀಕರಿಸಲಾಗಿದೆ ಎಂದು ತಿಳಿದಿದ್ದರೂ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಲು ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ಈ “ಡೀಲ್” ನಲ್ಲಿ 17 ಜನರು ಭಾಗಿಯಾಗಿರುವ ಬಗ್ಗೆ ತಮ್ಮ ಬಳಿ ದಾಖಲೆಗಳಿವೆ ಎಂದು ಅಶೋಕ್‌ ಹೇಳಿದ್ದಾರೆ. “ರಾಜ್ಯದ ಪೊಲೀಸ್‌ ಇಲಾಖೆ ಅಥವಾ ಇತರರು ನನ್ನನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಅಥವಾ ನನಗೆ ಹಾನಿ ಮಾಡಲು ಪ್ರಯತ್ನಿಸಿದರೆ” ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ದಾಖಲೆಗಳನ್ನು ಕಳುಹಿಸಲು ತಾವು ಯೋಜಿಸುತ್ತಿರುವುದಾಗಿ ಅಶೋಕ್‌ ಅವರು ಪೊಲೀಸ್ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಏಪ್ರಿಲ್ 26 ರಂದು ಸಂದೀಪ್ ಪಾಟೀಲ್ ಅವರ ಕಚೇರಿಗೆ ಲಿಖಿತ ದೂರನ್ನು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 27 ರಂದು ತಮ್ಮನ್ನು ಸಿಸಿಬಿ ಕಚೇರಿಗೆ ಕರೆಸಿ ಡಿಸಿಪಿ  ಎಲ್ಲಾ ವಿವರಗಳನ್ನು ತೆಗೆದುಕೊಂಡು, ತಮ್ಮ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಅಶೋಕ್ ಹೇಳಿದ್ದಾರೆ.

ಅಶೋಕ್‌ ಅವರು ತಮ್ಮ ಬಳಿ ಹೆಚ್ಚಿನ ದಾಖಲೆಗಳಿವೆ, ಆದರೆ ಅವುಗಳನ್ನು ಈಗ ಬಿಡುಗಡೆ ಮಾಡುವುದಿಲ್ಲ ಎಂದೂ ಹೇಳಿದ್ದಾರೆ.

ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ಹಗರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳ ಬಗ್ಗೆ ತಮ್ಮ ಬಳಿ ಮಾಹಿತಿ ಇರುವುದರಿಂದ ಮಾಧ್ಯಮಗಳನ್ನು ಸಂಪರ್ಕಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ದೂರನ್ನು ನಿರ್ಲಕ್ಷಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದಷ್ಟು ಬೇಗ ದಾಖಲೆಗಳನ್ನು ಬಿಡುಗಡೆ ಮಾಡಿ ಅಶೋಕ್ ರವರೇ ,ನಿಮ್ಮ ದಾಖಲೆಗಳ ಬಿಡುಗಡೆ ಮಾಧ್ಯಮ ಗಳಿಗಿಂತ ,ನ್ಯಾಯಾಧೀಶರಿಗೆ ನೀಡಿ ,ನಿಮಗೆ ರಾಜಕೀಯ ಒತ್ತಡ, ಅಧಿಕಾರಿಗಳ ಭಯ ಭೀತಿ ಇದ್ದರೆ ರಾಜ್ಯಪಾಲ,ರಾಷ್ಟ್ರ ಪತಿಗಳಿಗೆ ನೀಡಿ

  2. ಹೌದು , ರಾಜುರವರು ಹೇಳಿದ್ದು ಸರಿ, ಅದೇ ರೀತಿ ಮಾಡಿದರೆ ಅನ್ಯಾಯಕ್ಕೆ ಕಾನೂನಾತ್ಮಕವಾಗಿ ತಕ್ಕುದಾದ ಶಿಕ್ಷೆ ದೊರೆಯಬಹುದು 👍👍👍👍

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...