Homeಮುಖಪುಟ12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

- Advertisement -
- Advertisement -

ರಾಜಕೀಯ ವಿವಾದಕ್ಕೆ ಸಿಲುಕಿರುವ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಯ ಬಹುಕೋಟಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳು ಹೊರಬೀಳುತ್ತಲೇ ಇವೆ. “ಪೊಲೀಸ್ ಅಧಿಕಾರಿಗಳು ಮತ್ತು ಪ್ರಭಾವಿ ರಾಜಕಾರಣಿಗಳಿಂದ ಡ್ರಗ್ ಪ್ರಕರಣದಲ್ಲಿ ಭ್ರಷ್ಟಾಚಾರದ ವಿರುದ್ಧದ ದೂರನ್ನು”  ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮತ್ತು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಎಆರ್ ಅಶೋಕ್ ಕುಮಾರ್ ಅಡಿಗ ಆರೋಪಿಸಿದ್ದಾರೆ.

ದೂರಿನ ಸಂಪೂರ್ಣ ವಿವರವನ್ನು ಪ್ರಧಾನಿ ಕಚೇರಿ, ಕೇಂದ್ರ ಗೃಹ ಸಚಿವರು ಮತ್ತು ಕೇಂದ್ರ ಗೃಹ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಏಪ್ರಿಲ್ 22, 2021ರಂದು ಅವರು ನೀಡಿರುವ ದೂರಿನ ಪ್ರತಿಯನ್ನು ಸಂದೀಪ್ ಪಾಟೀಲ್ ಮತ್ತು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್, ಸೆಂಟ್ರಲ್ ಕ್ರೈಂ ಬ್ರಾಂಚ್, ಬಿಎಸ್ ಅಂಗಡಿ ಅವರಿಗೆ ಕಳುಹಿಸಲಾಗಿದೆ ಎಂದು ಹೇಳಿಕೊಳ್ಳುವ ವಾಟ್ಸಾಪ್ ಚಾಟ್‌ಗಳ ಚಿತ್ರಗಳನ್ನು ಅಶೋಕ್‌ ಹಂಚಿಕೊಂಡಿದ್ದಾರೆ. ಹಗರಣದ ಬಗ್ಗೆ ಅವರು ಏಪ್ರಿಲ್‌ನಲ್ಲಿಯೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಶ್ರೀಕಿಯಿಂದ ನಗದೀಕರಿಸಲಾದ ಸುಮಾರು 12,900 ಬಿಟ್‌ಕಾಯಿನ್‌ಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಅಶೋಕ್ ಹೇಳಿದ್ದಾರೆ. “ಡಿಸೆಂಬರ್ 2020 ರಲ್ಲಿ ಡ್ರಗ್ ಪ್ರಕರಣದಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಜನವರಿ 2021 ರಲ್ಲಿ, ಕೆಲವು ಉನ್ನತ ಮಟ್ಟದ CCB ಅಧಿಕಾರಿಗಳು ಶ್ರೀಕಿಯಿಂದ 9,600 ಬಿಟ್‌ಕಾಯಿನ್‌ಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ನನಗೆ ಬಂದಿತು. ಈ ಮಾಹಿತಿಯನ್ನು ನಾನು ಜನವರಿ 3 ರಂದು ಐಪಿಎಸ್ ಅಧಿಕಾರಿಯೊಂದಿಗೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದೇನೆ. ಆದರೆ ಏನೂ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಏಪ್ರಿಲ್ 20 ರಂದು ಕಮಲ್ ಪಂತ್ ಅವರಿಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದೇನೆ. ಈ ಹಗರಣವನ್ನು ವಿವರಿಸಲು ನಾನು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂದೂ ಕೂಡ ತಿಳಿಸಿದ್ದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.” ತನ್ನ ದೂರಿನಲ್ಲಿ, “ಶ್ರೀಕಿ ಬಿಟ್‌ಕಾಯಿನ್‌ನ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದು, ಸಾವಿರಾರು ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ತನ್ನ ವ್ಯಾಲೆಟ್‌ಗೆ ವರ್ಗಾಯಿಸಿದ್ದಾನೆ ಎಂದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಈತನ ವಿರುದ್ಧ ನೆದರ್ ಲ್ಯಾಂಡ್ ನ ಮ್‌ಸ್ಟರ್‌ಡ್ಯಾಮ್‌ನಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಆಮ್‌ಸ್ಟರ್‌ಡ್ಯಾಮ್‌ನ ರಾಷ್ಟ್ರೀಯ ಪೊಲೀಸ್ ಕಾರ್ಪ್ಸ್ ತನಿಖೆ ನಡೆಸುತ್ತಿದೆ. ಶ್ರೀಕಿ ವರ್ಗಾಯಿಸಿದ ಬಿಟ್‌ಕಾಯಿನ್‌ಗಳನ್ನು ಟ್ರ್ಯಾಕ್ ಮಾಡುತ್ತಿದೆ. ನಾನು ಈ ಎಲ್ಲಾ ದಾಖಲೆಗಳ ಪ್ರತಿಯನ್ನು ಸಂಗ್ರಹಿಸಿದ್ದೇನೆ ಮತ್ತು ಎಫ್‌ಬಿಐ ಅನ್ನು ಸಂಪರ್ಕಿಸಿದ್ದೇನೆ. ಬೆಂಗಳೂರಿನ ಇಂಟರ್‌ಪೋಲ್‌ಗೆ ದಾಖಲೆಗಳನ್ನು ನೀಡುವಂತೆ ಎಫ್‌ಬಿಐ ಮನವಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಇಂಟರ್‌ಪೋಲ್‌ನ ಸಂಪರ್ಕ ಅಧಿಕಾರಿ ಉಮೇಶ್ ಕುಮಾರ್, ಎಡಿಜಿಪಿ, ಸಿಐಡಿ ಸೇರಿದಂತೆ ಭಾರತೀಯ ಏಜೆನ್ಸಿಗಳ ಮೇಲೆ ನಂಬಿಕೆಯಿಲ್ಲದ ಕಾರಣ, ನಾನು ಫ್ರಾನ್ಸ್‌ನಲ್ಲಿರುವ ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದ್ದಾರೆ.

ಫೈಲ್ ಸುಮಾರು 1,017 ಸ್ಕ್ರೀನ್‌ಶಾಟ್‌ಗಳನ್ನು ಒಳಗೊಂಡಿದೆ. ಪ್ರತಿ ಬಾರಿ ಬಿಟ್‌ಕಾಯಿನ್ ಅನ್ನು ನಗದೀಕರಿಸಿದಾಗ ಎಫ್‌ಬಿಐ ಸಂದೇಶವನ್ನು ಸ್ವೀಕರಿಸಿದೆ. ಶ್ರೀಕಿ ಪೊಲೀಸರ ವಶದಲ್ಲಿದ್ದಾಗಲೇ 12,900 ಬಿಟ್‌ಕಾಯಿನ್‌ಗಳನ್ನು ನಗದೀಕರಿಸಲಾಗಿದೆ ಎಂದು ತಿಳಿದಿದ್ದರೂ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಲು ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ಈ “ಡೀಲ್” ನಲ್ಲಿ 17 ಜನರು ಭಾಗಿಯಾಗಿರುವ ಬಗ್ಗೆ ತಮ್ಮ ಬಳಿ ದಾಖಲೆಗಳಿವೆ ಎಂದು ಅಶೋಕ್‌ ಹೇಳಿದ್ದಾರೆ. “ರಾಜ್ಯದ ಪೊಲೀಸ್‌ ಇಲಾಖೆ ಅಥವಾ ಇತರರು ನನ್ನನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಅಥವಾ ನನಗೆ ಹಾನಿ ಮಾಡಲು ಪ್ರಯತ್ನಿಸಿದರೆ” ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ದಾಖಲೆಗಳನ್ನು ಕಳುಹಿಸಲು ತಾವು ಯೋಜಿಸುತ್ತಿರುವುದಾಗಿ ಅಶೋಕ್‌ ಅವರು ಪೊಲೀಸ್ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಏಪ್ರಿಲ್ 26 ರಂದು ಸಂದೀಪ್ ಪಾಟೀಲ್ ಅವರ ಕಚೇರಿಗೆ ಲಿಖಿತ ದೂರನ್ನು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 27 ರಂದು ತಮ್ಮನ್ನು ಸಿಸಿಬಿ ಕಚೇರಿಗೆ ಕರೆಸಿ ಡಿಸಿಪಿ  ಎಲ್ಲಾ ವಿವರಗಳನ್ನು ತೆಗೆದುಕೊಂಡು, ತಮ್ಮ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಅಶೋಕ್ ಹೇಳಿದ್ದಾರೆ.

ಅಶೋಕ್‌ ಅವರು ತಮ್ಮ ಬಳಿ ಹೆಚ್ಚಿನ ದಾಖಲೆಗಳಿವೆ, ಆದರೆ ಅವುಗಳನ್ನು ಈಗ ಬಿಡುಗಡೆ ಮಾಡುವುದಿಲ್ಲ ಎಂದೂ ಹೇಳಿದ್ದಾರೆ.

ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ಹಗರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳ ಬಗ್ಗೆ ತಮ್ಮ ಬಳಿ ಮಾಹಿತಿ ಇರುವುದರಿಂದ ಮಾಧ್ಯಮಗಳನ್ನು ಸಂಪರ್ಕಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ದೂರನ್ನು ನಿರ್ಲಕ್ಷಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದಷ್ಟು ಬೇಗ ದಾಖಲೆಗಳನ್ನು ಬಿಡುಗಡೆ ಮಾಡಿ ಅಶೋಕ್ ರವರೇ ,ನಿಮ್ಮ ದಾಖಲೆಗಳ ಬಿಡುಗಡೆ ಮಾಧ್ಯಮ ಗಳಿಗಿಂತ ,ನ್ಯಾಯಾಧೀಶರಿಗೆ ನೀಡಿ ,ನಿಮಗೆ ರಾಜಕೀಯ ಒತ್ತಡ, ಅಧಿಕಾರಿಗಳ ಭಯ ಭೀತಿ ಇದ್ದರೆ ರಾಜ್ಯಪಾಲ,ರಾಷ್ಟ್ರ ಪತಿಗಳಿಗೆ ನೀಡಿ

  2. ಹೌದು , ರಾಜುರವರು ಹೇಳಿದ್ದು ಸರಿ, ಅದೇ ರೀತಿ ಮಾಡಿದರೆ ಅನ್ಯಾಯಕ್ಕೆ ಕಾನೂನಾತ್ಮಕವಾಗಿ ತಕ್ಕುದಾದ ಶಿಕ್ಷೆ ದೊರೆಯಬಹುದು 👍👍👍👍

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...