Homeಮುಖಪುಟ12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

- Advertisement -
- Advertisement -

ರಾಜಕೀಯ ವಿವಾದಕ್ಕೆ ಸಿಲುಕಿರುವ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಯ ಬಹುಕೋಟಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳು ಹೊರಬೀಳುತ್ತಲೇ ಇವೆ. “ಪೊಲೀಸ್ ಅಧಿಕಾರಿಗಳು ಮತ್ತು ಪ್ರಭಾವಿ ರಾಜಕಾರಣಿಗಳಿಂದ ಡ್ರಗ್ ಪ್ರಕರಣದಲ್ಲಿ ಭ್ರಷ್ಟಾಚಾರದ ವಿರುದ್ಧದ ದೂರನ್ನು”  ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮತ್ತು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಎಆರ್ ಅಶೋಕ್ ಕುಮಾರ್ ಅಡಿಗ ಆರೋಪಿಸಿದ್ದಾರೆ.

ದೂರಿನ ಸಂಪೂರ್ಣ ವಿವರವನ್ನು ಪ್ರಧಾನಿ ಕಚೇರಿ, ಕೇಂದ್ರ ಗೃಹ ಸಚಿವರು ಮತ್ತು ಕೇಂದ್ರ ಗೃಹ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಏಪ್ರಿಲ್ 22, 2021ರಂದು ಅವರು ನೀಡಿರುವ ದೂರಿನ ಪ್ರತಿಯನ್ನು ಸಂದೀಪ್ ಪಾಟೀಲ್ ಮತ್ತು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್, ಸೆಂಟ್ರಲ್ ಕ್ರೈಂ ಬ್ರಾಂಚ್, ಬಿಎಸ್ ಅಂಗಡಿ ಅವರಿಗೆ ಕಳುಹಿಸಲಾಗಿದೆ ಎಂದು ಹೇಳಿಕೊಳ್ಳುವ ವಾಟ್ಸಾಪ್ ಚಾಟ್‌ಗಳ ಚಿತ್ರಗಳನ್ನು ಅಶೋಕ್‌ ಹಂಚಿಕೊಂಡಿದ್ದಾರೆ. ಹಗರಣದ ಬಗ್ಗೆ ಅವರು ಏಪ್ರಿಲ್‌ನಲ್ಲಿಯೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಶ್ರೀಕಿಯಿಂದ ನಗದೀಕರಿಸಲಾದ ಸುಮಾರು 12,900 ಬಿಟ್‌ಕಾಯಿನ್‌ಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಅಶೋಕ್ ಹೇಳಿದ್ದಾರೆ. “ಡಿಸೆಂಬರ್ 2020 ರಲ್ಲಿ ಡ್ರಗ್ ಪ್ರಕರಣದಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಜನವರಿ 2021 ರಲ್ಲಿ, ಕೆಲವು ಉನ್ನತ ಮಟ್ಟದ CCB ಅಧಿಕಾರಿಗಳು ಶ್ರೀಕಿಯಿಂದ 9,600 ಬಿಟ್‌ಕಾಯಿನ್‌ಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ನನಗೆ ಬಂದಿತು. ಈ ಮಾಹಿತಿಯನ್ನು ನಾನು ಜನವರಿ 3 ರಂದು ಐಪಿಎಸ್ ಅಧಿಕಾರಿಯೊಂದಿಗೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದೇನೆ. ಆದರೆ ಏನೂ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಏಪ್ರಿಲ್ 20 ರಂದು ಕಮಲ್ ಪಂತ್ ಅವರಿಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದೇನೆ. ಈ ಹಗರಣವನ್ನು ವಿವರಿಸಲು ನಾನು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂದೂ ಕೂಡ ತಿಳಿಸಿದ್ದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.” ತನ್ನ ದೂರಿನಲ್ಲಿ, “ಶ್ರೀಕಿ ಬಿಟ್‌ಕಾಯಿನ್‌ನ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದು, ಸಾವಿರಾರು ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ತನ್ನ ವ್ಯಾಲೆಟ್‌ಗೆ ವರ್ಗಾಯಿಸಿದ್ದಾನೆ ಎಂದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಈತನ ವಿರುದ್ಧ ನೆದರ್ ಲ್ಯಾಂಡ್ ನ ಮ್‌ಸ್ಟರ್‌ಡ್ಯಾಮ್‌ನಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಆಮ್‌ಸ್ಟರ್‌ಡ್ಯಾಮ್‌ನ ರಾಷ್ಟ್ರೀಯ ಪೊಲೀಸ್ ಕಾರ್ಪ್ಸ್ ತನಿಖೆ ನಡೆಸುತ್ತಿದೆ. ಶ್ರೀಕಿ ವರ್ಗಾಯಿಸಿದ ಬಿಟ್‌ಕಾಯಿನ್‌ಗಳನ್ನು ಟ್ರ್ಯಾಕ್ ಮಾಡುತ್ತಿದೆ. ನಾನು ಈ ಎಲ್ಲಾ ದಾಖಲೆಗಳ ಪ್ರತಿಯನ್ನು ಸಂಗ್ರಹಿಸಿದ್ದೇನೆ ಮತ್ತು ಎಫ್‌ಬಿಐ ಅನ್ನು ಸಂಪರ್ಕಿಸಿದ್ದೇನೆ. ಬೆಂಗಳೂರಿನ ಇಂಟರ್‌ಪೋಲ್‌ಗೆ ದಾಖಲೆಗಳನ್ನು ನೀಡುವಂತೆ ಎಫ್‌ಬಿಐ ಮನವಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಇಂಟರ್‌ಪೋಲ್‌ನ ಸಂಪರ್ಕ ಅಧಿಕಾರಿ ಉಮೇಶ್ ಕುಮಾರ್, ಎಡಿಜಿಪಿ, ಸಿಐಡಿ ಸೇರಿದಂತೆ ಭಾರತೀಯ ಏಜೆನ್ಸಿಗಳ ಮೇಲೆ ನಂಬಿಕೆಯಿಲ್ಲದ ಕಾರಣ, ನಾನು ಫ್ರಾನ್ಸ್‌ನಲ್ಲಿರುವ ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದ್ದಾರೆ.

ಫೈಲ್ ಸುಮಾರು 1,017 ಸ್ಕ್ರೀನ್‌ಶಾಟ್‌ಗಳನ್ನು ಒಳಗೊಂಡಿದೆ. ಪ್ರತಿ ಬಾರಿ ಬಿಟ್‌ಕಾಯಿನ್ ಅನ್ನು ನಗದೀಕರಿಸಿದಾಗ ಎಫ್‌ಬಿಐ ಸಂದೇಶವನ್ನು ಸ್ವೀಕರಿಸಿದೆ. ಶ್ರೀಕಿ ಪೊಲೀಸರ ವಶದಲ್ಲಿದ್ದಾಗಲೇ 12,900 ಬಿಟ್‌ಕಾಯಿನ್‌ಗಳನ್ನು ನಗದೀಕರಿಸಲಾಗಿದೆ ಎಂದು ತಿಳಿದಿದ್ದರೂ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಲು ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ಈ “ಡೀಲ್” ನಲ್ಲಿ 17 ಜನರು ಭಾಗಿಯಾಗಿರುವ ಬಗ್ಗೆ ತಮ್ಮ ಬಳಿ ದಾಖಲೆಗಳಿವೆ ಎಂದು ಅಶೋಕ್‌ ಹೇಳಿದ್ದಾರೆ. “ರಾಜ್ಯದ ಪೊಲೀಸ್‌ ಇಲಾಖೆ ಅಥವಾ ಇತರರು ನನ್ನನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಅಥವಾ ನನಗೆ ಹಾನಿ ಮಾಡಲು ಪ್ರಯತ್ನಿಸಿದರೆ” ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ದಾಖಲೆಗಳನ್ನು ಕಳುಹಿಸಲು ತಾವು ಯೋಜಿಸುತ್ತಿರುವುದಾಗಿ ಅಶೋಕ್‌ ಅವರು ಪೊಲೀಸ್ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಏಪ್ರಿಲ್ 26 ರಂದು ಸಂದೀಪ್ ಪಾಟೀಲ್ ಅವರ ಕಚೇರಿಗೆ ಲಿಖಿತ ದೂರನ್ನು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 27 ರಂದು ತಮ್ಮನ್ನು ಸಿಸಿಬಿ ಕಚೇರಿಗೆ ಕರೆಸಿ ಡಿಸಿಪಿ  ಎಲ್ಲಾ ವಿವರಗಳನ್ನು ತೆಗೆದುಕೊಂಡು, ತಮ್ಮ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಅಶೋಕ್ ಹೇಳಿದ್ದಾರೆ.

ಅಶೋಕ್‌ ಅವರು ತಮ್ಮ ಬಳಿ ಹೆಚ್ಚಿನ ದಾಖಲೆಗಳಿವೆ, ಆದರೆ ಅವುಗಳನ್ನು ಈಗ ಬಿಡುಗಡೆ ಮಾಡುವುದಿಲ್ಲ ಎಂದೂ ಹೇಳಿದ್ದಾರೆ.

ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ಹಗರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳ ಬಗ್ಗೆ ತಮ್ಮ ಬಳಿ ಮಾಹಿತಿ ಇರುವುದರಿಂದ ಮಾಧ್ಯಮಗಳನ್ನು ಸಂಪರ್ಕಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ದೂರನ್ನು ನಿರ್ಲಕ್ಷಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದಷ್ಟು ಬೇಗ ದಾಖಲೆಗಳನ್ನು ಬಿಡುಗಡೆ ಮಾಡಿ ಅಶೋಕ್ ರವರೇ ,ನಿಮ್ಮ ದಾಖಲೆಗಳ ಬಿಡುಗಡೆ ಮಾಧ್ಯಮ ಗಳಿಗಿಂತ ,ನ್ಯಾಯಾಧೀಶರಿಗೆ ನೀಡಿ ,ನಿಮಗೆ ರಾಜಕೀಯ ಒತ್ತಡ, ಅಧಿಕಾರಿಗಳ ಭಯ ಭೀತಿ ಇದ್ದರೆ ರಾಜ್ಯಪಾಲ,ರಾಷ್ಟ್ರ ಪತಿಗಳಿಗೆ ನೀಡಿ

  2. ಹೌದು , ರಾಜುರವರು ಹೇಳಿದ್ದು ಸರಿ, ಅದೇ ರೀತಿ ಮಾಡಿದರೆ ಅನ್ಯಾಯಕ್ಕೆ ಕಾನೂನಾತ್ಮಕವಾಗಿ ತಕ್ಕುದಾದ ಶಿಕ್ಷೆ ದೊರೆಯಬಹುದು 👍👍👍👍

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...