Homeಮುಖಪುಟ12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

- Advertisement -
- Advertisement -

ರಾಜಕೀಯ ವಿವಾದಕ್ಕೆ ಸಿಲುಕಿರುವ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಯ ಬಹುಕೋಟಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳು ಹೊರಬೀಳುತ್ತಲೇ ಇವೆ. “ಪೊಲೀಸ್ ಅಧಿಕಾರಿಗಳು ಮತ್ತು ಪ್ರಭಾವಿ ರಾಜಕಾರಣಿಗಳಿಂದ ಡ್ರಗ್ ಪ್ರಕರಣದಲ್ಲಿ ಭ್ರಷ್ಟಾಚಾರದ ವಿರುದ್ಧದ ದೂರನ್ನು”  ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮತ್ತು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಎಆರ್ ಅಶೋಕ್ ಕುಮಾರ್ ಅಡಿಗ ಆರೋಪಿಸಿದ್ದಾರೆ.

ದೂರಿನ ಸಂಪೂರ್ಣ ವಿವರವನ್ನು ಪ್ರಧಾನಿ ಕಚೇರಿ, ಕೇಂದ್ರ ಗೃಹ ಸಚಿವರು ಮತ್ತು ಕೇಂದ್ರ ಗೃಹ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಏಪ್ರಿಲ್ 22, 2021ರಂದು ಅವರು ನೀಡಿರುವ ದೂರಿನ ಪ್ರತಿಯನ್ನು ಸಂದೀಪ್ ಪಾಟೀಲ್ ಮತ್ತು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್, ಸೆಂಟ್ರಲ್ ಕ್ರೈಂ ಬ್ರಾಂಚ್, ಬಿಎಸ್ ಅಂಗಡಿ ಅವರಿಗೆ ಕಳುಹಿಸಲಾಗಿದೆ ಎಂದು ಹೇಳಿಕೊಳ್ಳುವ ವಾಟ್ಸಾಪ್ ಚಾಟ್‌ಗಳ ಚಿತ್ರಗಳನ್ನು ಅಶೋಕ್‌ ಹಂಚಿಕೊಂಡಿದ್ದಾರೆ. ಹಗರಣದ ಬಗ್ಗೆ ಅವರು ಏಪ್ರಿಲ್‌ನಲ್ಲಿಯೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಶ್ರೀಕಿಯಿಂದ ನಗದೀಕರಿಸಲಾದ ಸುಮಾರು 12,900 ಬಿಟ್‌ಕಾಯಿನ್‌ಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಅಶೋಕ್ ಹೇಳಿದ್ದಾರೆ. “ಡಿಸೆಂಬರ್ 2020 ರಲ್ಲಿ ಡ್ರಗ್ ಪ್ರಕರಣದಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಜನವರಿ 2021 ರಲ್ಲಿ, ಕೆಲವು ಉನ್ನತ ಮಟ್ಟದ CCB ಅಧಿಕಾರಿಗಳು ಶ್ರೀಕಿಯಿಂದ 9,600 ಬಿಟ್‌ಕಾಯಿನ್‌ಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ನನಗೆ ಬಂದಿತು. ಈ ಮಾಹಿತಿಯನ್ನು ನಾನು ಜನವರಿ 3 ರಂದು ಐಪಿಎಸ್ ಅಧಿಕಾರಿಯೊಂದಿಗೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದೇನೆ. ಆದರೆ ಏನೂ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಏಪ್ರಿಲ್ 20 ರಂದು ಕಮಲ್ ಪಂತ್ ಅವರಿಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದೇನೆ. ಈ ಹಗರಣವನ್ನು ವಿವರಿಸಲು ನಾನು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂದೂ ಕೂಡ ತಿಳಿಸಿದ್ದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.” ತನ್ನ ದೂರಿನಲ್ಲಿ, “ಶ್ರೀಕಿ ಬಿಟ್‌ಕಾಯಿನ್‌ನ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದು, ಸಾವಿರಾರು ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ತನ್ನ ವ್ಯಾಲೆಟ್‌ಗೆ ವರ್ಗಾಯಿಸಿದ್ದಾನೆ ಎಂದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಈತನ ವಿರುದ್ಧ ನೆದರ್ ಲ್ಯಾಂಡ್ ನ ಮ್‌ಸ್ಟರ್‌ಡ್ಯಾಮ್‌ನಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಆಮ್‌ಸ್ಟರ್‌ಡ್ಯಾಮ್‌ನ ರಾಷ್ಟ್ರೀಯ ಪೊಲೀಸ್ ಕಾರ್ಪ್ಸ್ ತನಿಖೆ ನಡೆಸುತ್ತಿದೆ. ಶ್ರೀಕಿ ವರ್ಗಾಯಿಸಿದ ಬಿಟ್‌ಕಾಯಿನ್‌ಗಳನ್ನು ಟ್ರ್ಯಾಕ್ ಮಾಡುತ್ತಿದೆ. ನಾನು ಈ ಎಲ್ಲಾ ದಾಖಲೆಗಳ ಪ್ರತಿಯನ್ನು ಸಂಗ್ರಹಿಸಿದ್ದೇನೆ ಮತ್ತು ಎಫ್‌ಬಿಐ ಅನ್ನು ಸಂಪರ್ಕಿಸಿದ್ದೇನೆ. ಬೆಂಗಳೂರಿನ ಇಂಟರ್‌ಪೋಲ್‌ಗೆ ದಾಖಲೆಗಳನ್ನು ನೀಡುವಂತೆ ಎಫ್‌ಬಿಐ ಮನವಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಇಂಟರ್‌ಪೋಲ್‌ನ ಸಂಪರ್ಕ ಅಧಿಕಾರಿ ಉಮೇಶ್ ಕುಮಾರ್, ಎಡಿಜಿಪಿ, ಸಿಐಡಿ ಸೇರಿದಂತೆ ಭಾರತೀಯ ಏಜೆನ್ಸಿಗಳ ಮೇಲೆ ನಂಬಿಕೆಯಿಲ್ಲದ ಕಾರಣ, ನಾನು ಫ್ರಾನ್ಸ್‌ನಲ್ಲಿರುವ ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದ್ದಾರೆ.

ಫೈಲ್ ಸುಮಾರು 1,017 ಸ್ಕ್ರೀನ್‌ಶಾಟ್‌ಗಳನ್ನು ಒಳಗೊಂಡಿದೆ. ಪ್ರತಿ ಬಾರಿ ಬಿಟ್‌ಕಾಯಿನ್ ಅನ್ನು ನಗದೀಕರಿಸಿದಾಗ ಎಫ್‌ಬಿಐ ಸಂದೇಶವನ್ನು ಸ್ವೀಕರಿಸಿದೆ. ಶ್ರೀಕಿ ಪೊಲೀಸರ ವಶದಲ್ಲಿದ್ದಾಗಲೇ 12,900 ಬಿಟ್‌ಕಾಯಿನ್‌ಗಳನ್ನು ನಗದೀಕರಿಸಲಾಗಿದೆ ಎಂದು ತಿಳಿದಿದ್ದರೂ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಲು ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ಈ “ಡೀಲ್” ನಲ್ಲಿ 17 ಜನರು ಭಾಗಿಯಾಗಿರುವ ಬಗ್ಗೆ ತಮ್ಮ ಬಳಿ ದಾಖಲೆಗಳಿವೆ ಎಂದು ಅಶೋಕ್‌ ಹೇಳಿದ್ದಾರೆ. “ರಾಜ್ಯದ ಪೊಲೀಸ್‌ ಇಲಾಖೆ ಅಥವಾ ಇತರರು ನನ್ನನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಅಥವಾ ನನಗೆ ಹಾನಿ ಮಾಡಲು ಪ್ರಯತ್ನಿಸಿದರೆ” ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ದಾಖಲೆಗಳನ್ನು ಕಳುಹಿಸಲು ತಾವು ಯೋಜಿಸುತ್ತಿರುವುದಾಗಿ ಅಶೋಕ್‌ ಅವರು ಪೊಲೀಸ್ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಏಪ್ರಿಲ್ 26 ರಂದು ಸಂದೀಪ್ ಪಾಟೀಲ್ ಅವರ ಕಚೇರಿಗೆ ಲಿಖಿತ ದೂರನ್ನು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 27 ರಂದು ತಮ್ಮನ್ನು ಸಿಸಿಬಿ ಕಚೇರಿಗೆ ಕರೆಸಿ ಡಿಸಿಪಿ  ಎಲ್ಲಾ ವಿವರಗಳನ್ನು ತೆಗೆದುಕೊಂಡು, ತಮ್ಮ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಅಶೋಕ್ ಹೇಳಿದ್ದಾರೆ.

ಅಶೋಕ್‌ ಅವರು ತಮ್ಮ ಬಳಿ ಹೆಚ್ಚಿನ ದಾಖಲೆಗಳಿವೆ, ಆದರೆ ಅವುಗಳನ್ನು ಈಗ ಬಿಡುಗಡೆ ಮಾಡುವುದಿಲ್ಲ ಎಂದೂ ಹೇಳಿದ್ದಾರೆ.

ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ಹಗರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳ ಬಗ್ಗೆ ತಮ್ಮ ಬಳಿ ಮಾಹಿತಿ ಇರುವುದರಿಂದ ಮಾಧ್ಯಮಗಳನ್ನು ಸಂಪರ್ಕಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ದೂರನ್ನು ನಿರ್ಲಕ್ಷಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದಷ್ಟು ಬೇಗ ದಾಖಲೆಗಳನ್ನು ಬಿಡುಗಡೆ ಮಾಡಿ ಅಶೋಕ್ ರವರೇ ,ನಿಮ್ಮ ದಾಖಲೆಗಳ ಬಿಡುಗಡೆ ಮಾಧ್ಯಮ ಗಳಿಗಿಂತ ,ನ್ಯಾಯಾಧೀಶರಿಗೆ ನೀಡಿ ,ನಿಮಗೆ ರಾಜಕೀಯ ಒತ್ತಡ, ಅಧಿಕಾರಿಗಳ ಭಯ ಭೀತಿ ಇದ್ದರೆ ರಾಜ್ಯಪಾಲ,ರಾಷ್ಟ್ರ ಪತಿಗಳಿಗೆ ನೀಡಿ

  2. ಹೌದು , ರಾಜುರವರು ಹೇಳಿದ್ದು ಸರಿ, ಅದೇ ರೀತಿ ಮಾಡಿದರೆ ಅನ್ಯಾಯಕ್ಕೆ ಕಾನೂನಾತ್ಮಕವಾಗಿ ತಕ್ಕುದಾದ ಶಿಕ್ಷೆ ದೊರೆಯಬಹುದು 👍👍👍👍

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...