Homeಮುಖಪುಟ12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

- Advertisement -
- Advertisement -

ರಾಜಕೀಯ ವಿವಾದಕ್ಕೆ ಸಿಲುಕಿರುವ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಯ ಬಹುಕೋಟಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳು ಹೊರಬೀಳುತ್ತಲೇ ಇವೆ. “ಪೊಲೀಸ್ ಅಧಿಕಾರಿಗಳು ಮತ್ತು ಪ್ರಭಾವಿ ರಾಜಕಾರಣಿಗಳಿಂದ ಡ್ರಗ್ ಪ್ರಕರಣದಲ್ಲಿ ಭ್ರಷ್ಟಾಚಾರದ ವಿರುದ್ಧದ ದೂರನ್ನು”  ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮತ್ತು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಎಆರ್ ಅಶೋಕ್ ಕುಮಾರ್ ಅಡಿಗ ಆರೋಪಿಸಿದ್ದಾರೆ.

ದೂರಿನ ಸಂಪೂರ್ಣ ವಿವರವನ್ನು ಪ್ರಧಾನಿ ಕಚೇರಿ, ಕೇಂದ್ರ ಗೃಹ ಸಚಿವರು ಮತ್ತು ಕೇಂದ್ರ ಗೃಹ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಏಪ್ರಿಲ್ 22, 2021ರಂದು ಅವರು ನೀಡಿರುವ ದೂರಿನ ಪ್ರತಿಯನ್ನು ಸಂದೀಪ್ ಪಾಟೀಲ್ ಮತ್ತು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್, ಸೆಂಟ್ರಲ್ ಕ್ರೈಂ ಬ್ರಾಂಚ್, ಬಿಎಸ್ ಅಂಗಡಿ ಅವರಿಗೆ ಕಳುಹಿಸಲಾಗಿದೆ ಎಂದು ಹೇಳಿಕೊಳ್ಳುವ ವಾಟ್ಸಾಪ್ ಚಾಟ್‌ಗಳ ಚಿತ್ರಗಳನ್ನು ಅಶೋಕ್‌ ಹಂಚಿಕೊಂಡಿದ್ದಾರೆ. ಹಗರಣದ ಬಗ್ಗೆ ಅವರು ಏಪ್ರಿಲ್‌ನಲ್ಲಿಯೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಶ್ರೀಕಿಯಿಂದ ನಗದೀಕರಿಸಲಾದ ಸುಮಾರು 12,900 ಬಿಟ್‌ಕಾಯಿನ್‌ಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಅಶೋಕ್ ಹೇಳಿದ್ದಾರೆ. “ಡಿಸೆಂಬರ್ 2020 ರಲ್ಲಿ ಡ್ರಗ್ ಪ್ರಕರಣದಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಜನವರಿ 2021 ರಲ್ಲಿ, ಕೆಲವು ಉನ್ನತ ಮಟ್ಟದ CCB ಅಧಿಕಾರಿಗಳು ಶ್ರೀಕಿಯಿಂದ 9,600 ಬಿಟ್‌ಕಾಯಿನ್‌ಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ನನಗೆ ಬಂದಿತು. ಈ ಮಾಹಿತಿಯನ್ನು ನಾನು ಜನವರಿ 3 ರಂದು ಐಪಿಎಸ್ ಅಧಿಕಾರಿಯೊಂದಿಗೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದೇನೆ. ಆದರೆ ಏನೂ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಏಪ್ರಿಲ್ 20 ರಂದು ಕಮಲ್ ಪಂತ್ ಅವರಿಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದೇನೆ. ಈ ಹಗರಣವನ್ನು ವಿವರಿಸಲು ನಾನು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂದೂ ಕೂಡ ತಿಳಿಸಿದ್ದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.” ತನ್ನ ದೂರಿನಲ್ಲಿ, “ಶ್ರೀಕಿ ಬಿಟ್‌ಕಾಯಿನ್‌ನ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದು, ಸಾವಿರಾರು ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ತನ್ನ ವ್ಯಾಲೆಟ್‌ಗೆ ವರ್ಗಾಯಿಸಿದ್ದಾನೆ ಎಂದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಈತನ ವಿರುದ್ಧ ನೆದರ್ ಲ್ಯಾಂಡ್ ನ ಮ್‌ಸ್ಟರ್‌ಡ್ಯಾಮ್‌ನಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಆಮ್‌ಸ್ಟರ್‌ಡ್ಯಾಮ್‌ನ ರಾಷ್ಟ್ರೀಯ ಪೊಲೀಸ್ ಕಾರ್ಪ್ಸ್ ತನಿಖೆ ನಡೆಸುತ್ತಿದೆ. ಶ್ರೀಕಿ ವರ್ಗಾಯಿಸಿದ ಬಿಟ್‌ಕಾಯಿನ್‌ಗಳನ್ನು ಟ್ರ್ಯಾಕ್ ಮಾಡುತ್ತಿದೆ. ನಾನು ಈ ಎಲ್ಲಾ ದಾಖಲೆಗಳ ಪ್ರತಿಯನ್ನು ಸಂಗ್ರಹಿಸಿದ್ದೇನೆ ಮತ್ತು ಎಫ್‌ಬಿಐ ಅನ್ನು ಸಂಪರ್ಕಿಸಿದ್ದೇನೆ. ಬೆಂಗಳೂರಿನ ಇಂಟರ್‌ಪೋಲ್‌ಗೆ ದಾಖಲೆಗಳನ್ನು ನೀಡುವಂತೆ ಎಫ್‌ಬಿಐ ಮನವಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಇಂಟರ್‌ಪೋಲ್‌ನ ಸಂಪರ್ಕ ಅಧಿಕಾರಿ ಉಮೇಶ್ ಕುಮಾರ್, ಎಡಿಜಿಪಿ, ಸಿಐಡಿ ಸೇರಿದಂತೆ ಭಾರತೀಯ ಏಜೆನ್ಸಿಗಳ ಮೇಲೆ ನಂಬಿಕೆಯಿಲ್ಲದ ಕಾರಣ, ನಾನು ಫ್ರಾನ್ಸ್‌ನಲ್ಲಿರುವ ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದ್ದಾರೆ.

ಫೈಲ್ ಸುಮಾರು 1,017 ಸ್ಕ್ರೀನ್‌ಶಾಟ್‌ಗಳನ್ನು ಒಳಗೊಂಡಿದೆ. ಪ್ರತಿ ಬಾರಿ ಬಿಟ್‌ಕಾಯಿನ್ ಅನ್ನು ನಗದೀಕರಿಸಿದಾಗ ಎಫ್‌ಬಿಐ ಸಂದೇಶವನ್ನು ಸ್ವೀಕರಿಸಿದೆ. ಶ್ರೀಕಿ ಪೊಲೀಸರ ವಶದಲ್ಲಿದ್ದಾಗಲೇ 12,900 ಬಿಟ್‌ಕಾಯಿನ್‌ಗಳನ್ನು ನಗದೀಕರಿಸಲಾಗಿದೆ ಎಂದು ತಿಳಿದಿದ್ದರೂ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಲು ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ಈ “ಡೀಲ್” ನಲ್ಲಿ 17 ಜನರು ಭಾಗಿಯಾಗಿರುವ ಬಗ್ಗೆ ತಮ್ಮ ಬಳಿ ದಾಖಲೆಗಳಿವೆ ಎಂದು ಅಶೋಕ್‌ ಹೇಳಿದ್ದಾರೆ. “ರಾಜ್ಯದ ಪೊಲೀಸ್‌ ಇಲಾಖೆ ಅಥವಾ ಇತರರು ನನ್ನನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಅಥವಾ ನನಗೆ ಹಾನಿ ಮಾಡಲು ಪ್ರಯತ್ನಿಸಿದರೆ” ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ದಾಖಲೆಗಳನ್ನು ಕಳುಹಿಸಲು ತಾವು ಯೋಜಿಸುತ್ತಿರುವುದಾಗಿ ಅಶೋಕ್‌ ಅವರು ಪೊಲೀಸ್ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಏಪ್ರಿಲ್ 26 ರಂದು ಸಂದೀಪ್ ಪಾಟೀಲ್ ಅವರ ಕಚೇರಿಗೆ ಲಿಖಿತ ದೂರನ್ನು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 27 ರಂದು ತಮ್ಮನ್ನು ಸಿಸಿಬಿ ಕಚೇರಿಗೆ ಕರೆಸಿ ಡಿಸಿಪಿ  ಎಲ್ಲಾ ವಿವರಗಳನ್ನು ತೆಗೆದುಕೊಂಡು, ತಮ್ಮ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಅಶೋಕ್ ಹೇಳಿದ್ದಾರೆ.

ಅಶೋಕ್‌ ಅವರು ತಮ್ಮ ಬಳಿ ಹೆಚ್ಚಿನ ದಾಖಲೆಗಳಿವೆ, ಆದರೆ ಅವುಗಳನ್ನು ಈಗ ಬಿಡುಗಡೆ ಮಾಡುವುದಿಲ್ಲ ಎಂದೂ ಹೇಳಿದ್ದಾರೆ.

ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ಹಗರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳ ಬಗ್ಗೆ ತಮ್ಮ ಬಳಿ ಮಾಹಿತಿ ಇರುವುದರಿಂದ ಮಾಧ್ಯಮಗಳನ್ನು ಸಂಪರ್ಕಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ದೂರನ್ನು ನಿರ್ಲಕ್ಷಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದಷ್ಟು ಬೇಗ ದಾಖಲೆಗಳನ್ನು ಬಿಡುಗಡೆ ಮಾಡಿ ಅಶೋಕ್ ರವರೇ ,ನಿಮ್ಮ ದಾಖಲೆಗಳ ಬಿಡುಗಡೆ ಮಾಧ್ಯಮ ಗಳಿಗಿಂತ ,ನ್ಯಾಯಾಧೀಶರಿಗೆ ನೀಡಿ ,ನಿಮಗೆ ರಾಜಕೀಯ ಒತ್ತಡ, ಅಧಿಕಾರಿಗಳ ಭಯ ಭೀತಿ ಇದ್ದರೆ ರಾಜ್ಯಪಾಲ,ರಾಷ್ಟ್ರ ಪತಿಗಳಿಗೆ ನೀಡಿ

  2. ಹೌದು , ರಾಜುರವರು ಹೇಳಿದ್ದು ಸರಿ, ಅದೇ ರೀತಿ ಮಾಡಿದರೆ ಅನ್ಯಾಯಕ್ಕೆ ಕಾನೂನಾತ್ಮಕವಾಗಿ ತಕ್ಕುದಾದ ಶಿಕ್ಷೆ ದೊರೆಯಬಹುದು 👍👍👍👍

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...