Homeಕರ್ನಾಟಕಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

- Advertisement -
- Advertisement -

ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ನಡೆದಿದ್ದ ಬರ್ಬರ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ರಾಮಮೂರ್ತಿನಗರ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಬುಧವಾರ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಯುವತಿಯರಿದ್ದಾರೆ. ಬಂಧಿತರಲ್ಲಿ 11 ಮಂದಿ ಬಾಂಗ್ಲಾದೇಶದ ಪ್ರಜೆಗಳಾಗಿದ್ದಾರೆ.

ಐದು ವಾರಗಳ ಅಲ್ಪಾವಧಿಯಲ್ಲಿ ತನಿಖೆ ಪೂರ್ಣಗೊಂಡಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಗುರುವಾರ ಟ್ವೀಟ್ ಮಾಡಿದ್ದಾರೆ. 12 ಆರೋಪಿಗಳ ವಿರುದ್ಧ 1,019 ‍ಪುಟಗಳನ್ನು ಒಳಗೊಂಡಂತೆ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ’ ಎಂದು ತಿಳಿಸಿದ್ದಾರೆ. ಈ ವರ್ಷದ ಮೇ ತಿಂಗಳಲ್ಲಿ ಈ ಬರ್ಬರ ಘಟನೆ ನಡೆದಿತ್ತು.

ಇದನ್ನೂ ಓದಿ: ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

 

ಐದು ವಾರಗಳಲ್ಲಿ ಪ್ರಕರಣ ಭೇದಿಸಿದ ಕಾರ್ಯಕ್ಕಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್ ತನಿಖಾ ತಂಡವನ್ನು ಶ್ಲಾಘಿಸಿದ್ದಾರೆ. ತಂಡಕ್ಕೆ 1 ಲಕ್ಷ ರೂಪಾಯಿ ಬಹುಮಾನವನ್ನು ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾಲ್ಕು ಜನ ಪುರುಷರು ಮತ್ತು ಇಬ್ಬರು ಯುವತಿಯರು, ಒಬ್ಬ ಯುವತಿಯನ್ನು ಹಿಂಸಿಸುತ್ತಿರುವ, ಸಾಮೂಹಿಕವಾಗಿ ಅತ್ಯಾಚಾರ ನಡೆಸುತ್ತಿರುವ, ಗುಪ್ತಾಂಗಕ್ಕೆ ಗಾಜಿನ ಬಾಟಲಿಯನ್ನು ತುರುಕುತ್ತಿರುವ ಹೇಯ ಅಮಾನವೀಯ ದೃಶ್ಯದ ವಿಡಿಯೊ ವೈರಲ್ ಆಗಿತ್ತು. ಜನರಿಂದ ಜನರಿಗೆ ತಲುಪಿದ್ದ ಈ ವಿಡಿಯೊ ದೇಶಾದ್ಯಂತ ಖಂಡನೆಗೆ ಒಳಗಾಗಿತ್ತು.‌ ಬೆಂಗಳೂರು ಪೊಲೀಸರು ಅಸ್ಸಾಂ ಪೊಲೀಸರ ಸಹಕಾರದೊಂದಿಗೆ ನಾಲ್ವರು ಆರೋಪಿಗಳನ್ನು ಮೇ 27, 2021 ಗುರುವಾರ ಅವಲಹಳ್ಳಿಯಲ್ಲಿಯಲ್ಲಿ ಬಂಧಿಸಿದ್ದರು.

ಅತ್ಯಾಚಾರ ಸಂತ್ರಸ್ತೆ, ಮೂರು ವರ್ಷಗಳ ಹಿಂದೆ ಬಾಂಗ್ಲಾದೇಶದ ಮಾನವ ಕಳ್ಳಸಾಗಣೆದಾರರ ಜಾಲದ ಮೂಲಕ ಅಸ್ಸಾಂ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಕರ್ನಾಟಕಕ್ಕೆ ಬಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆಕೆಯನ್ನು ಈ ಕಳ್ಳಸಾಗಣೆದಾರರ ತಂಡ ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಪಡಿಸಿತ್ತು. ಆರ್ಥಿಕ ವಿವಾದದ ನಂತರ ಆರೋಪಿಗಳು ಆಕೆಯನ್ನು ಹಿಂಸಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಲ್ಲಿ ತನಿಖೆ ಮತ್ತು ಬಂಧನದ ಸಮಯದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಮೂವರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿ ಗಾಯಗೊಳಿಸಿದ್ದಾರೆ. ಪ್ರಕರಣದಲ್ಲಿ 10 ಮಂದಿಯ ವಿರುದ್ದ ಅತ್ಯಾಚಾರ ಆರೋಪ ಹಾಗೂ ಇಬ್ಬರು ಯುವತಿಯರ ವಿರುದ್ಧ ಅಕ್ರಮ ವಲಸೆ ಆರೋಪವಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಸಾಕ್ಷಿಗಳನ್ನು ಚಾರ್ಜ್‍ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಬರ್ಬರ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...