Homeಕರ್ನಾಟಕಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

- Advertisement -
- Advertisement -

ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ನಡೆದಿದ್ದ ಬರ್ಬರ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ರಾಮಮೂರ್ತಿನಗರ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಬುಧವಾರ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಯುವತಿಯರಿದ್ದಾರೆ. ಬಂಧಿತರಲ್ಲಿ 11 ಮಂದಿ ಬಾಂಗ್ಲಾದೇಶದ ಪ್ರಜೆಗಳಾಗಿದ್ದಾರೆ.

ಐದು ವಾರಗಳ ಅಲ್ಪಾವಧಿಯಲ್ಲಿ ತನಿಖೆ ಪೂರ್ಣಗೊಂಡಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಗುರುವಾರ ಟ್ವೀಟ್ ಮಾಡಿದ್ದಾರೆ. 12 ಆರೋಪಿಗಳ ವಿರುದ್ಧ 1,019 ‍ಪುಟಗಳನ್ನು ಒಳಗೊಂಡಂತೆ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ’ ಎಂದು ತಿಳಿಸಿದ್ದಾರೆ. ಈ ವರ್ಷದ ಮೇ ತಿಂಗಳಲ್ಲಿ ಈ ಬರ್ಬರ ಘಟನೆ ನಡೆದಿತ್ತು.

ಇದನ್ನೂ ಓದಿ: ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

 

ಐದು ವಾರಗಳಲ್ಲಿ ಪ್ರಕರಣ ಭೇದಿಸಿದ ಕಾರ್ಯಕ್ಕಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್ ತನಿಖಾ ತಂಡವನ್ನು ಶ್ಲಾಘಿಸಿದ್ದಾರೆ. ತಂಡಕ್ಕೆ 1 ಲಕ್ಷ ರೂಪಾಯಿ ಬಹುಮಾನವನ್ನು ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾಲ್ಕು ಜನ ಪುರುಷರು ಮತ್ತು ಇಬ್ಬರು ಯುವತಿಯರು, ಒಬ್ಬ ಯುವತಿಯನ್ನು ಹಿಂಸಿಸುತ್ತಿರುವ, ಸಾಮೂಹಿಕವಾಗಿ ಅತ್ಯಾಚಾರ ನಡೆಸುತ್ತಿರುವ, ಗುಪ್ತಾಂಗಕ್ಕೆ ಗಾಜಿನ ಬಾಟಲಿಯನ್ನು ತುರುಕುತ್ತಿರುವ ಹೇಯ ಅಮಾನವೀಯ ದೃಶ್ಯದ ವಿಡಿಯೊ ವೈರಲ್ ಆಗಿತ್ತು. ಜನರಿಂದ ಜನರಿಗೆ ತಲುಪಿದ್ದ ಈ ವಿಡಿಯೊ ದೇಶಾದ್ಯಂತ ಖಂಡನೆಗೆ ಒಳಗಾಗಿತ್ತು.‌ ಬೆಂಗಳೂರು ಪೊಲೀಸರು ಅಸ್ಸಾಂ ಪೊಲೀಸರ ಸಹಕಾರದೊಂದಿಗೆ ನಾಲ್ವರು ಆರೋಪಿಗಳನ್ನು ಮೇ 27, 2021 ಗುರುವಾರ ಅವಲಹಳ್ಳಿಯಲ್ಲಿಯಲ್ಲಿ ಬಂಧಿಸಿದ್ದರು.

ಅತ್ಯಾಚಾರ ಸಂತ್ರಸ್ತೆ, ಮೂರು ವರ್ಷಗಳ ಹಿಂದೆ ಬಾಂಗ್ಲಾದೇಶದ ಮಾನವ ಕಳ್ಳಸಾಗಣೆದಾರರ ಜಾಲದ ಮೂಲಕ ಅಸ್ಸಾಂ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಕರ್ನಾಟಕಕ್ಕೆ ಬಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆಕೆಯನ್ನು ಈ ಕಳ್ಳಸಾಗಣೆದಾರರ ತಂಡ ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಪಡಿಸಿತ್ತು. ಆರ್ಥಿಕ ವಿವಾದದ ನಂತರ ಆರೋಪಿಗಳು ಆಕೆಯನ್ನು ಹಿಂಸಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಲ್ಲಿ ತನಿಖೆ ಮತ್ತು ಬಂಧನದ ಸಮಯದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಮೂವರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿ ಗಾಯಗೊಳಿಸಿದ್ದಾರೆ. ಪ್ರಕರಣದಲ್ಲಿ 10 ಮಂದಿಯ ವಿರುದ್ದ ಅತ್ಯಾಚಾರ ಆರೋಪ ಹಾಗೂ ಇಬ್ಬರು ಯುವತಿಯರ ವಿರುದ್ಧ ಅಕ್ರಮ ವಲಸೆ ಆರೋಪವಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಸಾಕ್ಷಿಗಳನ್ನು ಚಾರ್ಜ್‍ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಬರ್ಬರ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...