Homeಮುಖಪುಟಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

ಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

- Advertisement -
- Advertisement -

ಪ.ಬಂಗಾಳ ರಾಜ್ಯ ವಿಧಾನಸಭೆ ಆವರಣದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಮತ್ತು ಪಕ್ಷದ ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ 12 ಬಿಜೆಪಿ ಶಾಸಕರ ವಿರುದ್ಧ ಕೋಲ್ಕತ್ತಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕೇಂದ್ರ  ಸರಕಾರದ ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರಕ್ಕೆ ಬರಬೇಕಿದ್ದ ಬಾಕಿ ಹಣ ಪಾವತಿಯಾಗದಿರುವುದನ್ನು ವಿರೋಧಿಸಿ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ ಶಾಸಕರು ಕಪ್ಪು ಬಟ್ಟೆ ಧರಿಸಿ ವಿಧಾನಸಭೆ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ಮುಕ್ತಾಯದ ವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಪಕ್ಷದ ಮೆಗಾ ರ್ಯಾಲಿಗೆ ತೆರಳಲು ವಿಪಕ್ಷ ನಾಯಕ ಸುವೆಂದು ಅಧಿಕಾರಿ ನೇತೃತ್ವದ ಬಿಜೆಪಿ ಶಾಸಕರ ಗುಂಪು ವಿಧಾನಸಭೆ ಆವರಣಕ್ಕೆ ಆಗಮಿಸಿದೆ. ಈ ವೇಳೆ ವಿಪಕ್ಷ ನಾಯಕ ಸೇರಿದಂತೆ ಶಾಸಕರು ಪ್ರತಿಭಟನಾನಿರತರಾಗಿದ್ದವರ ನೋಡಿ ‘ಕಳ್ಳರು, ಕಳ್ಳರು’ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಆಡಳಿತ ಪಕ್ಷದ ಶಾಸಕರು ರಾಷ್ಟ್ರಗೀತೆ ಹಾಡುತ್ತಿದ್ದಾಗ ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಅವರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರಿಗೆ ದೂರು ನೀಡಿದ್ದರು. ಈ ವಿಚಾರದಲ್ಲಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸ್ಪೀಕರ್‌ಗೆ ಮನವಿ ಮಾಡಲಾಗಿತ್ತು.

ಈ ಕುರಿತು ಕೋಲ್ಕತ್ತಾ ಪೊಲೀಸ್‌ ಉಪ ಆಯುಕ್ತರಿಗೆ ಮೂವರು ತೃಣಮೂಲ ಕಾಂಗ್ರೆಸ್ ಶಾಸಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಅಗ್ನಿಮಿತ್ರ ಪೌಲ್, ನಮ್ಮ 12 ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ತುಂಬಾ ವಿಚಿತ್ರವಾಗಿದೆ. ಏಕೆಂದರೆ ನಾವು ಮಮತಾ ಸರ್ಕಾರದ ದುಷ್ಕೃತ್ಯಗಳಿಂದ ಬಳಲುತ್ತಿರುವ ಬಂಗಾಳದ ಜನರ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಅಸೆಂಬ್ಲಿ ಒಳಗೆ ನಿರ್ಣಾಯಕ ವಿಷಯಗಳ ಬಗ್ಗೆ ಮಾತನಾಡಲು ಅವರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದ್ದಾರೆ.

ನಾವು ಅವರ ಅನುಮತಿಯನ್ನು ತೆಗೆದುಕೊಳ್ಳಬೇಕೇ? ನಮಗೆ ಒಳಗೆ ಮಾತನಾಡಲು ಅವಕಾಶವಿಲ್ಲ, ನಾವು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಯಸಿದಾಗ, ನೀವು ನಮಗೆ ಮಾತನಾಡಲು ಬಿಡುವುದಿಲ್ಲ, ಹಿಂಸಾಚಾರ, ಭ್ರಷ್ಟಾಚಾರ, ಅತ್ಯಾಚಾರದ ವಿರುದ್ಧ ನೀವು ಮಾತನಾಡುವುದಿಲ್ಲ. ನಾವು ಮಾತನಾಡುವಾಗ ಇದರ ವಿರುದ್ಧ ಘೋಷಣೆ ಕೂಗಿದಾಗ ನೀವು ಪೊಲೀಸರಿಗೆ ಕರೆ ಮಾಡಿ ನಮ್ಮ ಮೇಲೆ ಎಫ್‌ಐಆರ್‌ಗಳನ್ನು ಹಾಕಿಸಿದ್ದೀರಿ ಎಂದು ವಾಗ್ಧಾಳಿ ನಡೆಸಿದ್ದಾರೆ.

ಮಮತಾ ಬ್ಯಾನರ್ಜಿಯನ್ನು ಉದ್ದೇಶಿಸಿ ಮಾತನಾಡಿದ ಪಾಲ್, 2021ರಲ್ಲಿ ರಾಷ್ಟ್ರಗೀತೆ ವೇಳೆ ಕುರ್ಚಿಯ ಮೇಲೆ ಕುಳಿತಿದ್ದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆಯೇ? ಎಂದು ಮಮತಾ ವಿರುದ್ಧ ಈ ಹಿಂದಿನ ಪ್ರಕರಣವನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ಈ ವರ್ಷದ ಅಕ್ಟೋಬರ್‌ನಲ್ಲಿ ಮುಂಬೈ ಮೆಟ್ರೋಪಾಲಿಟನ್ ನ್ಯಾಯಾಲಯವು ರಾಷ್ಟ್ರಗೀತೆಗೆ ಅಗೌರವ ತೋರಿದ ಬ್ಯಾನರ್ಜಿ ವಿರುದ್ಧದ ದೂರನ್ನು ವಜಾಗೊಳಿಸಿದೆ. ಬಿಜೆಪಿ ಕಾರ್ಯಾಧ್ಯಕ್ಷ ವಿವೇಕಾನಂದ ಗುಪ್ತಾ ಅವರು ಮಮತಾ ಬ್ಯಾನರ್ಜಿ ವಿರುದ್ಧ ದೂರು ಸಲ್ಲಿಸಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ವಿರುದ್ಧದ ಅಪರಾಧ ಸಾಬೀತಾಗಿಲ್ಲ ಎಂದು ನ್ಯಾಯಾಲಯವು ಅವರ ಮನವಿಯನ್ನು ವಜಾಗೊಳಿಸಿತ್ತು.

ಇದನ್ನು ಓದಿ: ಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...