Homeಮುಖಪುಟಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

ಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

- Advertisement -
- Advertisement -

ಪ.ಬಂಗಾಳ ರಾಜ್ಯ ವಿಧಾನಸಭೆ ಆವರಣದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಮತ್ತು ಪಕ್ಷದ ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ 12 ಬಿಜೆಪಿ ಶಾಸಕರ ವಿರುದ್ಧ ಕೋಲ್ಕತ್ತಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕೇಂದ್ರ  ಸರಕಾರದ ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರಕ್ಕೆ ಬರಬೇಕಿದ್ದ ಬಾಕಿ ಹಣ ಪಾವತಿಯಾಗದಿರುವುದನ್ನು ವಿರೋಧಿಸಿ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ ಶಾಸಕರು ಕಪ್ಪು ಬಟ್ಟೆ ಧರಿಸಿ ವಿಧಾನಸಭೆ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ಮುಕ್ತಾಯದ ವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಪಕ್ಷದ ಮೆಗಾ ರ್ಯಾಲಿಗೆ ತೆರಳಲು ವಿಪಕ್ಷ ನಾಯಕ ಸುವೆಂದು ಅಧಿಕಾರಿ ನೇತೃತ್ವದ ಬಿಜೆಪಿ ಶಾಸಕರ ಗುಂಪು ವಿಧಾನಸಭೆ ಆವರಣಕ್ಕೆ ಆಗಮಿಸಿದೆ. ಈ ವೇಳೆ ವಿಪಕ್ಷ ನಾಯಕ ಸೇರಿದಂತೆ ಶಾಸಕರು ಪ್ರತಿಭಟನಾನಿರತರಾಗಿದ್ದವರ ನೋಡಿ ‘ಕಳ್ಳರು, ಕಳ್ಳರು’ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಆಡಳಿತ ಪಕ್ಷದ ಶಾಸಕರು ರಾಷ್ಟ್ರಗೀತೆ ಹಾಡುತ್ತಿದ್ದಾಗ ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಅವರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರಿಗೆ ದೂರು ನೀಡಿದ್ದರು. ಈ ವಿಚಾರದಲ್ಲಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸ್ಪೀಕರ್‌ಗೆ ಮನವಿ ಮಾಡಲಾಗಿತ್ತು.

ಈ ಕುರಿತು ಕೋಲ್ಕತ್ತಾ ಪೊಲೀಸ್‌ ಉಪ ಆಯುಕ್ತರಿಗೆ ಮೂವರು ತೃಣಮೂಲ ಕಾಂಗ್ರೆಸ್ ಶಾಸಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಅಗ್ನಿಮಿತ್ರ ಪೌಲ್, ನಮ್ಮ 12 ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ತುಂಬಾ ವಿಚಿತ್ರವಾಗಿದೆ. ಏಕೆಂದರೆ ನಾವು ಮಮತಾ ಸರ್ಕಾರದ ದುಷ್ಕೃತ್ಯಗಳಿಂದ ಬಳಲುತ್ತಿರುವ ಬಂಗಾಳದ ಜನರ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಅಸೆಂಬ್ಲಿ ಒಳಗೆ ನಿರ್ಣಾಯಕ ವಿಷಯಗಳ ಬಗ್ಗೆ ಮಾತನಾಡಲು ಅವರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದ್ದಾರೆ.

ನಾವು ಅವರ ಅನುಮತಿಯನ್ನು ತೆಗೆದುಕೊಳ್ಳಬೇಕೇ? ನಮಗೆ ಒಳಗೆ ಮಾತನಾಡಲು ಅವಕಾಶವಿಲ್ಲ, ನಾವು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಯಸಿದಾಗ, ನೀವು ನಮಗೆ ಮಾತನಾಡಲು ಬಿಡುವುದಿಲ್ಲ, ಹಿಂಸಾಚಾರ, ಭ್ರಷ್ಟಾಚಾರ, ಅತ್ಯಾಚಾರದ ವಿರುದ್ಧ ನೀವು ಮಾತನಾಡುವುದಿಲ್ಲ. ನಾವು ಮಾತನಾಡುವಾಗ ಇದರ ವಿರುದ್ಧ ಘೋಷಣೆ ಕೂಗಿದಾಗ ನೀವು ಪೊಲೀಸರಿಗೆ ಕರೆ ಮಾಡಿ ನಮ್ಮ ಮೇಲೆ ಎಫ್‌ಐಆರ್‌ಗಳನ್ನು ಹಾಕಿಸಿದ್ದೀರಿ ಎಂದು ವಾಗ್ಧಾಳಿ ನಡೆಸಿದ್ದಾರೆ.

ಮಮತಾ ಬ್ಯಾನರ್ಜಿಯನ್ನು ಉದ್ದೇಶಿಸಿ ಮಾತನಾಡಿದ ಪಾಲ್, 2021ರಲ್ಲಿ ರಾಷ್ಟ್ರಗೀತೆ ವೇಳೆ ಕುರ್ಚಿಯ ಮೇಲೆ ಕುಳಿತಿದ್ದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆಯೇ? ಎಂದು ಮಮತಾ ವಿರುದ್ಧ ಈ ಹಿಂದಿನ ಪ್ರಕರಣವನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ಈ ವರ್ಷದ ಅಕ್ಟೋಬರ್‌ನಲ್ಲಿ ಮುಂಬೈ ಮೆಟ್ರೋಪಾಲಿಟನ್ ನ್ಯಾಯಾಲಯವು ರಾಷ್ಟ್ರಗೀತೆಗೆ ಅಗೌರವ ತೋರಿದ ಬ್ಯಾನರ್ಜಿ ವಿರುದ್ಧದ ದೂರನ್ನು ವಜಾಗೊಳಿಸಿದೆ. ಬಿಜೆಪಿ ಕಾರ್ಯಾಧ್ಯಕ್ಷ ವಿವೇಕಾನಂದ ಗುಪ್ತಾ ಅವರು ಮಮತಾ ಬ್ಯಾನರ್ಜಿ ವಿರುದ್ಧ ದೂರು ಸಲ್ಲಿಸಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ವಿರುದ್ಧದ ಅಪರಾಧ ಸಾಬೀತಾಗಿಲ್ಲ ಎಂದು ನ್ಯಾಯಾಲಯವು ಅವರ ಮನವಿಯನ್ನು ವಜಾಗೊಳಿಸಿತ್ತು.

ಇದನ್ನು ಓದಿ: ಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...