Homeಮುಖಪುಟಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

ಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

- Advertisement -
- Advertisement -

ಪ.ಬಂಗಾಳ ರಾಜ್ಯ ವಿಧಾನಸಭೆ ಆವರಣದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಮತ್ತು ಪಕ್ಷದ ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ 12 ಬಿಜೆಪಿ ಶಾಸಕರ ವಿರುದ್ಧ ಕೋಲ್ಕತ್ತಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕೇಂದ್ರ  ಸರಕಾರದ ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರಕ್ಕೆ ಬರಬೇಕಿದ್ದ ಬಾಕಿ ಹಣ ಪಾವತಿಯಾಗದಿರುವುದನ್ನು ವಿರೋಧಿಸಿ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ ಶಾಸಕರು ಕಪ್ಪು ಬಟ್ಟೆ ಧರಿಸಿ ವಿಧಾನಸಭೆ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ಮುಕ್ತಾಯದ ವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಪಕ್ಷದ ಮೆಗಾ ರ್ಯಾಲಿಗೆ ತೆರಳಲು ವಿಪಕ್ಷ ನಾಯಕ ಸುವೆಂದು ಅಧಿಕಾರಿ ನೇತೃತ್ವದ ಬಿಜೆಪಿ ಶಾಸಕರ ಗುಂಪು ವಿಧಾನಸಭೆ ಆವರಣಕ್ಕೆ ಆಗಮಿಸಿದೆ. ಈ ವೇಳೆ ವಿಪಕ್ಷ ನಾಯಕ ಸೇರಿದಂತೆ ಶಾಸಕರು ಪ್ರತಿಭಟನಾನಿರತರಾಗಿದ್ದವರ ನೋಡಿ ‘ಕಳ್ಳರು, ಕಳ್ಳರು’ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಆಡಳಿತ ಪಕ್ಷದ ಶಾಸಕರು ರಾಷ್ಟ್ರಗೀತೆ ಹಾಡುತ್ತಿದ್ದಾಗ ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಅವರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರಿಗೆ ದೂರು ನೀಡಿದ್ದರು. ಈ ವಿಚಾರದಲ್ಲಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸ್ಪೀಕರ್‌ಗೆ ಮನವಿ ಮಾಡಲಾಗಿತ್ತು.

ಈ ಕುರಿತು ಕೋಲ್ಕತ್ತಾ ಪೊಲೀಸ್‌ ಉಪ ಆಯುಕ್ತರಿಗೆ ಮೂವರು ತೃಣಮೂಲ ಕಾಂಗ್ರೆಸ್ ಶಾಸಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಅಗ್ನಿಮಿತ್ರ ಪೌಲ್, ನಮ್ಮ 12 ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ತುಂಬಾ ವಿಚಿತ್ರವಾಗಿದೆ. ಏಕೆಂದರೆ ನಾವು ಮಮತಾ ಸರ್ಕಾರದ ದುಷ್ಕೃತ್ಯಗಳಿಂದ ಬಳಲುತ್ತಿರುವ ಬಂಗಾಳದ ಜನರ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಅಸೆಂಬ್ಲಿ ಒಳಗೆ ನಿರ್ಣಾಯಕ ವಿಷಯಗಳ ಬಗ್ಗೆ ಮಾತನಾಡಲು ಅವರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದ್ದಾರೆ.

ನಾವು ಅವರ ಅನುಮತಿಯನ್ನು ತೆಗೆದುಕೊಳ್ಳಬೇಕೇ? ನಮಗೆ ಒಳಗೆ ಮಾತನಾಡಲು ಅವಕಾಶವಿಲ್ಲ, ನಾವು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಯಸಿದಾಗ, ನೀವು ನಮಗೆ ಮಾತನಾಡಲು ಬಿಡುವುದಿಲ್ಲ, ಹಿಂಸಾಚಾರ, ಭ್ರಷ್ಟಾಚಾರ, ಅತ್ಯಾಚಾರದ ವಿರುದ್ಧ ನೀವು ಮಾತನಾಡುವುದಿಲ್ಲ. ನಾವು ಮಾತನಾಡುವಾಗ ಇದರ ವಿರುದ್ಧ ಘೋಷಣೆ ಕೂಗಿದಾಗ ನೀವು ಪೊಲೀಸರಿಗೆ ಕರೆ ಮಾಡಿ ನಮ್ಮ ಮೇಲೆ ಎಫ್‌ಐಆರ್‌ಗಳನ್ನು ಹಾಕಿಸಿದ್ದೀರಿ ಎಂದು ವಾಗ್ಧಾಳಿ ನಡೆಸಿದ್ದಾರೆ.

ಮಮತಾ ಬ್ಯಾನರ್ಜಿಯನ್ನು ಉದ್ದೇಶಿಸಿ ಮಾತನಾಡಿದ ಪಾಲ್, 2021ರಲ್ಲಿ ರಾಷ್ಟ್ರಗೀತೆ ವೇಳೆ ಕುರ್ಚಿಯ ಮೇಲೆ ಕುಳಿತಿದ್ದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆಯೇ? ಎಂದು ಮಮತಾ ವಿರುದ್ಧ ಈ ಹಿಂದಿನ ಪ್ರಕರಣವನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ಈ ವರ್ಷದ ಅಕ್ಟೋಬರ್‌ನಲ್ಲಿ ಮುಂಬೈ ಮೆಟ್ರೋಪಾಲಿಟನ್ ನ್ಯಾಯಾಲಯವು ರಾಷ್ಟ್ರಗೀತೆಗೆ ಅಗೌರವ ತೋರಿದ ಬ್ಯಾನರ್ಜಿ ವಿರುದ್ಧದ ದೂರನ್ನು ವಜಾಗೊಳಿಸಿದೆ. ಬಿಜೆಪಿ ಕಾರ್ಯಾಧ್ಯಕ್ಷ ವಿವೇಕಾನಂದ ಗುಪ್ತಾ ಅವರು ಮಮತಾ ಬ್ಯಾನರ್ಜಿ ವಿರುದ್ಧ ದೂರು ಸಲ್ಲಿಸಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ವಿರುದ್ಧದ ಅಪರಾಧ ಸಾಬೀತಾಗಿಲ್ಲ ಎಂದು ನ್ಯಾಯಾಲಯವು ಅವರ ಮನವಿಯನ್ನು ವಜಾಗೊಳಿಸಿತ್ತು.

ಇದನ್ನು ಓದಿ: ಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...