Homeಮುಖಪುಟ12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

- Advertisement -
- Advertisement -

ಕೆ.ಆರ್. ಶ್ಯಾಮ ಸುಂದರ್

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಇದೇ ಎಪ್ರಿಲ್ 15ರಂದು ಕೇಂದ್ರ ಗೃಹ ಸಚಿವಾಲಯವು ಒಂದು ವಿವರವಾದ ಅಧಿಸೂಚನೆಯನ್ನು ಹೊರಡಿಸಿತು. ಅದು ದಿಗ್ಬಂಧಿತವಲ್ಲದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾಂಭಿಸಬಹುದಾದ ಶರತ್ತುಗಳನ್ನು ವಿವರಿಸಿತ್ತು.

ಈ ಆದೇಶವು- “ಸಾಮಾಜಿಕ ಅಂತರ” (ದೈಹಿಕ ಅಂತರ), ಕಾರ್ಮಿಕರಿಗೆ ಖಾಸಗಿ ಸಾರಿಗೆ, ವೈದ್ಯಕೀಯ ವಿಮೆ ಮುಂತಾದ ಕಡ್ಡಾಯವಾದ “ಮಾಡು”, “ಮಾಡಬೇಡ” ನಿಯಮಗಳನ್ನು ಹೇರಿದೆ. ಈ ನಿರ್ದೇಶನಗಳ ಯಾವುದೇ ಉಲ್ಲಂಘನೆಗೆ ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯಿದೆ 2005 (ಎನ್‌ಡಿಎಂಎ)ರ ಅಡಿಯಲ್ಲಿ ಸೆರೆವಾಸ ಸೇರಿದಂತೆ ಭಾರೀ ದಂಡ ವಿಧಿಸಬಹುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

ಇದಕ್ಕಿಂತ ಎರಡು ದಿನಗಳ ಮೊದಲು, ಅಂದರೆ ಎಪ್ರಿಲ್ 13ರಂದು ಭಾರತದ ಕೇಂದ್ರೀಯ ಕಾರ್ಮಿಕ ಸಂಘ (ಸಿಟಿಯು)ಗಳು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದು, ಸರಕಾರವು ಪರಿಗಣಿಸುತ್ತಿರುವುದಾಗಿ ಹೇಳಲಾದ ಕಾರ್ಖಾನೆ ಕಾಯಿದೆ, 1948 (ಎಫ್‌ಎ)ಕ್ಕೆ ತಿದ್ದುಪಡಿ ಮಾಡುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದವು.

ಈ ತಿದ್ದುಪಡಿಯು ಕಂಪೆನಿಗಳಿಗೆ ಕಾರ್ಖಾನೆಗಳ ಕಾರ್ಮಿಕರಿಗೆ ಕೆಲಸದ ಅವಧಿಯನ್ನು ಈಗಿರುವ- ದಿನಕ್ಕೆ ಎಂಟು ಗಂಟೆ, ವಾರಕ್ಕೆ ಆರು ದಿನ (48ಗಂಟೆ)ದಿಂದ, ದಿನಕ್ಕೆ 12 ಗಂಟೆ, ವಾರಕ್ಕೆ ಆರು ದಿನ (72 ಗಂಟೆ)ಕ್ಕೆ ಹೆಚ್ಚಿಸಲು ಅವಕಾಶ ಮಾಡಿಕೊಡುತ್ತಿತ್ತು.

ಈ ನಡೆಯು ವಿವಾದಾಸ್ಪದವಾಗಿದೆ. ಏಕೆಂದರೆ, ವಾರಕ್ಕೆ 48 ಗಂಟೆಗಳ ಕೆಲಸವು ಜಾಗತಿಕವಾಗಿ ಮತ್ತು ಅಂತರರಾಷ್ಟ್ರೀಯ ಕಾರ್ಮಿಕ ಸಂಘ (ಐಎಲ್ಓ)ದಿಂದ ಒಪ್ಪಿತವಾದ ನಿಯಮವಾಗಿದೆ. ಹಾಗೆ ನೋಡುವುದಾದಲ್ಲಿ ಐಎಲ್ಓ ಅಂಗೀಕರಿಸಿದ ಮೊತ್ತಮೊದಲ ಒಪ್ಪಂದವೇ ಕೆಲಸದ ಅವಧಿ (ಕೈಗಾರಿಕೆ) ಒಪ್ಪಂದ 1919 (ನಂ.1) ಆಗಿದೆ. ಇದಕ್ಕೆ ಭಾರತವು 1921ರಲ್ಲಿಯೇ ಸಹಿ ಹಾಕಿ, ವಾರಕ್ಕೆ 48 ಗಂಟೆಗಳ ಕೆಲಸವನ್ನು ನಿಗದಿಪಡಿಸಿತ್ತು.

ಸರಕಾರವು ಇನ್ನೂ ಕಾರ್ಖಾನೆ ಕಾಯಿದೆಯನ್ನು ತಿದ್ದುಪಡಿ ಮಾಡಿಲ್ಲವಾದರೂ, ಕನಿಷ್ಟ ನಾಲ್ಕು ಸರಕಾರಗಳು ಕಳೆದ ಕೆಲವು ದಿನಗಳ ಅವಧಿಯಲ್ಲಿ ಮೇಲೆ ಹೇಳಿರುವ ರೀತಿಯಲ್ಲಿ ಕೆಲಸದ ಅವಧಿಯನ್ನು ಹೆಚ್ಚಿಸುವ ಅಧಿಸೂಚನೆಗಳನ್ನು ಹೊರಡಿಸಿವೆ. ಅವುಗಳೆಂದರೆ, ರಾಜಸ್ಥಾನ (ಎಪ್ರಿಲ್ 11), ಗುಜರಾತ್ (ಎಪ್ರಿಲ್ 17), ಪಂಜಾಬ್ (ಎಪ್ರಿಲ್ 20) ಮತ್ತು ಹಿಮಾಚಲ ಪ್ರದೇಶ (ಎಪ್ರಿಲ್ 21).

ಇದೇ ಹೊತ್ತಿಗೆ, ಭಾರತದಲ್ಲಿ ಐತಿಹಾಸಿಕವಾಗಿಯೂ ಹಾಗೂ ಇತ್ತೀಚಿನ ವರೆಗೂ ಇದು ಕಾರ್ಮಿಕ ಕಾನೂನುಗಳ “ಸುಧಾರಣೆ” (ವಾಸ್ತವವಾಗಿ ಕಾರ್ಮಿಕರ ಹಕ್ಕುಗಳಿಗೆ ಕತ್ತರಿ)ಗಳನ್ನು ಜಾರಿಗೊಳಿಸಲು ಅತ್ಯಂತ ಅನುಕೂಲಕರ ಕಾರ್ಯತಂತ್ರವಾಗುತ್ತಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಮಾರುಕಟ್ಟೆ “ಸುಧಾರಣೆ”ಗಳನ್ನು ಕಾರ್ಮಿಕ ಚಳವಳಿಯು ಸಾಕಷ್ಟು ಒಗ್ಗಟ್ಟಿನಿಂದ ಕೋಟ್ಯಂತರ ಕಾರ್ಮಿಕರ ಬೃಹತ್ ಮುಷ್ಕರಗಳ ಮೂಲಕ ಮತ್ತು ತ್ರಿಪಕ್ಷೀಯ ವೇದಿಕೆಗಳಲ್ಲೂ ಬಲವಾಗಿ ಎದುರಿಸುತ್ತಾ ಬಂದಿದೆ. ಆಗೊಮ್ಮೆ, ಈಗೊಮ್ಮೆ ಅವಕಾಶವಾದಿ ರಾಜಕೀಯ ಪ್ರತಿಪಕ್ಷಗಳ ಬೆಂಬಲವೂ ಅವುಗಳಿಗೆ ಸಿಕ್ಕಿದೆ.

“ಗೊತ್ತುಮಾಡಿ-ವಜಾಮಾಡಿ” (Hire and Fire) ಎಂಬ ಸುಲಭವಾದ “ಸುಧಾರಣೆ”ಗಳು ನಿರುದ್ಯೋಗದಂತಹ ಋಣಾತ್ಮಕ ಪರಿಣಾಮ ಉಂಟುಮಾಡಿ, ಆಳುವ ಪಕ್ಷಗಳಿಗೆ ಪ್ರತಿಕೂಲವಾಗಿ ಪರಿಣಮಿಸಿ ನಷ್ಟ ಉಂಟುಮಾಡುತ್ತವೆ. ಈ ಕಾರಣದಿಂದಲೇ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಕಾಯಿದೆಗಳ ಮೂಲಭೂತ ಸುಧಾರಣೆಯು ಆಳುವ ಪಕ್ಷಗಳಿಗೆ ಸಮಸ್ಯೆ ಉಂಟುಮಾಡುವಂತವುಗಳಾಗಿರುತ್ತದೆ.

ಆಗ, ಇದರಿಂದ ಹೊರಬರಲು ಕೇಂದ್ರ ಸರಕಾರದ ದಾರಿ ಯಾವುದಾಗಿರುತ್ತದೆ? “ಕಾರ್ಮಿಕ” ಎಂಬುದು ಕೇಂದ್ರ ಮತ್ತು ರಾಜ್ಯಗಳ ಸಮಾನ ಪಟ್ಟಿಯಲ್ಲಿ ಬರುವ ವಿಷಯವಾಗಿರುವುದರಿಂದ, ಕೇಂದ್ರ ಸರಕಾರವು ಮನಸ್ಸಿರುವ ರಾಜ್ಯಗಳಿಗೆ ಈ “ಸುಧಾರಣೆ”ಗಳನ್ನು ಅನುಷ್ಟಾನಗೊಳಿಸಲು ಒತ್ತಾಸೆ ನೀಡುತ್ತದೆ. ನಂತರ, ಮೂಲತಃ ಕೇಂದ್ರ ಸಂಪುಟದ ನಿರ್ಧಾರವೇ ಆಗಿರುವ ರಾಷ್ಟ್ರಪತಿಯವರ ಅಂಗೀಕಾರ ಅವುಗಳಿಗೆ ಸಿಗುತ್ತದೆ.

ಇದೇ ರೀತಿಯಲ್ಲಿ ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿರ್ಮೂಲನ) ಕಾಯಿದೆ 1970ಕ್ಕೆ ಆಗಿನ ‘ಏಕೀಕೃತ’ ಆಂಧ್ರಪ್ರದೇಶವು 2003ರಲ್ಲಿ, ರಾಜಸ್ಥಾನ 2014ರಲ್ಲಿ ಮತ್ತು ಮಹಾರಾಷ್ಟ್ರ 2017ರಲ್ಲಿ ತಿದ್ದುಪಡಿ ತಂದು “ಸುಧಾರಣೆ”ಗಳನ್ನು ಜಾರಿಗೊಳಿಸಿದ್ದವು. ಅದೇ ರೀತಿಯಲ್ಲಿ, 100 ಕಾರ್ಮಿಕರು ಇರುವ ಕೈಗಾರಿಕಾ ಸ್ಥಾಪನೆಗಳಿಗೆ ಅನ್ವಯವಾಗುತ್ತಿದ್ದುದನ್ನು 300ಕ್ಕೂ ಹೆಚ್ಚು ಕಾರ್ಮಿಕರನ್ನು ನೇಮಕ ಮಾಡಿರುವ ಸ್ಥಾಪನೆಗಳಿಗೆ ಮಾತ್ರ ಅನ್ವಯವಾಗುವಂತೆ ರಾಜಸ್ಥಾನವು 2014ರಲ್ಲಿ ಅಧ್ಯಾಯ ‘V-ಬಿ’ಗೆ “ಸುಧಾರಣೆ”ಗಳನ್ನು ಜಾರಿಗೊಳಿಸಿತು. ಇದಾದ ಕೂಡಲೇ 2016ರಲ್ಲಿ ಜಾರ್ಖಂಡ್ ಸೇರಿದಂತೆ ಇತರ ಅನೇಕ ರಾಜ್ಯಗಳು ಇದನ್ನು ಅನುಸರಿಸಿದವು.

ಅಂದರೆ, ಕೇಂದ್ರ ಸರಕಾರಕ್ಕೆ ನೇರವಾಗಿ ಜಾರಿಗೊಳಿಸಲು ಸಾಮಾನ್ಯವಾಗಿ ಧೈರ್ಯವಿಲ್ಲದ “ಕಠಿಣ”ವಾದ ಕಾರ್ಮಿಕ ಕಾಯಿದೆ “ಸುಧಾರಣೆ”ಗಳನ್ನು- ಜಾರಿಗೊಳಿಸುವ ಧೈರ್ಯತೋರುವ ರಾಜ್ಯ ಸರಕಾರಗಳತ್ತ ಕೇಂದ್ರವು ತಳ್ಳುತ್ತಿದೆ. ರಾಜ್ಯ ಸರಕಾರಗಳು ಇಂತಹಾ ಕಾನೂನುಗಳನ್ನು ತರಲು ಅರ್ಹವಾಗಿರುವುದರಿಂದ ತಾನು ಏನನ್ನೂ ಮಾಡುವಂತಿಲ್ಲ ಎಂಬ ಅಸಹಾಯಕತೆಯ ಪ್ರದರ್ಶನ ಕೇಂದ್ರ ಸರಕಾರಕ್ಕೆ ಮಾಮೂಲಿಯಾಗಿದೆ.

ಇದೀಗ ಕೋವಿಡ್- 19 ಪಿಡುಗಿನ ಸಂದರ್ಭದಲ್ಲಿ ಇಂತದ್ದೇ ಕಾರ್ಯತಂತ್ರವನ್ನು ಸರಕಾರ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಏರಿಸಲು ಬಳಸಿಕೊಳ್ಳುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿ ಹಲವಾರು ಕಾನೂನು ದೋಷಗಳು, ಮಾಲಕರು ತಪ್ಪಿಸಿಕೊಳ್ಳಲು ಸಾಧ್ಯವಾಗುವ ರಂಧ್ರಗಳು ಇತ್ಯಾದಿಗಳು ಇವೆ. ಇವುಗಳಿಗೆ ಹೊರತಾಗಿ ಕಾರ್ಮಿಕರ ಆರೋಗ್ಯ, ಅವರಿಗೆ ಹಕ್ಕಿನಿಂದ ಸಿಗಬೇಕಾದ ವೇತನ- ಸೌಲಭ್ಯಗಳಲ್ಲಿ ಮೋಸ, ಉಳಿದ ಅರ್ಹ/ ಸಶಕ್ತ ಕಾರ್ಮಿಕರಿಗೆ ಉದ್ಯೋಗಾವಕಾಶ ನಷ್ಟ, ಕೈಗಾರಿಕಾ ಸಂಬಂಧಗಳ ಬಿಗಡಾಯಿಸುವಿಕೆ ಮುಂತಾದ ಹಲವಾರು ಸಮಸ್ಯೆಗಳಿದ್ದು, ಈ ಕುರಿತು ಪ್ರತ್ಯೇಕ ಲೇಖನವನ್ನೇ ಬರೆಯಬಹುದು.

ಇಷ್ಟಿದ್ದರೂ ಸರಕಾರವು ಕೊರೋನಾ ನೆಪದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆ ಗೆ ಹೆಚ್ಚಿಸಿ, ಹಿಂಬಾಗಿಲಿನ ಮೂಲಕ ಅವರಿಗೆ ಘೋರ ಮೋಸ ಮಾಡುತ್ತಿದೆ.

(ಲೇಖಕ  ಕೆ.ಆರ್. ಶ್ಯಾಮ ಸುಂದರ್ ಅವರು ಜೆಮ್ಶೆಡ್‌ಪುರದ ಕ್ಸೇವಿಯರ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಪ್ರಾಧ್ಯಾಪಕರು).


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...