Homeಮುಖಪುಟ12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

- Advertisement -
- Advertisement -

ಕೆ.ಆರ್. ಶ್ಯಾಮ ಸುಂದರ್

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಇದೇ ಎಪ್ರಿಲ್ 15ರಂದು ಕೇಂದ್ರ ಗೃಹ ಸಚಿವಾಲಯವು ಒಂದು ವಿವರವಾದ ಅಧಿಸೂಚನೆಯನ್ನು ಹೊರಡಿಸಿತು. ಅದು ದಿಗ್ಬಂಧಿತವಲ್ಲದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾಂಭಿಸಬಹುದಾದ ಶರತ್ತುಗಳನ್ನು ವಿವರಿಸಿತ್ತು.

ಈ ಆದೇಶವು- “ಸಾಮಾಜಿಕ ಅಂತರ” (ದೈಹಿಕ ಅಂತರ), ಕಾರ್ಮಿಕರಿಗೆ ಖಾಸಗಿ ಸಾರಿಗೆ, ವೈದ್ಯಕೀಯ ವಿಮೆ ಮುಂತಾದ ಕಡ್ಡಾಯವಾದ “ಮಾಡು”, “ಮಾಡಬೇಡ” ನಿಯಮಗಳನ್ನು ಹೇರಿದೆ. ಈ ನಿರ್ದೇಶನಗಳ ಯಾವುದೇ ಉಲ್ಲಂಘನೆಗೆ ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯಿದೆ 2005 (ಎನ್‌ಡಿಎಂಎ)ರ ಅಡಿಯಲ್ಲಿ ಸೆರೆವಾಸ ಸೇರಿದಂತೆ ಭಾರೀ ದಂಡ ವಿಧಿಸಬಹುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

ಇದಕ್ಕಿಂತ ಎರಡು ದಿನಗಳ ಮೊದಲು, ಅಂದರೆ ಎಪ್ರಿಲ್ 13ರಂದು ಭಾರತದ ಕೇಂದ್ರೀಯ ಕಾರ್ಮಿಕ ಸಂಘ (ಸಿಟಿಯು)ಗಳು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದು, ಸರಕಾರವು ಪರಿಗಣಿಸುತ್ತಿರುವುದಾಗಿ ಹೇಳಲಾದ ಕಾರ್ಖಾನೆ ಕಾಯಿದೆ, 1948 (ಎಫ್‌ಎ)ಕ್ಕೆ ತಿದ್ದುಪಡಿ ಮಾಡುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದವು.

ಈ ತಿದ್ದುಪಡಿಯು ಕಂಪೆನಿಗಳಿಗೆ ಕಾರ್ಖಾನೆಗಳ ಕಾರ್ಮಿಕರಿಗೆ ಕೆಲಸದ ಅವಧಿಯನ್ನು ಈಗಿರುವ- ದಿನಕ್ಕೆ ಎಂಟು ಗಂಟೆ, ವಾರಕ್ಕೆ ಆರು ದಿನ (48ಗಂಟೆ)ದಿಂದ, ದಿನಕ್ಕೆ 12 ಗಂಟೆ, ವಾರಕ್ಕೆ ಆರು ದಿನ (72 ಗಂಟೆ)ಕ್ಕೆ ಹೆಚ್ಚಿಸಲು ಅವಕಾಶ ಮಾಡಿಕೊಡುತ್ತಿತ್ತು.

ಈ ನಡೆಯು ವಿವಾದಾಸ್ಪದವಾಗಿದೆ. ಏಕೆಂದರೆ, ವಾರಕ್ಕೆ 48 ಗಂಟೆಗಳ ಕೆಲಸವು ಜಾಗತಿಕವಾಗಿ ಮತ್ತು ಅಂತರರಾಷ್ಟ್ರೀಯ ಕಾರ್ಮಿಕ ಸಂಘ (ಐಎಲ್ಓ)ದಿಂದ ಒಪ್ಪಿತವಾದ ನಿಯಮವಾಗಿದೆ. ಹಾಗೆ ನೋಡುವುದಾದಲ್ಲಿ ಐಎಲ್ಓ ಅಂಗೀಕರಿಸಿದ ಮೊತ್ತಮೊದಲ ಒಪ್ಪಂದವೇ ಕೆಲಸದ ಅವಧಿ (ಕೈಗಾರಿಕೆ) ಒಪ್ಪಂದ 1919 (ನಂ.1) ಆಗಿದೆ. ಇದಕ್ಕೆ ಭಾರತವು 1921ರಲ್ಲಿಯೇ ಸಹಿ ಹಾಕಿ, ವಾರಕ್ಕೆ 48 ಗಂಟೆಗಳ ಕೆಲಸವನ್ನು ನಿಗದಿಪಡಿಸಿತ್ತು.

ಸರಕಾರವು ಇನ್ನೂ ಕಾರ್ಖಾನೆ ಕಾಯಿದೆಯನ್ನು ತಿದ್ದುಪಡಿ ಮಾಡಿಲ್ಲವಾದರೂ, ಕನಿಷ್ಟ ನಾಲ್ಕು ಸರಕಾರಗಳು ಕಳೆದ ಕೆಲವು ದಿನಗಳ ಅವಧಿಯಲ್ಲಿ ಮೇಲೆ ಹೇಳಿರುವ ರೀತಿಯಲ್ಲಿ ಕೆಲಸದ ಅವಧಿಯನ್ನು ಹೆಚ್ಚಿಸುವ ಅಧಿಸೂಚನೆಗಳನ್ನು ಹೊರಡಿಸಿವೆ. ಅವುಗಳೆಂದರೆ, ರಾಜಸ್ಥಾನ (ಎಪ್ರಿಲ್ 11), ಗುಜರಾತ್ (ಎಪ್ರಿಲ್ 17), ಪಂಜಾಬ್ (ಎಪ್ರಿಲ್ 20) ಮತ್ತು ಹಿಮಾಚಲ ಪ್ರದೇಶ (ಎಪ್ರಿಲ್ 21).

ಇದೇ ಹೊತ್ತಿಗೆ, ಭಾರತದಲ್ಲಿ ಐತಿಹಾಸಿಕವಾಗಿಯೂ ಹಾಗೂ ಇತ್ತೀಚಿನ ವರೆಗೂ ಇದು ಕಾರ್ಮಿಕ ಕಾನೂನುಗಳ “ಸುಧಾರಣೆ” (ವಾಸ್ತವವಾಗಿ ಕಾರ್ಮಿಕರ ಹಕ್ಕುಗಳಿಗೆ ಕತ್ತರಿ)ಗಳನ್ನು ಜಾರಿಗೊಳಿಸಲು ಅತ್ಯಂತ ಅನುಕೂಲಕರ ಕಾರ್ಯತಂತ್ರವಾಗುತ್ತಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಮಾರುಕಟ್ಟೆ “ಸುಧಾರಣೆ”ಗಳನ್ನು ಕಾರ್ಮಿಕ ಚಳವಳಿಯು ಸಾಕಷ್ಟು ಒಗ್ಗಟ್ಟಿನಿಂದ ಕೋಟ್ಯಂತರ ಕಾರ್ಮಿಕರ ಬೃಹತ್ ಮುಷ್ಕರಗಳ ಮೂಲಕ ಮತ್ತು ತ್ರಿಪಕ್ಷೀಯ ವೇದಿಕೆಗಳಲ್ಲೂ ಬಲವಾಗಿ ಎದುರಿಸುತ್ತಾ ಬಂದಿದೆ. ಆಗೊಮ್ಮೆ, ಈಗೊಮ್ಮೆ ಅವಕಾಶವಾದಿ ರಾಜಕೀಯ ಪ್ರತಿಪಕ್ಷಗಳ ಬೆಂಬಲವೂ ಅವುಗಳಿಗೆ ಸಿಕ್ಕಿದೆ.

“ಗೊತ್ತುಮಾಡಿ-ವಜಾಮಾಡಿ” (Hire and Fire) ಎಂಬ ಸುಲಭವಾದ “ಸುಧಾರಣೆ”ಗಳು ನಿರುದ್ಯೋಗದಂತಹ ಋಣಾತ್ಮಕ ಪರಿಣಾಮ ಉಂಟುಮಾಡಿ, ಆಳುವ ಪಕ್ಷಗಳಿಗೆ ಪ್ರತಿಕೂಲವಾಗಿ ಪರಿಣಮಿಸಿ ನಷ್ಟ ಉಂಟುಮಾಡುತ್ತವೆ. ಈ ಕಾರಣದಿಂದಲೇ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಕಾಯಿದೆಗಳ ಮೂಲಭೂತ ಸುಧಾರಣೆಯು ಆಳುವ ಪಕ್ಷಗಳಿಗೆ ಸಮಸ್ಯೆ ಉಂಟುಮಾಡುವಂತವುಗಳಾಗಿರುತ್ತದೆ.

ಆಗ, ಇದರಿಂದ ಹೊರಬರಲು ಕೇಂದ್ರ ಸರಕಾರದ ದಾರಿ ಯಾವುದಾಗಿರುತ್ತದೆ? “ಕಾರ್ಮಿಕ” ಎಂಬುದು ಕೇಂದ್ರ ಮತ್ತು ರಾಜ್ಯಗಳ ಸಮಾನ ಪಟ್ಟಿಯಲ್ಲಿ ಬರುವ ವಿಷಯವಾಗಿರುವುದರಿಂದ, ಕೇಂದ್ರ ಸರಕಾರವು ಮನಸ್ಸಿರುವ ರಾಜ್ಯಗಳಿಗೆ ಈ “ಸುಧಾರಣೆ”ಗಳನ್ನು ಅನುಷ್ಟಾನಗೊಳಿಸಲು ಒತ್ತಾಸೆ ನೀಡುತ್ತದೆ. ನಂತರ, ಮೂಲತಃ ಕೇಂದ್ರ ಸಂಪುಟದ ನಿರ್ಧಾರವೇ ಆಗಿರುವ ರಾಷ್ಟ್ರಪತಿಯವರ ಅಂಗೀಕಾರ ಅವುಗಳಿಗೆ ಸಿಗುತ್ತದೆ.

ಇದೇ ರೀತಿಯಲ್ಲಿ ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿರ್ಮೂಲನ) ಕಾಯಿದೆ 1970ಕ್ಕೆ ಆಗಿನ ‘ಏಕೀಕೃತ’ ಆಂಧ್ರಪ್ರದೇಶವು 2003ರಲ್ಲಿ, ರಾಜಸ್ಥಾನ 2014ರಲ್ಲಿ ಮತ್ತು ಮಹಾರಾಷ್ಟ್ರ 2017ರಲ್ಲಿ ತಿದ್ದುಪಡಿ ತಂದು “ಸುಧಾರಣೆ”ಗಳನ್ನು ಜಾರಿಗೊಳಿಸಿದ್ದವು. ಅದೇ ರೀತಿಯಲ್ಲಿ, 100 ಕಾರ್ಮಿಕರು ಇರುವ ಕೈಗಾರಿಕಾ ಸ್ಥಾಪನೆಗಳಿಗೆ ಅನ್ವಯವಾಗುತ್ತಿದ್ದುದನ್ನು 300ಕ್ಕೂ ಹೆಚ್ಚು ಕಾರ್ಮಿಕರನ್ನು ನೇಮಕ ಮಾಡಿರುವ ಸ್ಥಾಪನೆಗಳಿಗೆ ಮಾತ್ರ ಅನ್ವಯವಾಗುವಂತೆ ರಾಜಸ್ಥಾನವು 2014ರಲ್ಲಿ ಅಧ್ಯಾಯ ‘V-ಬಿ’ಗೆ “ಸುಧಾರಣೆ”ಗಳನ್ನು ಜಾರಿಗೊಳಿಸಿತು. ಇದಾದ ಕೂಡಲೇ 2016ರಲ್ಲಿ ಜಾರ್ಖಂಡ್ ಸೇರಿದಂತೆ ಇತರ ಅನೇಕ ರಾಜ್ಯಗಳು ಇದನ್ನು ಅನುಸರಿಸಿದವು.

ಅಂದರೆ, ಕೇಂದ್ರ ಸರಕಾರಕ್ಕೆ ನೇರವಾಗಿ ಜಾರಿಗೊಳಿಸಲು ಸಾಮಾನ್ಯವಾಗಿ ಧೈರ್ಯವಿಲ್ಲದ “ಕಠಿಣ”ವಾದ ಕಾರ್ಮಿಕ ಕಾಯಿದೆ “ಸುಧಾರಣೆ”ಗಳನ್ನು- ಜಾರಿಗೊಳಿಸುವ ಧೈರ್ಯತೋರುವ ರಾಜ್ಯ ಸರಕಾರಗಳತ್ತ ಕೇಂದ್ರವು ತಳ್ಳುತ್ತಿದೆ. ರಾಜ್ಯ ಸರಕಾರಗಳು ಇಂತಹಾ ಕಾನೂನುಗಳನ್ನು ತರಲು ಅರ್ಹವಾಗಿರುವುದರಿಂದ ತಾನು ಏನನ್ನೂ ಮಾಡುವಂತಿಲ್ಲ ಎಂಬ ಅಸಹಾಯಕತೆಯ ಪ್ರದರ್ಶನ ಕೇಂದ್ರ ಸರಕಾರಕ್ಕೆ ಮಾಮೂಲಿಯಾಗಿದೆ.

ಇದೀಗ ಕೋವಿಡ್- 19 ಪಿಡುಗಿನ ಸಂದರ್ಭದಲ್ಲಿ ಇಂತದ್ದೇ ಕಾರ್ಯತಂತ್ರವನ್ನು ಸರಕಾರ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಏರಿಸಲು ಬಳಸಿಕೊಳ್ಳುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿ ಹಲವಾರು ಕಾನೂನು ದೋಷಗಳು, ಮಾಲಕರು ತಪ್ಪಿಸಿಕೊಳ್ಳಲು ಸಾಧ್ಯವಾಗುವ ರಂಧ್ರಗಳು ಇತ್ಯಾದಿಗಳು ಇವೆ. ಇವುಗಳಿಗೆ ಹೊರತಾಗಿ ಕಾರ್ಮಿಕರ ಆರೋಗ್ಯ, ಅವರಿಗೆ ಹಕ್ಕಿನಿಂದ ಸಿಗಬೇಕಾದ ವೇತನ- ಸೌಲಭ್ಯಗಳಲ್ಲಿ ಮೋಸ, ಉಳಿದ ಅರ್ಹ/ ಸಶಕ್ತ ಕಾರ್ಮಿಕರಿಗೆ ಉದ್ಯೋಗಾವಕಾಶ ನಷ್ಟ, ಕೈಗಾರಿಕಾ ಸಂಬಂಧಗಳ ಬಿಗಡಾಯಿಸುವಿಕೆ ಮುಂತಾದ ಹಲವಾರು ಸಮಸ್ಯೆಗಳಿದ್ದು, ಈ ಕುರಿತು ಪ್ರತ್ಯೇಕ ಲೇಖನವನ್ನೇ ಬರೆಯಬಹುದು.

ಇಷ್ಟಿದ್ದರೂ ಸರಕಾರವು ಕೊರೋನಾ ನೆಪದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆ ಗೆ ಹೆಚ್ಚಿಸಿ, ಹಿಂಬಾಗಿಲಿನ ಮೂಲಕ ಅವರಿಗೆ ಘೋರ ಮೋಸ ಮಾಡುತ್ತಿದೆ.

(ಲೇಖಕ  ಕೆ.ಆರ್. ಶ್ಯಾಮ ಸುಂದರ್ ಅವರು ಜೆಮ್ಶೆಡ್‌ಪುರದ ಕ್ಸೇವಿಯರ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಪ್ರಾಧ್ಯಾಪಕರು).


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...