Homeಮುಖಪುಟ12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

- Advertisement -
- Advertisement -

ಕೆ.ಆರ್. ಶ್ಯಾಮ ಸುಂದರ್

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಇದೇ ಎಪ್ರಿಲ್ 15ರಂದು ಕೇಂದ್ರ ಗೃಹ ಸಚಿವಾಲಯವು ಒಂದು ವಿವರವಾದ ಅಧಿಸೂಚನೆಯನ್ನು ಹೊರಡಿಸಿತು. ಅದು ದಿಗ್ಬಂಧಿತವಲ್ಲದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾಂಭಿಸಬಹುದಾದ ಶರತ್ತುಗಳನ್ನು ವಿವರಿಸಿತ್ತು.

ಈ ಆದೇಶವು- “ಸಾಮಾಜಿಕ ಅಂತರ” (ದೈಹಿಕ ಅಂತರ), ಕಾರ್ಮಿಕರಿಗೆ ಖಾಸಗಿ ಸಾರಿಗೆ, ವೈದ್ಯಕೀಯ ವಿಮೆ ಮುಂತಾದ ಕಡ್ಡಾಯವಾದ “ಮಾಡು”, “ಮಾಡಬೇಡ” ನಿಯಮಗಳನ್ನು ಹೇರಿದೆ. ಈ ನಿರ್ದೇಶನಗಳ ಯಾವುದೇ ಉಲ್ಲಂಘನೆಗೆ ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯಿದೆ 2005 (ಎನ್‌ಡಿಎಂಎ)ರ ಅಡಿಯಲ್ಲಿ ಸೆರೆವಾಸ ಸೇರಿದಂತೆ ಭಾರೀ ದಂಡ ವಿಧಿಸಬಹುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

ಇದಕ್ಕಿಂತ ಎರಡು ದಿನಗಳ ಮೊದಲು, ಅಂದರೆ ಎಪ್ರಿಲ್ 13ರಂದು ಭಾರತದ ಕೇಂದ್ರೀಯ ಕಾರ್ಮಿಕ ಸಂಘ (ಸಿಟಿಯು)ಗಳು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದು, ಸರಕಾರವು ಪರಿಗಣಿಸುತ್ತಿರುವುದಾಗಿ ಹೇಳಲಾದ ಕಾರ್ಖಾನೆ ಕಾಯಿದೆ, 1948 (ಎಫ್‌ಎ)ಕ್ಕೆ ತಿದ್ದುಪಡಿ ಮಾಡುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದವು.

ಈ ತಿದ್ದುಪಡಿಯು ಕಂಪೆನಿಗಳಿಗೆ ಕಾರ್ಖಾನೆಗಳ ಕಾರ್ಮಿಕರಿಗೆ ಕೆಲಸದ ಅವಧಿಯನ್ನು ಈಗಿರುವ- ದಿನಕ್ಕೆ ಎಂಟು ಗಂಟೆ, ವಾರಕ್ಕೆ ಆರು ದಿನ (48ಗಂಟೆ)ದಿಂದ, ದಿನಕ್ಕೆ 12 ಗಂಟೆ, ವಾರಕ್ಕೆ ಆರು ದಿನ (72 ಗಂಟೆ)ಕ್ಕೆ ಹೆಚ್ಚಿಸಲು ಅವಕಾಶ ಮಾಡಿಕೊಡುತ್ತಿತ್ತು.

ಈ ನಡೆಯು ವಿವಾದಾಸ್ಪದವಾಗಿದೆ. ಏಕೆಂದರೆ, ವಾರಕ್ಕೆ 48 ಗಂಟೆಗಳ ಕೆಲಸವು ಜಾಗತಿಕವಾಗಿ ಮತ್ತು ಅಂತರರಾಷ್ಟ್ರೀಯ ಕಾರ್ಮಿಕ ಸಂಘ (ಐಎಲ್ಓ)ದಿಂದ ಒಪ್ಪಿತವಾದ ನಿಯಮವಾಗಿದೆ. ಹಾಗೆ ನೋಡುವುದಾದಲ್ಲಿ ಐಎಲ್ಓ ಅಂಗೀಕರಿಸಿದ ಮೊತ್ತಮೊದಲ ಒಪ್ಪಂದವೇ ಕೆಲಸದ ಅವಧಿ (ಕೈಗಾರಿಕೆ) ಒಪ್ಪಂದ 1919 (ನಂ.1) ಆಗಿದೆ. ಇದಕ್ಕೆ ಭಾರತವು 1921ರಲ್ಲಿಯೇ ಸಹಿ ಹಾಕಿ, ವಾರಕ್ಕೆ 48 ಗಂಟೆಗಳ ಕೆಲಸವನ್ನು ನಿಗದಿಪಡಿಸಿತ್ತು.

ಸರಕಾರವು ಇನ್ನೂ ಕಾರ್ಖಾನೆ ಕಾಯಿದೆಯನ್ನು ತಿದ್ದುಪಡಿ ಮಾಡಿಲ್ಲವಾದರೂ, ಕನಿಷ್ಟ ನಾಲ್ಕು ಸರಕಾರಗಳು ಕಳೆದ ಕೆಲವು ದಿನಗಳ ಅವಧಿಯಲ್ಲಿ ಮೇಲೆ ಹೇಳಿರುವ ರೀತಿಯಲ್ಲಿ ಕೆಲಸದ ಅವಧಿಯನ್ನು ಹೆಚ್ಚಿಸುವ ಅಧಿಸೂಚನೆಗಳನ್ನು ಹೊರಡಿಸಿವೆ. ಅವುಗಳೆಂದರೆ, ರಾಜಸ್ಥಾನ (ಎಪ್ರಿಲ್ 11), ಗುಜರಾತ್ (ಎಪ್ರಿಲ್ 17), ಪಂಜಾಬ್ (ಎಪ್ರಿಲ್ 20) ಮತ್ತು ಹಿಮಾಚಲ ಪ್ರದೇಶ (ಎಪ್ರಿಲ್ 21).

ಇದೇ ಹೊತ್ತಿಗೆ, ಭಾರತದಲ್ಲಿ ಐತಿಹಾಸಿಕವಾಗಿಯೂ ಹಾಗೂ ಇತ್ತೀಚಿನ ವರೆಗೂ ಇದು ಕಾರ್ಮಿಕ ಕಾನೂನುಗಳ “ಸುಧಾರಣೆ” (ವಾಸ್ತವವಾಗಿ ಕಾರ್ಮಿಕರ ಹಕ್ಕುಗಳಿಗೆ ಕತ್ತರಿ)ಗಳನ್ನು ಜಾರಿಗೊಳಿಸಲು ಅತ್ಯಂತ ಅನುಕೂಲಕರ ಕಾರ್ಯತಂತ್ರವಾಗುತ್ತಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಮಾರುಕಟ್ಟೆ “ಸುಧಾರಣೆ”ಗಳನ್ನು ಕಾರ್ಮಿಕ ಚಳವಳಿಯು ಸಾಕಷ್ಟು ಒಗ್ಗಟ್ಟಿನಿಂದ ಕೋಟ್ಯಂತರ ಕಾರ್ಮಿಕರ ಬೃಹತ್ ಮುಷ್ಕರಗಳ ಮೂಲಕ ಮತ್ತು ತ್ರಿಪಕ್ಷೀಯ ವೇದಿಕೆಗಳಲ್ಲೂ ಬಲವಾಗಿ ಎದುರಿಸುತ್ತಾ ಬಂದಿದೆ. ಆಗೊಮ್ಮೆ, ಈಗೊಮ್ಮೆ ಅವಕಾಶವಾದಿ ರಾಜಕೀಯ ಪ್ರತಿಪಕ್ಷಗಳ ಬೆಂಬಲವೂ ಅವುಗಳಿಗೆ ಸಿಕ್ಕಿದೆ.

“ಗೊತ್ತುಮಾಡಿ-ವಜಾಮಾಡಿ” (Hire and Fire) ಎಂಬ ಸುಲಭವಾದ “ಸುಧಾರಣೆ”ಗಳು ನಿರುದ್ಯೋಗದಂತಹ ಋಣಾತ್ಮಕ ಪರಿಣಾಮ ಉಂಟುಮಾಡಿ, ಆಳುವ ಪಕ್ಷಗಳಿಗೆ ಪ್ರತಿಕೂಲವಾಗಿ ಪರಿಣಮಿಸಿ ನಷ್ಟ ಉಂಟುಮಾಡುತ್ತವೆ. ಈ ಕಾರಣದಿಂದಲೇ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಕಾಯಿದೆಗಳ ಮೂಲಭೂತ ಸುಧಾರಣೆಯು ಆಳುವ ಪಕ್ಷಗಳಿಗೆ ಸಮಸ್ಯೆ ಉಂಟುಮಾಡುವಂತವುಗಳಾಗಿರುತ್ತದೆ.

ಆಗ, ಇದರಿಂದ ಹೊರಬರಲು ಕೇಂದ್ರ ಸರಕಾರದ ದಾರಿ ಯಾವುದಾಗಿರುತ್ತದೆ? “ಕಾರ್ಮಿಕ” ಎಂಬುದು ಕೇಂದ್ರ ಮತ್ತು ರಾಜ್ಯಗಳ ಸಮಾನ ಪಟ್ಟಿಯಲ್ಲಿ ಬರುವ ವಿಷಯವಾಗಿರುವುದರಿಂದ, ಕೇಂದ್ರ ಸರಕಾರವು ಮನಸ್ಸಿರುವ ರಾಜ್ಯಗಳಿಗೆ ಈ “ಸುಧಾರಣೆ”ಗಳನ್ನು ಅನುಷ್ಟಾನಗೊಳಿಸಲು ಒತ್ತಾಸೆ ನೀಡುತ್ತದೆ. ನಂತರ, ಮೂಲತಃ ಕೇಂದ್ರ ಸಂಪುಟದ ನಿರ್ಧಾರವೇ ಆಗಿರುವ ರಾಷ್ಟ್ರಪತಿಯವರ ಅಂಗೀಕಾರ ಅವುಗಳಿಗೆ ಸಿಗುತ್ತದೆ.

ಇದೇ ರೀತಿಯಲ್ಲಿ ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿರ್ಮೂಲನ) ಕಾಯಿದೆ 1970ಕ್ಕೆ ಆಗಿನ ‘ಏಕೀಕೃತ’ ಆಂಧ್ರಪ್ರದೇಶವು 2003ರಲ್ಲಿ, ರಾಜಸ್ಥಾನ 2014ರಲ್ಲಿ ಮತ್ತು ಮಹಾರಾಷ್ಟ್ರ 2017ರಲ್ಲಿ ತಿದ್ದುಪಡಿ ತಂದು “ಸುಧಾರಣೆ”ಗಳನ್ನು ಜಾರಿಗೊಳಿಸಿದ್ದವು. ಅದೇ ರೀತಿಯಲ್ಲಿ, 100 ಕಾರ್ಮಿಕರು ಇರುವ ಕೈಗಾರಿಕಾ ಸ್ಥಾಪನೆಗಳಿಗೆ ಅನ್ವಯವಾಗುತ್ತಿದ್ದುದನ್ನು 300ಕ್ಕೂ ಹೆಚ್ಚು ಕಾರ್ಮಿಕರನ್ನು ನೇಮಕ ಮಾಡಿರುವ ಸ್ಥಾಪನೆಗಳಿಗೆ ಮಾತ್ರ ಅನ್ವಯವಾಗುವಂತೆ ರಾಜಸ್ಥಾನವು 2014ರಲ್ಲಿ ಅಧ್ಯಾಯ ‘V-ಬಿ’ಗೆ “ಸುಧಾರಣೆ”ಗಳನ್ನು ಜಾರಿಗೊಳಿಸಿತು. ಇದಾದ ಕೂಡಲೇ 2016ರಲ್ಲಿ ಜಾರ್ಖಂಡ್ ಸೇರಿದಂತೆ ಇತರ ಅನೇಕ ರಾಜ್ಯಗಳು ಇದನ್ನು ಅನುಸರಿಸಿದವು.

ಅಂದರೆ, ಕೇಂದ್ರ ಸರಕಾರಕ್ಕೆ ನೇರವಾಗಿ ಜಾರಿಗೊಳಿಸಲು ಸಾಮಾನ್ಯವಾಗಿ ಧೈರ್ಯವಿಲ್ಲದ “ಕಠಿಣ”ವಾದ ಕಾರ್ಮಿಕ ಕಾಯಿದೆ “ಸುಧಾರಣೆ”ಗಳನ್ನು- ಜಾರಿಗೊಳಿಸುವ ಧೈರ್ಯತೋರುವ ರಾಜ್ಯ ಸರಕಾರಗಳತ್ತ ಕೇಂದ್ರವು ತಳ್ಳುತ್ತಿದೆ. ರಾಜ್ಯ ಸರಕಾರಗಳು ಇಂತಹಾ ಕಾನೂನುಗಳನ್ನು ತರಲು ಅರ್ಹವಾಗಿರುವುದರಿಂದ ತಾನು ಏನನ್ನೂ ಮಾಡುವಂತಿಲ್ಲ ಎಂಬ ಅಸಹಾಯಕತೆಯ ಪ್ರದರ್ಶನ ಕೇಂದ್ರ ಸರಕಾರಕ್ಕೆ ಮಾಮೂಲಿಯಾಗಿದೆ.

ಇದೀಗ ಕೋವಿಡ್- 19 ಪಿಡುಗಿನ ಸಂದರ್ಭದಲ್ಲಿ ಇಂತದ್ದೇ ಕಾರ್ಯತಂತ್ರವನ್ನು ಸರಕಾರ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಏರಿಸಲು ಬಳಸಿಕೊಳ್ಳುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿ ಹಲವಾರು ಕಾನೂನು ದೋಷಗಳು, ಮಾಲಕರು ತಪ್ಪಿಸಿಕೊಳ್ಳಲು ಸಾಧ್ಯವಾಗುವ ರಂಧ್ರಗಳು ಇತ್ಯಾದಿಗಳು ಇವೆ. ಇವುಗಳಿಗೆ ಹೊರತಾಗಿ ಕಾರ್ಮಿಕರ ಆರೋಗ್ಯ, ಅವರಿಗೆ ಹಕ್ಕಿನಿಂದ ಸಿಗಬೇಕಾದ ವೇತನ- ಸೌಲಭ್ಯಗಳಲ್ಲಿ ಮೋಸ, ಉಳಿದ ಅರ್ಹ/ ಸಶಕ್ತ ಕಾರ್ಮಿಕರಿಗೆ ಉದ್ಯೋಗಾವಕಾಶ ನಷ್ಟ, ಕೈಗಾರಿಕಾ ಸಂಬಂಧಗಳ ಬಿಗಡಾಯಿಸುವಿಕೆ ಮುಂತಾದ ಹಲವಾರು ಸಮಸ್ಯೆಗಳಿದ್ದು, ಈ ಕುರಿತು ಪ್ರತ್ಯೇಕ ಲೇಖನವನ್ನೇ ಬರೆಯಬಹುದು.

ಇಷ್ಟಿದ್ದರೂ ಸರಕಾರವು ಕೊರೋನಾ ನೆಪದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆ ಗೆ ಹೆಚ್ಚಿಸಿ, ಹಿಂಬಾಗಿಲಿನ ಮೂಲಕ ಅವರಿಗೆ ಘೋರ ಮೋಸ ಮಾಡುತ್ತಿದೆ.

(ಲೇಖಕ  ಕೆ.ಆರ್. ಶ್ಯಾಮ ಸುಂದರ್ ಅವರು ಜೆಮ್ಶೆಡ್‌ಪುರದ ಕ್ಸೇವಿಯರ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಪ್ರಾಧ್ಯಾಪಕರು).


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...