Homeಮುಖಪುಟ12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

- Advertisement -
- Advertisement -

ಕೆ.ಆರ್. ಶ್ಯಾಮ ಸುಂದರ್

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಇದೇ ಎಪ್ರಿಲ್ 15ರಂದು ಕೇಂದ್ರ ಗೃಹ ಸಚಿವಾಲಯವು ಒಂದು ವಿವರವಾದ ಅಧಿಸೂಚನೆಯನ್ನು ಹೊರಡಿಸಿತು. ಅದು ದಿಗ್ಬಂಧಿತವಲ್ಲದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾಂಭಿಸಬಹುದಾದ ಶರತ್ತುಗಳನ್ನು ವಿವರಿಸಿತ್ತು.

ಈ ಆದೇಶವು- “ಸಾಮಾಜಿಕ ಅಂತರ” (ದೈಹಿಕ ಅಂತರ), ಕಾರ್ಮಿಕರಿಗೆ ಖಾಸಗಿ ಸಾರಿಗೆ, ವೈದ್ಯಕೀಯ ವಿಮೆ ಮುಂತಾದ ಕಡ್ಡಾಯವಾದ “ಮಾಡು”, “ಮಾಡಬೇಡ” ನಿಯಮಗಳನ್ನು ಹೇರಿದೆ. ಈ ನಿರ್ದೇಶನಗಳ ಯಾವುದೇ ಉಲ್ಲಂಘನೆಗೆ ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯಿದೆ 2005 (ಎನ್‌ಡಿಎಂಎ)ರ ಅಡಿಯಲ್ಲಿ ಸೆರೆವಾಸ ಸೇರಿದಂತೆ ಭಾರೀ ದಂಡ ವಿಧಿಸಬಹುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

ಇದಕ್ಕಿಂತ ಎರಡು ದಿನಗಳ ಮೊದಲು, ಅಂದರೆ ಎಪ್ರಿಲ್ 13ರಂದು ಭಾರತದ ಕೇಂದ್ರೀಯ ಕಾರ್ಮಿಕ ಸಂಘ (ಸಿಟಿಯು)ಗಳು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದು, ಸರಕಾರವು ಪರಿಗಣಿಸುತ್ತಿರುವುದಾಗಿ ಹೇಳಲಾದ ಕಾರ್ಖಾನೆ ಕಾಯಿದೆ, 1948 (ಎಫ್‌ಎ)ಕ್ಕೆ ತಿದ್ದುಪಡಿ ಮಾಡುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದವು.

ಈ ತಿದ್ದುಪಡಿಯು ಕಂಪೆನಿಗಳಿಗೆ ಕಾರ್ಖಾನೆಗಳ ಕಾರ್ಮಿಕರಿಗೆ ಕೆಲಸದ ಅವಧಿಯನ್ನು ಈಗಿರುವ- ದಿನಕ್ಕೆ ಎಂಟು ಗಂಟೆ, ವಾರಕ್ಕೆ ಆರು ದಿನ (48ಗಂಟೆ)ದಿಂದ, ದಿನಕ್ಕೆ 12 ಗಂಟೆ, ವಾರಕ್ಕೆ ಆರು ದಿನ (72 ಗಂಟೆ)ಕ್ಕೆ ಹೆಚ್ಚಿಸಲು ಅವಕಾಶ ಮಾಡಿಕೊಡುತ್ತಿತ್ತು.

ಈ ನಡೆಯು ವಿವಾದಾಸ್ಪದವಾಗಿದೆ. ಏಕೆಂದರೆ, ವಾರಕ್ಕೆ 48 ಗಂಟೆಗಳ ಕೆಲಸವು ಜಾಗತಿಕವಾಗಿ ಮತ್ತು ಅಂತರರಾಷ್ಟ್ರೀಯ ಕಾರ್ಮಿಕ ಸಂಘ (ಐಎಲ್ಓ)ದಿಂದ ಒಪ್ಪಿತವಾದ ನಿಯಮವಾಗಿದೆ. ಹಾಗೆ ನೋಡುವುದಾದಲ್ಲಿ ಐಎಲ್ಓ ಅಂಗೀಕರಿಸಿದ ಮೊತ್ತಮೊದಲ ಒಪ್ಪಂದವೇ ಕೆಲಸದ ಅವಧಿ (ಕೈಗಾರಿಕೆ) ಒಪ್ಪಂದ 1919 (ನಂ.1) ಆಗಿದೆ. ಇದಕ್ಕೆ ಭಾರತವು 1921ರಲ್ಲಿಯೇ ಸಹಿ ಹಾಕಿ, ವಾರಕ್ಕೆ 48 ಗಂಟೆಗಳ ಕೆಲಸವನ್ನು ನಿಗದಿಪಡಿಸಿತ್ತು.

ಸರಕಾರವು ಇನ್ನೂ ಕಾರ್ಖಾನೆ ಕಾಯಿದೆಯನ್ನು ತಿದ್ದುಪಡಿ ಮಾಡಿಲ್ಲವಾದರೂ, ಕನಿಷ್ಟ ನಾಲ್ಕು ಸರಕಾರಗಳು ಕಳೆದ ಕೆಲವು ದಿನಗಳ ಅವಧಿಯಲ್ಲಿ ಮೇಲೆ ಹೇಳಿರುವ ರೀತಿಯಲ್ಲಿ ಕೆಲಸದ ಅವಧಿಯನ್ನು ಹೆಚ್ಚಿಸುವ ಅಧಿಸೂಚನೆಗಳನ್ನು ಹೊರಡಿಸಿವೆ. ಅವುಗಳೆಂದರೆ, ರಾಜಸ್ಥಾನ (ಎಪ್ರಿಲ್ 11), ಗುಜರಾತ್ (ಎಪ್ರಿಲ್ 17), ಪಂಜಾಬ್ (ಎಪ್ರಿಲ್ 20) ಮತ್ತು ಹಿಮಾಚಲ ಪ್ರದೇಶ (ಎಪ್ರಿಲ್ 21).

ಇದೇ ಹೊತ್ತಿಗೆ, ಭಾರತದಲ್ಲಿ ಐತಿಹಾಸಿಕವಾಗಿಯೂ ಹಾಗೂ ಇತ್ತೀಚಿನ ವರೆಗೂ ಇದು ಕಾರ್ಮಿಕ ಕಾನೂನುಗಳ “ಸುಧಾರಣೆ” (ವಾಸ್ತವವಾಗಿ ಕಾರ್ಮಿಕರ ಹಕ್ಕುಗಳಿಗೆ ಕತ್ತರಿ)ಗಳನ್ನು ಜಾರಿಗೊಳಿಸಲು ಅತ್ಯಂತ ಅನುಕೂಲಕರ ಕಾರ್ಯತಂತ್ರವಾಗುತ್ತಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಮಾರುಕಟ್ಟೆ “ಸುಧಾರಣೆ”ಗಳನ್ನು ಕಾರ್ಮಿಕ ಚಳವಳಿಯು ಸಾಕಷ್ಟು ಒಗ್ಗಟ್ಟಿನಿಂದ ಕೋಟ್ಯಂತರ ಕಾರ್ಮಿಕರ ಬೃಹತ್ ಮುಷ್ಕರಗಳ ಮೂಲಕ ಮತ್ತು ತ್ರಿಪಕ್ಷೀಯ ವೇದಿಕೆಗಳಲ್ಲೂ ಬಲವಾಗಿ ಎದುರಿಸುತ್ತಾ ಬಂದಿದೆ. ಆಗೊಮ್ಮೆ, ಈಗೊಮ್ಮೆ ಅವಕಾಶವಾದಿ ರಾಜಕೀಯ ಪ್ರತಿಪಕ್ಷಗಳ ಬೆಂಬಲವೂ ಅವುಗಳಿಗೆ ಸಿಕ್ಕಿದೆ.

“ಗೊತ್ತುಮಾಡಿ-ವಜಾಮಾಡಿ” (Hire and Fire) ಎಂಬ ಸುಲಭವಾದ “ಸುಧಾರಣೆ”ಗಳು ನಿರುದ್ಯೋಗದಂತಹ ಋಣಾತ್ಮಕ ಪರಿಣಾಮ ಉಂಟುಮಾಡಿ, ಆಳುವ ಪಕ್ಷಗಳಿಗೆ ಪ್ರತಿಕೂಲವಾಗಿ ಪರಿಣಮಿಸಿ ನಷ್ಟ ಉಂಟುಮಾಡುತ್ತವೆ. ಈ ಕಾರಣದಿಂದಲೇ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಕಾಯಿದೆಗಳ ಮೂಲಭೂತ ಸುಧಾರಣೆಯು ಆಳುವ ಪಕ್ಷಗಳಿಗೆ ಸಮಸ್ಯೆ ಉಂಟುಮಾಡುವಂತವುಗಳಾಗಿರುತ್ತದೆ.

ಆಗ, ಇದರಿಂದ ಹೊರಬರಲು ಕೇಂದ್ರ ಸರಕಾರದ ದಾರಿ ಯಾವುದಾಗಿರುತ್ತದೆ? “ಕಾರ್ಮಿಕ” ಎಂಬುದು ಕೇಂದ್ರ ಮತ್ತು ರಾಜ್ಯಗಳ ಸಮಾನ ಪಟ್ಟಿಯಲ್ಲಿ ಬರುವ ವಿಷಯವಾಗಿರುವುದರಿಂದ, ಕೇಂದ್ರ ಸರಕಾರವು ಮನಸ್ಸಿರುವ ರಾಜ್ಯಗಳಿಗೆ ಈ “ಸುಧಾರಣೆ”ಗಳನ್ನು ಅನುಷ್ಟಾನಗೊಳಿಸಲು ಒತ್ತಾಸೆ ನೀಡುತ್ತದೆ. ನಂತರ, ಮೂಲತಃ ಕೇಂದ್ರ ಸಂಪುಟದ ನಿರ್ಧಾರವೇ ಆಗಿರುವ ರಾಷ್ಟ್ರಪತಿಯವರ ಅಂಗೀಕಾರ ಅವುಗಳಿಗೆ ಸಿಗುತ್ತದೆ.

ಇದೇ ರೀತಿಯಲ್ಲಿ ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿರ್ಮೂಲನ) ಕಾಯಿದೆ 1970ಕ್ಕೆ ಆಗಿನ ‘ಏಕೀಕೃತ’ ಆಂಧ್ರಪ್ರದೇಶವು 2003ರಲ್ಲಿ, ರಾಜಸ್ಥಾನ 2014ರಲ್ಲಿ ಮತ್ತು ಮಹಾರಾಷ್ಟ್ರ 2017ರಲ್ಲಿ ತಿದ್ದುಪಡಿ ತಂದು “ಸುಧಾರಣೆ”ಗಳನ್ನು ಜಾರಿಗೊಳಿಸಿದ್ದವು. ಅದೇ ರೀತಿಯಲ್ಲಿ, 100 ಕಾರ್ಮಿಕರು ಇರುವ ಕೈಗಾರಿಕಾ ಸ್ಥಾಪನೆಗಳಿಗೆ ಅನ್ವಯವಾಗುತ್ತಿದ್ದುದನ್ನು 300ಕ್ಕೂ ಹೆಚ್ಚು ಕಾರ್ಮಿಕರನ್ನು ನೇಮಕ ಮಾಡಿರುವ ಸ್ಥಾಪನೆಗಳಿಗೆ ಮಾತ್ರ ಅನ್ವಯವಾಗುವಂತೆ ರಾಜಸ್ಥಾನವು 2014ರಲ್ಲಿ ಅಧ್ಯಾಯ ‘V-ಬಿ’ಗೆ “ಸುಧಾರಣೆ”ಗಳನ್ನು ಜಾರಿಗೊಳಿಸಿತು. ಇದಾದ ಕೂಡಲೇ 2016ರಲ್ಲಿ ಜಾರ್ಖಂಡ್ ಸೇರಿದಂತೆ ಇತರ ಅನೇಕ ರಾಜ್ಯಗಳು ಇದನ್ನು ಅನುಸರಿಸಿದವು.

ಅಂದರೆ, ಕೇಂದ್ರ ಸರಕಾರಕ್ಕೆ ನೇರವಾಗಿ ಜಾರಿಗೊಳಿಸಲು ಸಾಮಾನ್ಯವಾಗಿ ಧೈರ್ಯವಿಲ್ಲದ “ಕಠಿಣ”ವಾದ ಕಾರ್ಮಿಕ ಕಾಯಿದೆ “ಸುಧಾರಣೆ”ಗಳನ್ನು- ಜಾರಿಗೊಳಿಸುವ ಧೈರ್ಯತೋರುವ ರಾಜ್ಯ ಸರಕಾರಗಳತ್ತ ಕೇಂದ್ರವು ತಳ್ಳುತ್ತಿದೆ. ರಾಜ್ಯ ಸರಕಾರಗಳು ಇಂತಹಾ ಕಾನೂನುಗಳನ್ನು ತರಲು ಅರ್ಹವಾಗಿರುವುದರಿಂದ ತಾನು ಏನನ್ನೂ ಮಾಡುವಂತಿಲ್ಲ ಎಂಬ ಅಸಹಾಯಕತೆಯ ಪ್ರದರ್ಶನ ಕೇಂದ್ರ ಸರಕಾರಕ್ಕೆ ಮಾಮೂಲಿಯಾಗಿದೆ.

ಇದೀಗ ಕೋವಿಡ್- 19 ಪಿಡುಗಿನ ಸಂದರ್ಭದಲ್ಲಿ ಇಂತದ್ದೇ ಕಾರ್ಯತಂತ್ರವನ್ನು ಸರಕಾರ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಏರಿಸಲು ಬಳಸಿಕೊಳ್ಳುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿ ಹಲವಾರು ಕಾನೂನು ದೋಷಗಳು, ಮಾಲಕರು ತಪ್ಪಿಸಿಕೊಳ್ಳಲು ಸಾಧ್ಯವಾಗುವ ರಂಧ್ರಗಳು ಇತ್ಯಾದಿಗಳು ಇವೆ. ಇವುಗಳಿಗೆ ಹೊರತಾಗಿ ಕಾರ್ಮಿಕರ ಆರೋಗ್ಯ, ಅವರಿಗೆ ಹಕ್ಕಿನಿಂದ ಸಿಗಬೇಕಾದ ವೇತನ- ಸೌಲಭ್ಯಗಳಲ್ಲಿ ಮೋಸ, ಉಳಿದ ಅರ್ಹ/ ಸಶಕ್ತ ಕಾರ್ಮಿಕರಿಗೆ ಉದ್ಯೋಗಾವಕಾಶ ನಷ್ಟ, ಕೈಗಾರಿಕಾ ಸಂಬಂಧಗಳ ಬಿಗಡಾಯಿಸುವಿಕೆ ಮುಂತಾದ ಹಲವಾರು ಸಮಸ್ಯೆಗಳಿದ್ದು, ಈ ಕುರಿತು ಪ್ರತ್ಯೇಕ ಲೇಖನವನ್ನೇ ಬರೆಯಬಹುದು.

ಇಷ್ಟಿದ್ದರೂ ಸರಕಾರವು ಕೊರೋನಾ ನೆಪದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆ ಗೆ ಹೆಚ್ಚಿಸಿ, ಹಿಂಬಾಗಿಲಿನ ಮೂಲಕ ಅವರಿಗೆ ಘೋರ ಮೋಸ ಮಾಡುತ್ತಿದೆ.

(ಲೇಖಕ  ಕೆ.ಆರ್. ಶ್ಯಾಮ ಸುಂದರ್ ಅವರು ಜೆಮ್ಶೆಡ್‌ಪುರದ ಕ್ಸೇವಿಯರ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಪ್ರಾಧ್ಯಾಪಕರು).


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....