Homeಮುಖಪುಟರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 12 ಭಾರತೀಯರು ಸಾವು, 16 ಮಂದಿ ನಾಪತ್ತೆ : ವಿದೇಶಾಂಗ ಸಚಿವಾಲಯ

ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 12 ಭಾರತೀಯರು ಸಾವು, 16 ಮಂದಿ ನಾಪತ್ತೆ : ವಿದೇಶಾಂಗ ಸಚಿವಾಲಯ

- Advertisement -
- Advertisement -

ರಷ್ಯಾದ ಅಧಿಕಾರಿಗಳು ತಿಳಿಸಿರುವಂತೆ, ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 16 ಭಾರತೀಯ ಪ್ರಜೆಗಳು ಕಾಣೆಯಾಗಿದ್ದಾರೆ. ರಷ್ಯಾದ ಸಶಸ್ತ್ರ ಪಡೆಗಳ ಭಾಗವಾಗಿದ್ದ 12 ಭಾರತೀಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ (ಜ.17) ತಿಳಿಸಿದೆ.

ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ರಷ್ಯಾ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 126 ಭಾರತೀಯ ಪ್ರಜೆಗಳ ವಿವರಗಳು ನಮ್ಮಲ್ಲಿ ದಾಖಲಾಗಿವೆ. ಈ ಪೈಕಿ 96 ಜನರನ್ನು ಬಿಡುಗಡೆ ಮಾಡಿ ಭಾರತಕ್ಕೆ ಕರೆತರಲಾಗಿದೆ. ಉಳಿದ 30 ಜನರಲ್ಲಿ 18 ಮಂದಿ ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಇನ್ನೂ 16 ಜನರು ಎಲ್ಲಿದ್ದಾರೆ ಎಂಬುದು ಗೊತ್ತಾಗಿಲ್ಲ. ರಷ್ಯಾದ ಅಧಿಕಾರಿಗಳು ಅವರು ‘ಕಾಣೆಯಾಗಿರುವುದಾಗಿ’ ಪರಿಗಣಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

“ನಾವು ರಷ್ಯಾ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಉಳಿದವರನ್ನು ಶೀಘ್ರ ಬಿಡುಗಡೆ ಮಾಡಲು ಮತ್ತು ತಾಯ್ನಾಡಿಗೆ ಕರೆತರಲು ಸಕ್ರಿಯವಾಗಿ ಪ್ರಯತ್ನಿಸುತ್ತಿದ್ದೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ.

ಬಿನಿಲ್ ಬಾಬು ಅವರ ಸಾವು ಅತ್ಯಂತ ದುರದೃಷ್ಟಕರ. ಅವರ ಕುಟುಂಬಕ್ಕೆ ನಮ್ಮ ಸಂತಾಪ ಸೂಚಿಸಿದ್ದೇವೆ. ಅವರ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ತರುವ ಸಲುವಾಗಿ ನಮ್ಮ ರಾಯಭಾರ ಕಚೇರಿ ರಷ್ಯಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಗಾಯಗೊಂಡ ಮತ್ತೊಬ್ಬ ವ್ಯಕ್ತಿ ಮಾಸ್ಕೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಮುಗಿದ ಕೂಡಲೇ ಅವರು ಭಾರತಕ್ಕೆ ಮರಳುತ್ತಾರೆ ಜೈಸ್ವಾಲ್ ತಿಳಿಸಿದ್ದಾರೆ.

ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ ಕೇರಳದ ತ್ರಿಶ್ಶೂರ್ ಮೂಲದ ಬಿನಿಲ್ ಬಾಬು (32) ಮತ್ತು ಅವರ ಸಂಬಂಧಿ ಡ್ರೋನ್ ದಾಳಿಯಿಂದ ಗಾಯಗೊಂಡಿದ್ದರು. ಬಳಿಕ ಬಿನಿಲ್ ಸಾವನ್ನಪ್ಪಿದ್ದಾರೆ. ಅವರ ಸಂಬಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಜುಲೈ 2024ರಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಸೇನೆಯಲ್ಲಿ ಸಿಲುಕಿರುವ ಭಾರತೀಯರ ಬಿಡುಗಡೆಯ ವಿಷಯವನ್ನು ಉಲ್ಲೇಖಿಸಿದ್ದರು. ಅಕ್ಟೋಬರ್‌ನಲ್ಲಿ ಕಝಾನ್‌ನಲ್ಲಿ ನಡೆದ 16ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲೂ ಉಭಯ ನಾಯಕರು ಭೇಟಿಯಾದಾಗ ಮೋದಿ ಈ ವಿಷಯವನ್ನು ಪುನರುಚ್ಚರಿಸಿದ್ದರು ಎಂದು ವರದಿಗಳು ಹೇಳಿವೆ.

ಭಾರತದ ವಿವಿಧ ರಾಜ್ಯಗಳ ಯುವಕರನ್ನು ಕೆಲಸದ ಆಮಿಷವೊಡ್ಡಿ ರಷ್ಯಾಗೆ ಕರೆದೊಯ್ದು, ಅಲ್ಲಿ ಉಕ್ರೇನ್‌ ಜೊತೆಗಿನ ಯುದ್ದ ಭೂಮಿಯಲ್ಲಿ ಬಲವಂತವಾಗಿ ಶಸಸ್ತ್ರ ಪಡೆಯ ಭಾಗವಾಗಿ ನೇಮಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...