Homeಮುಖಪುಟರಾಜ್ಯಸಭೆಗೆ 12 ಸದಸ್ಯರು ಅವಿರೋಧ ಆಯ್ಕೆ : ಬಹುಮತ ಗಳಿಸಿದ ಎನ್‌ಡಿಎ

ರಾಜ್ಯಸಭೆಗೆ 12 ಸದಸ್ಯರು ಅವಿರೋಧ ಆಯ್ಕೆ : ಬಹುಮತ ಗಳಿಸಿದ ಎನ್‌ಡಿಎ

- Advertisement -
- Advertisement -

ರಾಜ್ಯಸಭೆಗೆ 12 ಸದಸ್ಯರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿದೆ.

ಒಟ್ಟು 12 ಸದಸ್ಯರಲ್ಲಿ 9 ಮಂದಿ ಬಿಜೆಪಿಯಿಂದ ಮತ್ತು ಅದರ ಮಿತ್ರ ಪಕ್ಷಗಳಾದ ಎನ್‌ಸಿಪಿ (ಅಜಿತ್ ಪವಾರ್ ಬಣ) ಮತ್ತು ರಾಷ್ಟ್ರೀಯ ಲೋಕ ಮಂಚ್‌ನ ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಇನ್ನೊಂದು ಸ್ಥಾನವನ್ನು ಕಾಂಗ್ರೆಸ್ ಪಕ್ಷ ತೆಲಂಗಾಣದಿಂದ ಗೆದ್ದುಕೊಂಡಿದೆ.

ಹೊಸದಾಗಿ 12 ಸದಸ್ಯರ ಆಯ್ಕೆಗೂ ಮುನ್ನ ರಾಜ್ಯಸಭೆಯಲ್ಲಿ ಆರು ನಾಮನಿರ್ದೇಶನಗೊಂಡ ಸದಸ್ಯರು ಮತ್ತು ಹರಿಯಾಣದ ಒಬ್ಬ ಪಕ್ಷೇತರ ಸೇರಿ ಎನ್‌ಡಿಎ ಮೈತ್ರಿಕೂಟದ ಸದಸ್ಯರ ಸಂಖ್ಯೆ 110 ಇತ್ತು. ಅದೀಗ 121ಕ್ಕೆ ಏರಿಕೆಯಾಗಿದೆ.

ಪ್ರತಿಪಕ್ಷಗಳ ಸದಸ್ಯರ ಸಂಖ್ಯೆ 84 ಇತ್ತು. ಹೊಸದಾಗಿ ಕಾಂಗ್ರೆಸ್‌ನಿಂದ ಒಬ್ಬರು ಅವಿರೋಧ ಆಯ್ಕೆಯಾಗುವ ಮೂಲಕ 85 ಆಗಿದೆ.

ರಾಜ್ಯಸಭೆಯಲ್ಲಿ ಹಾಲಿ ಸದಸ್ಯರ ಸಂಖ್ಯೆ 237 ಇದೆ. ಎಂಟು ಸ್ಥಾನಗಳು (ಜಮ್ಮು ಮತ್ತು ಕಾಶ್ಮೀರದಿಂದ 4, ನಾಮನಿರ್ದೇಶಿತ 4) ಖಾಲಿಯಿವೆ. ನಾಮ ನಿರ್ದೇಶಿತ ಸದಸ್ಯರ ನಾಲ್ಕು ಸ್ಥಾನಗಳನ್ನು ಸರ್ಕಾರ ಭರ್ತಿಗೊಳಿಸಿದರೆ ಎನ್‌ಡಿಎ ಸದಸ್ಯರ ಸಂಖ್ಯೆ 125 ಆಗಲಿದೆ.

ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245, ಅದು ಸಂಪೂರ್ಣ ಭರ್ತಿಯಾದರೆ 123 ಸ್ಥಾನಗಳನ್ನು ಪಡೆದವರು ಬಹುಮತ ಸಾಧಿಸಲಿದ್ದಾರೆ.

ಅಸ್ಸಾಂನಿಂದ ಮಿಷನ್ ರಂಜನ್ ದಾಸ್ ಮತ್ತು ರಾಮೇಶ್ವರ್ ತೇಲಿ, ಬಿಹಾರದಿಂದ ಮನನ್ ಕುಮಾರ್ ಮಿಶ್ರಾ, ಹರಿಯಾಣದಿಂದ ಕಿರಣ್ ಚಾಧರಿ, ಮಧ್ಯಪ್ರದೇಶದಿಂದ ಜಾರ್ಜ್ ಕುರಿಯನ್, ಮಹಾರಾಷ್ಟ್ರದಿಂದ ಧೀರ್ಯಾ ಶೀಲ್ ಪಾಟೀಲ್, ಒಡಿಶಾದಿಂದ ಮಮತಾ ಮೊಹಾಂತ, ರಾಜಸ್ಥಾನದಿಂದ ರವನೀತ್ ಸಿಂಗ್ ಬಿಟ್ಟು ಮತ್ತು ರಾಜೀವ್, ತ್ರಿಪುರಾದ ರಾಜೀವ್ ಭಟ್ಟಾಚಾರ್ಯ ಹೊಸದಾಗಿ ಆಯ್ಕೆಯಾದ ಬಿಜೆಪಿ ಸದಸ್ಯರು.

ಈ ಪೈಕಿ ಜಾರ್ಜ್ ಕುರಿಯನ್ ಮತ್ತು ರವನೀತ್ ಸಿಂಗ್ ಬಿಟ್ಟು ಈಗಾಗಲೇ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಕಳೆದ ಜೂನ್‌ನಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳುವಾಗ ಇವರು ಸಂಸದರಾಗಿರಲಿಲ್ಲ.

ತೆಲಂಗಾಣದಿಂದ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎನ್‌ಸಿಪಿ ಅಜಿತ್ ಪವಾರ್ ಬಣದ ನಿತಿನ್ ಪಾಟೀಲ್ ಮಹಾರಾಷ್ಟ್ರದಿಂದ ಮತ್ತು ಆರ್‌ಎಲ್‌ಎಂನ ಉಪದೇಂದ್ರ ಕುಶ್ವಾಹಾ ಬಿಹಾರದಿಂದ ಮೇಲ್ಮನೆಗೆ ಆಯ್ಕೆಯಾದ್ದಾರೆ.

ಹೊಸ ಸದಸ್ಯರ ಸೇರ್ಪಡೆ ಮೂಲಕ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 96ಕ್ಕೆ ಏರಿಕೆಯಾಗಿದೆ. ಪ್ರತಿಪಕ್ಷ ಕಾಂಗ್ರೆಸ್‌ 27 ಸದಸ್ಯರನ್ನು ಹೊಂದಿದ್ದು. 13 ಸದಸ್ಯರ ಮೂಲಕ ಟಿಎಂಸಿ ಹೆಚ್ಚು ಸದಸ್ಯರನ್ನು ಹೊಂದಿರುವ ಮೂರನೇ ಪಕ್ಷ ಎನಿಸಿದೆ.

ಇದನ್ನೂ ಓದಿ : ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...