Homeಮುಖಪುಟರಾಜ್ಯಸಭೆಗೆ 12 ಸದಸ್ಯರು ಅವಿರೋಧ ಆಯ್ಕೆ : ಬಹುಮತ ಗಳಿಸಿದ ಎನ್‌ಡಿಎ

ರಾಜ್ಯಸಭೆಗೆ 12 ಸದಸ್ಯರು ಅವಿರೋಧ ಆಯ್ಕೆ : ಬಹುಮತ ಗಳಿಸಿದ ಎನ್‌ಡಿಎ

- Advertisement -
- Advertisement -

ರಾಜ್ಯಸಭೆಗೆ 12 ಸದಸ್ಯರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿದೆ.

ಒಟ್ಟು 12 ಸದಸ್ಯರಲ್ಲಿ 9 ಮಂದಿ ಬಿಜೆಪಿಯಿಂದ ಮತ್ತು ಅದರ ಮಿತ್ರ ಪಕ್ಷಗಳಾದ ಎನ್‌ಸಿಪಿ (ಅಜಿತ್ ಪವಾರ್ ಬಣ) ಮತ್ತು ರಾಷ್ಟ್ರೀಯ ಲೋಕ ಮಂಚ್‌ನ ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಇನ್ನೊಂದು ಸ್ಥಾನವನ್ನು ಕಾಂಗ್ರೆಸ್ ಪಕ್ಷ ತೆಲಂಗಾಣದಿಂದ ಗೆದ್ದುಕೊಂಡಿದೆ.

ಹೊಸದಾಗಿ 12 ಸದಸ್ಯರ ಆಯ್ಕೆಗೂ ಮುನ್ನ ರಾಜ್ಯಸಭೆಯಲ್ಲಿ ಆರು ನಾಮನಿರ್ದೇಶನಗೊಂಡ ಸದಸ್ಯರು ಮತ್ತು ಹರಿಯಾಣದ ಒಬ್ಬ ಪಕ್ಷೇತರ ಸೇರಿ ಎನ್‌ಡಿಎ ಮೈತ್ರಿಕೂಟದ ಸದಸ್ಯರ ಸಂಖ್ಯೆ 110 ಇತ್ತು. ಅದೀಗ 121ಕ್ಕೆ ಏರಿಕೆಯಾಗಿದೆ.

ಪ್ರತಿಪಕ್ಷಗಳ ಸದಸ್ಯರ ಸಂಖ್ಯೆ 84 ಇತ್ತು. ಹೊಸದಾಗಿ ಕಾಂಗ್ರೆಸ್‌ನಿಂದ ಒಬ್ಬರು ಅವಿರೋಧ ಆಯ್ಕೆಯಾಗುವ ಮೂಲಕ 85 ಆಗಿದೆ.

ರಾಜ್ಯಸಭೆಯಲ್ಲಿ ಹಾಲಿ ಸದಸ್ಯರ ಸಂಖ್ಯೆ 237 ಇದೆ. ಎಂಟು ಸ್ಥಾನಗಳು (ಜಮ್ಮು ಮತ್ತು ಕಾಶ್ಮೀರದಿಂದ 4, ನಾಮನಿರ್ದೇಶಿತ 4) ಖಾಲಿಯಿವೆ. ನಾಮ ನಿರ್ದೇಶಿತ ಸದಸ್ಯರ ನಾಲ್ಕು ಸ್ಥಾನಗಳನ್ನು ಸರ್ಕಾರ ಭರ್ತಿಗೊಳಿಸಿದರೆ ಎನ್‌ಡಿಎ ಸದಸ್ಯರ ಸಂಖ್ಯೆ 125 ಆಗಲಿದೆ.

ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245, ಅದು ಸಂಪೂರ್ಣ ಭರ್ತಿಯಾದರೆ 123 ಸ್ಥಾನಗಳನ್ನು ಪಡೆದವರು ಬಹುಮತ ಸಾಧಿಸಲಿದ್ದಾರೆ.

ಅಸ್ಸಾಂನಿಂದ ಮಿಷನ್ ರಂಜನ್ ದಾಸ್ ಮತ್ತು ರಾಮೇಶ್ವರ್ ತೇಲಿ, ಬಿಹಾರದಿಂದ ಮನನ್ ಕುಮಾರ್ ಮಿಶ್ರಾ, ಹರಿಯಾಣದಿಂದ ಕಿರಣ್ ಚಾಧರಿ, ಮಧ್ಯಪ್ರದೇಶದಿಂದ ಜಾರ್ಜ್ ಕುರಿಯನ್, ಮಹಾರಾಷ್ಟ್ರದಿಂದ ಧೀರ್ಯಾ ಶೀಲ್ ಪಾಟೀಲ್, ಒಡಿಶಾದಿಂದ ಮಮತಾ ಮೊಹಾಂತ, ರಾಜಸ್ಥಾನದಿಂದ ರವನೀತ್ ಸಿಂಗ್ ಬಿಟ್ಟು ಮತ್ತು ರಾಜೀವ್, ತ್ರಿಪುರಾದ ರಾಜೀವ್ ಭಟ್ಟಾಚಾರ್ಯ ಹೊಸದಾಗಿ ಆಯ್ಕೆಯಾದ ಬಿಜೆಪಿ ಸದಸ್ಯರು.

ಈ ಪೈಕಿ ಜಾರ್ಜ್ ಕುರಿಯನ್ ಮತ್ತು ರವನೀತ್ ಸಿಂಗ್ ಬಿಟ್ಟು ಈಗಾಗಲೇ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಕಳೆದ ಜೂನ್‌ನಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳುವಾಗ ಇವರು ಸಂಸದರಾಗಿರಲಿಲ್ಲ.

ತೆಲಂಗಾಣದಿಂದ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎನ್‌ಸಿಪಿ ಅಜಿತ್ ಪವಾರ್ ಬಣದ ನಿತಿನ್ ಪಾಟೀಲ್ ಮಹಾರಾಷ್ಟ್ರದಿಂದ ಮತ್ತು ಆರ್‌ಎಲ್‌ಎಂನ ಉಪದೇಂದ್ರ ಕುಶ್ವಾಹಾ ಬಿಹಾರದಿಂದ ಮೇಲ್ಮನೆಗೆ ಆಯ್ಕೆಯಾದ್ದಾರೆ.

ಹೊಸ ಸದಸ್ಯರ ಸೇರ್ಪಡೆ ಮೂಲಕ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 96ಕ್ಕೆ ಏರಿಕೆಯಾಗಿದೆ. ಪ್ರತಿಪಕ್ಷ ಕಾಂಗ್ರೆಸ್‌ 27 ಸದಸ್ಯರನ್ನು ಹೊಂದಿದ್ದು. 13 ಸದಸ್ಯರ ಮೂಲಕ ಟಿಎಂಸಿ ಹೆಚ್ಚು ಸದಸ್ಯರನ್ನು ಹೊಂದಿರುವ ಮೂರನೇ ಪಕ್ಷ ಎನಿಸಿದೆ.

ಇದನ್ನೂ ಓದಿ : ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...